AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

kantara

kantara

‘ಕಾಂತಾರ’ ಸಿನಿಮಾ ರಿಷಬ್ ಶೆಟ್ಟಿ ನಿರ್ದೇಶಿಸಿದ ಚಿತ್ರ. ಇದರ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಇದೆ. ದೊಡ್ಡ ಬಜೆಟ್​ನಲ್ಲಿ ಸಿದ್ಧ ಆಗುತ್ತಿರುವ ಈ ಸಿನಿಮಾ 2025ರಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ. ಮೊದಲ ಭಾಗದಲ್ಲಿ ದೈವದ ಕಥೆ ಹೇಳಲಾಗಿತ್ತು. ಈಗ ‘ಕಾಂತಾರ: ಚಾಪ್ಟರ್ 1’ ಚಿತ್ರದ ಕಥೆಯು ಕದಂಬರ ಕಾಲದಲ್ಲಿ ಸಾಗುತ್ತದೆ. ಇದರಲ್ಲೂ ದೈವದ ವಿಚಾರವೇ ಹೈಲೈಟ್ ಆಗಲಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಪೋಸ್ಟರ್​ಗಳು ಗಮನ ಸೆಳೆದಿವೆ. ಈ ಚಿತ್ರವು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುವ ನಿರೀಕ್ಷೆ ಇದೆ. ಈ ಚಿತ್ರದ ಶೂಟಿಂಗ್ ಕುಂದಾಪುರದಲ್ಲಿ ನಡೆಯುತ್ತಿದೆ. ರಿಷಬ್ ಜೊತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.

ಇನ್ನೂ ಹೆಚ್ಚು ಓದಿ

‘ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ’; ರಿಷಬ್​ಗೆ ಅಭಯ ನೀಡಿದ ದೈವ

ರಿಬಷ ಶೆಟ್ಟಿ ಅವರು ದೈವದ ಬಗ್ಗೆ ಅಪಾರ ಭಕ್ತಿ ಹೊಂದಿದವರು. ಅವರು ಈಗ ಪಂಜುರ್ಲಿಗೆ ಹರಕೆ ಕೋಲ ನೀಡಿ ಸಂತುಷ್ಟಗೊಂಡಿದ್ದಾರೆ. ಈ ವೇಳೆ ದೈವವು ನಿನ್ನ ಪರವಾಗಿ ಇರೋದಾಗಿ ಅಭಯ ನೀಡಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.

ಪಂಜುರ್ಲಿಗೆ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಹರಕೆ ತೀರಿಸಿದ ರಿಷಬ್ ಶೆಟ್ಟಿ

‘ಕಾಂತಾರ: ಚಾಪ್ಟರ್ 1’ ಚಿತ್ರದ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಚಿತ್ರತಂಡದವರು ಹರಕೆ ತೀರಿಸಲು ಬಂದಿದ್ದಾರೆ. ವಾರಾಹಿ ಪಂಜುರ್ಲಿ ದೈವದ ನೇಮದಲ್ಲಿ ಚಿತ್ರತಂಡ ಭಾಗಿಯಾಗಿದೆ. ಪತ್ನಿ, ಮಕ್ಕಳ ಜತೆ ನೇಮೋತ್ಸವಕ್ಕೆ ರಿಷಬ್ ಶೆಟ್ಟಿ ಆಗಮಿಸಿದ್ದಾರೆ. ಕಳೆದ ಎಪ್ರಿಲ್ ತಿಂಗಳಲ್ಲಿ ಕೂಡ ಇದೇ ದೈವಸ್ಥಾನದ ನೇಮೋತ್ಸವದಲ್ಲಿ ರಿಷಬ್ ಶೆಟ್ಟಿ ಮತ್ತು ಕುಟುಂಬದವರು ಭಾಗಿ ಆಗಿದ್ದರು.

ದೈವ ಅವಮಾನಿಸಿದ ರಣವೀರ್​ಗೆ ರಿಷಬ್ ಕೊಟ್ಟ ಉತ್ತರ ಹೇಗಿತ್ತು ನೋಡಿ

ಗೋವಾ ಸಿನಿಮೋತ್ಸವದಲ್ಲಿ ರಣವೀರ್ ಸಿಂಗ್ ದೈವವನ್ನು ಅಸಭ್ಯವಾಗಿ ಅನುಕರಿಸಿ ವಿವಾದ ಸೃಷ್ಟಿಸಿದರು. 'ಕಾಂತಾರ'ದ ಬಗ್ಗೆ ಹೊಗಳಿದರೂ, ದೈವವನ್ನು 'ದೆವ್ವ' ಎಂದಿದ್ದಲ್ಲದೆ ಅವಮಾನ ಮಾಡಿದರು. ಇದಕ್ಕೆ ರಿಷಬ್ ಶೆಟ್ಟಿ ವೇದಿಕೆಯಲ್ಲೇ ನೇರವಾಗಿ ಹೇಳದೆ, ಸಂಜ್ಞೆ ಮೂಲಕ ರಣವೀರ್‌ಗೆ ಸಭ್ಯ ಉತ್ತರ ನೀಡಿದ್ದು ಈಗ ವೈರಲ್ ಆಗಿದೆ.

ದೈವ ಅವಮಾನಿಸಿದ ರಣವೀರ್ ಸಿಂಗ್​ಗೆ ಕೌಂಟರ್ ಕೊಟ್ಟ ಅಮೇಜಾನ್ ಪ್ರೈಮ್ ವಿಡಿಯೋ

ನಟ ರಣವೀರ್ ಸಿಂಗ್ ಗೋವಾದಲ್ಲಿ ಕಾಂತಾರ ದೈವವನ್ನು 'ದೆವ್ವ' ಎಂದಿದ್ದು ವಿವಾದ ಸೃಷ್ಟಿಸಿದೆ. ರಿಷಬ್ ಶೆಟ್ಟಿಗೂ ಮುಜುಗರ ತಂದ ಈ ಘಟನೆ ಬಗ್ಗೆ ಚರ್ಚೆ ನಡೆಯುತ್ತಿದೆ. ಈಗ ಅಮೇಜಾನ್ ಪ್ರೈಮ್ ವಿಡಿಯೋ, ರಣವೀರ್ ಹೇಳಿದ್ದ ದೃಶ್ಯವನ್ನೇ ಹಂಚಿಕೊಂಡು ಕೌಂಟರ್ ನೀಡಿದೆ ಎಂದು ಹಲವರು ಭಾವಿಸಿದ್ದಾರೆ. ಕಾಂತಾರ 'ದೈವ'ದ ಬಗ್ಗೆ ರಣವೀರ್ ತಿಳುವಳಿಕೆ ಕೊರತೆಗೆ ಟೀಕೆ ವ್ಯಕ್ತವಾಗಿದೆ.

ಥಿಯೇಟರ್​ನಲ್ಲಿ 50 ದಿನ ಪೂರೈಸಿದ ‘ಕಾಂತಾರ: ಚಾಪ್ಟರ್ 1’; ಸಿಕ್ಕಿರೋ ಶೋಗಳೆಷ್ಟು?

'ಕಾಂತಾರ: ಚಾಪ್ಟರ್ 1' ಸಿನಿಮಾ 50 ದಿನ ಪೂರೈಸಿದ್ದು, ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರ 900 ಕೋಟಿ ರೂ. ಗಳಿಸಿದೆ. ಒಟಿಟಿಗೆ ಬಂದರೂ ಬೆಂಗಳೂರಿನಲ್ಲಿ ಇಂದಿಗೂ 11 ಶೋಗಳೊಂದಿಗೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಪ್ರೀಕ್ವೆಲ್, ಥಿಯೇಟರ್‌ಗಳಲ್ಲಿ ತನ್ನ ಅಧಿಪತ್ಯವನ್ನು ಮುಂದುವರೆಸಿದೆ.

ರುಕ್ಮಿಣಿ ವಸಂತ್​ ಹೆಸರಲ್ಲಿ ಮೋಸ; ಎಚ್ಚರಿಸಿದ ‘ಕಾಂತಾರ’ದ ಕನಕವತಿ

'ಕಾಂತಾರ' ಖ್ಯಾತಿಯ ರುಕ್ಮಿಣಿ ವಸಂತ್ ಹೆಸರಲ್ಲಿ ಸೈಬರ್ ವಂಚನೆ ನಡೆಯುತ್ತಿದೆ. ಅಪರಿಚಿತ ವ್ಯಕ್ತಿಯೊಬ್ಬರು ಅವರ ಹೆಸರಿನಲ್ಲಿ ಜನರಿಗೆ ಕರೆ ಮಾಡಿ ಮೋಸ ಮಾಡುತ್ತಿದ್ದು, ರುಕ್ಮಿಣಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಆ ನಂಬರ್ ತನಗೆ ಸೇರಿದ್ದಲ್ಲ, ಯಾವುದೇ ಕರೆ ಅಥವಾ ಮೆಸೇಜ್‌ಗಳಿಗೆ ಸ್ಪಂದಿಸಬೇಡಿ, ಆನ್‌ಲೈನ್‌ನಲ್ಲಿ ಜಾಗರೂಕರಾಗಿರಿ ಎಂದು ಅವರು ಮನವಿ ಮಾಡಿದ್ದಾರೆ.

‘ಒಟಿಟಿ’ಗೆ ಬಂದ ‘ಕಾಂತಾರ: ಚಾಪ್ಟರ್ 1’; ಸಿನಿಮಾದ ಭಾಷಾವಾರು ಕಲೆಕ್ಷನ್ ವಿವರ ಇಲ್ಲಿದೆ

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ಥಿಯೇಟರ್​ನಲ್ಲಿ ಬಿಡುಗಡೆ ಕಂಡಿದೆ. ಈಗ ಚಿತ್ರ ಒಟಿಟಿಯಲ್ಲಿ ಪ್ರಸಾರ ಆರಂಭಿಸಿದೆ. ಕೇವಲ 30 ದಿನಕ್ಕೆ ಸಿನಿಮಾ ಒಟಿಟಿಗೆ ಬಂದಿದೆ ಅನ್ನೋದು ವಿಶೇಷ. ಇಂದಿನಿಂದ (ಅಕ್ಟೋಬರ್ 31) ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ವೀಕ್ಷಣೆಗೆ ಲಭ್ಯ ಇದೆ. ಈ ಸಿನಿಮಾದ ಒಟ್ಟಾರೆ ಕಲೆಕ್ಷನ್ ವಿವರ ಇಲ್ಲಿದೆ.

ಒಟಿಟಿ ಪ್ರಿಯರಿಗೆ ಹಬ್ಬ; ಒಂದೇ ದಿನ ಎರಡು ಸೂಪರ್ ಹಿಟ್ ಚಿತ್ರ, ಒಂದು ವೆಬ್ ಸೀರಿಸ್ ಒಟಿಟಿಗೆ

ಒಟಿಟಿ ಪ್ರಿಯರಿಗೆ ಈ ವಾರ ಹಬ್ಬ. ಅಕ್ಟೋಬರ್ 31 ರಂದು ಎರಡು ಸೂಪರ್ ಹಿಟ್ ಚಿತ್ರಗಳಾದ 'ಕಾಂತಾರ: ಚಾಪ್ಟರ್ 1' ಮತ್ತು 'ಲೋಕಃ: ಚಾಪ್ಟರ್ 1-ಚಂದ್ರ' ಒಟಿಟಿಗೆ ಲಗ್ಗೆ ಇಡುತ್ತಿವೆ. ಇದರ ಜೊತೆಗೆ, 'ಮಾರಿಗಲ್ಲು' ಎಂಬ ಹೊಸ ಕನ್ನಡ ವೆಬ್ ಸರಣಿಯೂ ಜೀ5 ಮೂಲಕ ಪ್ರಸಾರವಾಗಲಿದೆ. ಪ್ರೇಕ್ಷಕರು ಒಂದೇ ದಿನ ಹೊಸ ಸಿನಿಮಾಗಳು ಹಾಗೂ ಸರಣಿಗಳನ್ನು ಮನೆಯಲ್ಲೇ ಆನಂದಿಸಬಹುದು.

ಒಟಿಟಿ ರಿಲೀಸ್ ದಿನಾಂಕ ಘೋಷಿಸಿದ ಬಳಿಕವೂ ಕೋಟಿ ಕೋಟಿ ಬಾಚಿದ ‘ಕಾಂತಾರ: ಚಾಪ್ಟರ್ 1’

'ಕಾಂತಾರ: ಚಾಪ್ಟರ್ 1' ಸಿನಿಮಾ ಒಟಿಟಿ ರಿಲೀಸ್ ದಿನಾಂಕ ಘೋಷಣೆಯಾದ ನಂತರವೂ ಅಸಾಧಾರಣ ಬಾಕ್ಸ್ ಆಫೀಸ್ ಗಳಿಕೆ ಕಂಡಿದೆ. ಅಕ್ಟೋಬರ್ 31ಕ್ಕೆ ಅಮೇಜಾನ್ ಪ್ರೈಮ್‌ಗೆ ಬರುತ್ತಿದ್ದರೂ, ಚಿತ್ರವು ಕೋಟಿಗಟ್ಟಲೆ ಹಣವನ್ನು ಗಳಿಸುತ್ತಲೇ ಇದೆ. ಸಾಮಾನ್ಯವಾಗಿ ಒಟಿಟಿ ಸುದ್ದಿ ಕಲೆಕ್ಷನ್ ಕಡಿಮೆ ಮಾಡುತ್ತದೆ, ಆದರೆ ಈ ಸಿನಿಮಾ ಇದಕ್ಕೆ ಹೊರತಾಗಿದೆ.

ಕೆಎಲ್​ ರಾಹುಲ್​​ಗಾಗಿ ‘ಕಾಂತಾರ 1’ ವಿಶೇಷ ಶೋ ಆಯೋಜಿಸಿದ್ದ ರಿಷಬ್, 2 ಬಾರಿ ಸಿನಿಮಾ ವೀಕ್ಷಿಸಿದ ಕ್ರಿಕೆಟಿಗ

Kantara Chapter 1: ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ಸೆಲೆಬ್ರಿಟಿಗಳು ನೋಡಿ ಮೆಚ್ಚಿಕೊಂಡಿದ್ದಾರೆ. ಅಲ್ಲು ಅರ್ಜುನ್, ಸಂದೀಪ್ ರೆಡ್ಡಿ ವಂಗಾ, ಯಶ್ ಇನ್ನೂ ಹಲವರು ಸಿನಿಮಾ ನೋಡಿ ಕೊಂಡಾಡಿದ್ದಾರೆ. ಸಿನಿಮಾ ಮಂದಿ ಮಾತ್ರವಲ್ಲ ಕ್ರಿಕೆಟಿಗರು ಸಹ ಮುಗಿಬಿದ್ದು ‘ಕಾಂತಾರ: ಚಾಪ್ಟರ್ 1’ ಸಿನಿಮಾ ನೋಡಿದ್ದಾರೆ. ರಿಷಬ್ ಅವರೇ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಅವರ ಕುಟುಂಬಕ್ಕೆ ವಿಶೇಷ ಶೋ ಆಯೋಜಿಸಿದ್ದರಂತೆ. ಈ ಬಗ್ಗೆ ಸ್ವತಃ ಕೆಎಲ್ ರಾಹುಲ್ ಮಾತನಾಡಿದ್ದಾರೆ.