AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

kantara

kantara

‘ಕಾಂತಾರ’ ಸಿನಿಮಾ ರಿಷಬ್ ಶೆಟ್ಟಿ ನಿರ್ದೇಶಿಸಿದ ಚಿತ್ರ. ಇದರ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಇದೆ. ದೊಡ್ಡ ಬಜೆಟ್​ನಲ್ಲಿ ಸಿದ್ಧ ಆಗುತ್ತಿರುವ ಈ ಸಿನಿಮಾ 2025ರಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ. ಮೊದಲ ಭಾಗದಲ್ಲಿ ದೈವದ ಕಥೆ ಹೇಳಲಾಗಿತ್ತು. ಈಗ ‘ಕಾಂತಾರ: ಚಾಪ್ಟರ್ 1’ ಚಿತ್ರದ ಕಥೆಯು ಕದಂಬರ ಕಾಲದಲ್ಲಿ ಸಾಗುತ್ತದೆ. ಇದರಲ್ಲೂ ದೈವದ ವಿಚಾರವೇ ಹೈಲೈಟ್ ಆಗಲಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಪೋಸ್ಟರ್​ಗಳು ಗಮನ ಸೆಳೆದಿವೆ. ಈ ಚಿತ್ರವು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುವ ನಿರೀಕ್ಷೆ ಇದೆ. ಈ ಚಿತ್ರದ ಶೂಟಿಂಗ್ ಕುಂದಾಪುರದಲ್ಲಿ ನಡೆಯುತ್ತಿದೆ. ರಿಷಬ್ ಜೊತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.

ಇನ್ನೂ ಹೆಚ್ಚು ಓದಿ

ಅಬ್ಬಬ್ಬಾ ‘ಕಾಂತಾರ: ಚಾಪ್ಟರ್ 1’ ಎಷ್ಟೊಂದು ಅದ್ದೂರಿ; 250 ದಿನಗಳ ಶೂಟಿಂಗ್ ಮುಗಿಸಿದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ‘ಕಾಂತಾರ: ಚಾಪ್ಟರ್ 1’ ಚಿತ್ರದ 250 ದಿನಗಳ ಚಿತ್ರೀಕರಣ ಪೂರ್ಣಗೊಂಡಿದೆ. ಹೊಂಬಾಳೆ ಫಿಲ್ಮ್ಸ್ ಈ ಸುದ್ದಿಯನ್ನು ಅಧಿಕೃತಗೊಳಿಸಿದೆ. ಅಕ್ಟೋಬರ್ 2ರಂದು ಚಿತ್ರ ಬಿಡುಗಡೆಯಾಗಲಿದೆ. ಚಿತ್ರದ ಮೇಕಿಂಗ್ ವಿಡಿಯೋ ಬಿಡುಗಡೆಯಾಗಿದ್ದು, ಅದರಲ್ಲಿ ಚಿತ್ರದ ಅದ್ಭುತತೆಯನ್ನು ತೋರಿಸಲಾಗಿದೆ.

‘ಕಾಂತಾರ: ಚಾಪ್ಟರ್ 1’ ಎದುರು ಸ್ಪರ್ಧೆಗೆ ಇಳಿದ ಬಾಲಿವುಡ್ ಸಿನಿಮಾಗಳು

ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೇಲೆ ಸಖತ್ ನಿರೀಕ್ಷೆ ಇದೆ. ಆದರೆ ಆ ಸಿನಿಮಾದ ಎದುರು ಬಾಲಿವುಡ್ ಸ್ಟಾರ್ ಹೀರೋಗಳ ಸಿನಿಮಾಗಳು ಪೈಪೋಟಿಗೆ ಇಳಿಯುತ್ತಿವೆ. ಒಂದೇ ದಿನ ಈ ಎಲ್ಲ ಚಿತ್ರಗಳು ಬಿಡುಗಡೆ ಆದರೆ ಬಾಕ್ಸ್ ಆಫೀಸ್​ನಲ್ಲಿ ಕ್ಲ್ಯಾಶ್ ಉಂಟಾಗಲಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಪೈಪೋಟಿ ನೀಡುತ್ತಾ ಅಕ್ಷಯ್ ಕುಮಾರ್ ಸಿನಿಮಾ?

ಅಕ್ಟೋಬರ್ 2ರಂದು ಬಹಳ ಅದ್ದೂರಿಯಾಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಲಿದೆ. ಅದೇ ದಿನ ‘ಜಾಲಿ ಎಲ್​ಎಲ್​ಬಿ 3’ ಸಿನಿಮಾ ಕೂಡ ಬಿಡುಗಡೆ ಆಗುವ ಸಾಧ್ಯತೆ ದಟ್ಟವಾಗಿದೆ. ಈ ಸಿನಿಮಾದಲ್ಲಿ ಅರ್ಷದ್ ವಾರ್ಸಿ, ಅಕ್ಷಯ್ ಕುಮಾರ್ ಮುಂತಾದವರು ನಟಿಸಿದ್ದಾರೆ. ಎರಡೂ ಸಿನಿಮಾಗಳ ಮೇಲೆ ನಿರೀಕ್ಷೆ ಜಾಸ್ತಿ ಇದೆ.

ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ; ಇಲ್ಲಿದೆ ಸೆಲೆಬ್ರೇಷನ್ ವಿಡಿಯೋ

ರಿಷಬ್ ಶೆಟ್ಟಿ ಅವರ ಹುಟ್ಟುಹಬ್ಬವನ್ನು ಅವರ ಫ್ಯಾನ್ಸ್ ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ರಿಷಬ್ ಶೆಟ್ಟಿ ಅವರು ಈಗ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಅಕ್ಟೋಬರ್ 2ರಂದು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಲಿದೆ.

ರಿಷಬ್ ಶೆಟ್ಟಿ ಜನ್ಮದಿನಕ್ಕೆ ‘ಕಾಂತಾರ: ಚಾಪ್ಟರ್ 1’ ಚಿತ್ರದ ಕಡೆಯಿಂದ ಬಿಗ್ ಅಪ್​ಡೇಟ್​

Rishab Shetty Birthday: ರಿಷಬ್ ಶೆಟ್ಟಿ ಅವರಿಗೆ ಇಂದು ಜನ್ಮದಿನ. ಇದರ ಪ್ರಯುಕ್ತ ‘ಕಾಂತಾರ: ಚಾಪ್ಟರ್ 1’ಹೊಸ ಪೋಸ್ಟರ್ ಬಿಡುಗಡೆ ಆಗಿದೆ. ಈ ಸಿನಿಮಾ ಅಕ್ಟೋಬರ್ 2 ರಂದು ಬಿಡುಗಡೆಯಾಗಲಿದೆ ಎಂದು ತಿಳಿಸಲಾಗಿದೆ. ಇದು ಅಭಿಮಾನಿಗಳಲ್ಲಿ ಭಾರಿ ಉತ್ಸಾಹ ಮೂಡಿಸಿದೆ. ಪೋಸ್ಟರ್‌ನಲ್ಲಿ ರಿಷಬ್ ಶೆಟ್ಟಿ ಆಕ್ರೋಶದಿಂದ ಕೂಡಿದ್ದಾರೆ.

ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಕಾಂತಾರ ಚಾಪ್ಟರ್ 1 ಶೂಟಿಂಗ್ ವೇಳೆ ಆಗಿದ್ದೇನು?

ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಆರಂಭದಿಂದಲೂ ನೂರೆಂಟು ವಿಘ್ನಗಳು ಶುರುವಾಗಿವೆ. ಈಗಾಗಲೇ ಚಿತ್ರತಂಡದಲ್ಲಿ ಶೂಟಿಂಗ್ ಸಮಯದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶೂಟಿಂಗ್ ಸಮಯದಲ್ಲಿ ಮೂರನೇ ವ್ಯಕ್ತಿಯು ತೀರ್ಥಹಳ್ಳಿಯ ಶೂಟಿಂಗ್ ಸಮಯದಲ್ಲಿ ಮೃತಪಟ್ಟಿದ್ದ. ಇದರ ಬೆನ್ನಲ್ಲೇ ಈಗ ಚಿತ್ರದ ತಂಡದ ಶೂಟಿಂಗ್ ವೇಳೆ ದೋಣಿ ಮುಗುಚಿದೆ. ರಿಷಬ್ ಶೆಟ್ಟಿಗೆ ದೈವ ಎಚ್ಚರಿಕೆ ಸಹ ಕೊಟ್ಟಿತ್ತು. ಈ ಕುರಿತು ಒಂದು ವರದಿ ಇಲ್ಲಿದೆ.

’ಕಾಂತಾರ ಚಾಪ್ಟರ್ 1’ ಸೆಟ್​​ನಲ್ಲಿ ಮತ್ತೊಂದು ಭಾರಿ ಅವಘಡ

Kantara Chapter 1: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಈ ಸಿನಿಮಾದ ಚಿತ್ರೀಕರಣದ ವೇಳೆ ಒಂದರ ಹಿಂದೊಂದರಂತೆ ಅವಘಡಗಳು ಸಂಭವಿಸುತ್ತಲೇ ಇವೆ. ಸಿನಿಮಾನಲ್ಲಿ ನಟಿಸಿದ್ದ ಮೂವರು ಈಗಾಗಲೇ ಪ್ರಾಣ ಬಿಟ್ಟಿದ್ದಾರೆ. ಇದೀಗ ಮತ್ತೊಂದು ದೊಡ್ಡ ಅವಘಡ ನಡೆದಿದೆ.

ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಬದುಕಲಿಲ್ಲ: ಕಾಂತಾರ ನಟನ ಸಾವಿಗೂ ಮುನ್ನ ಏನಾಯ್ತು?

‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ನಟಿಸಲು ಬಂದಿದ್ದ ಕೇರಳ ಮೂಲದ ಕಲಾವಿದ ವಿಜು ವಿ.ಕೆ. ನಿಧನರಾಗಿದ್ದಾರೆ. ಅವರು ಸಾಯುವುದಕ್ಕೂ ಮುನ್ನ ಏನೆಲ್ಲ ಆಯ್ತು ಎಂಬ ಮಾಹಿತಿ ಸಿಕ್ಕಿದೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ತಂಡಕ್ಕೆ ಸಹ-ಕಲಾವಿದರನ್ನು ಪೂರೈಕೆ ಮಾಡಿದ ಹಬೀಬ್ ಅವರು ಈ ಬಗ್ಗೆ ಮಾತನಾಡಿದ್ದಾರೆ.

ರಿಷಬ್ ಶೆಟ್ಟಿ ‘ಕಾಂತಾರ’ ಚಿತ್ರಕ್ಕೆ ಸಾಲು ಸಾಲು ಹಿನ್ನಡೆ; ದೈವದ ಎಚ್ಚರಿಕೆ ನಿಜವಾಯ್ತಾ?

Rishab Shetty: ರಿಷಬ್ ಶೆಟ್ಟಿ ಅವರ ‘ಕಾಂತಾರ’ ಚಿತ್ರದ ಶೂಟಿಂಗ್ ಸಮಯದಲ್ಲಿ ಹಲವಾರು ಅಪಘಾತಗಳು ಮತ್ತು ಮರಣಗಳು ಸಂಭವಿಸಿವೆ. ಚಿತ್ರೀಕರಣದ ಸಮಯದಲ್ಲಿ ಬಸ್ ಅಪಘಾತ, ಕಲಾವಿದರ ಸಾವು ಮತ್ತು ಇತರ ಅನಾಹುತಗಳು ಸಂಭವಿಸಿವೆ. ಇದರಿಂದಾಗಿ ಚಿತ್ರತಂಡದ ಮೇಲೆ ದೈವದ ಎಚ್ಚರಿಕೆಯ ನಂಬಿಕೆ ಹೆಚ್ಚಾಗಿದೆ.

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ನಿಧನ; ಹೃದಯಘಾತದಿಂದ ಕೊನೆಯುಸಿರು

Kantara: Chapter 1 Junior Artist Death: ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ‘ಕಾಂತಾರ: ಚಾಪ್ಟರ್ 1’ ಚಿತ್ರದ ಜೂನಿಯರ್ ಆರ್ಟಿಸ್ಟ್ ಒಬ್ಬರು ಮೃತಪಟ್ಟಿದ್ದಾರೆ. ಮೃತನನ್ನು ವಿಜು ವಿಕೆ ಎಂದು ಗುರುತಿಸಲಾಗಿದೆ. ಇದಕ್ಕೂ ಮೊದಲು ಇಬ್ಬರು ಕಲಾವಿದರು ನಿಧನರಾಗಿದ್ದರು. ಈ ದುರ್ಘಟನೆ ಚಿತ್ರರಂಗಕ್ಕೆ ಆಘಾತ ತಂದಿದೆ.

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು