
kannada Rajyotsava
ಕನ್ನಡ, ಕರ್ನಾಟಕ, ಕರುನಾಡು ಬರೀ ನೆಲವಲ್ಲ, ಕೇವಲ ಭಾಷೆಯಲ್ಲ, ಅದೊಂದು ಹೆಮ್ಮೆ, ಅದೊಂದು ಬಾಂಧವ್ಯ. ಕನ್ನಡ ನಿತ್ಯೋತ್ಸವವಾಗಬೇಕು ಎನ್ನುವುದು ಕರ್ನಾಟಕ ಏಕೀಕರಣಕ್ಕೆ ಹೋರಾಡಿದ, ಕನ್ನಡದ ಉಳಿವಿಗಾಗಿ, ಬೆಳವಣಿಗೆಗಾಗಿ ಶ್ರಮಿಸಿದ ಹಲವು ಹಿರಿಜೀವಗಳ ಹೆಬ್ಬಯಕೆ. ಕನ್ನಡ ಬೆಳೆಸಬೇಕು ಎಂದು ದುಡಿದವರನ್ನು ನೆನೆಯುವ ದಿನವಿದು. ಪ್ರತಿ ವರ್ಷ ನವೆಂಬರ್ 1 ರಂದು ಎಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ನಮ್ಮ ಮುಂದಿನ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಇದು ಕನ್ನಡಿಗರಿಗೆ ಹಬ್ಬ ಇದನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುತ್ತದೆ. ಈ ದಿನಕ್ಕೆ ಸಂಬಂಧಪಟ್ಟಂತೆ ಕೆಲವು ವಿಶೇಷ ಮಾಹಿತಿಗಳು ಇಲ್ಲಿವೆ.
ಭಟ್ಕಳ: ಮುಸ್ಲಿಂ ಜನಪ್ರತಿನಿಧಿಯಿಂದ ಭುವನೇಶ್ವರಿ ಭಾವಚಿತ್ರಕ್ಕೆ ಅಗೌರವ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಂ ಜನಪ್ರತಿನಿಧಿಯೊಬ್ಬರು ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲು ನಿರಾಕರಿಸಿ ಅಗೌರವ ತೋರಿದ್ದಾರೆ. ಪುಷ್ಪಾರ್ಚನೆಗೆ ಮನವಿ ಮಾಡಿದರೂ ಕೈಕಟ್ಟಿ ನಿಂತಿರುವ ವಿಡಿಯೋ ಈಗ ವೈರಲ್ ಆಗುತ್ತಿದ್ದು, ಚರ್ಚೆಗೆ ಗ್ರಾಸವಾಗಿದೆ.
- Suraj Mahaveer Utture
- Updated on: Nov 1, 2024
- 2:33 pm
Viral: ಜಪಾನಿಗೆ ಮೊದಲ ಬಾರಿಗೆ ಆನೆ ಕಳಿಸಿದ್ದು ನಮ್ಮ ಮೈಸೂರಿನಿಂದ
ಬಹುತೇಕ ಹೆಚ್ಚಿನವರಿಗೆ ನಮ್ಮ ಮೈಸೂರಿನಿಂದ ಜಪಾನ್ ದೇಶಕ್ಕೆ ಅಲ್ಲಿನ ಮಕ್ಕಳಿಗಾಗಿ ಕಳುಹಿಸಿಕೊಡಲಾಗಿದ್ದ ಆನೆಯ ಕಥೆಯ ಬಗ್ಗೆ ಗೊತ್ತಿರಲಿಕ್ಕಿಲ್ಲ. ಕನ್ನಡ ರಾಜ್ಯೋತ್ಸವದ ಈ ಶುಭ ದಿನದಂದು ಜಪಾನಿನ ಕನ್ನಡತಿ ಶ್ವೇತಾ ಆರಾಧ್ಯ ಅವರು ಈ ಕುರಿತ ಒಂದೊಳ್ಳೆ ಮಾಹಿತಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
- Malashree anchan
- Updated on: Nov 1, 2024
- 12:45 pm
ಕರ್ನಾಟಕ ರಾಜ್ಯೋತ್ಸವ: ರಾಜ್ಯವನ್ನು ಉದ್ದೇಶಿಸಿ ಮಾತಾಡಿದ ಶಿವಕುಮಾರ್ ಕವಿಯಂತೆ ಕಂಡರು!
ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳು ಸಂದಿವೆ ಎಂದ ಶಿವಕುಮಾರ್, ದೇಶದ ಬೇರೆ ಯಾವುದೇ ರಾಜ್ಯಕ್ಕೆ ತನ್ನದೇ ಆದ ಧ್ವಜವಾಗಲೀ, ನಾಡಗೀತೆಯಾಗಲೀ ಇಲ್ಲ; ಆದರೆ ಕರ್ನಾಟಕಕ್ಕೆ ತನ್ನ ಧ್ವಜವಿದೆ ಮತ್ತು ರಾಷ್ಟ್ರಕವಿ ಕುವೆಂಪು ಅವರು ಬರೆದ ಸರ್ವಜನಾಂಗದ ಶಾಂತಿಯ ತೋಟ.....ಗೀತೆಯಿದೆ ಅಂತ ಹೇಳಿದರು.
- Arun Belly
- Updated on: Nov 1, 2024
- 12:00 pm
ಕನ್ನಡ ರಾಜ್ಯೋತ್ಸವ ಭಾಷಣದಲ್ಲೇ ಕೇಂದ್ರದ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕಕ್ಕೆ 15ನೇ ಹಣಕಾಸು ಆಯೋಗದಲ್ಲಿ ಆದ ಅನ್ಯಾಯವನ್ನು ಕೇಂದ್ರ ಸರ್ಕಾರ ಸರಿಪಡಿಸಿಲ್ಲ ಎಂದು ಆರೋಪಿಸಿದ್ದಾರೆ. ಕೇಂದ್ರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯವಿದೆ ಎಂದು ಅವರು ಆರೋಪಿಸಿ, ರಾಜ್ಯದ ಸಂಸದರು ಲೋಕಸಭೆಯಲ್ಲಿ ಧ್ವನಿಯೆತ್ತಬೇಕು ಎಂದು ಆಗ್ರಹಿಸಿದ್ದಾರೆ. ಕನ್ನಡಿಗರ ವಿರುದ್ಧ ಅವಹೇಳನ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
- Shanthamurthy
- Updated on: Nov 1, 2024
- 11:28 am
ಕರ್ನಾಟಕ ರಾಜ್ಯೋತ್ಸವ: ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕ ರಾಜ್ಯೋತ್ಸವ: ಕರ್ನಾಟಕದ ಧ್ವಜ ಹಾರಿಸುವ ಮೊದಲು ಸಿದ್ದರಾಮಯ್ಯ ರಾಷ್ಟ್ರಧ್ವಜವನ್ನು ಆರೋಹಣ ಮಾಡಿ ಗೌರವವಂದನೆಯನ್ನು ಸಲ್ಲಿಸಿದರು. ಬಳಿಕ ಮುಖ್ಯಮಂತ್ರಿಯವರು ಪೊಲೀಸ್ ಪಡೆಯಿಂದ ಗೌರವರಕ್ಷೆಯನ್ನು ಸ್ವೀಕರಿಸಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚನನ ನಡೆಯಿತು.
- Arun Belly
- Updated on: Nov 1, 2024
- 11:04 am
Viral: ಕನ್ನಡ್ ಅಲ್ಲ ಅದು ಕನ್ನಡ; ವೇದಿಕೆ ಮೇಲೆ ಕಿಚ್ಚನ ʼಕನ್ನಡʼ ಪಾಠ
ಕನ್ನಡ ಚಿತ್ರರಂಗದ ಅಭಿನಯ ಚರ್ಕವರ್ತಿ ಸುದೀಪ್ ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಅಪಾರ ಗೌರವವನ್ನು ಹೊಂದಿರುವ ನಟ. ಕನ್ನಡದ ವಿಚಾರವಾಗಿ ಅವರು ಆಗಾಗ್ಗೆ ಧ್ವನಿ ಎತ್ತುತ್ತಿರುತ್ತಾರೆ. ಹೌದು ಕೆಲ ವಾರಗಳ ಹಿಂದೆ ದುಬೈನಲ್ಲಿ ನಡೆದ ಸೈಮಾ ಅವಾರ್ಡ್ನಲ್ಲೂ ಅವರು ತಮ್ಮ ಕನ್ನಡ ಪ್ರೇಮವನ್ನು ತೋರಿಸಿದ್ದಾರೆ. ಅವಾರ್ಡ್ ಫಂಕ್ಷನ್ನಲ್ಲಿ ಚಿತ್ರರಂಗಕ್ಕೆ ಸೇರಿದ ವ್ಯಕ್ತಿಯೊಬ್ಬರು ಕನ್ನಡ್ ಎಂಬ ಪದವನ್ನು ಉಪಯೋಗಿಸಿದಾಗ, ಅದು ಕನ್ನಡ್ ಅಲ್ಲ ಕನ್ನಡ ಎಂದು ಕಿಚ್ಚ ಸಖತ್ ಆಗಿ ಕ್ಲಾಸ್ ತೆಗೆದುಕೊಂಡಿದ್ರು. ಕನ್ನಡ ರಾಜ್ಯೋತ್ಸವದ ಶುಭ ದಿನ ಈ ವಿಡಿಯೋ ಇದೀಗ ಮತ್ತೊಮ್ಮೆ ವೈರಲ್ ಆಗಿದೆ.
- Malashree anchan
- Updated on: Nov 1, 2024
- 10:06 am
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನೇರ ಪ್ರಸಾರ ಇಲ್ಲಿ ನೋಡಿ
Kannada Rajyotsava 2024: ಕರ್ನಾಟಕದಾದ್ಯಂತ 69ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಸುವರ್ಣ ಕರ್ನಾಟಕ ವರ್ಷಚಾರಣೆಯ ಶುಭ ಸಂದರ್ಭದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ (ಪ್ರಶಸ್ತಿ ಪ್ರದಾನವೂ ಸೇರಿದಂತೆ) ನೇರ ಪ್ರಸಾರ ಇಲ್ಲಿದೆ.
- Ganapathi Sharma
- Updated on: Nov 1, 2024
- 9:41 am
ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ಸುವರ್ಣ ಕರ್ನಾಟಕ ವರ್ಷಚಾರಣೆಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ ಕೋರಿದ್ದಾರೆ. ಕನ್ನಡದಲ್ಲೇ ಸಂದೇಶ ಪ್ರಕಟಿಸುವ ಮೂಲಕ ಮೋದಿ ಶುಭ ಕೋರಿರುವುದು ವಿಶೇಷ. ಕನ್ನಡ ಸಂದೇಶದಲ್ಲಿ ಮೋದಿ ಹೇಳಿದ್ದೇನೆಂಬ ವಿವರ ಇಲ್ಲಿದೆ.
- Ganapathi Sharma
- Updated on: Nov 1, 2024
- 9:22 am
ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1 ಲಕ್ಷಕ್ಕೆ ಹೆಚ್ಚಳ; ರಾಜ್ಯ ಸರ್ಕಾರ ಘೋಷಣೆ
ಕರ್ನಾಟಕ ಸಂಭ್ರಮದ ಪ್ರಯುಕ್ತ 50 ಮಹಿಳಾ ಸಾಧಕರು, 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. 2 ದಿನಗಳ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಶಸ್ತಿ ಘೋಷಿಸಿತ್ತು. ಇಂದು 100 ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು.
- Web contact
- Updated on: Nov 1, 2024
- 7:53 am
Kannada Rajyotsava 2024 : ಕರ್ನಾಟಕದಲ್ಲಿರುವ ಕನ್ನಡಮ್ಮ ಭುವನೇಶ್ವರಿ ದೇವಿಯ ದೇಗುಲಗಳಿವು
ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ಸಂಭ್ರಮ. ರಾಜ್ಯದ ಮೂಲೆ ಮೂಲೆಯಲ್ಲೂ ವಿವಿಧ ಕಾರ್ಯಕ್ರಮಗಳ ಮೂಲಕ ಆಚರಣೆಗಳು ನಡೆಯುತ್ತದೆ. ನಾಡಿನೆಲ್ಲೆಡೆ ಕನ್ನಡ ನಾಡಿನ ಬಾವುಟ ರಾರಾಜಿಸುತ್ತವೆ. ಕನ್ನಡ ಭಾಷೆ ಮಾತನಾಡುವ ಎಲ್ಲಾ ಜನರಿರುವ ಪ್ರಾಂತ್ಯವನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನಾಗಿ ಮಾಡಿದ ದಿನವಿದಾಗಿದ್ದು, ಈ ವಿಶೇಷ ದಿನದಂದು ಕನ್ನಡಾಂಬೆಗೆ ಪೂಜೆ ಸಲ್ಲಿಸಲಾಗುತ್ತದೆ. ಕರ್ನಾಟಕದಲ್ಲಿ ಹಲವಾರು ಕನ್ನಡಮ್ಮನ ದೇವಾಲಯಗಳಿದ್ದು, ಆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
- Sainandha P
- Updated on: Oct 31, 2024
- 6:16 pm