AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

kantara

kantara

‘ಕಾಂತಾರ’ ಸಿನಿಮಾ ರಿಷಬ್ ಶೆಟ್ಟಿ ನಿರ್ದೇಶಿಸಿದ ಚಿತ್ರ. ಇದರ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಇದೆ. ದೊಡ್ಡ ಬಜೆಟ್​ನಲ್ಲಿ ಸಿದ್ಧ ಆಗುತ್ತಿರುವ ಈ ಸಿನಿಮಾ 2025ರಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ. ಮೊದಲ ಭಾಗದಲ್ಲಿ ದೈವದ ಕಥೆ ಹೇಳಲಾಗಿತ್ತು. ಈಗ ‘ಕಾಂತಾರ: ಚಾಪ್ಟರ್ 1’ ಚಿತ್ರದ ಕಥೆಯು ಕದಂಬರ ಕಾಲದಲ್ಲಿ ಸಾಗುತ್ತದೆ. ಇದರಲ್ಲೂ ದೈವದ ವಿಚಾರವೇ ಹೈಲೈಟ್ ಆಗಲಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಪೋಸ್ಟರ್​ಗಳು ಗಮನ ಸೆಳೆದಿವೆ. ಈ ಚಿತ್ರವು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುವ ನಿರೀಕ್ಷೆ ಇದೆ. ಈ ಚಿತ್ರದ ಶೂಟಿಂಗ್ ಕುಂದಾಪುರದಲ್ಲಿ ನಡೆಯುತ್ತಿದೆ. ರಿಷಬ್ ಜೊತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.

ಇನ್ನೂ ಹೆಚ್ಚು ಓದಿ

ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಕಾಂತಾರ ಚಾಪ್ಟರ್ 1 ಶೂಟಿಂಗ್ ವೇಳೆ ಆಗಿದ್ದೇನು?

ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಆರಂಭದಿಂದಲೂ ನೂರೆಂಟು ವಿಘ್ನಗಳು ಶುರುವಾಗಿವೆ. ಈಗಾಗಲೇ ಚಿತ್ರತಂಡದಲ್ಲಿ ಶೂಟಿಂಗ್ ಸಮಯದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶೂಟಿಂಗ್ ಸಮಯದಲ್ಲಿ ಮೂರನೇ ವ್ಯಕ್ತಿಯು ತೀರ್ಥಹಳ್ಳಿಯ ಶೂಟಿಂಗ್ ಸಮಯದಲ್ಲಿ ಮೃತಪಟ್ಟಿದ್ದ. ಇದರ ಬೆನ್ನಲ್ಲೇ ಈಗ ಚಿತ್ರದ ತಂಡದ ಶೂಟಿಂಗ್ ವೇಳೆ ದೋಣಿ ಮುಗುಚಿದೆ. ರಿಷಬ್ ಶೆಟ್ಟಿಗೆ ದೈವ ಎಚ್ಚರಿಕೆ ಸಹ ಕೊಟ್ಟಿತ್ತು. ಈ ಕುರಿತು ಒಂದು ವರದಿ ಇಲ್ಲಿದೆ.

’ಕಾಂತಾರ ಚಾಪ್ಟರ್ 1’ ಸೆಟ್​​ನಲ್ಲಿ ಮತ್ತೊಂದು ಭಾರಿ ಅವಘಡ

Kantara Chapter 1: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಈ ಸಿನಿಮಾದ ಚಿತ್ರೀಕರಣದ ವೇಳೆ ಒಂದರ ಹಿಂದೊಂದರಂತೆ ಅವಘಡಗಳು ಸಂಭವಿಸುತ್ತಲೇ ಇವೆ. ಸಿನಿಮಾನಲ್ಲಿ ನಟಿಸಿದ್ದ ಮೂವರು ಈಗಾಗಲೇ ಪ್ರಾಣ ಬಿಟ್ಟಿದ್ದಾರೆ. ಇದೀಗ ಮತ್ತೊಂದು ದೊಡ್ಡ ಅವಘಡ ನಡೆದಿದೆ.

ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಬದುಕಲಿಲ್ಲ: ಕಾಂತಾರ ನಟನ ಸಾವಿಗೂ ಮುನ್ನ ಏನಾಯ್ತು?

‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ನಟಿಸಲು ಬಂದಿದ್ದ ಕೇರಳ ಮೂಲದ ಕಲಾವಿದ ವಿಜು ವಿ.ಕೆ. ನಿಧನರಾಗಿದ್ದಾರೆ. ಅವರು ಸಾಯುವುದಕ್ಕೂ ಮುನ್ನ ಏನೆಲ್ಲ ಆಯ್ತು ಎಂಬ ಮಾಹಿತಿ ಸಿಕ್ಕಿದೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ತಂಡಕ್ಕೆ ಸಹ-ಕಲಾವಿದರನ್ನು ಪೂರೈಕೆ ಮಾಡಿದ ಹಬೀಬ್ ಅವರು ಈ ಬಗ್ಗೆ ಮಾತನಾಡಿದ್ದಾರೆ.

ರಿಷಬ್ ಶೆಟ್ಟಿ ‘ಕಾಂತಾರ’ ಚಿತ್ರಕ್ಕೆ ಸಾಲು ಸಾಲು ಹಿನ್ನಡೆ; ದೈವದ ಎಚ್ಚರಿಕೆ ನಿಜವಾಯ್ತಾ?

Rishab Shetty: ರಿಷಬ್ ಶೆಟ್ಟಿ ಅವರ ‘ಕಾಂತಾರ’ ಚಿತ್ರದ ಶೂಟಿಂಗ್ ಸಮಯದಲ್ಲಿ ಹಲವಾರು ಅಪಘಾತಗಳು ಮತ್ತು ಮರಣಗಳು ಸಂಭವಿಸಿವೆ. ಚಿತ್ರೀಕರಣದ ಸಮಯದಲ್ಲಿ ಬಸ್ ಅಪಘಾತ, ಕಲಾವಿದರ ಸಾವು ಮತ್ತು ಇತರ ಅನಾಹುತಗಳು ಸಂಭವಿಸಿವೆ. ಇದರಿಂದಾಗಿ ಚಿತ್ರತಂಡದ ಮೇಲೆ ದೈವದ ಎಚ್ಚರಿಕೆಯ ನಂಬಿಕೆ ಹೆಚ್ಚಾಗಿದೆ.

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ನಿಧನ; ಹೃದಯಘಾತದಿಂದ ಕೊನೆಯುಸಿರು

Kantara: Chapter 1 Junior Artist Death: ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ‘ಕಾಂತಾರ: ಚಾಪ್ಟರ್ 1’ ಚಿತ್ರದ ಜೂನಿಯರ್ ಆರ್ಟಿಸ್ಟ್ ಒಬ್ಬರು ಮೃತಪಟ್ಟಿದ್ದಾರೆ. ಮೃತನನ್ನು ವಿಜು ವಿಕೆ ಎಂದು ಗುರುತಿಸಲಾಗಿದೆ. ಇದಕ್ಕೂ ಮೊದಲು ಇಬ್ಬರು ಕಲಾವಿದರು ನಿಧನರಾಗಿದ್ದರು. ಈ ದುರ್ಘಟನೆ ಚಿತ್ರರಂಗಕ್ಕೆ ಆಘಾತ ತಂದಿದೆ.

21 ದಿನಗಳ ಬಳಿಕ ರಾಕೇಶ್ ಪೂಜಾರಿ ಮನೆಗೆ ಕೊನೆಗೂ ರಿಷಬ್ ಶೆಟ್ಟಿ ಭೇಟಿ

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ನಟ ರಾಕೇಶ್ ಪೂಜಾರಿ ಅವರು ಅಭಿನಯಿಸುತ್ತಿದ್ದರು. ಆದರೆ ಹೃದಯಾಘಾತದಿಂದ ನಿಧನರಾದ ರಾಕೇಶ್ ಅವರ ಅಂತಿಮ ದರ್ಶನಕ್ಕೆ ರಿಷಬ್ ಶೆಟ್ಟಿ ಬಂದಿರಲಿಲ್ಲ. 21 ದಿನಗಳು ಕಳೆದ ನಂತರ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಅವರು ರಾಕೇಶ್ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಹಲವು ಅಡ್ಡಿ-ಆತಂಕ; ಆದರೂ ಅಂದುಕೊಂಡ ದಿನಾಂಕದಲ್ಲೇ ಚಿತ್ರ ರಿಲೀಸ್

Rishab Shety: 'ಕಾಂತಾರ: ಚಾಪ್ಟರ್ 1' ಸಿನಿಮಾದ ಚಿತ್ರೀಕರಣದಲ್ಲಿ ಅನೇಕ ಅಡಚಣೆಗಳು ಎದುರಾಗಿದೆ. ಆದರೂ ಸಿನಿಮಾ ಅಕ್ಟೋಬರ್ 2 ರಂದು ಬಿಡುಗಡೆಯಾಗಲಿದೆ. ಬಸ್ ಅಪಘಾತ, ರಿಷಬ್ ಶೆಟ್ಟಿ ಅವರಿಗೆ ದೈವದ ಎಚ್ಚರಿಕೆ, ಕಲಾವಿದರ ನಿಧನದಂತಹ ದುರ್ಘಟನೆಗಳ ನಡುವೆಯೂ ಚಿತ್ರತಂಡ ಚಿತ್ರದ ಕೆಲಸವನ್ನು ಪೂರ್ಣಗೊಳಿಸಿದೆ.

Rakesh Poojary Death: ‘ಕಾಂತಾರ: ಚಾಪ್ಟರ್ 1’ ಶೂಟ್ ಮುಗಿಸಿ ಬಂದಿದ್ದ ರಾಕೇಶ್ ಪೂಜಾರಿ; ರಾತ್ರೋರಾತ್ರಿ ಹೃದಯಾಘಾತ

Kantara: Chapter 1: ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಆಪ್ತ ಗೆಳೆಯ ಗೋವಿಂದೇ ಗೌಡ (ಜಿಜಿ) ಅವರು ರಾಕೇಶ್ ಅವರ ಕೊನೆಯ ಕ್ಷಣಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಂತಾರ ಚಿತ್ರೀಕರಣದ ನಂತರ ಗೆಳೆಯನ ಮದುವೆಯಲ್ಲಿ ಭಾಗವಹಿಸಿದ್ದ ರಾಕೇಶ್, ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಜಿಜಿ ತಿಳಿಸಿದ್ದಾರೆ.

ಸಾವು ಸಂಭವಿಸಿದ್ದು ಕಾಂತಾರ ಚಿತ್ರೀಕರಣದ ವೇಳೆ ಅಲ್ಲ: ಹೊಂಬಾಳೆ ಫಿಲ್ಮ್ಸ್​ ಸ್ಪಷ್ಟನೆ

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಜೂನಿಯರ್ ಆರ್ಟಿಸ್ಟ್ ನಿಧನಕ್ಕೆ ಸಂಬಂಧಿಸಿದಂತೆ ನಿರ್ಮಾಪಕರು ಸ್ಪಷ್ಟನೆ ನೀಡಿದ್ದಾರೆ. ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ ಕಡೆಯಿಂದ ಪತ್ರದ ಮೂಲಕ ಸ್ಪಷ್ಟನೆ ನೀಡಲಾಗಿದೆ. ಕಪಿಲ್ ಅವರ ನಿಧನಕ್ಕೂ ಚಿತ್ರತಂಡಕ್ಕೂ ಸಂಬಂಧ ಕಲ್ಪಿಸಬಾರದು ಎಂದು ನಿರ್ಮಾಪಕರು ಹೇಳಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕಲಾವಿದ ನಿಧನ; ರಿಷಬ್ ಶೆಟ್ಟಿ ಚಿತ್ರಕ್ಕೆ ಸಂಕಷ್ಟ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ: ಚಾಪ್ಟರ್ 1’ ಚಿತ್ರದ ಶೂಟಿಂಗ್ ವೇಳೆ ಅವಘಡ ನಡೆದಿದೆ. ಸಿನಿಮಾ ಸೆಟ್​ನಲ್ಲಿದ್ದ ಜೂನಿಯರ್ ಆರ್ಟಿಸ್ಟ್​ ಕಪಿಲ್ ಎಂಬುವವರು ನಿಧನರಾಗಿದ್ದಾರೆ. ನೀರಿನಲ್ಲಿ ಮುಳುಗಿ ಅವರು ಸಾವನ್ನಪ್ಪಿದ್ದಾರೆ. ಕೊಲ್ಲೂರಿನಲ್ಲಿ ಈ ಘಟನೆ ನಡೆದಿದ್ದು, ಚಿತ್ರತಂಡಕ್ಕೆ ವಿಘ್ನ ಎದುರಾಗಿದೆ.