Kannada Cinema
1934ರಲ್ಲಿ ಮೊದಲ ಕನ್ನಡ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗುವ ಮೂಲಕ ಉದಯವಾದ ಕನ್ನಡ ಚಿತ್ರರಂಗಕ್ಕೆ 89 ವರ್ಷದ ಸುದೀರ್ಘ ಇತಿಹಾಸವಿದೆ.
ಮನರಂಜನೆಯ ಜೊತೆಗೆ ಜನ ಜಾಗೃತಿ ಮೂಡಿಸುವ, ಅಭಿರುಚಿ ಬೆಳೆಸುವ ಸಿನಿಮಾಗಳನ್ನು ಕನ್ನಡ ಚಿತ್ರರಂಗ ನೀಡುತ್ತಲೇ ಬಂದಿದೆ. ಸಿನಿಮಾಗಳ ಮೂಲಕ ಕನ್ನಡತನವನ್ನು ಪಸರಿಸುತ್ತಾ ಬಂದಿದೆ. ಸುಬ್ಬಯ್ಯ ನಾಯ್ಡು, ಭಾಗವತರ್, ಪಂಡರೀಬಾಯಿ ಅವರುಗಳು ಬಿತ್ತಿದ ಕನ್ನಡ ಚಿತ್ರರಂಗದ ಬೀಜಕ್ಕೆ ರಾಜ್ಕುಮಾರ್, ಕಲ್ಯಾಣ್ ಕುಮಾರ್, ಲೋಕೇಶ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್ನಾಗ್, ಅಂಬರೀಶ್ ಅಂಥಹಾ ಇನ್ನೂ ಅನೇಕ ಮಹನೀಯರು ನೀರೆರೆದು ಹೆಮ್ಮರವಾಗಿ ಬಳೆಸಿದ್ದಾರೆ.
ಕನ್ನಡ ಚಿತ್ರರಂಗ ಇಂದು ವಾರ್ಷಿಕವಾಗಿ ಸಾವಿರಾರು ಕೋಟಿ ವ್ಯವಹಾರ ನಡೆಯುವ ತಾಣ, ವರ್ಷಕ್ಕೆ ಸರಾಸರಿ 200 ರಿಂದ 250 ಕನ್ನಡ ಸಿನಿಮಾಗಳು ಇಲ್ಲಿ ತಯಾರುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ‘ಕೆಜಿಎಫ್’, ‘ಕಾಂತಾರ’, ‘ವಿಕ್ರಾಂತ್ ರೋಣ’ ಇನ್ನೂ ಕೆಲವು ಸಿನಿಮಾಗಳು ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಣೆ ಗೊಳಿಸಿವೆ.
ಮೇಕಿಂಗ್ ಮೂಲಕ ಗಮನ ಸೆಳೆದ ‘ಮಾರಿಗೆ ದಾರಿ’ ಸಿನಿಮಾ; ಟೀಸರ್ ಹೇಗಿದೆ ನೋಡಿ..
ಅಗಸ್ತ್ಯ ಅವರು ‘ಮಾರಿಗೆ ದಾರಿ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಟೀಸರ್ ಸಖತ್ ಮಾಸ್ ಆಗಿದೆ. ಅದರ ಮೇಕಿಂಗ್ ಕೂಡ ಗಮನ ಸೆಳೆದಿದೆ. ಸದ್ಯದಲ್ಲೇ ‘ಮಾರಿಗೆ ದಾರಿ’ ಸಿನಿಮಾ ಸೆನ್ಸಾರ್ ಪ್ರಕ್ರಿಯೆಗೆ ಹೋಗಲಿದೆ.
- Madan Kumar
- Updated on: Apr 27, 2026
- 6:04 pm
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ ನೋಡಿ..
ಜೋಗಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದಲ್ಲಿ ಧ್ರುವ ಸರ್ಜಾ, ಸಂಜಯ್ ದತ್, ರವಿಚಂದ್ರನ್, ಶಿಲ್ಪಾ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ಕಿಚ್ಚ ಸುದೀಪ್ ಅತಿಥಿ ಪಾತ್ರ ಮಾಡಿದ್ದಾರೆ. ಆ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ಮಾಡಲಾಗಿದೆ. ಲೈವ್ ವಿಡಿಯೋ ನೋಡಿ..
- Madan Kumar
- Updated on: Apr 27, 2026
- 4:51 pm
ರಾಜ್ಕುಮಾರ್ ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಡಾ. ರಾಜ್ಕುಮಾರ್ ಸಮಾಧಿ ವಿಚಾರಕ್ಕೆ ಸಂಬಂಧಿಸಿದಂತೆ ನಟ ಚೇತನ್ ಕುಮಾರ್ ಅಹಿಂಸಾ ಅವರು ನೀಡಿದ ಹೇಳಿಕೆಯಿಂದ ವಿವಾದ ಭುಗಿಲೆದ್ದಿದೆ. ಚೇತನ್ ವಿರುದ್ಧ ರಾಜ್ಕುಮಾರ್ ಅಭಿಮಾನಿಗಳು ಗರಂ ಆಗಿದ್ದಾರೆ. ಆದರೆ ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ ಎಂದು ಚೇತನ್ ಅವರು ಹೇಳಿದ್ದಾರೆ.
- Madan Kumar
- Updated on: Apr 26, 2026
- 3:22 pm
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ, ದಬ್ಬಾಳಿಕೆ ಒಪ್ಪಲ್ಲ ಎಂದ ಚೇತನ್
ಡಾ. ರಾಜ್ಕುಮಾರ್ ಅವರ ಸಮಾಧಿ ನಿರ್ಮಾಣಕ್ಕೆ ಸರ್ಕಾರ ಜಾಗ ನೀಡಿದ್ದನ್ನು ನಟ ಚೇತನ್ ಅಹಿಂಸಾ ಪ್ರಶ್ನಿಸಿದ್ದಾರೆ. ಆ ಮೂಲಕ ಅವರು ವಿವಾದ ಸೃಷ್ಟಿಸಿದ್ದಾರೆ. ಅವರು ಕ್ಷಮೆ ಕೇಳಬೇಕು ಎಂದು ಅನೇಕರು ಪಟ್ಟು ಹಿಡಿದಿದ್ದರು. ಈ ಎಲ್ಲ ಘಟನೆಗಳಿಗೆ ಪ್ರತಿಕ್ರಿಯೆ ನೀಡಲು ಚೇತನ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ.
- Madan Kumar
- Updated on: Apr 26, 2026
- 1:26 pm
ಡಾ. ರಾಜ್ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್? ವಿಡಿಯೋ ನೋಡಿ
ಇತ್ತೀಚೆಗೆ ನಟ ಚೇತನ್ ಅಹಿಂಸಾ ನೀಡಿದ್ದ ಹೇಳಿಕೆಗೆ ಡಾ. ರಾಜ್ಕುಮಾರ್ ಅಭಿಮಾನಿಗಳು, ಕನ್ನಡಪರ ಸಂಘಟನೆ ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದರು. ಚೇತನ್ ಅಹಿಂಸಾ ಕ್ಷಮೆ ಕೇಳಬೇಕು ಎಂದು ಎಲ್ಲರೂ ಒತ್ತಾಯಿಸಿದರು. ಆದರೆ ಚೇತನ್ ಅವರು ಕ್ಷಮೆ ಕೇಳುವಾಗ ಸುತ್ತಿ ಬಳಸಿ ಮಾತನಾಡಿದರು. ವಿಡಿಯೋ ನೋಡಿ..
- Madan Kumar
- Updated on: Apr 26, 2026
- 9:37 am
‘ಟಾಕ್ಸಿಕ್’ ಟೀಸರ್ನಲ್ಲಿ ಅಂಥ ದೃಶ್ಯ ಇದೆ ಎಂದು ಟೀಕಿಸಿದವರಿಗೆ ಉತ್ತರ ನೀಡಿದ ಯಶ್
ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆದಾಗ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದರು. ಬೋಲ್ಡ್ ಸೀನ್ ಇದೆ ಎಂದು ಟೀಕೆ ವ್ಯಕ್ತವಾಗಿತ್ತು. ಅದಕ್ಕೆ ಈಗ ನಟ ಯಶ್ ಅವರು ಉತ್ತರ ನೀಡಿದ್ದಾರೆ. ‘ಸಿನಿಮಾಕಾನ್’ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು ‘ಟಾಕ್ಸಿಕ್’ ಸಿನಿಮಾ ಕುರಿತು ಮಾತನಾಡಿದ್ದಾರೆ.
- Madan Kumar
- Updated on: Apr 26, 2026
- 8:29 am
ಕಾಣಿಸುತ್ತಿಲ್ಲ ‘ಕೆಡಿ’ ಸಿನಿಮಾ ಟ್ರೇಲರ್; ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಗೆ ಇನ್ನೊಂದು ವಿಘ್ನ
ಬಹಳ ಅದ್ದೂರಿಯಾಗಿ ‘ಕೆಡಿ’ ಸಿನಿಮಾದ ಟ್ರೇಲರ್ ಲಾಂಚ್ ಮಾಡಲಾಗಿತ್ತು. ಆದರೆ ಎರಡೇ ದಿನದಲ್ಲಿ ಆ ಟ್ರೇಲರ್ ಕಾಣಿಸುತ್ತಿಲ್ಲ! ಯೂಟ್ಯೂಬ್ನಿಂದ ಇದನ್ನು ತೆಗೆದುಹಾಕಲಾಗಿದೆ. ಈ ಬಗ್ಗೆ ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ ಪ್ರತಿಕ್ರಿಯೆ ನೀಡಿದೆ. ಪ್ರೇಮ್ ನಿರ್ದೇಶನದ ಈ ಸಿನಿಮಾಗೆ ಹಲವು ವಿಘ್ನಗಳು ಎದುರಾಗುತ್ತಿವೆ.
- Madan Kumar
- Updated on: Apr 24, 2026
- 8:56 pm
ಡಾ. ರಾಜ್ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಏಪ್ರಿಲ್ 24 ಎಂದರೆ ಡಾ. ರಾಜ್ಕುಮಾರ್ ಅಭಿಮಾನಿಗಳಿಗೆ ಹಬ್ಬ. ಈ ದಿನ ಅಣ್ಣಾವ್ರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಇಂದು ಇಡೀ ಕುಟುಂಬದವರು ಡಾ. ರಾಜ್ ಸಮಾಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಅಶ್ವಿನಿ ಪುನೀತ್ ರಾಜ್ಕುಮಾರ್ ಕೂಡ ಬಂದು ಪೂಜೆ ಮಾಡಿದ್ದಾರೆ.
- Madan Kumar
- Updated on: Apr 24, 2026
- 7:33 pm
‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಟೀಸರ್ ನೋಡಿ ಮೆಚ್ಚಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಡಾಲಿ ಧನಂಜಯ್ ಅವರು ‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಡಾಲಿ ಅವರು ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಟೀಸರ್ ನೋಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮೆಚ್ಚಿಕೊಂಡಿದ್ದಾರೆ. ಚಿತ್ರತಂಡ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
- Madan Kumar
- Updated on: Apr 24, 2026
- 5:35 pm
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ನಟ ದಿಗಂತ್ ಅವರು ‘ರುದ್ರ ಕಾಲ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿತು. ಈ ವೇಳೆ ಸುದ್ದಿಗೋಷ್ಠಿ ನಡೆಸಲಾಯಿತು. ದಿಗಂತ್ ಅವರು ಮಾತನಾಡಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ಚಿತ್ರರಂಗದ ಸದ್ಯದ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ವಿವರಿಸಿದರು.
- Madan Kumar
- Updated on: Apr 23, 2026
- 10:36 pm
ಡಾ. ರಾಜ್ಕುಮಾರ್ ಮೇಲಿನ ಅಭಿಮಾನಕ್ಕೆ ಅಮೆರಿಕದಲ್ಲಿ ಕನ್ನಡ ಗೀತೆ ಹಾಡಿದ ಮೋಹನ್ಲಾಲ್
ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರು ‘ಎಂದೆಂದೂ ನಿನ್ನನು ಮರೆತು..’ ಗೀತೆಯನ್ನು ಹಾಡಿದ್ದಾರೆ. ಅಪ್ಪಟ ಕನ್ನಡಿಗನ ರೀತಿ ಅವರು ಹಾಡಿರುವುದು ಕಂಡು ಎಲ್ಲರಿಗೂ ಅಚ್ಚರಿ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಗೀತೆಯನ್ನು ಕಂಡು ಡಾ. ರಾಜ್ಕುಮಾರ್ ಅಭಿಮಾನಿಗಳು ಖುಷಿಪಟ್ಟಿದ್ದಾರೆ.
- Madan Kumar
- Updated on: Apr 23, 2026
- 10:16 pm
‘ಕೆಡಿ ಸಿನಿಮಾಗೆ ನಿಜವಾದ ಹೀರೋ ಕೆವಿಎನ್’: ಟ್ರೇಲರ್ ರಿಲೀಸ್ ವೇಳೆ ಪ್ರೇಮ್ ಮಾತು
‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ‘ಕೆಡಿ’ ಸಿನಿಮಾ ನಿರ್ಮಾಣ ಆಗಿದೆ. ಜೋಗಿ ಪ್ರೇಮ್ ನಿರ್ದೇಶನ ಮಾಡಿದ ಈ ಚಿತ್ರದಲ್ಲಿ ಧ್ರುವ ಸರ್ಜಾ, ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್ ಮುಂತಾದವರು ಅಭಿನಯಿಸಿದ್ದಾರೆ. ಟ್ರೇಲರ್ ಬಿಡುಗಡೆ ವೇದಿಕೆಯಲ್ಲಿ ಪ್ರೇಮ್ ಅವರು ಕೆಲವು ವಿಷಯ ಹಂಚಿಕೊಂಡರು.
- Madan Kumar
- Updated on: Apr 23, 2026
- 8:34 pm