AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka

Karnataka

ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.

ಇನ್ನೂ ಹೆಚ್ಚು ಓದಿ

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ ಎಸ್​​ಎಸ್

ಕೊಡುಗೈ ದಾನಿ, ಶಿಕ್ಷಣ ಸಂಸ್ಥೆಗಳ ಒಡೆಯ, ಪ್ರಭಾವಿ ವೀರಶೈವ ಲಿಂಗಾಯತ ಸಮಾಜದ ಮುಖಂಡ, ಹಿರಿಯ ರಾಜಕಾರಣಿ, ಮಾಜಿ ಮಂತ್ರಿ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. 94 ವರ್ಷದ ಶಾಮನೂರು ಶಿವಶಂಕರಪ್ಪ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ರು. ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಚಿಕಿತ್ಸೆ ಫಲಿಸದೇ ಇಂದು ಸಂಜೆ 6ಗಂಟೆ 45 ನಿಮಿಷಕ್ಕೆ ಕೊನೆಯುಸಿರೆಳೆದಿದ್ದಾರೆ.

ಶಾಮನೂರು ಶಿವಶಂಕರಪ್ಪ ನಿಧನ: ಡಿ 15ರಂದು ಶಾಲಾ-ಕಾಲೇಜುಗಳಿಗೆ ರಜೆ, ಅಂತ್ಯಕ್ರಿಯೆ ಎಲ್ಲಿ ಗೊತ್ತಾ?

ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ಅವರ ಅಗಲಿಕೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆ ಗೌರವಾರ್ಥವಾಗಿ ಡಿಸೆಂಬರ್​ 15ರಂದು ದಾವಣಗೆರೆ ನಗರ ವ್ಯಾಪ್ತಿಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆಯೇ ಅಂತ್ಯಕ್ರಿಯೆ ಕೂಡ ನಡೆಯಲಿದೆ.

ಅಬ್ಬಬ್ಬಾ ಏನ್​ ಚಳಿ ಗುರು: ಥಂಡಾ ಹೊಡೆದ ಉತ್ತರ ಕರ್ನಾಟಕ; ವಾಕಿಂಗ್​​​​ ತೆರಳದಂತೆ ಮನವಿ

ರಾಜ್ಯದಲ್ಲಿ ಮೈಕೊರೆಯುವ ಚಳಿ ಜನಜೀವನವನ್ನು ತತ್ತರಗೊಳಿಸಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ‌ ಜಿಲ್ಲೆಗಳು ಥಂಡಾ ಹೊಡೆದಿವೆ. ಚಳಿ ಹೆಚ್ಚಾದ ಹಿನ್ನಲೆ ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ಕೂಡ ನೀಡಿದೆ.

ರಾಯಚೂರು ವಿದ್ಯುತ್ ಉತ್ಪಾದನಾ ಘಟಕದ ಕಲ್ಲಿದ್ದಲು ಖಾಸಗಿ ಫ್ಯಾಕ್ಟರಿಗಳಿಗೆ ಸಪ್ಲೈ: ಕೋಟ್ಯಂತರ ರೂ ಲೂಟಿ?

ರಾಯಚೂರು ತಾಲೂಕಿನ ಯರಮರಸ್ ಬಳಿಯ ವೈಟಿಪಿಎಸ್​​ ವಿದ್ಯುತ್ ಉತ್ಪಾದನಾ ಘಟಕದ ಕಲ್ಲಿದ್ದಲನ್ನು ಅಕ್ರಮ ಸಾಗಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಅಕ್ರಮವಾಗಿ ಕಲ್ಲಿದ್ದಲನ್ನು ಖಾಸಗಿ ಫ್ಯಾಕ್ಟರಿಗಳಿಗೆ ಸರಬರಾಜು ಮಾಡಿ ಕೋಟ್ಯಂತರ ರೂ ಲೂಟಿ ಮಾಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳ ತಂಡ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು? ಆಸ್ಪತ್ರೆ ಮುಖ್ಯಸ್ಥ ಕೊಟ್ಟ ಮಾಹಿತಿ ಹೀಗಿದೆ

ಶಾಮನೂರು ಶಿವಶಂಕರಪ್ಪ ನಿಧನದ ಬಗ್ಗೆ ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥ, ಅಳಿಯ ಆಗಿರುವ ಡಾ.ಶಾರಣ್ ಶಿವರಾಜ್ ಪಾಟೀಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಅಕ್ಟೋಬರ್ 23 ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಇಂದು 6:20 ಕ್ಕೆ ನಿಧನರಾಗಿದ್ದಾರೆ. ಆಸ್ಪತ್ರೆ ಕಡೆಯಿಂದ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಅವರ ಮಗ ಬಂದ ನಂತರ ಮುಂದಿನ ನಿರ್ಧಾರ ಮಾಡಲಾಗುತ್ತೆ ಎಂದು ತಮ್ಮ ಮಾವನ ಸಾವಿನ ಬಗ್ಗೆ ಮಾಹಿತಿ ನೀಡಿದರು.

ಭಾರತದಲ್ಲೇ ಹಿರಿಯ ಶಾಸಕ ಎನ್ನಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ರಾಜಕೀಯ ಹೇಗಿತ್ತು ನೋಡಿ

Shamanur Shivashankarappa passes away: ಸರಳ ಸಜ್ಜನಿಕೆಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜಕೀಯ ಧುರೀಣ ಇನ್ನಿಲ್ಲ. ಪ್ರಭಾವಿ ವೀರಶೈವ ಲಿಂಗಾಯತ ಸಮಾಜದ ಮುಖಂಡರಾಗಿದ್ದ ಶಾಮನೂರು ಶಿವಶಂಕರಪ್ಪ ಕೊಡುಗೈ ದಾನಿ, ಶಿಕ್ಷಣ ಸಂಸ್ಥೆಗಳ ಒಡೆಯರಾಗಿದ್ದರು. ಅವರು ಸಾಗಿ ಬಂದ ರಾಜಕೀಯ ಜೀವನ ಹೀಗಿತ್ತು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Shamanur Shivashankarappa Death: ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಶಾಮನೂರು ಶಿವಶಂಕರಪ್ಪ ನಿಧನ: ಕಾಂಗ್ರೆಸ್​​​ನ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

KSRTC ಅಧಿಕಾರಿ ಸಾವಿಗೆ ಬಿಗ್ ಟ್ವಿಸ್ಟ್​​: ಆಫೀಸರ್​ ಬಲಿಪಡೆದ ಅಕ್ರಮ ಪಡಿತರ ಅಕ್ಕಿ ಸಾಗಾಟ

ಸಮವಸ್ತ್ರ ಧರಿಸಿ ಬೆಳ್ಳಂಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ಕೆಎಸ್​​ಆರ್​ಟಿಸಿ ಅಧಿಕಾರಿ ಭೀಕರ ಅಪಘಾತಕ್ಕೆ ಬಲಿಯಾಗಿರುವಂತಹ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ಶನಿವಾರ ನಡೆದಿದೆ. ರಸ್ತೆ ದಾಟುವ ವೇಳೆ ಏಕಾಏಕಿ ವೇಗವಾಗಿ ಬಂದ ಲಾರಿಯೊಂದು ಅಧಿಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಚಾಲಕ ಸಿಕ್ಕಿಬೀಳುವ ಭಯದಲ್ಲಿ ಅಪಘಾತವೆಸಗಿರಬಹುದು ಎಂದು ಶಂಕಿಸಲಾಗಿದೆ.

ವೋಟ್ ಚೋರಿ ವಿರುದ್ಧ ಕಾಂಗ್ರೆಸ್​​ ಹೋರಾಟ: ದೆಹಲಿಯಲ್ಲಿ ಪ್ರತಿಧ್ವನಿಸಿದ ಆಳಂದ ಕ್ಷೇತ್ರದ ಮತಗಳ್ಳತನ

ಮತಗಳ್ಳತನ ಬಾಂಬ್ ಕರ್ನಾಟಕದಿಂದಲೇ ಸಿಡಿದಿತ್ತು. ಕಲಬುರಗಿಯ ಆಳಂದ, ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿನ ವೋಟ್ ಚೋರಿ ಆರೋಪದ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಖುದ್ದು ರಾಹುಲ್ ಗಾಂಧಿ, ಈ ವಿಚಾರವನ್ನ ಕೈಗೆತ್ತಿಕೊಂಡು ಸಮರ ಸಾರಿದ್ದರು. ಈಗ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದು, ಆ ಮೂಲಕ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು, ನಾವು ಇನ್ಮುಂದೆ ಜೀವನ ಮಾಡುವುದೇ ಕಷ್ಟ ಎಂದ ಯತ್ನಾಳ್

ಶಿವಾಜಿ  ಮಹಾರಾಜರು ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು. ಬಸನಗೌಡ ಇದ್ದವ ನಾನು ಬಷೀರ್‌ ಅಹ್ಮದ್ ಆಗಬೇಕಾಗುತ್ತಿತ್ತು ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಇಂದು (ಡಿಸೆಂಬರ್ 14) ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದ ಶಿವಾಜಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಿವಾಜಿ ಮಹಾರಾಜರು ನಮ್ಮ ದೇಶದ ಆದರ್ಶ ವ್ಯಕ್ತಿ. ವಿಜಯಪುರದಲ್ಲಿ ಶಿವಾಜಿ ಪ್ರತಿಮೆ ಕೂರಿಸುವುದು ಸುಲಭ ಅಲ್ಲ, ಏಕೆಂದರೆ ಅಲ್ಲಿ ಪಾಕಿಸ್ತಾನ ಮೇಡ್​ ಬಹಳಷ್ಟಿದೆ ಎಂದು ಕಿಡಿಕಾರಿದರು.

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ಮೊನ್ನೆ ಅಷ್ಟೇ ರಾಯಚೂರಿನಲ್ಲಿ ಯುವತಿಯೋರ್ವಳು, ಪ್ರಿಯಕರನ ಮದುಗೆಗೆ ನುಗ್ಗಿ ಮದ್ವೆಯನ್ನೇ ತಡೆಯುವಲ್ಲಿ ಯಶಸ್ವಿಯಾಗಿದ್ದಳು.  ಹುಡುಗ ತಾಳಿ ಕಟ್ಟುವ ಮುನ್ನವೇ ಸ್ಥಳಕ್ಕೆ ಬಂದು ಮದುವೆ ನಿಲ್ಲಿಸಿದ್ದಳು. ಇದೇ ಮಾದರಿಯ ಮತ್ತೊಂದು ಘಟನೆ ಚಿಕ್ಕಮಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆದ್ರೆ, ಪ್ರೇಯಿಸಿ ಮಂಟಪ್ಪಕ್ಕೆ ಬರುವಷ್ಟರಲ್ಲೇ ಪ್ರಿಯಕರ ಮತ್ತೋರ್ವ ಯುವತಿಯ ಕುತ್ತಿಗೆ ತಾಳಿ ಕಟ್ಟಿದ್ದ.

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಅಪರಿಚಿತ ವ್ಯಕ್ತಿ ಕಾಟಕ್ಕೆ ಬೇಸತ್ತ ವೈದ್ಯೆ

ಬೆಂಗಳೂರಿನಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ವೈದ್ಯೆಯೊಬ್ಬರಿಗೆ ಸೈಕೋ ಕಾಟ ನೀಡುತ್ತಿದ್ದಾನೆ. ಕಳೆದ ಮೂರು ತಿಂಗಳಿನಿಂದ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ. ಇದರಿಂದ ಬೇಸತ್ತ ವೈದ್ಯೆ 112ಗೆ ಕರೆ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಕೋರಮಂಗಲ ಪೊಲೀಸರು ಸೈಕೋಗಾಗಿ ಹುಡುಕಾಟ ನಡೆಸಿದ್ದಾರೆ. ವಿಡಿಯೋ ನೋಡಿ.

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ