Kannada Cinema
1934ರಲ್ಲಿ ಮೊದಲ ಕನ್ನಡ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗುವ ಮೂಲಕ ಉದಯವಾದ ಕನ್ನಡ ಚಿತ್ರರಂಗಕ್ಕೆ 89 ವರ್ಷದ ಸುದೀರ್ಘ ಇತಿಹಾಸವಿದೆ.
ಮನರಂಜನೆಯ ಜೊತೆಗೆ ಜನ ಜಾಗೃತಿ ಮೂಡಿಸುವ, ಅಭಿರುಚಿ ಬೆಳೆಸುವ ಸಿನಿಮಾಗಳನ್ನು ಕನ್ನಡ ಚಿತ್ರರಂಗ ನೀಡುತ್ತಲೇ ಬಂದಿದೆ. ಸಿನಿಮಾಗಳ ಮೂಲಕ ಕನ್ನಡತನವನ್ನು ಪಸರಿಸುತ್ತಾ ಬಂದಿದೆ. ಸುಬ್ಬಯ್ಯ ನಾಯ್ಡು, ಭಾಗವತರ್, ಪಂಡರೀಬಾಯಿ ಅವರುಗಳು ಬಿತ್ತಿದ ಕನ್ನಡ ಚಿತ್ರರಂಗದ ಬೀಜಕ್ಕೆ ರಾಜ್ಕುಮಾರ್, ಕಲ್ಯಾಣ್ ಕುಮಾರ್, ಲೋಕೇಶ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್ನಾಗ್, ಅಂಬರೀಶ್ ಅಂಥಹಾ ಇನ್ನೂ ಅನೇಕ ಮಹನೀಯರು ನೀರೆರೆದು ಹೆಮ್ಮರವಾಗಿ ಬಳೆಸಿದ್ದಾರೆ.
ಕನ್ನಡ ಚಿತ್ರರಂಗ ಇಂದು ವಾರ್ಷಿಕವಾಗಿ ಸಾವಿರಾರು ಕೋಟಿ ವ್ಯವಹಾರ ನಡೆಯುವ ತಾಣ, ವರ್ಷಕ್ಕೆ ಸರಾಸರಿ 200 ರಿಂದ 250 ಕನ್ನಡ ಸಿನಿಮಾಗಳು ಇಲ್ಲಿ ತಯಾರುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ‘ಕೆಜಿಎಫ್’, ‘ಕಾಂತಾರ’, ‘ವಿಕ್ರಾಂತ್ ರೋಣ’ ಇನ್ನೂ ಕೆಲವು ಸಿನಿಮಾಗಳು ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಣೆ ಗೊಳಿಸಿವೆ.
ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್; ವಿಡಿಯೋ ನೋಡಿ
ನಟಿ ರಚಿತಾ ರಾಮ್ ಅವರು ಕೊರಗಜ್ಜ ದೈವದ ಕೋಲ ಸೇವೆಯಲ್ಲಿ ಭಾಗಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ರಚಿತಾ ರಾಮ್ ಕೋಲ ಸೇವೆ ನೀಡಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ಕೋಲ ಸೇವೆಯಲ್ಲಿ ಭಾಗಿಯಾದ ಅವರ ವಿಡಿಯೋ ಲಭ್ಯವಾಗಿದೆ.
- Ashok
- Updated on: May 17, 2026
- 12:12 pm
ನೈಜ ಘಟನೆಗಳ ಆಧಾರಿತ ‘ಬೇಲ್’ ಸಿನಿಮಾ ಟೀಸರ್; ಗಮನ ಸೆಳೆದ ಶಿವಣ್ಣ ಲುಕ್
ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಶಿವರಾಜ್ಕುಮಾರ್ ಅವರ ಲುಕ್ ಗಮನ ಸೆಳೆಯುತ್ತಿದೆ. ಅಜನೀಶ್ ಲೋಕನಾಥ್ ಅವರ ಹಿನ್ನೆಲೆ ಸಂಗೀತದಿಂದ ಟೀಸರ್ನ ಮೆರುಗು ಹೆಚ್ಚಿದೆ. ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ಈ ಸಿನಿಮಾ ಅದ್ದೂರಿಯಾಗಿ ಮೂಡಿಬರುತ್ತಿದೆ. ಪವನ್ ಒಡೆಯರ್ ಅವರು ನಿರ್ದೇಶನ ಮಾಡುತ್ತಿದ್ದಾರೆ.
- Madan Kumar
- Updated on: May 17, 2026
- 10:15 am
‘ಟಾಕ್ಸಿಕ್’ ಸಿನಿಮಾ ವಿಳಂಬಕ್ಕೆ ಹಲವು ಬಲವಾದ ಕಾರಣಗಳಿವೆ: ನಟಿ ತಾರಾ ಸುತಾರಿಯಾ
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ದಿನಾಂಕ 2 ಬಾರಿ ಮುಂದೂಡಿಕೆ ಆಯಿತು. ಆ ಬಗ್ಗೆ ನಟಿ ತಾರಾ ಸುತಾರಿಯಾ ಅವರು ಮಾತನಾಡಿದ್ದಾರೆ. ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದ್ದಕ್ಕೆ ಅಭಿಮಾನಿಗಳಿಗೆ ಬೇಸರ ಇದೆ ಎಂಬುದು ನಿಜ. ಆದರೆ ಆ ಕಾಯುವಿಕೆಗೆ ಫಲ ಸಿಗಲಿದೆ ಎಂಬ ನಂಬಿಕೆ ತಾರಾ ಸುತಾರಿಯಾ ಅವರಿಗೆ ಇದೆ.
- Madan Kumar
- Updated on: May 17, 2026
- 8:06 am
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್ಗೆ ಸಿಗುತ್ತಿಲ್ಲ ಯಾಕೆ? ವಿವರಿಸಿದ ಹಿರಿಯ ವಕೀಲರು
ಬೇರೆ ಪ್ರಕರಣದಲ್ಲಿ ಇರುವ ಅನೇಕರಿಗೆ ಜಾಮೀನು ಸಿಕ್ಕಿದೆ. ಆದರೆ ದರ್ಶನ್ ಅವರಿಗೆ ಮಾತ್ರ ಜಾಮೀನು ಸಿಗುತ್ತಿಲ್ಲ ಯಾಕೆ ಎಂಬ ಪ್ರಶ್ನೆಗೆ ಹಿರಿಯ ವಕೀಲ ಬಾಲನ್ ಅವರು ಉತ್ತರ ನೀಡಿದ್ದಾರೆ. ‘ಕೊಲೆ ಪ್ರಕರಣ ಆಗಿದ್ದರೂ ಪ್ರತಿ ಕೇಸ್ ಕೂಡ ಭಿನ್ನವಾಗಿರುತ್ತದೆ’ ಎಂದು ಅವರು ಹೇಳಿದ್ದಾರೆ.
- Mangala RR
- Updated on: May 15, 2026
- 10:35 pm
ದರ್ಶನ್ಗೆ ಸಿಗಲಿಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಅವರಿಗೆ ನಿರಾಸೆ ಆಗಿದೆ. ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇಂದು (ಮೇ 15) ನ್ಯಾಯಾಲಯದಲ್ಲಿ ವಿಚಾರಣೆ ಹೇಗೆ ನಡೆಯಿತು ಎಂಬುದನ್ನು ಲಾಯರ್ ಸಾಕೇತ್ ಅವರು ವಿವರಿಸಿದ್ದಾರೆ. ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..
- Madan Kumar
- Updated on: May 15, 2026
- 8:03 pm
1300 ಕೋಟಿ ರೂ. ಬೆಲೆಯ ಡ್ರೆಸ್ ಧರಿಸಿ ಕಾನ್ ಚಿತ್ರೋತ್ಸವಕ್ಕೆ ಬಂದಿದ್ದ ದರ್ಶನ್ ಸಿನಿಮಾ ನಟಿ
ಪ್ರತಿಷ್ಠಿತ ಕಾನ್ ಚಿತ್ರೋತ್ಸವದಲ್ಲಿ ನಟಿಯರು ಒಬ್ಬರಿಗಿಂತ ಒಬ್ಬರು ಹೆಚ್ಚಾಗಿ ಮಿಂಚುತ್ತಾರೆ. ಆದರೆ ದರ್ಶನ್ ಸಿನಿಮಾದ ನಟಿ ಮಾಡಿದ ದಾಖಲೆಯನ್ನು ಸದ್ಯಕ್ಕೆ ಯಾರೂ ಮುರಿದಿಲ್ಲ. ನಟಿ ಊರ್ವಶಿ ರೌಟೇಲಾ ಅವರು 1300 ಕೋಟಿ ರೂಪಾಯಿ ಬೆಲೆಯ ಡ್ರೆಸ್ ಧರಿಸಿದ್ದರು. ಈ ಬೆಲೆ ಕೇಳಿ ಹಾಲಿವುಡ್ ಮಂದಿ ಕೂಡ ಅಚ್ಚರಿಪಟ್ಟಿದ್ದರು.
- Madan Kumar
- Updated on: May 15, 2026
- 6:26 pm
Darshan Thoogudeepa: ದರ್ಶನ್ಗೆ ಕನಿಷ್ಟ ಒಂದು ವರ್ಷ ಜೈಲು ಖಾಯಂ
ದರ್ಶನ್ ಜಾಮೀನು ಅರ್ಜಿ ಕುರಿತು ಸುಪ್ರೀಂ ಕೋರ್ಟ್ ತೀರ್ಪು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ನ್ಯಾಯಾಂಗ ಬಂಧನದಲಿದ್ದು, ಇತ್ತೀಚೆಗಷ್ಟೆ ಸುಪ್ರೀಂ ಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ಇಂದು (ಮೇ 15) ದರ್ಶನ್ ಜಾಮೀನು ಅರ್ಜಿಯನ್ನು ಪುರಸ್ಕರಿಸಿಲ್ಲ. ಬದಲಿಗೆ ಒಂದು ವರ್ಷದ ಕಾಲಾವಕಾಶವನ್ನು ನೀಡಿದೆ.
- Manjunatha C
- Updated on: May 15, 2026
- 12:15 pm
ಸ್ಮಾರ್ಟ್ ವಾಚ್ ನಂಬಿ ಎದೆ ನೋವು ನಿರ್ಲಕ್ಷ್ಯ ಮಾಡಿದ್ರಾ ನಟ ದಿಲೀಪ್ ರಾಜ್?
ಎದೆ ನೋವು ಕಾಣಿಸಿಕೊಂಡ ಬಳಿಕ ದಿಲೀಪ್ ರಾಜ್ ಅವರು ಸ್ಮಾರ್ಟ್ ವಾಚ್ನಲ್ಲಿ ಹೃದಯ ಬಡಿತದ ಪ್ರಮಾಣವನ್ನು ನೋಡಿಕೊಂಡಿದ್ದರು. ಅಲ್ಲಿ ಎಲ್ಲವೂ ಸರಿಯಾಗಿಯೇ ತೋರಿಸಿತ್ತು. ಆದರೆ ಬೆಳಗಾಗುವುದರಲ್ಲಿ ಅವರ ಪ್ರಾಣ ಹೋಯಿತು. ಸ್ಮಾರ್ಟ್ ವಾಚ್ ತೋರಿಸುವ ಮಾಹಿತಿಯನ್ನು ಎಷ್ಟರಮಟ್ಟಿಗೆ ನಂಬಲು ಸಾಧ್ಯ ಎಂಬ ಚರ್ಚೆ ಈಗ ಜೋರಾಗಿದೆ.
- Madan Kumar
- Updated on: May 14, 2026
- 5:09 pm
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ನಟ ದಿಲೀಪ್ ರಾಜ್ ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಯ ಸುದ್ದಿ ತಿಳಿದಾಗ ನಿರ್ದೇಶಕ ಎಸ್. ನಾರಾಯಣ್ ಅವರು ನಂಬಲೇ ಇಲ್ಲ. ಆ ಬಗ್ಗೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದಿಲೀಪ್ ರಾಜ್ ಅವರ ಅಂತಿಮ ದರ್ಶನ ಪಡೆದ ಬಳಿಕ ಎಸ್. ನಾರಾಯಣ್ ಅವರು ಮಾತನಾಡಿದರು.
- Madan Kumar
- Updated on: May 13, 2026
- 2:47 pm
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಹೃದಯಾಘಾತದಿಂದ ದಿಲೀಪ್ ರಾಜ್ ಅವರು ನಿಧನರಾಗಿದ್ದಾರೆ. ರಾಮನಗರ ತಾಲೂಕಿನ ಗುನ್ನೂರು ಬಳಿ ಇರುವ ತೋಟದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದೆ. ಇದೇ ಜಾಗದಲ್ಲಿ ದಿಲೀಪ್ ರಾಜ್ ಅವರು ತೋಟ ನಿರ್ಮಾಣ ಮಾಡಿಕೊಂಡು ಮನೆ ಕಟ್ಟಿದ್ದರು. ಇಂದು (ಮೇ 13) ಸಂಜೆ 4 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ.
- Madan Kumar
- Updated on: May 13, 2026
- 1:23 pm
‘ನನಗಿಂತ ಮೊದಲು ಫೇಮಸ್ ಆಗಿದ್ದ’: ದಿಲೀಪ್ ರಾಜ್ ಬೆಳೆದು ಬಂದ ಹಾದಿ ನೆನಪಿಸಿಕೊಂಡ ನಟ ಗಣೇಶ್
ಸಿನಿಮಾ ಮತ್ತು ಸೀರಿಯಲ್ ನಟ ದಿಲೀಪ್ ರಾಜ್ ಅವರ ಹಠಾತ್ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ಆಘಾತ ಆಗಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರು ಬಂದು ಅಂತಿಮ ನಮನ ಸಲ್ಲಿಸಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಗಣೇಶ್ ಅವರು ಹಳೇ ದಿನಗಳನ್ನು ನೆನಪಿಸಿಕೊಂಡರು.
- Madan Kumar
- Updated on: May 13, 2026
- 12:13 pm
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ನಿವಾಸದಲ್ಲಿ ದಿಲೀಪ್ ರಾಜ್ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದೆ. ಕಿರುತೆರೆ ಮತ್ತು ಚಿತ್ರರಂಗದ ಅನೇಕರು ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. 47ನೇ ವಯಸ್ಸಿಗೆ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಆಪ್ತರು, ಕುಟುಂಬದವರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
- Madan Kumar
- Updated on: May 13, 2026
- 10:31 am