Kannada Cinema
1934ರಲ್ಲಿ ಮೊದಲ ಕನ್ನಡ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗುವ ಮೂಲಕ ಉದಯವಾದ ಕನ್ನಡ ಚಿತ್ರರಂಗಕ್ಕೆ 89 ವರ್ಷದ ಸುದೀರ್ಘ ಇತಿಹಾಸವಿದೆ.
ಮನರಂಜನೆಯ ಜೊತೆಗೆ ಜನ ಜಾಗೃತಿ ಮೂಡಿಸುವ, ಅಭಿರುಚಿ ಬೆಳೆಸುವ ಸಿನಿಮಾಗಳನ್ನು ಕನ್ನಡ ಚಿತ್ರರಂಗ ನೀಡುತ್ತಲೇ ಬಂದಿದೆ. ಸಿನಿಮಾಗಳ ಮೂಲಕ ಕನ್ನಡತನವನ್ನು ಪಸರಿಸುತ್ತಾ ಬಂದಿದೆ. ಸುಬ್ಬಯ್ಯ ನಾಯ್ಡು, ಭಾಗವತರ್, ಪಂಡರೀಬಾಯಿ ಅವರುಗಳು ಬಿತ್ತಿದ ಕನ್ನಡ ಚಿತ್ರರಂಗದ ಬೀಜಕ್ಕೆ ರಾಜ್ಕುಮಾರ್, ಕಲ್ಯಾಣ್ ಕುಮಾರ್, ಲೋಕೇಶ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್ನಾಗ್, ಅಂಬರೀಶ್ ಅಂಥಹಾ ಇನ್ನೂ ಅನೇಕ ಮಹನೀಯರು ನೀರೆರೆದು ಹೆಮ್ಮರವಾಗಿ ಬಳೆಸಿದ್ದಾರೆ.
ಕನ್ನಡ ಚಿತ್ರರಂಗ ಇಂದು ವಾರ್ಷಿಕವಾಗಿ ಸಾವಿರಾರು ಕೋಟಿ ವ್ಯವಹಾರ ನಡೆಯುವ ತಾಣ, ವರ್ಷಕ್ಕೆ ಸರಾಸರಿ 200 ರಿಂದ 250 ಕನ್ನಡ ಸಿನಿಮಾಗಳು ಇಲ್ಲಿ ತಯಾರುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ‘ಕೆಜಿಎಫ್’, ‘ಕಾಂತಾರ’, ‘ವಿಕ್ರಾಂತ್ ರೋಣ’ ಇನ್ನೂ ಕೆಲವು ಸಿನಿಮಾಗಳು ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಣೆ ಗೊಳಿಸಿವೆ.
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ ನೋಡಿ.
‘ಕಾಂತಾರ’ ಮೂಲಕ ಭಾರಿ ಯಶಸ್ಸು ಪಡೆದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಇತ್ತೀಚೆಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದರು. ಪತ್ನಿ, ಮಕ್ಕಳು ಸೇರಿದಂತೆ ಕುಟುಂಬ ಸಮೇತರಾಗಿ ಬಂದು ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆ ಸಂದರ್ಭದ ವಿಡಿಯೋವನ್ನು ಅವರು ಪೋಸ್ಟ್ ಮಾಡಿದ್ದಾರೆ.
- Madan Kumar
- Updated on: Feb 15, 2026
- 2:56 pm
‘ರಕ್ಕಸಪುರದೋಳ್’ ವಿಲನ್ ಅನಿರುದ್ಧ್ ಭಟ್ ಬಗ್ಗೆ ಇಂಟರೆಸ್ಟಿಂಗ್ ವಿಷಯಗಳು
ಕಳೆದ 9 ವರ್ಷಗಳಿಂದ ಕಿರುಚಿತ್ರಗಳನ್ನು ಮಾಡುತ್ತಾ ಬಂದ ಅನಿರುದ್ಧ್ ಭಟ್ ಅವರು ಈಗ ಸ್ಟಾರ್ ಆಗಿದ್ದಾರೆ. ‘ರಕ್ಕಸಪುರದೋಳ್’ ಸಿನಿಮಾದಲ್ಲಿ ಅವರು ಮಾಡಿದ ಪಾತ್ರವನ್ನು ಪ್ರೇಕ್ಷಕರು ಮನಸಾರೆ ಮೆಚ್ಚಿಕೊಂಡಿದ್ದಾರೆ. ಅಪ್ಪಟ ಕನ್ನಡದ ಕಲಾವಿದ ಅನಿರುದ್ಧ್ ಭಟ್ ಅವರ ಹಿನ್ನೆಲೆ ಏನು? ಪೂರ್ತಿ ಮಾಹಿತಿ ಇಲ್ಲಿದೆ ಓದಿ..
- Madan Kumar
- Updated on: Feb 15, 2026
- 2:22 pm
ಸಂಹಿತಾ ವಿನ್ಯಾ ನಟನೆಯ ‘ಮಿಕ್ಸಿಂಗ್ ಪ್ರೀತಿ’ ಸಿನಿಮಾ ಫೆ.20ಕ್ಕೆ ರಿಲೀಸ್
18ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಸಂಹಿತಾ ವಿನ್ಯಾ ಇದೇ ಮೊದಲ ಬಾರಿಗೆ ಹಾರರ್ ಸಿನಿಮಾ ಮಾಡಿದ್ದಾರೆ. ಕನ್ನಡದಲ್ಲಿ ‘ಮಿಕ್ಸಿಂಗ್ ಪ್ರೀತಿ’ ಹಾಗೂ ತಮಿಳಿನಲ್ಲಿ ‘ಮಿಕ್ಸಿಂಗ್ ಕಾದಲ್’ ಶೀರ್ಷಿಕೆಯಲ್ಲಿ ಈ ಚಿತ್ರ ತೆರೆಕಾಣಲಿದೆ. ಪೊಲ್ಲಾಚಿ ಮಹಾಲಿಂಗಂ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಈ ಸಿನಿಮಾಗೆ ಸಿಂಟೊ ಜೇಕಬ್ ಹೀರೋ.
- Madan Kumar
- Updated on: Feb 15, 2026
- 10:34 am
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
Vishnuvardhan: ದಿವಂಗತ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ಸರ್ಕಾರವು 2025 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ವಿಷ್ಣುವರ್ಧನ್ ಮತ್ತು ಬಿ ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಫಿಲಂ ಚೇಂಬರ್ ವತಿಯಿಂದ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಬೇಕೆಂದು ಒತ್ತಾಯಿಸಲಾಗಿದೆ.
- Manjunatha C
- Updated on: Feb 12, 2026
- 9:14 pm
‘ಅವರು ಕೆಟ್ಟವರಲ್ಲ, ದೇವರೇ ಇದನ್ನು ಮಾಡಿಸಿದ್ದು’; ಕಷ್ಟದ ದಿನ ನೆನೆದ ಮಯೂರಿ
ನಟಿ ಮಯೂರಿ ಅವರು 'ಅಶ್ವಿನಿ ನಕ್ಷತ್ರ'ದ ಮೂಲಕ ಜನಪ್ರಿಯತೆ ಗಳಿಸಿ, ನಂತರ ಹಿರಿತೆರೆಗೆ ಕಾಲಿಟ್ಟರು. ತಮ್ಮ ಕಷ್ಟದ ದಿನಗಳನ್ನು ನೆನಪಿಸಿಕೊಳ್ಳುತ್ತಾ, ಅಂದಿನ ಸವಾಲುಗಳೇ ತಮ್ಮ ನಟನಾ ಪಯಣಕ್ಕೆ ಪ್ರೇರಣೆಯಾದವು ಎಂದರು. ಕುಟುಂಬಕ್ಕೆ ಆದ್ಯತೆ ನೀಡಿದರೂ, ಮತ್ತೆ ನಟನೆಗೆ ಮರಳುವ ಆಸೆ ಹೊಂದಿದ್ದಾರೆ. ನಕಾರಾತ್ಮಕ ಅನುಭವಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸುವ ಅವರ ಮನೋಭಾವ ಎಲ್ಲರಿಗೂ ಪ್ರೇರಣೆ.
- Rajesh Duggumane
- Updated on: Feb 12, 2026
- 7:07 am
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ನಿರ್ಮಾಪಕರ ಹೊರೆ ಕಡಿಮೆ ಮಾಡಬೇಕು ಎಂಬ ಉದ್ದೇಶದಿಂದ ಈ ರೀತಿ ಮಾಡುತ್ತಿದ್ದೇವೆ. ಸರ್ಕಾರದಿಂದ ಸಹಾಯ ಪಡೆದು ವ್ಯವಸ್ಥೆ ಮಾಡುತ್ತೇವೆ. ಬಜೆಟ್ನಲ್ಲಿ ಚಿತ್ರರಂಗಕ್ಕೆ ಏನು ಬೇಕು ಎಂಬುದನ್ನು ಸರ್ಕಾರಕ್ಕೆ ಹೇಳುತ್ತೇವೆ. ಚಿತ್ರರಂಗ ಬೆಳೆಯಬೇಕು, ಉಳಿಯಬೇಕು. ಉದ್ಯಮಕ್ಕೆ ಯಾವುದೇ ಕಳಂಕ ಬರಬಾರದು ಎಂದು ಕೆ. ಮಂಜು ಹೇಳಿದ್ದಾರೆ.
- Madan Kumar
- Updated on: Feb 10, 2026
- 9:37 pm
‘ಟಾಕ್ಸಿಕ್’ ಹೊಸ ದಾಖಲೆ: ವಿದೇಶಿ ವಿತರಣೆ ಹಕ್ಕು 105 ಕೋಟಿ ರೂಪಾಯಿಗೆ ಮಾರಾಟ
ಬಿಡುಗಡೆಗೂ ಮುನ್ನವೇ ‘ಟಾಕ್ಸಿಕ್’ ಸಿನಿಮಾ ಭರ್ಜರಿ ಸದ್ದು ಮಾಡುತ್ತಿದೆ. ಹಣದ ಹೊಳೆ ಹರಿಯುತ್ತಿದೆ. ಯಶ್ ನಟನೆಯ ಈ ಸಿನಿಮಾಗೆ ಭಾರತದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಂತ ಭಾರಿ ಬೇಡಿಕೆ ಸೃಷ್ಟಿ ಆಗಿದೆ. ಈ ಸಿನಿಮಾದ ವಿದೇಶಿ ವಿತರಣೆಯ ಹಕ್ಕುಗಳು ಬರೋಬ್ಬರಿ 105 ಕೋಟಿ ರೂಪಾಯಿಗೆ ಮಾರಾಟ ಆಗಿವೆ.
- Madan Kumar
- Updated on: Feb 10, 2026
- 8:44 pm
ಫೆ.27ಕ್ಕೆ ಗಿಲ್ಲಿ ಸಿನಿಮಾ ‘ಸೂಪರ್ ಹಿಟ್’ ರಿಲೀಸ್; ಈಗಲೇ ಬಂದಿದೆ ಒಟಿಟಿ ಡಿಮ್ಯಾಂಡ್
ಗಿಲ್ಲಿ ನಟ ಅವರು ಬಿಗ್ ಬಾಸ್ ಶೋಗೆ ಹೋಗುವುದಕ್ಕೂ ಮುನ್ನ ‘ಸೂಪರ್ ಹಿಟ್’ ಚಿತ್ರದಲ್ಲಿ ನಟಿಸಿದ್ದರು. ಈಗ ಅವರಿಗೆ ಅಪಾರ ಜನಪ್ರಿಯತೆ ಬಂದಿದ್ದು, ಈ ಸಿನಿಮಾ ಫೆಬ್ರವರಿ 27ರಂದು ರಿಲೀಸ್ ಆಗುತ್ತಿದೆ. ಇತ್ತೀಚೆಗೆ ‘ಸೂಪರ್ ಹಿಟ್’ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಚಿತ್ರತಂಡದವರು ಮಾಹಿತಿ ಹಂಚಿಕೊಂಡರು.
- Madan Kumar
- Updated on: Feb 10, 2026
- 5:31 pm
‘ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ನಟಿಸಿದ್ದು ಯಾಕೆ? ಇಲ್ಲಿದೆ ಕಾರಣ
ಕಂಬಳದ ಬಗ್ಗೆ ವಿಶೇಷ ಪ್ರೀತಿ ಹೊಂದಿರುವ ವೀರೇಂದ್ರ ಹೆಗ್ಗಡೆಯವರು ನಟಸಲು ಒಪ್ಪಿಗೆ ಸೂಚಿಸಿದ್ದರು. ಈ ಸಿನಿಮಾದಲ್ಲಿನ ಮುಖ್ಯ ಸಂದೇಶವನ್ನು ರವಾನಿಸುವ ಪಾತ್ರಕ್ಕೆ ವೀರೇಂದ್ರ ಹೆಗ್ಗಡೆ ಜೀವ ತುಂಬಿದ್ದಾರೆ. ಅವರ ಪಾತ್ರ ಕೂಡಾ ‘ವೀರ ಕಂಬಳ’ ಚಿತ್ರದ ಆಕರ್ಷಣೆಗಳಲ್ಲಿ ಒಂದಾಗಿದೆ ಎಂಬುದು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಮಾತು.
- Madan Kumar
- Updated on: Feb 10, 2026
- 5:17 pm
ಕಾಶಿಯಲ್ಲಿ ಮುಗಿಯಿತು ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಸಿನಿಮಾ ಕ್ಲೈಮ್ಯಾಕ್ಸ್ ಶೂಟಿಂಗ್
‘ಲಕ್ಷ್ಮಿಪುತ್ರ’ ಸಿನಿಮಾಗೆ ವಿಜಯ್ ಸ್ವಾಮಿ ನಿರ್ದೇಶನ ಮಾಡುತ್ತಿದ್ದಾರೆ. ಅನ್ನಪೂರ್ಣ ಅರ್ಜುನ್ ನಿರ್ಮಿಸುತ್ತಿದ್ದಾರೆ. ಕಾಶಿಯ ಹಲವು ಪ್ರಮುಖ ಸ್ಥಳಗಳಲ್ಲಿ ಕ್ಲೈಮ್ಯಾಕ್ಸ್ ದೃಶ್ಯದ ಶೂಟಿಂಗ್ ಮಾಡಲಾಗಿದೆ. ಆ ಬಗ್ಗೆ ಅಪ್ಡೇಟ್ ಸಿಕ್ಕಿದೆ. ಚಿಕ್ಕಣ್ಣ ಜೊತೆ ತಾರಾ, ಧರ್ಮಣ್ಣ, ಕುರಿ ಪ್ರತಾಪ್, ವಂದಿತಾ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.
- Madan Kumar
- Updated on: Feb 9, 2026
- 10:36 pm
ಎವರಿಒನ್ ವಾಂಟ್ಸ್ ದಿಸ್: ಒಂದೇ ಸಿನಿಮಾದಲ್ಲಿ ಹಲವು ಭಾಷೆ; ಆದರೆ ಡಬ್ಬಿಂಗ್ ಅಲ್ಲ
‘ಎವರಿಒನ್ ವಾಂಟ್ಸ್ ದಿಸ್’ ಸಿನಿಮಾ ಮೂಲಕ ವಿಶೇಷ ಪರಿಕಲ್ಪನೆಯನ್ನು ಪ್ರೇಕ್ಷಕರಿಗೆ ಪರಿಚಯಿಸಲಾಗುತ್ತಿದೆ. ಈ ಸಿನಿಮಾದಲ್ಲಿ ಅಕ್ಷರಾ ಸುರೇಶ್, ನೇಹೇಶ್ ಪೋಲ್ ಮುಂತಾದ ಕಲಾವಿದರು ನಟಿಸಿದ್ದಾರೆ. ಸಿನಿಮಾ ಪ್ರದರ್ಶನದಲ್ಲೂ ಹೊಸ ಪ್ರಯೋಗ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು.
- Madan Kumar
- Updated on: Feb 9, 2026
- 9:13 pm
ಟಿವಿಯಲ್ಲೂ ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’; ಜೀ ಕನ್ನಡದಲ್ಲಿ ಪ್ರಸಾರ
ಥಿಯೇಟರ್, ಒಟಿಟಿ ಮಾತ್ರವಲ್ಲದೇ ಕಿರುತೆರೆಯಲ್ಲಿ ಕೂಡ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಬ್ಬರಿಸಿದೆ. ‘ಜೀ ಕನ್ನಡ’ದಲ್ಲಿ ಪ್ರಸಾರವಾದ ಈ ಸಿನಿಮಾವನ್ನು ಟಿವಿ ಪ್ರೇಕ್ಷಕರು ದಾಖಲೆ ಪ್ರಮಾಣದಲ್ಲಿ ವೀಕ್ಷಿಸಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶದಿಂದ ಒಟ್ಟು 11.56 ಟಿವಿಆರ್ ದಾಖಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.
- Madan Kumar
- Updated on: Feb 9, 2026
- 5:38 pm