AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Cinema

Kannada Cinema

1934ರಲ್ಲಿ ಮೊದಲ ಕನ್ನಡ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗುವ ಮೂಲಕ ಉದಯವಾದ ಕನ್ನಡ ಚಿತ್ರರಂಗಕ್ಕೆ 89 ವರ್ಷದ ಸುದೀರ್ಘ ಇತಿಹಾಸವಿದೆ.

ಮನರಂಜನೆಯ ಜೊತೆಗೆ ಜನ ಜಾಗೃತಿ ಮೂಡಿಸುವ, ಅಭಿರುಚಿ ಬೆಳೆಸುವ ಸಿನಿಮಾಗಳನ್ನು ಕನ್ನಡ ಚಿತ್ರರಂಗ ನೀಡುತ್ತಲೇ ಬಂದಿದೆ. ಸಿನಿಮಾಗಳ ಮೂಲಕ ಕನ್ನಡತನವನ್ನು ಪಸರಿಸುತ್ತಾ ಬಂದಿದೆ. ಸುಬ್ಬಯ್ಯ ನಾಯ್ಡು, ಭಾಗವತರ್, ಪಂಡರೀಬಾಯಿ ಅವರುಗಳು ಬಿತ್ತಿದ ಕನ್ನಡ ಚಿತ್ರರಂಗದ ಬೀಜಕ್ಕೆ ರಾಜ್​ಕುಮಾರ್, ಕಲ್ಯಾಣ್ ಕುಮಾರ್, ಲೋಕೇಶ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್​ನಾಗ್, ಅಂಬರೀಶ್ ಅಂಥಹಾ ಇನ್ನೂ ಅನೇಕ ಮಹನೀಯರು ನೀರೆರೆದು ಹೆಮ್ಮರವಾಗಿ ಬಳೆಸಿದ್ದಾರೆ.

ಕನ್ನಡ ಚಿತ್ರರಂಗ ಇಂದು ವಾರ್ಷಿಕವಾಗಿ ಸಾವಿರಾರು ಕೋಟಿ ವ್ಯವಹಾರ ನಡೆಯುವ ತಾಣ, ವರ್ಷಕ್ಕೆ ಸರಾಸರಿ 200 ರಿಂದ 250 ಕನ್ನಡ ಸಿನಿಮಾಗಳು ಇಲ್ಲಿ ತಯಾರುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ‘ಕೆಜಿಎಫ್’, ‘ಕಾಂತಾರ’, ‘ವಿಕ್ರಾಂತ್ ರೋಣ’ ಇನ್ನೂ ಕೆಲವು ಸಿನಿಮಾಗಳು ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಣೆ ಗೊಳಿಸಿವೆ.

ಇನ್ನೂ ಹೆಚ್ಚು ಓದಿ

ಗುರು ರಾಯರ ನೆನೆದು ನಟ ಜಗ್ಗೇಶ್ ಭಾವುಕ: ಬರಲಿದೆ ಹೊಸ ಭಕ್ತಿ ಗೀತೆ

ನಟ ಜಗ್ಗೇಶ್ ಅವರಿಗೆ ರಾಘವೇಂದ್ರ ಸ್ವಾಮಿಗಳ ಬಗ್ಗೆ ಅಪಾರ ಭಕ್ತಿ ಇದೆ. ಆ ಕುರಿತು ಅವರು ಅನೇಕ ಬಾರಿ ಹೇಳಿಕೊಂಡಿದ್ದಾರೆ. ಈಗ ರಾಯರ ಕುರಿತಾಗಿ ಹೊಸದೊಂದು ಹಾಡು ಸಿದ್ಧವಾಗುತ್ತಿದ್ದು, ಅದರ ಸುದ್ದಿಗೋಷ್ಠಿಯಲ್ಲಿ ಜಗ್ಗೇಶ್ ಭಾಗಿ ಆಗಿದ್ದರು. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಯಿತು. ಇಲ್ಲಿದೆ ಹೆಚ್ಚಿನ ಮಾಹಿತಿ..

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಸುದೀಪ್ ಅವರಿಗೆ ಹೀರೋಯಿನ್ ಇಲ್ಲ. ಈ ಮೊದಲು ಅವರು ಅಭಿನಯಿಸಿದ್ದ ‘ಮ್ಯಾಕ್ಸ್’ ಚಿತ್ರದಲ್ಲೂ ಹೀರೋಯಿನ್ ಇರಲಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಕಿಚ್ಚ ಸುದೀಪ್ ಅವರು ವಿವರಿಸಿದ್ದಾರೆ.

‘ಧುರಂಧರ್’ ಎದುರು ಮಂಕಾದ ‘ದಿ ಡೆವಿಲ್’: ದರ್ಶನ್ ಸಿನಿಮಾ ಕಲೆಕ್ಷನ್ ಕಡಿಮೆ ಆಗಿದ್ದು ಯಾಕೆ?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ಮೊದಲ ದಿನ 10 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ವಾರಾಂತ್ಯದಲ್ಲಿ ಇನ್ನೂ ಹೆಚ್ಚಾಗುವ ನಿರೀಕ್ಷೆ ಇತ್ತು. ಆದರೆ ಆ ರೀತಿ ಆಗಿಲ್ಲ. ‘ದಿ ಡೆವಿಲ್’ ಗಳಿಕೆ ಕಡಿಮೆ ಆಗಿದೆ. ‘ಧುರಂಧರ್’ ಸಿನಿಮಾದ ಪೈಪೋಟಿ, ಪೈರಸಿ ಕಾಟ ಸೇರಿದಂತೆ ಹಲವು ಕಾರಣಗಳಿಂದ ‘ದಿ ಡೆವಿಲ್’ ಹಿನ್ನಡೆ ಆಗಿದೆ.

ಮಹಿಳೆಯರಿಗೆ ಗೌರವ ಕೊಡೋದು ದರ್ಶನ್ ಅಭಿಮಾನಿಗಳಿಗೆ ಗೊತ್ತು: ವಿಜಯಲಕ್ಷ್ಮಿ

‘ದಿ ಡೆವಿಲ್’ ಸಿನಿಮಾದ ನಟಿ ರಚನಾ ರೈ ಅವರು ವಿಜಯಲಕ್ಷ್ಮಿ ದರ್ಶನ್ ಅವರ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನದಲ್ಲಿ ಕೆಲವು ಪ್ರಮುಖ ಪ್ರಶ್ನೆಗಳಿಗೆ ವಿಜಯಲಕ್ಷ್ಮಿ ದರ್ಶನ್ ಅವರು ನೇರವಾಗಿ ಉತ್ತರ ನೀಡಿದ್ದಾರೆ. ಅಭಿಮಾನಿಗಳ ಬಗ್ಗೆ ಎದುರಾದ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ಸಂದರ್ಶನದ ಪ್ರೋಮೋ ಬಹಳ ವೈರಲ್ ಆಗಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ದಿ ಡೆವಿಲ್ ಚಿತ್ರ ಎಲ್ಲ ಕಡೆಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಆಗುತ್ತಿದೆ. ಫ್ಯಾನ್ಸ್ ಅಷ್ಟೇ ಅಲ್ಲದೇ ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಸಹ ಬಂದು ಸಿನಿಮಾ ವೀಕ್ಷಿಸಿದ್ದಾರೆ. ನಟಿ ಪೂಜಾ ಗಾಂಧಿ ‘ದಿ ಡೆವಿಲ್’ ವೀಕ್ಷಿಸಿದ ನಂತರ ಮಾಧ್ಯಮಗಳ ಜೊತೆ ಅನಿಸಿಕೆ ಹಂಚಿಕೊಂಡರು.

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

‘ನಾವು ಅಂದುಕೊಂಡಿದ್ದಕ್ಕಿಂತ ಡಬಲ್ ಚೆನ್ನಾಗಿದೆ. ಈ ಸಿನಿಮಾ 100 ದಿನಗಳ ಕಾಲ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತದೆ. ಒಂದೊಂದು ದೃಶ್ಯ ಕೂಡ ರೋಚಕವಾಗಿ ಇದೆ. ಸಾರಥಿ ಸಿನಿಮಾದ ಇತಿಹಾಸ ರಿಪೀಟ್ ಆಗುತ್ತದೆ’ ಎಂದು ‘ದಿ ಡೆವಿಲ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಮೈಸೂರಿನಲ್ಲಿ ಹೇಳಿದ್ದಾರೆ.

  • Ram
  • Updated on: Dec 12, 2025
  • 7:31 pm

ದಿ ಡೆವಿಲ್, ಅಖಂಡ 2, ಧುರಂಧರ್ ಸಿನಿಮಾಗಳ ನಡುವೆ ಕ್ಲ್ಯಾಶ್: ಯಾರಿಗೆ ಲಾಭ?

ಗಲ್ಲಾಪೆಟ್ಟಿಗೆಯಲ್ಲಿ ‘ದಿ ಡೆವಿಲ್’, ‘ಧುರಂಧರ್’ ಹಾಗೂ ‘ಅಖಂಡ 2’ ಸಿನಿಮಾಗಳು ಪರಸ್ಪರ ಫೈಟ್ ನೀಡುತ್ತಿವೆ. ‘ಧುರಂಧರ್’ ಸಿನಿಮಾವನ್ನು 2ನೇ ವಾರ ಕೂಡ ಜನರು ಮುಗಿಬಿದ್ದು ನೋಡುತ್ತಿದ್ದಾರೆ. ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಬಾಲಯ್ಯ ಅಭಿನಯದ ‘ಅಖಂಡ 2’ ಸಿನಿಮಾಗೆ ಬಹುತೇಕ ನೆಗೆಟಿವ್ ಪ್ರತಿಕ್ರಿಯೆ ಸಿಗುತ್ತಿದೆ. ಈ ಬಗ್ಗೆ ಇಲ್ಲಿದೆ ವಿವರ..

ಅಪ್ಪ-ಅಮ್ಮ ಸತ್ರೂ ಓಕೆ, ದರ್ಶನ್ ಜೈಲಲ್ಲಿರೋದನ್ನ ನೋಡೋಕಾಕ್ತಿಲ್ಲ; ಫ್ಯಾನ್ಸ್ ಅಂಧಾಭಿಮಾನ

ನಟ ದರ್ಶನ್ ಅವರ ‘ಡೆವಿಲ್’ ಸಿನಿಮಾ 10 ಕೋಟಿ ಗಳಿಸಿ ಉತ್ತಮ ಆರಂಭ ಕಂಡಿದೆ. ಆದರೆ, ದರ್ಶನ್ ಜೈಲಿನಲ್ಲಿರುವಾಗ ಸಿನಿಮಾ ಬಿಡುಗಡೆಯಾದದ್ದು ಅಭಿಮಾನಿಗಳಲ್ಲಿ ತೀವ್ರ ಬೇಸರ ಮೂಡಿಸಿದೆ. ಕೆಲವರು "ತಂದೆ-ತಾಯಿ ಸತ್ತರೂ ಇಷ್ಟು ಬೇಸರವಾಗುವುದಿಲ್ಲ" ಎಂದು ಹೇಳಿದ್ದು ವೈರಲ್ ಆಗಿದೆ. ಇದು ಅಭಿಮಾನವಲ್ಲ, ಅಂಧಾಭಿಮಾನ ಎಂದು ಹಲವರು ಟೀಕಿಸಿದ್ದಾರೆ.

ಮೊದಲ ದಿನ ‘ಡೆವಿಲ್’ ಸಿಡಿಲಬ್ಬರದ ಕಲೆಕ್ಷನ್; ದರ್ಶನ್ ಫ್ಯಾನ್ಸ್ ಫುಲ್ ಖುಷ್

The Devil First Day Collection: ನಟ ದರ್ಶನ್ ಜೈಲಿನಲ್ಲಿದ್ದರೂ 'ಡೆವಿಲ್' ಸಿನಿಮಾ ಮೊದಲ ದಿನ ಭರ್ಜರಿ ಕಲೆಕ್ಷನ್ ಮಾಡಿದೆ. ಸಿನಿಮಾ ಭರ್ಜರಿ ಗಳಿಸಿದೆ. ಪ್ರಚಾರದ ಕೊರತೆ ಇದ್ದರೂ, ಅಭಿಮಾನಿಗಳು ಸಕ್ರಿಯವಾಗಿ ಪ್ರಚಾರ ಮಾಡಿ ಚಿತ್ರವನ್ನು ಯಶಸ್ವಿಗೊಳಿಸಿದ್ದಾರೆ. 'ಕಾಂತಾರ: ಚಾಪ್ಟರ್ 1' ನಂತರ ಇಷ್ಟು ದೊಡ್ಡ ಗಳಿಕೆ ಕಂಡ ಮೊದಲ ಕನ್ನಡ ಚಿತ್ರವಿದು. ಅಧಿಕ ಟಿಕೆಟ್ ದರವೂ ಕಲೆಕ್ಷನ್‌ಗೆ ನೆರವಾಗಿದೆ.

‘ದಿ ಡೆವಿಲ್’ ಸಿನಿಮಾ: 15 ದಿನಗಳಿಂದ ಮನೆಗೆ ಹೋಗಿಲ್ಲ ದರ್ಶನ್ ಫ್ಯಾನ್ಸ್

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರಕ್ಕೆ ದರ್ಶನ್ ಅಭಿಮಾನಿಗಳಿಂದ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಈ ಸಿನಿಮಾಗಾಗಿ ಅಭಿಮಾನಿಗಳು ಬಹಳ ದಿನಗಳಿಂದ ಕಾದಿದ್ದರು. ಚಿತ್ರದ ಬಿಡುಗಡೆಗೂ ಮುನ್ನವೇ ಅನೇಕ ದಿನಗಳಿಂದ ತಯಾರಿ ನಡೆಸಿದ್ದರು. ಈಗ ರಾಜ್ಯಾದ್ಯಂತ ದರ್ಶನ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ಹಿರಿಯ ನಟರ ಹೊಸ ಸಿನಿಮಾ ‘ಕ್ಲಾಸ್ ಆಫ್ ಮೈಸೂರು’: ಏನಿದರ ಕಥೆ?

ಗೌತಮ್ ಬಸವರಾಜು ಅವರು ನಿರ್ದೇಶನ ಮಾಡುತ್ತಿರುವ ‘ಕ್ಲಾಸ್ ಆಫ್ ಮೈಸೂರು’ ಚಿತ್ರದ ಥೀಮ್ ಭಿನ್ನವಾಗಿದೆ. ತಾರಾ, ದತ್ತಣ್ಣ, ರಂಗಾಯಣ ರಘು, ಬಿರಾದರ್, ಶರತ್ ಲೋಹಿತಾಶ್ವ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ಮುಹೂರ್ತ ಸಮಾರಂಭದಲ್ಲಿ ಇವರೆಲ್ಲರೂ ಭಾಗಿಯಾಗಿ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ದರ್ಶನ್ ರಾಜಕೀಯಕ್ಕೆ ಬರಬೇಕಾ ಬೇಡವಾ ಅನ್ನೋದು ಫ್ಯಾನ್ಸ್ ನಿರ್ಧಾರ: ದಿನಕರ್

ಡಿ.11ಕ್ಕೆ ರಿಲೀಸ್ ಆದ ‘ದಿ ಡೆವಿಲ್’ ಚಿತ್ರದಲ್ಲಿ ರಾಜಕೀಯದ ಕಹಾನಿ ಇದೆ. ಈ ಚಿತ್ರವನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಬಹುತೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಆಗಿದೆ. ನಿಜ ಜೀವನದಲ್ಲಿ ದರ್ಶನ್ ರಾಜಕೀಯಕ್ಕೆ ಬರುತ್ತಾರಾ ಎಂಬ ಕೌತುಕ ಇದೆ. ಈ ಬಗ್ಗೆ ಸಹೋದರ ದಿನಕರ್ ತೂಗುದೀಪ್ ಅವರು ಉತ್ತರ ನೀಡಿದ್ದಾರೆ.

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ