
Kannada Cinema
1934ರಲ್ಲಿ ಮೊದಲ ಕನ್ನಡ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗುವ ಮೂಲಕ ಉದಯವಾದ ಕನ್ನಡ ಚಿತ್ರರಂಗಕ್ಕೆ 89 ವರ್ಷದ ಸುದೀರ್ಘ ಇತಿಹಾಸವಿದೆ.
ಮನರಂಜನೆಯ ಜೊತೆಗೆ ಜನ ಜಾಗೃತಿ ಮೂಡಿಸುವ, ಅಭಿರುಚಿ ಬೆಳೆಸುವ ಸಿನಿಮಾಗಳನ್ನು ಕನ್ನಡ ಚಿತ್ರರಂಗ ನೀಡುತ್ತಲೇ ಬಂದಿದೆ. ಸಿನಿಮಾಗಳ ಮೂಲಕ ಕನ್ನಡತನವನ್ನು ಪಸರಿಸುತ್ತಾ ಬಂದಿದೆ. ಸುಬ್ಬಯ್ಯ ನಾಯ್ಡು, ಭಾಗವತರ್, ಪಂಡರೀಬಾಯಿ ಅವರುಗಳು ಬಿತ್ತಿದ ಕನ್ನಡ ಚಿತ್ರರಂಗದ ಬೀಜಕ್ಕೆ ರಾಜ್ಕುಮಾರ್, ಕಲ್ಯಾಣ್ ಕುಮಾರ್, ಲೋಕೇಶ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್ನಾಗ್, ಅಂಬರೀಶ್ ಅಂಥಹಾ ಇನ್ನೂ ಅನೇಕ ಮಹನೀಯರು ನೀರೆರೆದು ಹೆಮ್ಮರವಾಗಿ ಬಳೆಸಿದ್ದಾರೆ.
ಕನ್ನಡ ಚಿತ್ರರಂಗ ಇಂದು ವಾರ್ಷಿಕವಾಗಿ ಸಾವಿರಾರು ಕೋಟಿ ವ್ಯವಹಾರ ನಡೆಯುವ ತಾಣ, ವರ್ಷಕ್ಕೆ ಸರಾಸರಿ 200 ರಿಂದ 250 ಕನ್ನಡ ಸಿನಿಮಾಗಳು ಇಲ್ಲಿ ತಯಾರುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ‘ಕೆಜಿಎಫ್’, ‘ಕಾಂತಾರ’, ‘ವಿಕ್ರಾಂತ್ ರೋಣ’ ಇನ್ನೂ ಕೆಲವು ಸಿನಿಮಾಗಳು ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಣೆ ಗೊಳಿಸಿವೆ.
‘ಅವನಿರಬೇಕಿತ್ತು’ ಸಿನಿಮಾ ಟ್ರೇಲರ್ ನೋಡಿ ಮೆಚ್ಚಿದ ಅಶ್ವಿನಿ ಪುನೀತ್ ರಾಜ್ಕುಮಾರ್
ಭರತ್ ಮತ್ತು ಸೌಮ್ಯಾ ಅವರು ‘ಅವನಿರಬೇಕಿತ್ತು’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅಶೋಕ್ ಸಾಮ್ರಾಟ್ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಈ ಚಿತ್ರದ ಟ್ರೇಲರ್ ನೋಡಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮುರಳಿ ಬಿ.ಟಿ. ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.
- Madan Kumar
- Updated on: Jun 20, 2025
- 6:11 pm
ನಿಜವಾದ ವಿಷಕಾರಿ ಜಂತುಗಳ ಜೊತೆ ರಾಜ್ಕುಮಾರ್ ಶೂಟ್; ಇದಕ್ಕೆ ಡಬಲ್ ಗುಂಡಿಗೆ ಬೇಕು
ರಾಜ್ಕುಮಾರ್ ಅವರು ತಮ್ಮ ಸಿನಿಮಾಗಳಲ್ಲಿ ನಿಜ ಪ್ರಾಣಿಗಳೊಂದಿಗೆ ಅಪಾಯಕಾರಿ ದೃಶ್ಯಗಳನ್ನು ನಿರ್ವಹಿಸುತ್ತಿದ್ದರು. 'ಒಂದು ಮುತ್ತಿನ ಕಥೆ' ಮತ್ತು 'ಗಂಧದಗುಡಿ' ಚಿತ್ರಗಳಲ್ಲಿನ ಅವರ ಕೆಲಸ ಇದಕ್ಕೆ ಉದಾಹರಣೆ. ಈಗಿನ ಕಾಲದಲ್ಲಿ VFX ತಂತ್ರಜ್ಞಾನದಿಂದ ಇಂತಹ ದೃಶ್ಯಗಳನ್ನು ಸುಲಭವಾಗಿ ಸೃಷ್ಟಿಸಬಹುದು. ಆದರೆ, ರಾಜ್ಕುಮಾರ್ ಅವರ ನಿಜವಾದ ಸಾಹಸಗಳನ್ನು ಮರೆಯಲು ಸಾಧ್ಯವಿಲ್ಲ.
- Shreelaxmi H
- Updated on: Jun 20, 2025
- 8:09 am
ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ಅರ್ಜಿ
ಕನ್ನಡದ ಕಿರುತೆರೆ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡ ಸಿಂಗರ್ ಅಖಿಲಾ ಪಜಿಮಣ್ಣು ಸಂಸಾರದಲ್ಲಿ ಬಿರುಕು ಮೂಡಿದೆ. ಪತಿ ಧನಂಜಯ್ ಶರ್ಮ ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಅಖಿಲಾ ನಿರ್ಧರಿಸಿದ್ದಾರೆ. ಪುತ್ತೂರು ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮ ಅರ್ಜಿ ಸಲ್ಲಿಸಿದ್ದಾರೆ.
- Pruthviraj
- Updated on: Jun 19, 2025
- 10:34 pm
‘ಮತ್ತೆ ಮೊದಲಿಂದ’ ಆಲ್ಬಂ ಹಾಡುಗಳಿಗೆ ಯೋಗರಾಜ್ ಭಟ್ ಸಾಹಿತ್ಯ; ಮೊದಲ ಸಾಂಗ್ ರಿಲೀಸ್
‘ಮತ್ತೆ ಮೊದಲಿಂದ’ ಆಲ್ಬಂ ಹಾಡುಗಳನ್ನು ಒಂದೊಂದಾಗಿಯೇ ಬಿಡುಗಡೆ ಮಾಡಲಾಗುತ್ತಿದೆ. ಈ ಆಲ್ಬಂನಿಂದ ನಟ ಸಂಜನ್ ಕಜೆ ಅವರು ಪರಿಚಯಗೊಳ್ಳುತ್ತಿದ್ದಾರೆ. ‘ಮತ್ತೆ ಮೊದಲಿಂದ’ ಹಾಡುಗಳಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದಾರೆ. ‘ಪಂಚರಂಗಿ ಆಡಿಯೋ’ ಯೂಟ್ಯೂಬ್ ಚಾನಲ್ನಲ್ಲಿ ಮೂಲಕ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.
- Madan Kumar
- Updated on: Jun 19, 2025
- 8:44 pm
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಜನರು ತುಂಬಾ ನಿರೀಕ್ಷೆ ಇಟ್ಟುಕೊಂಡಿದ್ದ ‘ಉತ್ತರಕಾಂಡ’ ಚಿತ್ರದ ಶೂಟಿಂಗ್ ಸದ್ಯಕ್ಕೆ ನಿಂತಿವೆ. ಅದಕ್ಕೆ ಕಾರಣವೇನು ಎಂಬುದನ್ನು ನಿರ್ದೇಶಕ ರೋಹಿತ್ ಪದಕಿ ಹಾಗೂ ನಿರ್ಮಾಪಕ ಕಾರ್ತಿಕ್ ಗೌಡ ಅವರು ವಿವರಿಸಿದ್ದಾರೆ. ಈ ಚಿತ್ರದ ಪಾತ್ರವರ್ಗದಲ್ಲಿ ಡಾಲಿ ಧನಂಜಯ, ಶಿವರಾಜ್ಕುಮಾರ್ ಮುಂತಾದವರಿಗೆ ಪ್ರಮುಖ ಪಾತ್ರವಿದೆ.
- Madan Kumar
- Updated on: Jun 19, 2025
- 7:50 pm
ಈ ವಾರ ‘ಕಾಲವೇ ಮೋಸಗಾರ’ ರಿಲೀಸ್; ಜೋರಾಗಿದೆ ಪರಭಾಷೆ ಸಿನಿಮಾಗಳ ಪೈಪೋಟಿ
ಹೊಸಬರಿಗಾದರೂ, ಸ್ಟಾರ್ ನಟರಿಗಾದರೂ ಶುಕ್ರವಾರ ಎಂದರೆ ಹೊಸ ಅಧ್ಯಾಯ ಇದ್ದಂತೆ. ವರ್ಷವಿಡೀ ಕಷ್ಟಪಟ್ಟು ಮಾಡಿದ ಸಿನಿಮಾಗೆ ಜನರ ಪ್ರತಿಕ್ರಿಯೆ ತಿಳಿಯುವ ದಿನ ಅದು. ಈ ಶುಕ್ರವಾರ (ಜೂ.20) ‘ಕಾಲವೇ ಮೋಸಗಾರ’, ‘ಬುಲೆಟ್’ ಸೇರಿದಂತೆ ಒಂದಷ್ಟು ಸಿನಿಮಾಗಳು ತೆರೆಕಾಣುತ್ತಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: Jun 19, 2025
- 7:09 pm
‘ಸಂಬಂಧಿಕರೇ ಏನೇನೋ ಮಾತನಾಡೋ ಈ ಕಾಲದಲ್ಲಿ, ಇನ್ನು ಇವರೆಲ್ಲ..’; ರಚಿತಾ ರಾಮ್
ನಟಿ ರಚಿತಾ ರಾಮ್ ಅವರ ಮೇಲೆ ‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ಪ್ರಚಾರಕ್ಕೆ ಬಾರದಿರುವುದು ಚರ್ಚೆ ಆಗಿದೆ. ‘ಉಪ್ಪಿ ರಪ್ಪಿ’ ತಂಡದೊಂದಿಗಿನ ವಿವಾದದ ಕುರಿತು ದೂರು ದಾಖಲಾಗಿದೆ. ಈ ಮಧ್ಯೆ ರಚಿತಾ ಅವರು ಹಿಂದೆ ನೀಡಿದ ಸಂದರ್ಶನದ ಭಾಗಗಳು ವೈರಲ್ ಆಗುತ್ತಿವೆ. ಅವರ ಮೌನಕ್ಕೆ ಕಾರಣಗಳ ಕುರಿತು ಚರ್ಚೆ ನಡೆಯುತ್ತಿದೆ.
- Rajesh Duggumane
- Updated on: Jun 19, 2025
- 12:34 pm
‘ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ’: ನಾಗಶೇಖರ್ ಗರಂ
‘ಡಿಂಪಲ್ ಕ್ವೀನ್’ ರಚಿತಾ ರಾಮ್ ವಿರುದ್ಧ ನಿರ್ದೇಶಕ ನಾಗಶೇಖರ್ ಅವರ ಗರಂ ಆಗಿದ್ದಾರೆ. ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರಚಾರಕ್ಕೆ ರಚಿತಾ ರಾಮ್ ಬಂದಿಲ್ಲ ಎಂದು ಚಿತ್ರತಂಡ ಆರೋಪಿಸಿದೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮ ತೆಗೆದುಕೊಳ್ಳಬೇಕು ಎಂದು ನಾಗಶೇಖರ್ ಅವರು ಹೇಳಿದ್ದಾರೆ.
- Malatesh Jaggin
- Updated on: Jun 18, 2025
- 9:23 pm
ರಚಿತಾ ರಾಮ್ ಮೇಲೆ ಮತ್ತೊಂದು ದೂರು; ಅಡ್ವಾನ್ಸ್ ವಾಪಸ್ ಕೊಡದೇ ವಂಚಿಸಿದ ಆರೋಪ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ರೀತಿಯೇ ‘ಉಪ್ಪಿ ರುಪ್ಪಿ’ ಚಿತ್ರತಂಡ ಕೂಡ ರಚಿತಾ ರಾಮ್ ಮೇಲೆ ಆರೋಪ ಮಾಡಿದೆ. ಚಿತ್ರೀಕರಣಕ್ಕೆ ಬಾರದೇ, ಅಡ್ವಾನ್ಸ್ ಹಣವನ್ನೂ ವಾಪಸ್ ನೀಡಿದೇ ರಚಿತಾ ರಾಮ್ ಸತಾಯಿಸಿದ್ದಾರೆ ಎನ್ನಲಾಗಿದೆ. ‘ಉಪ್ಪಿ ರುಪ್ಪಿ’ ಸಿನಿಮಾದ ನಿರ್ಮಾಪಕಿ ವಿಜಯಲಕ್ಷ್ಮಿ ಅರಸ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.
- Mangala RR
- Updated on: Jun 18, 2025
- 3:22 pm
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ?
‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ನಟಿ ರಚಿತಾ ರಾಮ್ ಅವರು ಪ್ರಚಾರಕ್ಕೆ ಬಂದಿಲ್ಲ. ಆದ್ದರಿಂದ ಅವರ ವಿರುದ್ಧ ದೂರು ನೀಡಲಾಗಿದೆ. ಈ ಕುರಿತು ಇಂದು (ಜೂನ್ 17) ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ನಡೆದಿದೆ. ನಾಯಕ ನಟ ಶ್ರೀನಗರ ಕಿಟ್ಟಿ ಸೇರಿದಂತೆ ಚಿತ್ರತಂಡದ ಪ್ರಮುಖರು ಇದರಲ್ಲಿ ಭಾಗಿಯಾಗಿದ್ದಾರೆ.
- Madan Kumar
- Updated on: Jun 17, 2025
- 10:51 pm