AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Rajyotsava

Kannada Rajyotsava

ಕನ್ನಡ, ಕರ್ನಾಟಕ, ಕರುನಾಡು ಬರೀ ನೆಲವಲ್ಲ, ಕೇವಲ ಭಾಷೆಯಲ್ಲ, ಅದೊಂದು ಹೆಮ್ಮೆ, ಅದೊಂದು ಬಾಂಧವ್ಯ. ಕನ್ನಡ ನಿತ್ಯೋತ್ಸವವಾಗಬೇಕು ಎನ್ನುವುದು ಕರ್ನಾಟಕ ಏಕೀಕರಣಕ್ಕೆ ಹೋರಾಡಿದ, ಕನ್ನಡದ ಉಳಿವಿಗಾಗಿ, ಬೆಳವಣಿಗೆಗಾಗಿ ಶ್ರಮಿಸಿದ ಹಲವು ಹಿರಿಜೀವಗಳ ಹೆಬ್ಬಯಕೆ. ಕನ್ನಡ ಬೆಳೆಸಬೇಕು ಎಂದು ದುಡಿದವರನ್ನು ನೆನೆಯುವ ದಿನವಿದು. ಪ್ರತಿ ವರ್ಷ ನವೆಂಬರ್ 1 ರಂದು ಎಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ನಮ್ಮ ಮುಂದಿನ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಇದು ಕನ್ನಡಿಗರಿಗೆ ಹಬ್ಬ ಇದನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುತ್ತದೆ. ಈ ದಿನಕ್ಕೆ ಸಂಬಂಧಪಟ್ಟಂತೆ ಕೆಲವು ವಿಶೇಷ ಮಾಹಿತಿಗಳು ಇಲ್ಲಿವೆ.

ಇನ್ನೂ ಹೆಚ್ಚು ಓದಿ

ವಿಶ್ವ ದಾಖಲೆಗಾಗಿ 7 ಕಿ.ಮೀ ಉದ್ದದ ಕನ್ನಡ ಧ್ವಜ; ವಿಶಿಷ್ಟ ರಾಜ್ಯೋತ್ಸವಕ್ಕೆ ಸಾಕ್ಷಿಯಾದ ದಾವಣಗೆರೆ

ದಾವಣಗೆರೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ 7 ಕಿ.ಮೀ. ಉದ್ದದ ಕನ್ನಡ ಬಾವುಟದ ಐತಿಹಾಸಿಕ ಮೆರವಣಿಗೆ ನಡೆಸಲಾಯಿತು. 15 ಸಾವಿರ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದು, ಏಳು ಕಿಲೋಮೀಟರ್ ಉದ್ದದ ಧ್ವಜವನ್ನು ಇಪ್ಪತ್ತು ದಿನಗಳ ಕಾಲ ನಿರಂತರವಾಗಿ ಶ್ರಮವಹಿಸಿ ಸಿದ್ಧಪಡಿಸಿದ್ದಾರೆ. ಇದು ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ವಿಶ್ವದಾಖಲೆಗೆ ಸೇರುವ ನಿರೀಕ್ಷೆಯಿದೆ.

ಕೋಲಾರ: ಕನ್ನಡ ರಾಜ್ಯೋತ್ಸವ ಹಿನ್ನೆಲೆ ಸರ್ಕಾರಿ ಬಸ್​ಗೆ ಅದ್ದೂರಿ ಅಲಂಕಾರ

ಕೋಲಾರ ಜಿಲ್ಲೆಯ ಯಾರಂಘಟ್ಟ ಗ್ರಾಮಸ್ಥರು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಗ್ರಾಮಕ್ಕೆ ನಿತ್ಯ ಸೇವೆ ಸಲ್ಲಿಸುವ ಸರ್ಕಾರಿ ಬಸ್‌ಗೆ ಕನ್ನಡ ಬಾವುಟ ಕಟ್ಟಿ, ಹೂವಿನಿಂದ ಅಲಂಕರಿಸಿ ಸಂಭ್ರಮಿಸಿದ್ದಾರೆ. ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಸೇರಿ ನಿತ್ಯ ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದೊಯ್ಯುವ ಚಾಲಕ ಮತ್ತು ನಿರ್ವಾಹಕರನ್ನು ಸನ್ಮಾನಿಸಿ ಗೌರವಿಸಿದ್ದಾರೆ. ಈ ಮೂಲಕ ಕನ್ನಡ ಪ್ರೀತಿ ಮತ್ತು ಸಾರ್ವಜನಿಕ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಂಪು ಹಳದಿ ಹೂವು ಮತ್ತು ಕರ್ನಾಟಕ ಬಾವುಟಗಳಿಂದ ಶೃಂಗರಿಸಿದ ಸರ್ಕಾರಿ ಬಸ್ಸಿನ ದೃಶ್ಯಾವಳಿಗಳು ಇಲ್ಲಿವೆ.

ಬೆಳಗಾವಿ: ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ 300ಕ್ಕೂ ಹೆಚ್ಚು ಮೊಬೈಲ್ ಕಳವು

ಬೆಳಗಾವಿಯಲ್ಲಿ ಶನಿವಾರ ರಾತ್ರಿ ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ತೊಡಗಿದ್ದವರ ಮೇಲೆ ಕೆಲ ಕಿಡಿಗೇಡಿಗಳು ಚಾಕು ಇರಿದು ಅಟ್ಟಹಾಸ ಮೆರೆದಿದ್ದಾರೆ. ಇದೇ ಮೆರವಣಿಗೆಯಲ್ಲಿ ಮತ್ತೊಂದು ಘಟನೆ ಕೂಡ ನಡೆದಿದೆ. ಕೆಲವೇ ಗಂಟೆಗಳಲ್ಲಿ ಬರೋಬ್ಬರಿ 300ಕ್ಕೂ ಹೆಚ್ಚು ಮೊಬೈಲ್ ಕಳತನ ಮಾಡುವ ಮೂಲಕ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ.

‘ಕಲರ್ಸ್ ಕನ್ನಡ’ ವಾಹಿನಿಯ ಧಾರಾವಾಹಿಗಳಲ್ಲಿ ಈ ತಿಂಗಳು ಪೂರ್ತಿ ಕನ್ನಡ ಹಬ್ಬ

ಜನಪ್ರಿಯ ಮನರಂಜನಾ ವಾಹಿನಿಯಾದ ‘ಕಲರ್ಸ್ ಕನ್ನಡ’ ವಿಶೇಷ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದೆ. ರಾಮಾಚಾರಿ, ಮುದ್ದು ಸೊಸೆ, ಗಂಧದ ಗುಡಿ, ಭಾಗ್ಯಲಕ್ಷ್ಮಿ ಮುಂತಾದ ಧಾರಾವಾಹಿಗಳ ಕಥೆಯಲ್ಲಿ ಕನ್ನಡತನ ಕಾಣಿಸಲಿದೆ. ಈ ಬಗ್ಗೆ ‘ಕಲರ್ಸ್ ಕನ್ನಡ’ ವಾಹಿನಿ ಮಾಹಿತಿ ಹಂಚಿಕೊಂಡಿದೆ. ಕನ್ನಡ ರಾಜ್ಯೋತ್ಸವಕ್ಕೆ ವೀಕ್ಷಕರಿಗೆ ವಿಶೇಷ ಅನುಭವ ಸಿಗಲಿದೆ.

ಬೆಳಗಾವಿ: ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ದುಷ್ಕರ್ಮಿಗಳಿಂದ ಐವರಿಗೆ ಚಾಕು ಇರಿತ

ಕನ್ನಡ ರಾಜ್ಯೋತ್ಸವ ಮೆರವಣಿ ವೇಳೆ ಭಯಾಕನ ಘಟನೆಯೊಂದು ನಡೆದಿದೆ. ಬೆಳಗಾವಿಯ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿ ಮೆರವಣಿ ವೇಳೆ ದುಷ್ಕರ್ಮಿಗಳು ಐವರಿಗೆ ಚಾಕು ಇರಿದು ಪರಾರಿ ಆಗಿರುವಂತಹ ಘಟನೆ ನಡೆದಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬೆಳಗಾವಿಯ ‌ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Kannada Rajyotsava Award Live: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ: ಲೈವ್​ ನೋಡಿ

ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 70 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಡಿಸಿಎಂ ಡಿಕೆ ಶಿವಕುಮಾರ್​​ ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಸಹ ಉಪಸ್ಥಿತರಿದ್ದರು. ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.

ಬೆಳಗಾವಿ: ಕನ್ನಡ ರಾಜ್ಯೋತ್ಸವದಂದೇ MES ಕಾರ್ಯಕರ್ತರ ಪುಂಡಾಟ; ಅನುಮತಿ ಇಲ್ಲದಿದ್ರೂ ಕರಾಳ ದಿನ ಆಚರಣೆ!

ಕನ್ನಡ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು ಅನುಮತಿ ಇಲ್ಲದೆ ಕರಾಳ ದಿನಾಚರಣೆ ನಡೆಸಿದ್ದಾರೆ. ಬೆಳಗಾವಿ ನಮ್ಮ ಹಕ್ಕು, ಯಾರಪ್ಪನ ಆಸ್ತಿಯಲ್ಲ ಎಂದು ಘೋಷಣೆ ಕೂಗಿದ ಕಾರ್ಯಕರ್ತರು, ಬೆಳಗಾವಿ, ಕಾರವಾರ ಸೇರಿದಂತೆ ಹಲವು ಪ್ರದೇಶಗಳನ್ನು ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಿಸುವಂತೆ ಒತ್ತಾಯಿಸಿದ್ದಾರೆ. ಈ ನಡೆ ಕನ್ನಡ ಸರ್ಕಾರದ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ.

ಬೆಳಗಾವಿ: ಸತೀಶ್ ಜಾರಕಿಹೊಳಿ​ ಪರೇಡ್ ವೀಕ್ಷಣೆಗೆ ತೆರಳುವ ಜೀಪ್​ನಲ್ಲಿ ಡೀಸೆಲ್​ ಸೋರಿಕೆ, ತಪ್ಪಿದ ಅನಾಹುತ

ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಸಂದರ್ಭ ಸಚಿವ ಸತೀಶ್‌ ಜಾರಕಿಹೊಳಿ ಜೀಪ್‌ನಿಂದ ಡೀಸೆಲ್‌ ಸೋರಿಕೆಯಾಗಿದ್ದು, ಪೊಲೀಸರ ಸಮಯ ಪ್ರಜ್ಞೆಯಿಂದ ಅಪಾಯವೊಂದು ಸ್ವಲ್ಪದರಲ್ಲೇ ತಪ್ಪಿದೆ. ರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಪರೇಡ್ ವೀಕ್ಷಣೆಗೆ ತೆರಳಲು ಸಚಿವರು ಸಿದ್ಧರಾಗಿದ್ದಾಗ ಈ ಘಟನೆ ನಡೆದಿದೆ. ವಿಡಿಯೋ ಇಲ್ಲಿದೆ.

ಕರ್ನಾಟಕ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ ಮೋದಿ

Karnataka Kannada Rajyotsava: ಕರ್ನಾಟಕದಾದ್ಯಂತ ಇಂದು 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡದಲ್ಲಿಯೇ ಕರ್ನಾಟಕದ ಜನತೆಗೆ ಶುಭ ಹಾರೈಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವದಂದು ಹಳದಿ ಮಾರ್ಗ ಮೆಟ್ರೋ ಪ್ರಯಾಣಿಕರಿಗೆ ಶುಭಸುದ್ದಿ; ಹಳಿಗಿಳಿಯಿತು ಐದನೇ ಮೆಟ್ರೋ

Namma Metro Yellow Line: ನಮ್ಮ ಮೆಟ್ರೋದ ಯೆಲ್ಲೋ ಲೈನ್‌ನಲ್ಲಿ ಐದನೇ ಮೆಟ್ರೋ ರೈಲು ಸಂಚಾರಕ್ಕೆ ಸಿದ್ಧವಾಗಿದೆ. 70ನೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಇದು ಶುಭ ಸುದ್ದಿಯಾಗಿದೆ. ಈವರೆಗೆ ಯೆಲ್ಲೋ ಲೈನ್‌ನಲ್ಲಿ ನಾಲ್ಕು ರೈಲುಗಳು ಸೇವೆ ಸಲ್ಲಿಸುತ್ತಿದ್ದವು. ಇದು ಬೆಂಗಳೂರಿನ ಮೆಟ್ರೋ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸಲಿದೆ.