Kannada Cinema
1934ರಲ್ಲಿ ಮೊದಲ ಕನ್ನಡ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗುವ ಮೂಲಕ ಉದಯವಾದ ಕನ್ನಡ ಚಿತ್ರರಂಗಕ್ಕೆ 89 ವರ್ಷದ ಸುದೀರ್ಘ ಇತಿಹಾಸವಿದೆ.
ಮನರಂಜನೆಯ ಜೊತೆಗೆ ಜನ ಜಾಗೃತಿ ಮೂಡಿಸುವ, ಅಭಿರುಚಿ ಬೆಳೆಸುವ ಸಿನಿಮಾಗಳನ್ನು ಕನ್ನಡ ಚಿತ್ರರಂಗ ನೀಡುತ್ತಲೇ ಬಂದಿದೆ. ಸಿನಿಮಾಗಳ ಮೂಲಕ ಕನ್ನಡತನವನ್ನು ಪಸರಿಸುತ್ತಾ ಬಂದಿದೆ. ಸುಬ್ಬಯ್ಯ ನಾಯ್ಡು, ಭಾಗವತರ್, ಪಂಡರೀಬಾಯಿ ಅವರುಗಳು ಬಿತ್ತಿದ ಕನ್ನಡ ಚಿತ್ರರಂಗದ ಬೀಜಕ್ಕೆ ರಾಜ್ಕುಮಾರ್, ಕಲ್ಯಾಣ್ ಕುಮಾರ್, ಲೋಕೇಶ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್ನಾಗ್, ಅಂಬರೀಶ್ ಅಂಥಹಾ ಇನ್ನೂ ಅನೇಕ ಮಹನೀಯರು ನೀರೆರೆದು ಹೆಮ್ಮರವಾಗಿ ಬಳೆಸಿದ್ದಾರೆ.
ಕನ್ನಡ ಚಿತ್ರರಂಗ ಇಂದು ವಾರ್ಷಿಕವಾಗಿ ಸಾವಿರಾರು ಕೋಟಿ ವ್ಯವಹಾರ ನಡೆಯುವ ತಾಣ, ವರ್ಷಕ್ಕೆ ಸರಾಸರಿ 200 ರಿಂದ 250 ಕನ್ನಡ ಸಿನಿಮಾಗಳು ಇಲ್ಲಿ ತಯಾರುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ‘ಕೆಜಿಎಫ್’, ‘ಕಾಂತಾರ’, ‘ವಿಕ್ರಾಂತ್ ರೋಣ’ ಇನ್ನೂ ಕೆಲವು ಸಿನಿಮಾಗಳು ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಣೆ ಗೊಳಿಸಿವೆ.
Mango Pachcha Review: ಆ ಕಾಲದ ಮೈಸೂರಿನ ಮಾಫಿಯಾ ತೋರಿಸುವ ‘ಮ್ಯಾಂಗೋ ಪಚ್ಚ’
Mango Pachcha Kannada Movie: ಹೊಸ ನಿರ್ದೇಶಕ ವಿವೇಕ ಮತ್ತು ಹೊಸ ಹೀರೋ ಸಂಚಿತ್ ಸಂಜೀವ್ ಅವರ ಕಾಂಬಿನೇಷನ್ನಲ್ಲಿ ‘ಮ್ಯಾಂಗೋ ಪಚ್ಚ’ ಸಿನಿಮಾ ಮೂಡಿಬಂದಿದೆ. ಪ್ರಿಯಾ ಸುದೀಪ್, ಕಾರ್ತಿಕ್ ಗೌಡ, ಯೋಗಿ ಜಿ. ರಾಜ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಮೈಸೂರಿನಲ್ಲಿ ನಡೆದ ಕೆಲವು ನೈಜ ಘಟನೆಗಳಿಂದ ಪ್ರೇರಿತವಾಗಿ ಈ ಸಿನಿಮಾ ಮೂಡಿಬಂದಿದೆ.
- Madan Kumar
- Updated on: Jun 5, 2026
- 2:28 pm
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೋಲಿಕೆ ಇರುವಂತಹ ಕಥೆ ಇದೆ ಎಂಬ ಕಾರಣಕ್ಕೆ ‘ಬಾಸ್’ ಚಿತ್ರವು ವಿವಾದಕ್ಕೆ ಕಾರಣ ಆಗಿದೆ. ಈ ಚಿತ್ರದ ಮೇಲಿದ್ದ ತಡೆಯನ್ನು ನ್ಯಾಯಾಲಯ ತೆರವು ಮಾಡಿದೆ. ನಿರ್ದೇಶಕ ಲವ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ವಾಣಿಜ್ಯ ಮಂಡಳಿಯಿಂದ ತಮಗೆ ಬಂದ ನೋಟಿಸ್ ಬಗ್ಗೆಯೂ ಅವರು ಮಾತನಾಡಿದ್ದಾರೆ.
- Madan Kumar
- Updated on: Jun 4, 2026
- 10:40 pm
ಅಲಿಬಾಗ್ನಲ್ಲಿ 24 ಕೋಟಿ ರೂಪಾಯಿ ಆಸ್ತಿ ಖರೀದಿಸಿದ ಯಶ್, ರಾಧಿಕಾ ಪಂಡಿತ್
ಬಹುನಿರೀಕ್ಷಿತ ಸಿನಿಮಾಗಳಾದ ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಬಿಡುಗಡೆಯ ಕೆಲಸಗಳಲ್ಲಿ ನಟ ಯಶ್ ಅವರು ಬ್ಯುಸಿಯಾಗಿದ್ದಾರೆ. ಅದರ ನಡುವೆ ಅವರು ಖರೀದಿಸಿರುವ ಹೊಸ ಆಸ್ತಿಯ ಬಗ್ಗೆ ಸುದ್ದಿ ಆಗಿದೆ. ಬಾಲಿವುಡ್ ಸೆಲೆಬ್ರಿಟಿಗಳ ರೀತಿ ಯಶ್ ಮತ್ತು ರಾಧಿಕಾ ಪಂಡಿತ್ ಕೂಡ ಅಲಿಬಾಗ್ನಲ್ಲಿ ಆಸ್ತಿ ಖರೀದಿಸಿದ್ದಾರೆ.
- Madan Kumar
- Updated on: Jun 2, 2026
- 9:40 pm
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚನಿಗೆ ನೀಡಲಾಗಿದೆ ಟ್ರಿಬ್ಯೂಟ್; ಇದು ಪ್ರಿಯಾ ಸುದೀಪ್ ಸರ್ಪ್ರೈಸ್
ಕಿಚ್ಚ ಸುದೀಪ್ ಅವರ ಪತ್ನಿ ಪ್ರಿಯಾ ಅವರು ಮೊದಲ ಬಾರಿಗೆ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ‘ಸುಪ್ರಿಯಾನ್ವಿ’ ಪ್ರೊಡಕ್ಷನ್ಸ್ ಮೂಲಕ ಅವರು ‘ಮ್ಯಾಂಗೋ ಪಚ್ಚ’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಟಿವಿ9 ವಿಶೇಷ ಸಂದರ್ಶನದಲ್ಲಿ ಅವರು ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಪ್ರಿಯಾ ಸುದೀಪ್ ಸಂದರ್ಶನದ ವಿಡಿಯೋ ಇಲ್ಲಿದೆ.
- Madan Kumar
- Updated on: Jun 1, 2026
- 9:06 pm
‘ಕೊರಗಜ್ಜ’ ಸಿನಿಮಾ ಬಿಡುಗಡೆಗೂ ಮೊದಲೇ ನಿರ್ದೇಶಕರಿಗೆ ಸಿಕ್ತು ಫ್ಲ್ಯಾಟ್ ಉಡುಗೊರೆ
ಈ ಮೊದಲೇ ‘ಕೊರಗಜ್ಜ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿತ್ತು. ಝೀ ಮ್ಯೂಸಿಕ್ ಮೂಲಕ ಭರ್ಜರಿ ಆಡಿಯೋ ಲಾಂಚ್ ಕೂಡ ಆಗಿತ್ತು. ಆದರೆ ಚಿತ್ರವನ್ನು ಕೊನೇ ಗಳಿಗೆಯಲ್ಲಿ 3D ರೂಪಕ್ಕೆ ಮಾರ್ಪಡಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು. ಹಾಗಾಗಿ ರಿಲೀಸ್ ದಿನಾಂಕ ಮುಂದೂಡಿಕೆ ಆಯಿತು. ಈ ಚಿತ್ರಕ್ಕಾಗಿ ಶ್ರಮಿಸುತ್ತಿರುವ ನಿರ್ದೇಶಕರಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ.
- Madan Kumar
- Updated on: Jun 1, 2026
- 3:47 pm
ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ
ಮಗು ಹುಟ್ಟಿದರೆ ನೆಲಭೋಜನ ಮಾಡುವುದಾಗಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರು ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಈ ದಂಪತಿಗೆ ಗಂಡು ಮಗು ಜನಿಸಿತು. ಈಗ ಮಗನೊಂದಿಗೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದ ಅವರು ಮುಖ್ಯಪ್ರಾಣನ ಸನ್ನಿಧಿಯಲ್ಲಿ ನೆಲಭೋಜನ ಪ್ರಸಾದ ಸ್ವೀಕರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
- Prajwal Amin
- Updated on: May 31, 2026
- 2:42 pm
ಯಾವುದೇ ಕಟ್ ಇಲ್ಲದೇ ಯು/ಎ ಪ್ರಮಾಣಪತ್ರ ಪಡೆದ ಕ್ರೈಂ ಥ್ರಿಲ್ಲರ್ ಸಿನಿಮಾ ‘ಚಾರ್ಜ್ಶೀಟ್ 03-08’
ಸೆನ್ಸಾರ್ ಪ್ರಕ್ರಿಯೆ ಮುಗಿಸಿಕೊಂಡಿರುವ ಕನ್ನಡದ ‘ಚಾರ್ಜ್ಶೀಟ್ 03-08’ ಸಿನಿಮಾ ಸದ್ಯದಲ್ಲೇ ರಿಲೀಸ್ ಆಗಲಿದೆ. ಕ್ರೈಂ ಥ್ರಿಲ್ಲರ್ ಕಥಾಹಂದರದ ಸಿನಿಮಾ ಆಗಿದ್ದರೂ ಕೂಡ ಯಾವುದೇ ವಿಡಿಯೋ ಕಟ್ ಇಲ್ಲದೇ ‘ಯು/ಎ’ ಪ್ರಮಾಣಪತ್ರ ಪಡೆದುಕೊಂಡಿರುವುದು ವಿಶೇಷ. ಈ ಸಿನಿಮಾಗೆ ವೆಂಕಟ್ ಭಾರದ್ವಾಜ್ ಅವರು ನಿರ್ದೇಶನ ಮಾಡಿದ್ದಾರೆ.
- Madan Kumar
- Updated on: May 29, 2026
- 7:43 pm
ನಿರ್ದೇಶಕನಾದ ಹಿರಿಯ ನಟ ಮೂಗು ಸುರೇಶ್; ‘ಕ್ಷಮೆಯಿರಲಿ ತಂದೆ’ ಬಿಡುಗಡೆಗೆ ಸಿದ್ಧ
ಖ್ಯಾತ ನಟ ಮೂಗು ಸುರೇಶ್ ಅವರ ನಿರ್ದೇಶನ ಮತ್ತು ನಿರ್ಮಾಣದಲ್ಲಿ ‘ಕ್ಷಮೆಯಿರಲಿ ತಂದೆ’ ಸಿನಿಮಾ ಮೂಡಿಬಂದಿದೆ. ಈ ಚಿತ್ರದಲ್ಲಿ ಮಂಜುನಾಥ್ ಹೆಗ್ಡೆ, ರೇಣುಕಾಬಾಲಿ, ವಿನ್ಯಾ ಶೆಟ್ಟಿ, ಶ್ರೀಮಂತ ಜೊತೆ ಮೂಗು ಸುರೇಶ್ ಕೂಡ ನಟಿಸಿದ್ದಾರೆ. ಜೂನ್ 12ರಂದು ಈ ಚಿತ್ರ ರಿಲೀಸ್ ಆಗಲಿದೆ.
- Madan Kumar
- Updated on: May 28, 2026
- 3:32 pm
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ
‘ಸಿಟಿ ಲೈಟ್ಸ್’ ಚಿತ್ರತಂಡದಿಂದ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಸೆಟ್ನಲ್ಲಿ ದುನಿಯಾ ವಿಜಯ್ ಅವರ ನಿರ್ದೇಶನ ಯಾವ ರೀತಿ ಇರುತ್ತದೆ ಎಂಬುದರ ಝಲಕ್ ಇದರಲ್ಲಿ ಕಾಣಿಸುತ್ತದೆ. ಈ ಚಿತ್ರದ ಮೂಲಕ ವಿಜಯ್ ಪುತ್ರಿ ಮೋನಿಷಾ ಅವರು ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ವಿನಯ್ ರಾಜ್ಕುಮಾರ್ ಅವರು ಮುಖ್ಯ ಭೂಮಿಕೆಯಲ್ಲಿದ್ದಾರೆ.
- Madan Kumar
- Updated on: May 27, 2026
- 9:13 pm
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ; ಏನಿದರ ವಿಶೇಷತೆ?
ನಿರ್ಮಾಪಕಿ ಲತಾ ಜಯಪ್ರಕಾಶ್ ಅವರು ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಸಂಪೂರ್ಣವಾಗಿ ಎಐ ಮೂಲಕ ಮೂಡಿಬರುತ್ತಿದೆ. ಈ ಬಗ್ಗೆ ಲತಾ ಜಯಪ್ರಕಾಶ್ ಅವರು ಮಾಹಿತಿ ನೀಡಿದ್ದಾರೆ. ಮಕ್ಕಳಿಗಾಗಿ ಅವರು ಈ ಸಿನಿಮಾ ಮಾಡುತ್ತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
- Madan Kumar
- Updated on: May 26, 2026
- 10:46 pm
‘ದೇವಿ ಮಹಾತ್ಮೆ’ ಸಿನಿಮಾದ ಆಡಿಯೋ ರೈಟ್ಸ್ ಖರೀದಿಸಿದ ‘ಹೊಂಬಾಳೆ ಮ್ಯೂಸಿಕ್’
‘ಹೊಂಬಾಳೆ ಮ್ಯೂಸಿಕ್’ ಕಂಪನಿಯು ‘ದೇವಿ ಮಹಾತ್ಮೆ’ ಸಿನಿಮಾದ ಆಡಿಯೋ ಹಕ್ಕನ್ನು ಖರೀದಿ ಮಾಡಿದೆ. ನಾಗರಾಜ ಸೋಮಯಾಜಿ ಅವರು ಈ ಸಿನಿಮಾಗೆ ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈಗಾಗಲೇ ಟೈಟಲ್ ಮತ್ತು ಪೋಸ್ಟರ್ ಮೂಲಕ ‘ದೇವಿ ಮಹಾತ್ಮೆ’ ಚಿತ್ರವು ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿಸಿದೆ.
- Madan Kumar
- Updated on: May 26, 2026
- 7:11 pm
ರಾಗಿಣಿ ದ್ವಿವೇದಿ ಹೊಸ ಸಿನಿಮಾಗೆ ಜಗ್ಗೇಶ್ ಮಕ್ಕಳ ನಿರ್ದೇಶನ; ಕೆ. ಮಂಜು ನಿರ್ಮಾಣ
ನಟಿ ರಾಗಿಣಿ ದ್ವಿವೇದಿ ಅವರು ‘ರಾಗಿಣಿ ಐಪಿಎಸ್ 2’ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ. ಗುರುರಾಜ್ ಜಗ್ಗೇಶ್ ಮತ್ತು ಯತಿರಾಜ್ ಜಗ್ಗೇಶ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಕೆ. ಮಂಜು ಅವರು ನಿರ್ಮಾಣದಲ್ಲಿ ‘ರಾಗಿಣಿ ವೆಂಚರ್ಸ್’ ಕೈ ಜೋಡಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..
- Madan Kumar
- Updated on: May 25, 2026
- 9:17 pm