AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

kantara

kantara

‘ಕಾಂತಾರ’ ಸಿನಿಮಾ ರಿಷಬ್ ಶೆಟ್ಟಿ ನಿರ್ದೇಶಿಸಿದ ಚಿತ್ರ. ಇದರ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಇದೆ. ದೊಡ್ಡ ಬಜೆಟ್​ನಲ್ಲಿ ಸಿದ್ಧ ಆಗುತ್ತಿರುವ ಈ ಸಿನಿಮಾ 2025ರಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ. ಮೊದಲ ಭಾಗದಲ್ಲಿ ದೈವದ ಕಥೆ ಹೇಳಲಾಗಿತ್ತು. ಈಗ ‘ಕಾಂತಾರ: ಚಾಪ್ಟರ್ 1’ ಚಿತ್ರದ ಕಥೆಯು ಕದಂಬರ ಕಾಲದಲ್ಲಿ ಸಾಗುತ್ತದೆ. ಇದರಲ್ಲೂ ದೈವದ ವಿಚಾರವೇ ಹೈಲೈಟ್ ಆಗಲಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಪೋಸ್ಟರ್​ಗಳು ಗಮನ ಸೆಳೆದಿವೆ. ಈ ಚಿತ್ರವು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುವ ನಿರೀಕ್ಷೆ ಇದೆ. ಈ ಚಿತ್ರದ ಶೂಟಿಂಗ್ ಕುಂದಾಪುರದಲ್ಲಿ ನಡೆಯುತ್ತಿದೆ. ರಿಷಬ್ ಜೊತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.

ಇನ್ನೂ ಹೆಚ್ಚು ಓದಿ

ಬ್ರಹ್ಮಕಲಶ: 1 ಮಿಲಿಯನ್ ಇನ್‌ಸ್ಟಾಗ್ರಾಮ್ ರೀಲ್ಸ್ ಮೈಲಿಗಲ್ಲು ತಲುಪಿದ ಮೊದಲ ಕನ್ನಡ ಹಾಡು

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಹಾಡುಗಳು ಮಾಡಿದ ದಾಖಲೆ ಸಣ್ಣದಲ್ಲ. ಅಜನೀಶ್ ಲೋಕನಾಥ್ ಸಂಗೀತದಲ್ಲಿ ಮೂಡಿಬಂದ ಹಾಡುಗಳು ಈಗಲೂ ಸದ್ದು ಮಾಡುತ್ತಿವೆ. ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲಿ ಈಗಲೂ ‘ಬ್ರಹ್ಮಕಲಶ’ ಹಾಡು ಟ್ರೆಂಡಿಂಗ್​ನಲ್ಲಿದೆ. 10 ಲಕ್ಷಕ್ಕೂ ಅಧಿಕ ರೀಲ್ಸ್ ಮೂಲಕ ಈ ಹಾಡು ದಾಖಲೆ ಬರೆದಿದೆ.

ಬಿಗ್ ಅಪ್​ಡೇಟ್​; ‘ಕಾಂತಾರ: ಚಾಪ್ಟರ್ 2’ ಸ್ಕ್ರಿಪ್ಟ್ ಆರಂಭಿಸಿದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ 'ಕಾಂತಾರ ಚಾಪ್ಟರ್ 2' ಸ್ಕ್ರಿಪ್ಟ್ ಕೆಲಸ ಆರಂಭಿಸಿರುವುದಾಗಿ ಘೋಷಿಸಿದ್ದಾರೆ. ಫ್ರಾಂಚೈಸಿಯ ಮೂರನೇ ಭಾಗವಾಗಿರುವ ಈ ಚಿತ್ರದಲ್ಲಿ ಬುಡಕಟ್ಟು ಮತ್ತು ರಾಜಮನೆತನದ ನಡುವಿನ ಮುಂದಿನ ತಲೆಮಾರಿನ ದೈವಿಕ ಸಂಘರ್ಷವನ್ನು ಅನಾವರಣಗೊಳಿಸಲಾಗುತ್ತದೆ. ನಿರ್ದೇಶನದ ಬಗ್ಗೆ ಅಪಾರ ಆಸಕ್ತಿ ಹೊಂದಿರುವ ರಿಷಬ್, 'ಕಾಂತಾರ: ಚಾಪ್ಟರ್ 1' ಯಶಸ್ಸಿನ ಬಳಿಕ ಮತ್ತೊಂದು ರೋಚಕ ಕಥೆಗೆ ಸಜ್ಜಾಗಿದ್ದಾರೆ.

ರಾಜ್ ಬಿ. ಶೆಟ್ಟಿಗೆ ಕೇಳಿ ರಿಷಬ್ ಶೆಟ್ಟಿ ಫೋನ್ ನಂಬರ್ ತಗೊಂಡೆ: ಟೊವಿನೋ ಥಾಮಸ್

ಮಲಯಾಳಂ ಚಿತ್ರರಂಗದ ಸ್ಟಾರ್ ನಟ ಟೊವಿನೋ ಥಾಮಸ್ ಅವರು ಬೆಂಗಳೂರಿಗೆ ಬಂದಿದ್ದಾರೆ. ತಮ್ಮ ಮುಂದಿನ ಸಿನಿಮಾದ ಪ್ರಚಾರದ ಸಲುವಾಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಟಿವಿ9 ಜೊತೆ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದ ಜೊತೆ ತಮಗೆ ಇರುವ ನಂಟಿನ ಬಗ್ಗೆ ಅವರು ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ..

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026: ಈ ಬಾರಿ ಯಾರಿಗೆಲ್ಲ ಸಿಕ್ಕಿದೆ ಪ್ರಶಸ್ತಿ?

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ರಿಷಬ್ ಶೆಟ್ಟಿ, ಆಶಿಕಾ ರಂಗನಾಥ್ ಮುಂತಾದವರು ಪ್ರಮುಖ ಪ್ರಶಸ್ತಿಗಳನ್ನು ಪಡೆದುಕೊಂಡರು. 25ಕ್ಕೂ ಹೆಚ್ಚು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದೆ. ಈ ಬಾರಿ ಯಾರಿಗೆಲ್ಲ ಪ್ರಶಸ್ತಿ ಸಿಕ್ಕಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ..

ಚಾವುಂಡಿ ದೇವಾಲಯದಲ್ಲಿ ರಣವೀರ್ ಸಿಂಗ್ ಕ್ಷಮೆ ಕೇಳಬೇಕು: ದೂರುದಾರರ ಒತ್ತಾಯ

‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಗ್ಗೆ ರಣವೀರ್ ಸಿಂಗ್ ನೀಡಿದ ಹೇಳಿಕೆಯಿಂದ ವಿವಾದ ಆಗಿತ್ತು. ಆ ಪ್ರಕರಣದ ವಿಚಾರಣೆ ನಡೆಯುತ್ತಿದೆ. ನಟನಿಗೆ ನೈಜ ಪಶ್ಚಾತ್ತಾಪ ಇರಬೇಕು ಎಂದು ಪಟ್ಟು ಹಿಡಿಯಲಾಗಿದೆ. ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 10ಕ್ಕೆ ಮುಂದೂಡಲಾಗಿದೆ. ಆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ.

ದೈವಕ್ಕೆ ಅವಮಾನ ಮಾಡಿದ ಕೇಸ್: ಮಾರ್ಚ್ 9ರ ತನಕ ರಣವೀರ್ ಸಿಂಗ್ ನಿರಾಳ

ಗೋವಾ ಚಲನಚಿತ್ರೋತ್ಸವದ ವೇದಿಕೆಯಲ್ಲಿ ಬಾಲಿವುಡ್ ಖ್ಯಾತ ನಟ ರಣವೀರ್ ಸಿಂಗ್ ಅವರು ದೈವದ ಅನುಕರಣೆ ಮಾಡಿದ್ದರು. ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿನ ರಿಷಬ್ ಶೆಟ್ಟಿ ಅವರ ಅಭಿನಯವನ್ನು ಹೊಗಳುವ ಭರದಲ್ಲಿ ರಣವೀರ್ ಸಿಂಗ್ ಆ ರೀತಿ ಮಾಡಿದ್ದರು. ಅದರಿಂದಾಗಿ ವಿವಾದ ಸೃಷ್ಟಿ ಆಯಿತು.

ಟಿವಿಯಲ್ಲೂ ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’; ಜೀ ಕನ್ನಡದಲ್ಲಿ ಪ್ರಸಾರ

ಥಿಯೇಟರ್, ಒಟಿಟಿ ಮಾತ್ರವಲ್ಲದೇ ಕಿರುತೆರೆಯಲ್ಲಿ ಕೂಡ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಬ್ಬರಿಸಿದೆ. ‘ಜೀ ಕನ್ನಡ’ದಲ್ಲಿ ಪ್ರಸಾರವಾದ ಈ ಸಿನಿಮಾವನ್ನು ಟಿವಿ ಪ್ರೇಕ್ಷಕರು ದಾಖಲೆ ಪ್ರಮಾಣದಲ್ಲಿ ವೀಕ್ಷಿಸಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶದಿಂದ ಒಟ್ಟು 11.56 ಟಿವಿಆರ್ ದಾಖಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.

ಆಸ್ಕರ್ ರೇಸ್​​ನಲ್ಲಿ ಸ್ಥಾನ ಪಡೆದ ‘ಕಾಂತಾರ: ಚಾಪ್ಟರ್ 1’ ಸಿನಿಮಾ

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ರೇಸ್​​ಗೆ ಪ್ರವೇಶಿಸಿದೆ. ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ಭಾರತದಿಂದ ಅಧಿಕೃತ ಆಯ್ಕೆಯಲ್ಲದಿದ್ದರೂ, ಪ್ರತ್ಯೇಕ ಅರ್ಜಿ ಮೂಲಕ 'ಅತ್ಯುತ್ತಮ ಚಿತ್ರ' ವಿಭಾಗದಲ್ಲಿ ಸ್ಪರ್ಧಿಸುತ್ತಿದೆ. 850 ಕೋಟಿಗೂ ಹೆಚ್ಚು ಗಳಿಸಿ, ಒಟಿಟಿಯಲ್ಲೂ ಮೆಚ್ಚುಗೆ ಪಡೆದ ಈ ಚಿತ್ರ ಹಾಲಿವುಡ್ ಸಿನಿಮಾಗಳ ಜೊತೆ ಸ್ಪರ್ಧಿಸಲಿದೆ.

ವಿಶ್ವ ಬಾಕ್ಸ್ ಆಫೀಸ್​​​ನಲ್ಲಿ ‘ಕಾಂತಾರ: ಚಾಪ್ಟರ್ 1’ ಗಳಿಕೆ ಹಿಂದಿಕ್ಕಿದ ‘ಧುರಂಧರ್’

ರಣವೀರ್ ಸಿಂಗ್ ನಟನೆಯ 'ಧುರಂದರ್' 2025ರ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾವಾಗಿ ಹೊರಹೊಮ್ಮಿದೆ. 935 ಕೋಟಿ ಗಳಿಸಿ, 'ಕಾಂತಾರ: ಚಾಪ್ಟರ್ 1' ದಾಖಲೆ ಮುರಿದಿದೆ. ಭಾರತದಲ್ಲಿ 600 ಕೋಟಿ ಗಳಿಸಿದ್ದು, ಅಲ್ಪಾವಧಿಯಲ್ಲೇ 1000 ಕೋಟಿ ಕ್ಲಬ್ ಸೇರುವ ಸಾಧ್ಯತೆ ಇದೆ.

ರಿಷಬ್ ಶೆಟ್ಟಿ ಹರಕೆ ನೇಮೋತ್ಸವ ವಿವಾದ: ಆರೋಪಗಳಿಗೆ ತಮ್ಮಣ್ಣ ಶೆಟ್ಟಿ ತಿರುಗೇಟು

ರಿಷಬ್ ಶೆಟ್ಟಿ ಅವರು ಇತ್ತೀಚೆಗೆ ಪಾಲ್ಗೊಂಡ ಹರಕೆ ನೇಮೋತ್ಸವ ಸರಿಯಾದ ರೀತಿಯಲ್ಲಿ ಇರಲಿಲ್ಲ ಎಂದು ದೈವರಾಧಕ ತಮ್ಮಣ್ಣ ಶೆಟ್ಟಿ ಗರಂ ಆಗಿದ್ದರು. ಈಗ ಮಂಗಳೂರಿನಲ್ಲಿ ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಾರೆಬೈಲು ಜಾರಂದಾಯ ಬಂಟ ಮತ್ತು ವಾರಾಹಿ ಪಂಜುರ್ಲಿ ಕ್ಷೇತ್ರದ ಆಡಳಿತ ಮಂಡಳಿ ತಮ್ಮ ಮೇಲೆ ಮಾಡಿದ ಆರೋಪಗಳಿಗೆ ತಮ್ಮಣ್ಣ ಶೆಟ್ಟಿ ಸ್ಪಷ್ಟನೆ ಕೊಟ್ಟಿದ್ದಾರೆ.

  • Ashok
  • Updated on: Dec 15, 2025
  • 5:41 pm

20 ವರ್ಷದ ಹಿಂದೆಯೇ ದೈವಾರಾಧನೆ ವ್ಯಾಪಾರ ಆಗಿದೆ: ದೈವಾರಾಧಕ ತಮ್ಮಣ್ಣ ಶೆಟ್ಟಿ ಗರಂ

‘ಕಾಂತಾರ’ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಅವರು ದೈವಾರಾಧನೆ ಬಗ್ಗೆ ಜನರಿಗೆ ತೋರಿಸಿದರು. ಇತ್ತೀಚೆಗೆ ಅವರು ಹರಕೆ ಕೋಲದಲ್ಲಿ ಪಾಲ್ಗೊಂಡಿದ್ದರು. ಆ ಸಂದರ್ಭದ ವಿಡಿಯೋ ವೈರಲ್ ಆದ ಬಳಿಕ ಪರ-ವಿರೋಧದ ಚರ್ಚೆ ಆರಂಭ ಆಗಿದೆ. ದೈವಾರಾಧಕ ತಮ್ಮಣ್ಣ ಶೆಟ್ಟಿ ಅವರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ.

  • Ashok
  • Updated on: Dec 9, 2025
  • 8:26 pm

‘ಕಾಂತಾರದಿಂದ ದೈವಗಳು ಬೀದಿಗೆ ಬಂದಿವೆ’: ದೈವಾರಾಧಕ ತಮ್ಮಣ್ಣ ಶೆಟ್ಟಿ ಅಸಮಾಧಾನ

ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು ಅವರು ಇತ್ತೀಚೆಗೆ ಪಾಲ್ಗೊಂಡ ಹರಕೆಯ ಕೋಲದ ಬಗ್ಗೆ ವಿವಾದ ಶುರುವಾಗಿದೆ. ಈ ಹರಕೆಯ ಕೋಲದ ಸಂದರ್ಭದಲ್ಲಿ ದೈವ ನರ್ತಕ ನಡೆದುಕೊಂಡ ರೀತಿಯನ್ನು ಅನೇಕರು ವಿರೋಧಿಸುತ್ತಿದ್ದಾರೆ. ಈ ಕುರಿತು ದೈವಾರಾಧಕ ತಮ್ಮಣ್ಣ ಶೆಟ್ಟಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಅನಿಸಿಕೆಯನ್ನು ಅವರು ತಿಳಿಸಿದ್ದಾರೆ.

  • Ashok
  • Updated on: Dec 9, 2025
  • 7:18 pm
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ