AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Cinema

Kannada Cinema

1934ರಲ್ಲಿ ಮೊದಲ ಕನ್ನಡ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗುವ ಮೂಲಕ ಉದಯವಾದ ಕನ್ನಡ ಚಿತ್ರರಂಗಕ್ಕೆ 89 ವರ್ಷದ ಸುದೀರ್ಘ ಇತಿಹಾಸವಿದೆ.

ಮನರಂಜನೆಯ ಜೊತೆಗೆ ಜನ ಜಾಗೃತಿ ಮೂಡಿಸುವ, ಅಭಿರುಚಿ ಬೆಳೆಸುವ ಸಿನಿಮಾಗಳನ್ನು ಕನ್ನಡ ಚಿತ್ರರಂಗ ನೀಡುತ್ತಲೇ ಬಂದಿದೆ. ಸಿನಿಮಾಗಳ ಮೂಲಕ ಕನ್ನಡತನವನ್ನು ಪಸರಿಸುತ್ತಾ ಬಂದಿದೆ. ಸುಬ್ಬಯ್ಯ ನಾಯ್ಡು, ಭಾಗವತರ್, ಪಂಡರೀಬಾಯಿ ಅವರುಗಳು ಬಿತ್ತಿದ ಕನ್ನಡ ಚಿತ್ರರಂಗದ ಬೀಜಕ್ಕೆ ರಾಜ್​ಕುಮಾರ್, ಕಲ್ಯಾಣ್ ಕುಮಾರ್, ಲೋಕೇಶ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್​ನಾಗ್, ಅಂಬರೀಶ್ ಅಂಥಹಾ ಇನ್ನೂ ಅನೇಕ ಮಹನೀಯರು ನೀರೆರೆದು ಹೆಮ್ಮರವಾಗಿ ಬಳೆಸಿದ್ದಾರೆ.

ಕನ್ನಡ ಚಿತ್ರರಂಗ ಇಂದು ವಾರ್ಷಿಕವಾಗಿ ಸಾವಿರಾರು ಕೋಟಿ ವ್ಯವಹಾರ ನಡೆಯುವ ತಾಣ, ವರ್ಷಕ್ಕೆ ಸರಾಸರಿ 200 ರಿಂದ 250 ಕನ್ನಡ ಸಿನಿಮಾಗಳು ಇಲ್ಲಿ ತಯಾರುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ‘ಕೆಜಿಎಫ್’, ‘ಕಾಂತಾರ’, ‘ವಿಕ್ರಾಂತ್ ರೋಣ’ ಇನ್ನೂ ಕೆಲವು ಸಿನಿಮಾಗಳು ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಣೆ ಗೊಳಿಸಿವೆ.

ಇನ್ನೂ ಹೆಚ್ಚು ಓದಿ

ಮುಂಬೈನಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಘೋಷಿಸಿದ ಶಿವಣ್ಣ, ಆರ್. ಚಂದ್ರು

ನಿರ್ದೇಶಕ, ನಿರ್ಮಾಪಕ ಆರ್. ಚಂದ್ರು ಅವರು ‘ಕಬ್ಜ’ ಬಳಿಕ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಘೋಷಿಸಿದ್ದಾರೆ. ಹಲವು ಭಾಷೆಗಳಲ್ಲಿ ಈ ಸಿನಿಮಾ ಮೂಡಿಬರಲಿದೆ. ‘ಒರಿಜಿನಲ್ ಮಾನ್​ಸ್ಟರ್’ ಹೆಸರಿನ ಈ ಸಿನಿಮಾದ ಸುದ್ದಿಗೋಷ್ಠಿ ಮುಂಬೈನಲ್ಲಿ ನಡೆದಿದೆ. ಇದರ ಕನ್ನಡ ವರ್ಷನ್​ಗೆ ಶಿವರಾಜ್​ಕುಮಾರ್ ಹೀರೋ ಆಗಿದ್ದಾರೆ.

ಮುಹೂರ್ತ ಮಾಡಿಕೊಂಡ ‘ಲಾಕ್​ಡೌನ್ 21 ಡೇಸ್’ ಸಿನಿಮಾ; ಕೊರೊನಾ ಕಾಲದ ಕಥೆ

ಕೊರೊನಾ ಲಾಕ್​ಡೌನ್ ಕುರಿತಂತೆ ಈಗಾಗಲೇ ಕೆಲವು ಸಿನಿಮಾ ಬಂದಿದೆ. ಅವುಗಳಿಗೆ ಹೊಸದಾಗಿ ಸೇರ್ಪಡೆ ಆಗಲಿದೆ ‘ಲಾಕ್ ಡೌನ್ 21 ಡೇಸ್’ ಸಿನಿಮಾ. ಈ ಸಿನಿಮಾದಲ್ಲಿ ಅನಿಲ್, ಅರುಣಾ ಯಾದವ್, ಪ್ರಿಯಾಂಕಾ ರಾಜ್, ಮಂಜು ನಂಜನಗೂಡು ಮುಂತಾದವರು ಅಭಿನಯಿಸುತ್ತಿದ್ದಾರೆ. ಸಿನಿಮಾದ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಕೆವಿಎನ್ ನಿರ್ಮಾಣದ ‘ಬೇಲ್’ ಸಿನಿಮಾ; ಟೀಸರ್ ಮೂಲಕ ಗಮನ ಸೆಳೆದ ಶಿವಣ್ಣ

ಪವನ್ ಒಡೆಯರ್ ನಿರ್ದೇಶನದ ‘ಬೇಲ್’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಅವರು ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಆ ಕಾರಣದಿಂದ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಈಗ ಟೀಸರ್ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2ರಂದು ‘ಬೇಲ್’ ಸಿನಿಮಾ ರಿಲೀಸ್ ಆಗಲಿದೆ. ಚಿತ್ರದ ಬಗ್ಗೆ ಇಲ್ಲಿದೆ ಮಾಹಿತಿ..

‘ಟಾಕ್ಸಿಕ್’ ಸಿನಿಮಾ ನೋಡಿ ಮೆಚ್ಚಿಕೊಂಡ ಸುದೀಪ್; ಕಿಚ್ಚನ ಚಪ್ಪಾಳೆ ಪಡೆದ ಯಶ್

ಪ್ರೇಕ್ಷಕರಿಂದ ಹಾಗೂ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದ ‘ಟಾಕ್ಸಿಕ್’ ಸಿನಿಮಾಗೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಸಾಥ್ ನೀಡುತ್ತಿದ್ದಾರೆ. ಯಶ್ ಮಾಡಿರುವ ಈ ಬಿಗ್ ಬಜೆಟ್ ಪ್ರಯತ್ನಕ್ಕೆ ಅನೇಕರು ಬೆಂಬಲ ನೀಡುತ್ತಿದ್ದಾರೆ. ಉಪೇಂದ್ರ, ಆರ್. ಚಂದ್ರು ಬಳಿಕ ಕಿಚ್ಚ ಸುದೀಪ್ ಅವರು ‘ಟಾಕ್ಸಿಕ್’ ಸಿನಿಮಾದ ಪರವಾಗಿ ನಿಂತಿದ್ದಾರೆ.

‘ಟಾಕ್ಸಿಕ್’ ವಿಮರ್ಶೆ ಮಾಡಿದ ಮತ್ತೊಬ್ಬ ಯೂಟ್ಯೂಬರ್​​ಗೆ ಲೀಗಲ್ ನೋಟಿಸ್

‘ಟಾಕ್ಸಿಕ್’ ನೋಡಿದ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ಕೆಲವರಿಗೆ ಈ ಸಿನಿಮಾ ಇಷ್ಟ ಆಗಿಲ್ಲ. ವಿಮರ್ಶೆ ಮಾಡಿದ ಕೆಲವು ಯೂಟ್ಯೂಬರ್​ಗಳಿಗೆ ಲೀಗಲ್ ನೋಟಿಸ್ ಕಳಿಸಲಾಗುತ್ತಿದೆ. ಯೂಟ್ಯೂಬರ್‌ಗಳ ಈ ಆರೋಪಗಳಿಗೆ ಚಿತ್ರದ ನಿರ್ಮಾಣ ಸಂಸ್ಥೆಯಾಗಲಿ ಅಥವಾ ನಟ ಯಶ್ ಅವರಾಗಲಿ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

‘ಟಾಕ್ಸಿಕ್’ ನೋಡಿ ಮೆಚ್ಚಿಕೊಂಡ ಉಪೇಂದ್ರ; ಆದರೆ ನೆಟ್ಟಿಗರ ಅಭಿಪ್ರಾಯವೇ ಬೇರೆ

‘ಟಾಕ್ಸಿಕ್’ ಸಿನಿಮಾಗೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳ ಬೆಂಬಲ ಸಿಗುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಇಂಥ ಸಂದರ್ಭದಲ್ಲಿ ಉಪೇಂದ್ರ ಅವರು ಈ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಆದರೆ ಉಪೇಂದ್ರ ಅವರ ಮಾತಿಗೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಅಭಿಪ್ರಾಯ ವ್ಯಕ್ತವಾಗಿದೆ. ಆ ಬಗ್ಗೆ ಇಲ್ಲಿದೆ ವಿವರ..

‘ಟಾಕ್ಸಿಕ್ ಚಿತ್ರದಲ್ಲಿ ಅತಿಯಾದ ಹಿಂಸೆ’; ಸೆನ್ಸಾರ್ ಮಂಡಳಿ ವಿರುದ್ಧ ಅಣ್ಣಾಮಲೈ ಕಿಡಿ

ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಹಿನ್ನೆಲೆಯಲ್ಲಿ ಸೆನ್ಸಾರ್ ಮಂಡಳಿ ವಿರುದ್ಧ ಕೆ. ಅಣ್ಣಾಮಲೈ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿನಿಮಾಗಳಲ್ಲಿ ಅತಿಯಾದ ಹಿಂಸಾಚಾರ ಮತ್ತು ಮಹಿಳಾ ವಿರೋಧಿ ಧೋರಣೆಯನ್ನು ವೈಭವೀಕರಿಸುವುದನ್ನು ತಡೆಯಲು ಸಿಬಿಎಫ್‌ಸಿ ವಿಫಲವಾಗಿದೆ ಎಂದು ಆರೋಪಿಸಿದ್ದು, ದೊಡ್ಡ ಸ್ಟಾರ್ ಸಿನಿಮಾಗಳಿಗೂ ಕಟ್ಟುನಿಟ್ಟಿನ ಸೆನ್ಸಾರ್ ನಿಯಮ ಅನ್ವಯಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

‘ಟಾಕ್ಸಿಕ್’ ಬೋಲ್ಡ್ ದೃಶ್ಯಕ್ಕೆ ರುಕ್ಮಿಣಿ ವಸಂತ್ ಟ್ರೋಲ್: ನಟಿಯ ಬೆಂಬಲಕ್ಕೆ ನಿಂತ ಫ್ಯಾನ್ಸ್

‘ಟಾಕ್ಸಿಕ್’ ಸಿನಿಮಾ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ನಟಿ ರುಕ್ಮಿಣಿ ವಸಂತ್ ಅವರು ಮಾಡಿರುವ ಪಾತ್ರದ ಬಗ್ಗೆ ಕೂಡ ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಯಶ್ ಜೊತೆ ರುಕ್ಮಿಣಿ ವಸಂತ್ ಅವರು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು ಕೆಲವರಿಗೆ ಇಷ್ಟ ಆಗಿಲ್ಲ. ಆದರೆ ಫ್ಯಾನ್ಸ್ ಬೆಂಬಲ ಸೂಚಿಸಿದ್ದಾರೆ.

‘ಟಾಕ್ಸಿಕ್’ ಸಿನಿಮಾ ವಿಮರ್ಶೆ ಮಾಡಿದ ಯೂಟ್ಯೂಬರ್‌ಗೆ ಲೀಗಲ್ ನೋಟಿಸ್ ನೀಡಿದ ಚಿತ್ರತಂಡ

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಕೆಲವರಿಗೆ ಈ ಸಿನಿಮಾ ಇಷ್ಟ ಆಗಿದ್ದರೆ, ಇನ್ನು ಕೆಲವರಿಗೆ ಇಷ್ಟ ಆಗಿಲ್ಲ. ಸಿನಿಮಾದ ವಿಮರ್ಶೆ ಮಾಡಿದ ಯೂಟ್ಯೂಬ್ ಚಾನೆಲ್​ವೊಂದಕ್ಕೆ ಟಾಕ್ಸಿಕ್ ಚಿತ್ರತಂಡದ ಕಡೆಯಿಂದ ಲೀಗಲ್ ನೋಟಿಸ್ ಕಳಿಸಿರುವುದು ತಿಳಿದುಬಂದಿದೆ.

ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ

ನಟ ಚಿಕ್ಕಣ್ಣ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಈಗಾಗಲೇ ಮದುವೆ ಶಾಸ್ತ್ರಗಳು ಶುರುವಾಗಿವೆ. ಪಾವನಾ ಅವರನ್ನು ಚಿಕ್ಕಣ್ಣ ಕೈ ಹಿಡಿಯುತ್ತಿದ್ದಾರೆ. ಆ.29ರಂದು ಆರತಕ್ಷತೆ ಕಾರ್ಯಕ್ರಮ, ಆ.30ರಂದು ಮುಹೂರ್ತ ನೆರವೇರಲಿದೆ. ಗುರುವಾರ (ಆ.27) ಶ್ರೀರಂಗಪಟ್ಟಣದ ಮಹದೇವಪುರ ಗ್ರಾಮದ ಪಾವನಾ ಅವರ ನಿವಾಸದಲ್ಲಿ ಅರಿಶಿಣ ಶಾಸ್ತ್ರ ಮಾಡಲಾಗಿದೆ.

‘ಟಾಕ್ಸಿಕ್’ ಮೊದಲ ದಿನದ ಗಳಿಕೆ 150 ಕೋಟಿ ರೂಪಾಯಿ; ಚಿತ್ರತಂಡದ ಅಧಿಕೃತ ಮಾಹಿತಿ

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಿದೆ ಎಂಬ ಮಾಹಿತಿ ಸಿಕ್ಕಿದೆ. ಚಿತ್ರತಂಡದ ಪ್ರಕಾರ, ಈ ಸಿನಿಮಾ ವಿಶ್ವಾದ್ಯಂತ 150 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಹೊಸ ಪೋಸ್ಟರ್ ಮೂಲಕ ಚಿತ್ರತಂಡ ಈ ವಿಷಯ ಹಂಚಿಕೊಂಡಿದೆ.

ಟಾಕ್ಸಿಕ್’ ಕಲೆಕ್ಷನ್ ಲೆಕ್ಕಾಚಾರ; ಹಿಂದಿಯಲ್ಲಿ ದೊಡ್ಡ ಜಾಕ್‌ಪಾಟ್ ಹೊಡೆದಿದ್ದು ಹೇಗೆ?

Toxic Hindi Market Collection: 'ಟಾಕ್ಸಿಕ್' ಸಿನಿಮಾ ಮೊದಲ ದಿನವೇ ₹140.75 ಕೋಟಿ ಗಳಿಸಿ ಧೂಳೆಬ್ಬಿಸಿದೆ. ಕನ್ನಡಕ್ಕಿಂತ ಹಿಂದಿಯಲ್ಲೇ ಡಬಲ್ ಕಲೆಕ್ಷನ್ ಆಗಲು ಶೋಗಳ ಸಂಖ್ಯೆಯೇ ಪ್ರಮುಖ ಕಾರಣ. ಶೇ. 89ರಷ್ಟು ಆಕ್ಯುಪೆನ್ಸಿ ಇದ್ದರೂ ಕಡಿಮೆ ಶೋಗಳ ಕಾರಣಕ್ಕೆ ಕನ್ನಡ ಹಿನ್ನಡೆ ಅನುಭವಿಸಿದರೆ, ಬೃಹತ್ ಶೋಗಳ ಬಲದಿಂದ ಹಿಂದಿ ಆವೃತ್ತಿ ಜಯಭೇರಿ ಬಾರಿಸಿದೆ.

ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ