kantara
‘ಕಾಂತಾರ’ ಸಿನಿಮಾ ರಿಷಬ್ ಶೆಟ್ಟಿ ನಿರ್ದೇಶಿಸಿದ ಚಿತ್ರ. ಇದರ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಇದೆ. ದೊಡ್ಡ ಬಜೆಟ್ನಲ್ಲಿ ಸಿದ್ಧ ಆಗುತ್ತಿರುವ ಈ ಸಿನಿಮಾ 2025ರಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ. ಮೊದಲ ಭಾಗದಲ್ಲಿ ದೈವದ ಕಥೆ ಹೇಳಲಾಗಿತ್ತು. ಈಗ ‘ಕಾಂತಾರ: ಚಾಪ್ಟರ್ 1’ ಚಿತ್ರದ ಕಥೆಯು ಕದಂಬರ ಕಾಲದಲ್ಲಿ ಸಾಗುತ್ತದೆ. ಇದರಲ್ಲೂ ದೈವದ ವಿಚಾರವೇ ಹೈಲೈಟ್ ಆಗಲಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಪೋಸ್ಟರ್ಗಳು ಗಮನ ಸೆಳೆದಿವೆ. ಈ ಚಿತ್ರವು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುವ ನಿರೀಕ್ಷೆ ಇದೆ. ಈ ಚಿತ್ರದ ಶೂಟಿಂಗ್ ಕುಂದಾಪುರದಲ್ಲಿ ನಡೆಯುತ್ತಿದೆ. ರಿಷಬ್ ಜೊತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.
20 ವರ್ಷದ ಹಿಂದೆಯೇ ದೈವಾರಾಧನೆ ವ್ಯಾಪಾರ ಆಗಿದೆ: ದೈವಾರಾಧಕ ತಮ್ಮಣ್ಣ ಶೆಟ್ಟಿ ಗರಂ
‘ಕಾಂತಾರ’ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಅವರು ದೈವಾರಾಧನೆ ಬಗ್ಗೆ ಜನರಿಗೆ ತೋರಿಸಿದರು. ಇತ್ತೀಚೆಗೆ ಅವರು ಹರಕೆ ಕೋಲದಲ್ಲಿ ಪಾಲ್ಗೊಂಡಿದ್ದರು. ಆ ಸಂದರ್ಭದ ವಿಡಿಯೋ ವೈರಲ್ ಆದ ಬಳಿಕ ಪರ-ವಿರೋಧದ ಚರ್ಚೆ ಆರಂಭ ಆಗಿದೆ. ದೈವಾರಾಧಕ ತಮ್ಮಣ್ಣ ಶೆಟ್ಟಿ ಅವರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ.
- Ashok
- Updated on: Dec 9, 2025
- 8:26 pm
‘ಕಾಂತಾರದಿಂದ ದೈವಗಳು ಬೀದಿಗೆ ಬಂದಿವೆ’: ದೈವಾರಾಧಕ ತಮ್ಮಣ್ಣ ಶೆಟ್ಟಿ ಅಸಮಾಧಾನ
ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು ಅವರು ಇತ್ತೀಚೆಗೆ ಪಾಲ್ಗೊಂಡ ಹರಕೆಯ ಕೋಲದ ಬಗ್ಗೆ ವಿವಾದ ಶುರುವಾಗಿದೆ. ಈ ಹರಕೆಯ ಕೋಲದ ಸಂದರ್ಭದಲ್ಲಿ ದೈವ ನರ್ತಕ ನಡೆದುಕೊಂಡ ರೀತಿಯನ್ನು ಅನೇಕರು ವಿರೋಧಿಸುತ್ತಿದ್ದಾರೆ. ಈ ಕುರಿತು ದೈವಾರಾಧಕ ತಮ್ಮಣ್ಣ ಶೆಟ್ಟಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಅನಿಸಿಕೆಯನ್ನು ಅವರು ತಿಳಿಸಿದ್ದಾರೆ.
- Ashok
- Updated on: Dec 9, 2025
- 7:18 pm
ಮತ್ತೆ ದೈವಾರಾಧಕರ ಕೋಪಕ್ಕೆ ಗುರಿಯಾದ ರಿಷಬ್; ನಿಯಮಗಳ ವಿರುದ್ಧ ಹೋದ ನಟ?
ನಟ ರಿಷಬ್ ಶೆಟ್ಟಿ ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲ ಮಾಡಿಸಿದ್ದರು. ಈ ವೇಳೆ ದೈವ ನರ್ತಕರ ವರ್ತನೆ ಕುರಿತು ಭಾರೀ ವಿವಾದ ಹುಟ್ಟಿಕೊಂಡಿದೆ. ರಿಷಬ್ ಕಾಲೆ ಮೇಲೆ ಮಲಗಿದ್ದು ದೈವ ನರ್ತಕರೇ ಹೊರತು ದೈವವಲ್ಲ ಎಂಬ ಮಾತು ಕೇಳಿಬಂದಿದೆ. ದೈವಾರಾಧನೆಯ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ದೈವಾರಾಧಕ ತಮ್ಮಣ್ಣ ಶೆಟ್ಟಿ ಸೇರಿದಂತೆ ಹಲವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Ashok
- Updated on: Dec 9, 2025
- 10:06 am
ಹರಕೆ ನೇಮೋತ್ಸವದಲ್ಲಿ ‘ಕಾಂತಾರ: ಚಾಪ್ಟರ್ 3’ ಸಿನಿಮಾಗೆ ಸಿಕ್ತು ದೈವದ ಗ್ರೀನ್ ಸಿಗ್ನಲ್
‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ವತಿಯಿಂದ ಹರಕೆ ನೇಮೋತ್ಸವ ಮಾಡಲಾಗಿದೆ. ಡಿಸೆಂಬರ್ 4ರಂದು ಮಧ್ಯರಾತ್ರಿವರೆಗೂ ವರಾಹ ಪಂಜುರ್ಲಿ-ಜಾರಂದಾಯ, ಬಂಟ ಕೋಲ ನಡೆಯಿತು. ಬಾಕಿ ಇರುವ ಹರಕೆ ತೀರಿಸಿದ ನಂತರ ‘ಕಾಂತಾರ: ಚಾಪ್ಟರ್ 3’ ಚಿತ್ರೀಕರಣ ಶುರು ಆಗುವ ಸಾಧ್ಯತೆ ಇದೆ.
- Pruthviraj
- Updated on: Dec 5, 2025
- 6:48 pm
‘ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ’; ರಿಷಬ್ಗೆ ಅಭಯ ನೀಡಿದ ದೈವ
ರಿಬಷ ಶೆಟ್ಟಿ ಅವರು ದೈವದ ಬಗ್ಗೆ ಅಪಾರ ಭಕ್ತಿ ಹೊಂದಿದವರು. ಅವರು ಈಗ ಪಂಜುರ್ಲಿಗೆ ಹರಕೆ ಕೋಲ ನೀಡಿ ಸಂತುಷ್ಟಗೊಂಡಿದ್ದಾರೆ. ಈ ವೇಳೆ ದೈವವು ನಿನ್ನ ಪರವಾಗಿ ಇರೋದಾಗಿ ಅಭಯ ನೀಡಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.
- Rajesh Duggumane
- Updated on: Dec 5, 2025
- 8:30 am
ಪಂಜುರ್ಲಿಗೆ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಹರಕೆ ತೀರಿಸಿದ ರಿಷಬ್ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಚಿತ್ರದ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಚಿತ್ರತಂಡದವರು ಹರಕೆ ತೀರಿಸಲು ಬಂದಿದ್ದಾರೆ. ವಾರಾಹಿ ಪಂಜುರ್ಲಿ ದೈವದ ನೇಮದಲ್ಲಿ ಚಿತ್ರತಂಡ ಭಾಗಿಯಾಗಿದೆ. ಪತ್ನಿ, ಮಕ್ಕಳ ಜತೆ ನೇಮೋತ್ಸವಕ್ಕೆ ರಿಷಬ್ ಶೆಟ್ಟಿ ಆಗಮಿಸಿದ್ದಾರೆ. ಕಳೆದ ಎಪ್ರಿಲ್ ತಿಂಗಳಲ್ಲಿ ಕೂಡ ಇದೇ ದೈವಸ್ಥಾನದ ನೇಮೋತ್ಸವದಲ್ಲಿ ರಿಷಬ್ ಶೆಟ್ಟಿ ಮತ್ತು ಕುಟುಂಬದವರು ಭಾಗಿ ಆಗಿದ್ದರು.
- Pruthviraj
- Updated on: Dec 4, 2025
- 9:53 pm
ದೈವ ಅವಮಾನಿಸಿದ ರಣವೀರ್ಗೆ ರಿಷಬ್ ಕೊಟ್ಟ ಉತ್ತರ ಹೇಗಿತ್ತು ನೋಡಿ
ಗೋವಾ ಸಿನಿಮೋತ್ಸವದಲ್ಲಿ ರಣವೀರ್ ಸಿಂಗ್ ದೈವವನ್ನು ಅಸಭ್ಯವಾಗಿ ಅನುಕರಿಸಿ ವಿವಾದ ಸೃಷ್ಟಿಸಿದರು. 'ಕಾಂತಾರ'ದ ಬಗ್ಗೆ ಹೊಗಳಿದರೂ, ದೈವವನ್ನು 'ದೆವ್ವ' ಎಂದಿದ್ದಲ್ಲದೆ ಅವಮಾನ ಮಾಡಿದರು. ಇದಕ್ಕೆ ರಿಷಬ್ ಶೆಟ್ಟಿ ವೇದಿಕೆಯಲ್ಲೇ ನೇರವಾಗಿ ಹೇಳದೆ, ಸಂಜ್ಞೆ ಮೂಲಕ ರಣವೀರ್ಗೆ ಸಭ್ಯ ಉತ್ತರ ನೀಡಿದ್ದು ಈಗ ವೈರಲ್ ಆಗಿದೆ.
- Rajesh Duggumane
- Updated on: Dec 1, 2025
- 12:38 pm
ದೈವ ಅವಮಾನಿಸಿದ ರಣವೀರ್ ಸಿಂಗ್ಗೆ ಕೌಂಟರ್ ಕೊಟ್ಟ ಅಮೇಜಾನ್ ಪ್ರೈಮ್ ವಿಡಿಯೋ
ನಟ ರಣವೀರ್ ಸಿಂಗ್ ಗೋವಾದಲ್ಲಿ ಕಾಂತಾರ ದೈವವನ್ನು 'ದೆವ್ವ' ಎಂದಿದ್ದು ವಿವಾದ ಸೃಷ್ಟಿಸಿದೆ. ರಿಷಬ್ ಶೆಟ್ಟಿಗೂ ಮುಜುಗರ ತಂದ ಈ ಘಟನೆ ಬಗ್ಗೆ ಚರ್ಚೆ ನಡೆಯುತ್ತಿದೆ. ಈಗ ಅಮೇಜಾನ್ ಪ್ರೈಮ್ ವಿಡಿಯೋ, ರಣವೀರ್ ಹೇಳಿದ್ದ ದೃಶ್ಯವನ್ನೇ ಹಂಚಿಕೊಂಡು ಕೌಂಟರ್ ನೀಡಿದೆ ಎಂದು ಹಲವರು ಭಾವಿಸಿದ್ದಾರೆ. ಕಾಂತಾರ 'ದೈವ'ದ ಬಗ್ಗೆ ರಣವೀರ್ ತಿಳುವಳಿಕೆ ಕೊರತೆಗೆ ಟೀಕೆ ವ್ಯಕ್ತವಾಗಿದೆ.
- Rajesh Duggumane
- Updated on: Dec 1, 2025
- 7:04 am
ಥಿಯೇಟರ್ನಲ್ಲಿ 50 ದಿನ ಪೂರೈಸಿದ ‘ಕಾಂತಾರ: ಚಾಪ್ಟರ್ 1’; ಸಿಕ್ಕಿರೋ ಶೋಗಳೆಷ್ಟು?
'ಕಾಂತಾರ: ಚಾಪ್ಟರ್ 1' ಸಿನಿಮಾ 50 ದಿನ ಪೂರೈಸಿದ್ದು, ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರ 900 ಕೋಟಿ ರೂ. ಗಳಿಸಿದೆ. ಒಟಿಟಿಗೆ ಬಂದರೂ ಬೆಂಗಳೂರಿನಲ್ಲಿ ಇಂದಿಗೂ 11 ಶೋಗಳೊಂದಿಗೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಪ್ರೀಕ್ವೆಲ್, ಥಿಯೇಟರ್ಗಳಲ್ಲಿ ತನ್ನ ಅಧಿಪತ್ಯವನ್ನು ಮುಂದುವರೆಸಿದೆ.
- Shreelaxmi H
- Updated on: Nov 21, 2025
- 8:08 am
ರುಕ್ಮಿಣಿ ವಸಂತ್ ಹೆಸರಲ್ಲಿ ಮೋಸ; ಎಚ್ಚರಿಸಿದ ‘ಕಾಂತಾರ’ದ ಕನಕವತಿ
'ಕಾಂತಾರ' ಖ್ಯಾತಿಯ ರುಕ್ಮಿಣಿ ವಸಂತ್ ಹೆಸರಲ್ಲಿ ಸೈಬರ್ ವಂಚನೆ ನಡೆಯುತ್ತಿದೆ. ಅಪರಿಚಿತ ವ್ಯಕ್ತಿಯೊಬ್ಬರು ಅವರ ಹೆಸರಿನಲ್ಲಿ ಜನರಿಗೆ ಕರೆ ಮಾಡಿ ಮೋಸ ಮಾಡುತ್ತಿದ್ದು, ರುಕ್ಮಿಣಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಆ ನಂಬರ್ ತನಗೆ ಸೇರಿದ್ದಲ್ಲ, ಯಾವುದೇ ಕರೆ ಅಥವಾ ಮೆಸೇಜ್ಗಳಿಗೆ ಸ್ಪಂದಿಸಬೇಡಿ, ಆನ್ಲೈನ್ನಲ್ಲಿ ಜಾಗರೂಕರಾಗಿರಿ ಎಂದು ಅವರು ಮನವಿ ಮಾಡಿದ್ದಾರೆ.
- Rajesh Duggumane
- Updated on: Nov 8, 2025
- 10:11 am
‘ಒಟಿಟಿ’ಗೆ ಬಂದ ‘ಕಾಂತಾರ: ಚಾಪ್ಟರ್ 1’; ಸಿನಿಮಾದ ಭಾಷಾವಾರು ಕಲೆಕ್ಷನ್ ವಿವರ ಇಲ್ಲಿದೆ
‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ಥಿಯೇಟರ್ನಲ್ಲಿ ಬಿಡುಗಡೆ ಕಂಡಿದೆ. ಈಗ ಚಿತ್ರ ಒಟಿಟಿಯಲ್ಲಿ ಪ್ರಸಾರ ಆರಂಭಿಸಿದೆ. ಕೇವಲ 30 ದಿನಕ್ಕೆ ಸಿನಿಮಾ ಒಟಿಟಿಗೆ ಬಂದಿದೆ ಅನ್ನೋದು ವಿಶೇಷ. ಇಂದಿನಿಂದ (ಅಕ್ಟೋಬರ್ 31) ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ವೀಕ್ಷಣೆಗೆ ಲಭ್ಯ ಇದೆ. ಈ ಸಿನಿಮಾದ ಒಟ್ಟಾರೆ ಕಲೆಕ್ಷನ್ ವಿವರ ಇಲ್ಲಿದೆ.
- Rajesh Duggumane
- Updated on: Oct 31, 2025
- 11:07 am
ಒಟಿಟಿ ಪ್ರಿಯರಿಗೆ ಹಬ್ಬ; ಒಂದೇ ದಿನ ಎರಡು ಸೂಪರ್ ಹಿಟ್ ಚಿತ್ರ, ಒಂದು ವೆಬ್ ಸೀರಿಸ್ ಒಟಿಟಿಗೆ
ಒಟಿಟಿ ಪ್ರಿಯರಿಗೆ ಈ ವಾರ ಹಬ್ಬ. ಅಕ್ಟೋಬರ್ 31 ರಂದು ಎರಡು ಸೂಪರ್ ಹಿಟ್ ಚಿತ್ರಗಳಾದ 'ಕಾಂತಾರ: ಚಾಪ್ಟರ್ 1' ಮತ್ತು 'ಲೋಕಃ: ಚಾಪ್ಟರ್ 1-ಚಂದ್ರ' ಒಟಿಟಿಗೆ ಲಗ್ಗೆ ಇಡುತ್ತಿವೆ. ಇದರ ಜೊತೆಗೆ, 'ಮಾರಿಗಲ್ಲು' ಎಂಬ ಹೊಸ ಕನ್ನಡ ವೆಬ್ ಸರಣಿಯೂ ಜೀ5 ಮೂಲಕ ಪ್ರಸಾರವಾಗಲಿದೆ. ಪ್ರೇಕ್ಷಕರು ಒಂದೇ ದಿನ ಹೊಸ ಸಿನಿಮಾಗಳು ಹಾಗೂ ಸರಣಿಗಳನ್ನು ಮನೆಯಲ್ಲೇ ಆನಂದಿಸಬಹುದು.
- Rajesh Duggumane
- Updated on: Oct 30, 2025
- 8:43 am