AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka

Karnataka

ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.

ಇನ್ನೂ ಹೆಚ್ಚು ಓದಿ

ಸ್ಲೀವ್​ಲೆಸ್ ಡ್ರೆಸ್, ಹರಿದ ಜೀನ್ಸ್ ಹಾಕೊಂಡು ಕಚೇರಿಗೆ ಹೋಗುವ ಸರ್ಕಾರಿ ನೌಕರರಿಗೆ ಇನ್ಮುಂದೆ ಕಾದಿದೆ ಸಂಕಷ್ಟ!

ಕಚೇರಿ ಶಿಸ್ತಿನ ಬಗ್ಗೆ ಕರ್ನಾಟಕ ಸರ್ಕಾರಿ ನೌಕರರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದೆ. ಮುಖ್ಯವಾಗಿ, ನೌಕರರು ಹರಿದ ಜೀನ್ಸ್, ಸ್ಲೀವ್​ಲೆಸ್ ಡ್ರೆಸ್‌ನಂತಹ ಅಸಭ್ಯ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಶ್ವಾನಕ್ಕೆ ಮಡಿಲು ತುಂಬಿ ಅದ್ಧೂರಿ ಸೀಮಂತ; 500 ಜನರಿಗೆ ಭರ್ಜರಿ ಭೋಜನ ಹಾಕಿದ ಮಾಲೀಕ!

ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ದಸರಿಘಟ್ಟದಲ್ಲಿ ಪ್ರವೀಣ್ ಎಂಬುವವರು ತಮ್ಮ ಸಾಕು ನಾಯಿ 'ಖುಷಿ'ಗೆ ಅದ್ಧೂರಿ ಸೀಮಂತ ಕಾರ್ಯಕ್ರಮ ಆಯೋಜಿಸಿದ್ದರು. ತನ್ನ ಪ್ರೀತಿಯ ನಾಯಿಯ ಸೀಮಂತಕ್ಕಾಗಿ 20 ಸಾವಿರ ರೂಪಾಯಿ ವೆಚ್ಚದಲ್ಲಿ 50 ಕೆಜಿ ಗೀ ರೈಸ್, 50 ಕೆಜಿ ಚಿಕನ್ ಗ್ರೇವಿ ಮಾಡಿಸಿ 500 ಜನರಿಗೆ ಭೋಜನ ಏರ್ಪಡಿಸಿದ್ದ ಮಾಲೀಕ, ಹೊಸ ಬಟ್ಟೆ, ಹೂವಿನ ಸಿಂಗಾರ, ಕೇಕ್ ಕಟಿಂಗ್ ಮೂಲಕ ಖುಷಿಯ ಗರ್ಭಧಾರಣೆಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಮಾಲೀಕನ ಈ ವಿಶಿಷ್ಟ ಶ್ವಾನ ಪ್ರೀತಿಗೆ ಇಡೀ ಊರೇ ಮೆಚ್ಚುಗೆ ವ್ಯಕ್ತಪಡಿಸಿದೆ.

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಯೆಲ್ಲೋ ಮಾರ್ಗದಲ್ಲಿ ಭಾನುವಾರ ರೈಲು ಸಂಚಾರ ಶುರುವಾಗೋದು ಲೇಟ್

ಬೆಂಗಳೂರಿನ ನಮ್ಮ ಮೆಟ್ರೋದ ಯೆಲ್ಲೋ ಮಾರ್ಗದಲ್ಲಿ ಭಾನುವಾರ ಸಂಚಾರ ವಿಳಂಬವಾಗಲಿದೆ. ಭಾನುವಾರ ಬೆಳಗ್ಗೆ 7 ಗಂಟೆಗೆ ಬದಲಾಗಿ 8 ಗಂಟೆಗೆ ಯೆಲ್ಲೋ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಲಿವೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಅರ್​​ಸಿಎಲ್ ತಿಳಿಸಿದೆ.

ಬೆಂಗಳೂರಿಗರೇ ಮಾಸ್ಕ್ ಧರಿಸದೆ ಹೊರಬಂದರೆ ಎಚ್ಚರ! ಕಳಪೆ ಏರ್ ಕ್ವಾಲಿಟಿಯಿಂದ ಶುರುವಾಗುತ್ತೆ ಅಸ್ತಮಾ, ಅಲರ್ಜಿ

ಬೆಂಗಳೂರಿನಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಕೆಲ ದಿನಗಳ ಹಿಂದೆ AQI 200 ದಾಟಿತ್ತು. ಇಂದೂ ಸಹ 196ಕ್ಕೆ ತಲುಪಿರುವ ಗಾಳಿಯ ಗುಣಮಟ್ಟ ಇನ್ನೂ ಕುಸಿಯಬಹುದೆಂದು ಹೇಳಲಾಗಿದೆ. PM2.5 ಮತ್ತು PM10 ಪ್ರಮಾಣ ಹೆಚ್ಚಳದಿಂದ ಅಸ್ತಮಾದಂತ ಉಸಿರಾಟದ ಸಮಸ್ಯೆಗಳು ಹೆಚ್ಚುತ್ತಿದ್ದು, ಮಕ್ಕಳು ಮತ್ತು ವೃದ್ಧರು ಜಾಗರೂಕರಾಗಿರಬೇಕು ಎಂದು ಹೇಳಲಾಗಿದೆ.

ಮಂಡ್ಯ: ಕೊನೆಗೂ ಬಯಲಾಯ್ತು ರಕ್ತ ರಹಸ್ಯ! ಮನೆಯಿಡೀ ನಿಗೂಢವಾಗಿ ಹರಿದಿದ್ದ ನೆತ್ತರು ಯಾರದ್ದು ಗೊತ್ತೇ?

ಮಂಡ್ಯದ ಮದ್ದೂರು ತಾಲೂಕಿನ ಮನೆಯಲ್ಲಿ ಎಲ್ಲೆಂದರಲ್ಲಿ ಪತ್ತೆಯಾಗಿದ್ದ ನಿಗೂಢ ರಕ್ತದ ಕಲೆಗಳ ಪ್ರಕರಣ ಕೊನೆಗೂ ಬಯಲಾಗಿದೆ. ಇದೀಗ ಎಫ್‌ಎಸ್‌ಎಲ್ ವರದಿ ಬಹಿರಂಗವಾಗಿದ್ದು, ಪ್ರಕರಣಕ್ಕೆ ರೋಚಕ ತಿರುವು ನೀಡಿದೆ. ಹಾಗಾದರೆ ಮನೆಯಿಡೀ ಹರಿದಿದ್ದ ನೆತ್ತರು ಯಾರದ್ದು? ನಿಜಕ್ಕೂ ಅಲ್ಲಿ ಆಗಿದ್ದೇನು? ಇಲ್ಲಿದೆ ವಿವರ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ನಿಲ್ಲದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

Karnataka Weather: ಕಲಬುರಗಿ, ಬೀದರ್ ಸೇರಿ ಹಲವೆಡೆ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ರಾಜ್ಯದಲ್ಲಿ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನೂ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಇಲಾಖೆ ಮತ್ತು ವೈದ್ಯರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಪವರ್ ಕಟ್, ಇಲ್ಲಿದೆ ವಿವರ

Bangalore Power Cut Today: ನಿರ್ವಹಣಾ ಕಾಮಗಾರಿ ಪ್ರಯುಕ್ತ ಬೆಂಗಳೂರಿನ ಬೆಸ್ಕಾಂ ವ್ಯಾಪ್ತಿಯ ನೂರಾರು ಏರಿಯಾಗಳಲ್ಲಿ ಇಂದು (ಡಿಸೆಂಬರ್ 20) ಪವರ್ ಕಟ್ ಇರಲಿದೆ. ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಇರಲಿದೆ?ಎಷ್ಟು ಗಂಟೆಯಿಂದ ಎಷ್ಟು ಗಂಟೆ ವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂಬ ವಿವರ ಇಲ್ಲಿದೆ.

Daily Devotional: ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?

ಒಂದೇ ಗೋತ್ರದವರ ನಡುವೆ ವಿವಾಹ ಸಾಧ್ಯವೇ ಎಂಬುದು ಹಲವು ಕುಟುಂಬಗಳಲ್ಲಿ ಉದ್ಭವಿಸುವ ಸಾಮಾನ್ಯ ಪ್ರಶ್ನೆಯಾಗಿದೆ. ಗೋತ್ರವು ವ್ಯಕ್ತಿಯ ಜೀವಾ ನಾಡಿಯನ್ನು ಪ್ರತಿನಿಧಿಸುತ್ತದೆ ಮತ್ತು ಇದು ಹುಟ್ಟಿಗೆ ನೇರ ಸಂಬಂಧ ಹೊಂದಿದೆ. ಜ್ಯೋತಿಷ್ಯ, ಆಧ್ಯಾತ್ಮಿಕ ಮತ್ತು ಸನಾತನ ಧರ್ಮದ ಪ್ರಕಾರ, ವಿವಾಹಕ್ಕಾಗಿ ಗೋತ್ರವನ್ನು ಪರಿಶೀಲಿಸುವುದು ಸಾಂಪ್ರದಾಯಿಕ ಪದ್ಧತಿಯಾಗಿದೆ. ಇದನ್ನು ವಿಜ್ಞಾನದಲ್ಲಿ ಕ್ರೋಮೋಸೋಮ್‌ಗಳಿಗೆ (X-Y, X-X) ಹೋಲಿಸಬಹುದು. ಗೋತ್ರವನ್ನು ಒಂದೇ ರಕ್ತದ ಪ್ರತೀಕ ಎಂದು ಕೂಡ ವ್ಯಾಖ್ಯಾನಿಸಲಾಗುತ್ತದೆ. ವಿವಾಹದ ನಂತರ ಹೆಣ್ಣು ತನ್ನ ಗಂಡನ ಗೋತ್ರವನ್ನು ಅನುಸರಿಸುತ್ತಾಳೆ ಎಂದು ಗುರೂಜಿ ಹೇಳಿದ್ದಾರೆ.

Horoscope Today 20 December: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!

2025 ಡಿಸೆಂಬರ್ 20, ಶನಿವಾರದ ದ್ವಾದಶ ರಾಶಿಗಳ ದಿನಭವಿಷ್ಯವನ್ನು ಪ್ರಸ್ತುತಪಡಿಸಿದೆ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಈ ದಿನದ ಗ್ರಹಗತಿಗಳು ಮತ್ತು ಅವುಗಳ ಪ್ರಭಾವದ ಕುರಿತು ವಿಸ್ತೃತ ಮಾಹಿತಿ ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಮಾರ್ಗಶಿರ ಮತ್ತು ಪುಷ್ಯ ಮಾಸಗಳ ಸಂಗಮ, ಹೇಮಂತ ಋತು, ಕೃಷ್ಣ ಪಕ್ಷ, ಮೂಲ ನಕ್ಷತ್ರ, ಗಂಡ ಯೋಗ ಮತ್ತು ಕಿಂಸ್ತುಘ್ನ ಕರಣವನ್ನು ಒಳಗೊಂಡ ಈ ದಿನದಲ್ಲಿ ರಾಹು ಕಾಲ ಬೆಳಿಗ್ಗೆ 09:25 ರಿಂದ 10:50 ರವರೆಗೆ ಇರುತ್ತದೆ. ಸಂಕಲ್ಪ ಕಾಲ ಮಧ್ಯಾಹ್ನ 01:42 ರಿಂದ 03:07 ರವರೆಗೆ ಇರುತ್ತದೆ.

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ: ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರಕರಣ ದಾಖಲು

ಬಡವರ ಹೊಟ್ಟೆ ತುಂಬಲಿ ಎಂದು ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ ಸುಮಾರು ಕಡೆಗಳಲ್ಲಿ ದಾರಿ ತಪ್ಪುತ್ತಿದೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡನೊಬ್ಬ ಅನ್ನಭಾಗ್ಯ ಅಕ್ಕಿಯನ್ನು ಫಲಾನುಭವಿಗಳಿಂದ ಅಕ್ಕಿ ಖರೀದಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಸದ್ಯ ಈ ವಿಚಾರವಾಗಿ ಪ್ರಕರಣ ಕೂಡ ದಾಖಲಾಗಿದೆ.

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ: ಹೇಗೆ ನಡೆದಿದೆ ನೋಡಿ

ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾರ್ಯ ಆರಂಭವಾಗಿದೆ. ಕಳೆದ ವರ್ಷ ಗೇಟ್ ಕೊಚ್ಚಿಹೋದ ನಂತರ, 52 ಕೋಟಿ ರೂ. ವೆಚ್ಚದಲ್ಲಿ ಈ ಕಾರ್ಯ ಕೈಗೊಳ್ಳಲಾಗಿದೆ. ಆದರೆ, ಗೇಟ್ ಅಳವಡಿಕೆ ಹಿನ್ನೆಲೆಯಲ್ಲಿ ಸರ್ಕಾರ ಈ ಬಾರಿ ಒಂದು ಬೆಳೆಗೆ ಮಾತ್ರ ನೀರು ಎಂದು ಘೋಷಿಸಿದೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು: ಆದ್ರೂ ಅರ್ಭಟ ಹೇಗಿದೆ ನೋಡಿ

ಜಾನುವಾರುಗಳ ಮೇಲೆ ದಾಳಿ ಮಾಡಿ ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಮೈಸೂರಿ ಶ್ರೀರಂಗರಾಜಪುರ ಗ್ರಾಮದ ಬಳಿ ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಇದರಿಂದ ಗ್ರಾಮದ ಜನರು ನಿಟ್ಟುಸಿರುಬಿಟ್ಟಿದ್ದಾರೆ. ಗ್ರಾಮದ ಸುತ್ತಮುತ್ತ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಇದರಿಂದ ಜನರು ಆತಂಕಗೊಂಡಿದ್ದುಮ ಚಿರತೆಯನ್ನು ಸೆರೆ ಹಿಡಿಯುವಂತೆ ಜನರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಕಾರ್ಯವ್ರವೃತರಾದ ಅರಣ್ಯ ಇಲಾಖೆ ಸಿಬ್ಬಂದಿ, ಮಲ್ಲೇಶ್ ಎಂಬುವರ ಜಮೀನಿನಲ್ಲಿ ಬೋನು ಇಟ್ಟಿದ್ದರು.