Kannada Cinema
1934ರಲ್ಲಿ ಮೊದಲ ಕನ್ನಡ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗುವ ಮೂಲಕ ಉದಯವಾದ ಕನ್ನಡ ಚಿತ್ರರಂಗಕ್ಕೆ 89 ವರ್ಷದ ಸುದೀರ್ಘ ಇತಿಹಾಸವಿದೆ.
ಮನರಂಜನೆಯ ಜೊತೆಗೆ ಜನ ಜಾಗೃತಿ ಮೂಡಿಸುವ, ಅಭಿರುಚಿ ಬೆಳೆಸುವ ಸಿನಿಮಾಗಳನ್ನು ಕನ್ನಡ ಚಿತ್ರರಂಗ ನೀಡುತ್ತಲೇ ಬಂದಿದೆ. ಸಿನಿಮಾಗಳ ಮೂಲಕ ಕನ್ನಡತನವನ್ನು ಪಸರಿಸುತ್ತಾ ಬಂದಿದೆ. ಸುಬ್ಬಯ್ಯ ನಾಯ್ಡು, ಭಾಗವತರ್, ಪಂಡರೀಬಾಯಿ ಅವರುಗಳು ಬಿತ್ತಿದ ಕನ್ನಡ ಚಿತ್ರರಂಗದ ಬೀಜಕ್ಕೆ ರಾಜ್ಕುಮಾರ್, ಕಲ್ಯಾಣ್ ಕುಮಾರ್, ಲೋಕೇಶ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್ನಾಗ್, ಅಂಬರೀಶ್ ಅಂಥಹಾ ಇನ್ನೂ ಅನೇಕ ಮಹನೀಯರು ನೀರೆರೆದು ಹೆಮ್ಮರವಾಗಿ ಬಳೆಸಿದ್ದಾರೆ.
ಕನ್ನಡ ಚಿತ್ರರಂಗ ಇಂದು ವಾರ್ಷಿಕವಾಗಿ ಸಾವಿರಾರು ಕೋಟಿ ವ್ಯವಹಾರ ನಡೆಯುವ ತಾಣ, ವರ್ಷಕ್ಕೆ ಸರಾಸರಿ 200 ರಿಂದ 250 ಕನ್ನಡ ಸಿನಿಮಾಗಳು ಇಲ್ಲಿ ತಯಾರುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ‘ಕೆಜಿಎಫ್’, ‘ಕಾಂತಾರ’, ‘ವಿಕ್ರಾಂತ್ ರೋಣ’ ಇನ್ನೂ ಕೆಲವು ಸಿನಿಮಾಗಳು ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಣೆ ಗೊಳಿಸಿವೆ.
ಯಶ್ ಬಾಲ್ಯದಲ್ಲಿ ಹೇಗೆ ಕಾಣ್ತಿದ್ರು ನೋಡಿ; ಇಲ್ಲಿದೆ ಕ್ಯೂಟ್ ಫೋಟೋ
ಯಶ್ ಅವರು ಮೈಸೂರಿನವರು. ಅವರ ತಂದೆ ಅರುಣ್ ಕುಮಾರ್ ಕೆಎಸ್ಆರ್ಟಿಸಿ ಡ್ರೈವರ್ ಆಗಿದ್ದರು. ಅವರ ತಾಯಿ ಪುಷ್ಪಾ ಮನೆ ನೋಡಿಕೊಂಡು ಇದ್ದವರು. ಈಗ ಅವರು ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಬಾಲ್ಯದಲ್ಲಿ ಮನೆಯಲ್ಲಿ ಕಷ್ಟ ಇದ್ದರೂ ಯಶ್ ಅವರ ವರೆಗೆ ಬರದಂತೆ ಕುಟುಂಬ ನೋಡಿಕೊಂಡಿತ್ತು. ಈ ಬಗ್ಗೆ ಯಶ್ಗೆ ಖುಷಿ ಇದೆ.
- Shreelaxmi H
- Updated on: Jan 6, 2026
- 7:45 am
‘ರಾಕಿಂಗ್ ಸ್ಟಾರ್’ ಯಶ್ ಹುಟ್ಟುಹಬ್ಬಕ್ಕೆ ರಾಜ್ಯಾದ್ಯಂತ ರಾರಾಜಿಸುತ್ತಿರುವ ಬಿಲ್ಬೋರ್ಡ್
ಈ ವರ್ಷ ಜನವರಿ 8ರಂದು ಯಶ್ ಅವರು 40ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ನೂರಾರು ಬಿಲ್ಬೋರ್ಡ್ ರಾರಾಜಿಸುತ್ತಿವೆ. ಆ ಮೂಲಕ ಯಶ್ ಅವರಿಗೆ ಸ್ನೇಹಿತರು ಹುಟ್ಟುಹಬ್ಬದ ಶುಭ ಕೋರುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾದಿಂದ ಅಭಿಮಾನಿಗಳಿಗೆ ಟೀಸರ್ ಗಿಫ್ಟ್ ಸಿಗುವ ಸಾಧ್ಯತೆ ಇದೆ.
- Madan Kumar
- Updated on: Jan 5, 2026
- 9:20 pm
ಬಿಗ್ ಬಾಸ್ ಮನೆ ಒಳಗೆ ‘ಡೆವಿಲ್’ ಬಗ್ಗೆ ಗಿಲ್ಲಿ ಮಾತಾಡಿದ್ದ: ಅಸಲಿ ವಿಷಯ ತಿಳಿಸಿದ ಸ್ಪಂದನಾ
ಡಿಸೆಂಬರ್ 11ರಂದು ರಿಲೀಸ್ ಆದ ‘ದಿ ಡೆವಿಲ್’ ಸಿನಿಮಾದಲ್ಲಿ ಗಿಲ್ಲಿ ನಟ ಅವರಿಗೂ ಒಂದು ಪಾತ್ರವಿದೆ. ಹಾಗಾಗಿ ಬಿಗ್ ಬಾಸ್ ಮನೆಯ ಒಳಗೆ ಕೂಡ ಗಿಲ್ಲಿ ಅವರು ‘ದಿ ಡೆವಿಲ್’ ಚಿತ್ರದ ಬಗ್ಗೆ ಮಾತನಾಡಿದ್ದರು. ಆ ಬಗ್ಗೆ ಸ್ಪಂದನಾ ಸೋಮಣ್ಣ ಅವರು ‘ಟಿವಿ 9’ ಸಂದರ್ಶನದಲ್ಲಿ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.
- Malatesh Jaggin
- Updated on: Jan 5, 2026
- 5:19 pm
ನಿರೀಕ್ಷೆ ಮೂಡಿಸಿದ ‘ವಿಕಲ್ಪ’ ಟೀಸರ್; ಇದು ವಾಸ್ತವ ಮತ್ತು ಭ್ರಮೆಯ ನಡುವಿನ ಕಥೆ
ಪೃಥ್ವಿರಾಜ್ ಪಾಟೀಲ್ ಅವರು ‘ವಿಕಲ್ಪ’ ಸಿನಿಮಾಗೆ ನಿರ್ದೇಶನ ಮಾಡಿ, ಮುಖ್ಯ ಪಾತ್ರದಲ್ಲೂ ನಟಿಸಿದ್ದಾರೆ. ಇಂದಿರಾ ಶಿವಸ್ವಾಮಿ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಸಿನಿಮಾದ ಬಿಡುಗಡೆಗೆ ಸಿದ್ಧತೆ ನಡೆಯುತ್ತಿದೆ. ಬೆಂಗಳೂರು, ತೀರ್ಥಹಳ್ಳಿ, ಸಾಗರ, ಶಿರಸಿ, ಕುಂದಾಪುರ, ಯಲ್ಲಾಪುರ ಮುಂತಾದೆಡೆ ಈ ಚಿತ್ರಕ್ಕೆ ಶೂಟಿಂಗ್ ಮಾಡಲಾಗಿದೆ.
- Madan Kumar
- Updated on: Jan 5, 2026
- 3:57 pm
‘ಡೆವಿಲ್ನಲ್ಲಿ ನಾನು ನಟಿಸಬೇಕಿತ್ತು, ಆದರೆ..’; ವಿವರಿಸಿದ ರಾಗಿಣಿ ದ್ವಿವೇದಿ
ರಾಗಿಣಿ ಅವರು ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ‘ಕೆಂಪೆಗೌಡ’ ರೀತಿಯ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಬೇರೆ ಭಾಷೆಯವರಾದರೂ ಕನ್ನಡಕ್ಕೆ ಬಂದು ಕನ್ನಡ ಕಲಿತಿದ್ದಾರೆ. ಅವರು ಇತ್ತೀಚೆಗೆ ತೆರೆಗೆ ಬಂದ ‘ಡೆವಿಲ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಒಂದನ್ನು ಮಾಡಬೇಕಿತ್ತು. ಆದರೆ, ಪಾತ್ರ ಇಷ್ಟ ಆಗಿಲ್ಲ ಎಂದು ಅವರು ಹೇಳಿದ್ದಾರೆ.
- Shreelaxmi H
- Updated on: Jan 5, 2026
- 8:45 am
Singri Gowda: ಸೆಂಚುರಿ ಗೌಡ ನಿಧನ; ‘ತಿಥಿ’ ನಟ ಗಡ್ಡಪ್ಪ ಸಾವಿನ ಬೆನ್ನಲ್ಲೇ ಸಿಂಗ್ರಿ ಗೌಡ ನಿಧನ
Century Gowda Death: 'ತಿಥಿ' ಸಿನಿಮಾ ಖ್ಯಾತಿಯ ಗಡ್ಡಪ್ಪ (ನವೆಂಬರ್ 12) ಮತ್ತು ಸೆಂಚುರಿ ಗೌಡ (ಜನವರಿ 4) ನಿಧನರಾಗಿದ್ದಾರೆ. 100 ವರ್ಷಕ್ಕೂ ಹೆಚ್ಚು ವಯಸ್ಸಿನವರಾಗಿದ್ದ ಸೆಂಚುರಿ ಗೌಡ ಅನಾರೋಗ್ಯದಿಂದ ಬಳಲುತ್ತಿದ್ದರು. ಗಡ್ಡಪ್ಪ ಅವರ ಸಾವಿನ ಕೇವಲ ಒಂದೂವರೆ ತಿಂಗಳ ನಂತರ ಸೆಂಚುರಿ ಗೌಡ ಅಗಲಿದ್ದಾರೆ.
- Rajesh Duggumane
- Updated on: Jan 5, 2026
- 11:09 am
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಮೆಂಟ್ ಹಾಕಿದ್ದ ಇನ್ನಿಬ್ಬರ ಬಂಧನ
ತಮಗೆ ಅಶ್ಲೀಲ ಹಾಗೂ ಅಸಭ್ಯ ಕಮೆಂಟ್ ಮಾಡಿದ್ದವರ ವಿರುದ್ಧ ವಿಜಯಲಕ್ಷ್ಮಿ ದರ್ಶನ್ ಅವರು ದೂರು ನೀಡಿದ್ದರು. ಬೆಂಗಳೂರು ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಈವರೆಗೂ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ನಾಗರಾಜ್ ತಳವಾರ, ಪ್ರಶಾಂತ್ ತಳವಾರ, ನಿತಿನ್, ಚಂದ್ರು ಎಂಬುವವರ ಬಂಧನ ಆಗಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ..
- Rachappaji Naik S
- Updated on: Jan 4, 2026
- 1:54 pm
ಕುಡುಕನ ಸ್ಫೂರ್ತಿಯಿಂದ ಹುಟ್ಟಿತು ‘ಅಮಲು ಏರಿದೆ’ ಹಾಡು; ಭಟ್ಟರ ಸಾಹಿತ್ಯಕ್ಕೆ ಶರಣ್ ಧ್ವನಿ
ಯೋಗರಾಜ್ ಭಟ್ ಮತ್ತು ಶರಣ್ ಅವರ 'ಅಮಲು' ಹಾಡು ಹೊಸ ವರ್ಷಕ್ಕೆ ಬಿಡುಗಡೆಯಾಗಿದೆ. 'ಎಣ್ಣೆ' ಹಾಡಿನ ಯಶಸ್ಸಿನ ನಂತರ, ಈ ಜೋಡಿ ಮತ್ತೆ ಜನಮನ ಗೆದ್ದಿದೆ. ಯೋಗರಾಜ್ ಭಟ್ ಅವರ ಕಲ್ಪನೆ ಮತ್ತು ಸಾಹಿತ್ಯಕ್ಕೆ ಶರಣ್ ಅವರ ಧ್ವನಿ ಅದ್ಭುತವಾಗಿ ಹೊಂದಿಕೆಯಾಗಿದೆ. 'ಅಮಲು' ಆಲ್ಬಮ್ನಲ್ಲಿ ವಾಸುಕಿ ವೈಭವ್ ಹಾಡಿರುವ 'ಬಾಯಾರಿಕೆಗೆ ಏನೋ ಕಾರಣ' ಸೇರಿದಂತೆ ಇನ್ನಷ್ಟು ಹಾಡುಗಳು ಬರಲಿವೆ.
- Rajesh Duggumane
- Updated on: Jan 3, 2026
- 12:14 pm
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಖ್ಯಾತ ಖಳನಟ ವಜ್ರಮುನಿ ಅವರು ನಿಧನರಾಗಿದ್ದು 2006ರ ಜನವರಿ 5ರಂದು. ಕೊನೆಯ ದಿನಗಳಲ್ಲಿ ವಜ್ರಮುನಿ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಸಿನಿಮಾಗಳ ನಿರ್ಮಾಣದಿಂದ ನಷ್ಟ ಅನುಭವಿಸಿದ್ದರು. ಅದರಿಂದ ಆರ್ಥಿಕ ಸಂಕಷ್ಟಕ್ಕೆ ವಜ್ರಮುನಿ ಅವರು ಸಿಲುಕಿದ್ದರು. ಆ ಬಗ್ಗೆ ಇಲ್ಲಿದೆ ಪೂರ್ತಿ ವಿವರ..
- Madan Kumar
- Updated on: Jan 2, 2026
- 8:39 pm
ಮುಂಬೈನಲ್ಲಿ ‘ಧುರಂಧರ್’ ಬಗ್ಗೆ ಮನಸಾರೆ ಮಾತಾಡಿದ ಶಿವರಾಜ್ಕುಮಾರ್
‘45’ ಸಿನಿಮಾದ ಹಿಂದಿ ವರ್ಷನ್ ಬಿಡುಗಡೆ ಪ್ರಯುಕ್ತ ಮುಂಬೈನಲ್ಲಿ ಚಿತ್ರತಂಡದ ಸದಸ್ಯರು ಸುದ್ದಿಗೋಷ್ಠಿ ನಡೆಸಿದ್ದಾರೆ. ಶಿವರಾಜ್ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ಧುರಂಧರ್’ ಚಿತ್ರದ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದ್ದಾರೆ. ರಣವೀರ್ ಸಿಂಗ್ ಹಾಗೂ ಅಕ್ಷಯ್ ಖನ್ನಾ ಅವರ ಅಭಿನಯವನ್ನು ಶಿವರಾಜ್ಕುಮಾರ್ ಅವರು ಬಹಳ ಮೆಚ್ಚಿಕೊಂಡಿದ್ದಾರೆ.
- Madan Kumar
- Updated on: Jan 2, 2026
- 7:37 pm
‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾ ಫಸ್ಟ್ ಲುಕ್ ರಿಲೀಸ್: ಏನು ಈ ಚಿತ್ರದ ಕಥೆ?
ಸುಮನ್, ಸಾಯಿ ಕುಮಾರ್, ನಟರಾಜ್ ಮುಂತಾದವರು ‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಮೂಲಕ ಚಿತ್ರತಂಡದವರು ಪ್ರೇಕ್ಷಕರಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ಫೆಬ್ರವರಿ ತಿಂಗಳಲ್ಲಿ ‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
- Madan Kumar
- Updated on: Jan 2, 2026
- 6:24 pm
ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್ ಹಾಕಿದ್ದ ಇಬ್ಬರು ಅರೆಸ್ಟ್; ಬಂಧಿತರು ಯಾರು?
ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ಎದುರಿಸುತ್ತಿರುವ ಅಶ್ಲೀಲ ಕಮೆಂಟ್ಗಳು ಮತ್ತು ಮೆಸೇಜ್ಗಳ ವಿರುದ್ಧ ಈಗ ಸಿಟ್ಟಿಗೆದ್ದಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ನೀಡಿದ ದೂರಿನನ್ವಯ ಇಬ್ಬರನ್ನು ಬಂಧಿಸಲಾಗಿದೆ. ಐಪಿ ಅಡ್ರೆಸ್ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಲಾಗಿದ್ದು, ಇಂತಹ ಸೈಬರ್ ಕಿರುಕುಳಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಸಂದೇಶವನ್ನು ಇದು ನೀಡಿದೆ.
- Rajesh Duggumane
- Updated on: Jan 2, 2026
- 12:29 pm