AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka

Karnataka

ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.

ಇನ್ನೂ ಹೆಚ್ಚು ಓದಿ

ತುಮಕೂರು ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ

ತುಮಕೂರು ಜಿಲ್ಲೆಯ ಬೆಂಚೆ ಗೇಟ್‌ನ ಜಗದಂಬಾ ಜ್ಯುವೆಲರಿ ಶಾಪ್‌ನಲ್ಲಿ ನಡೆದ ಸಿನಿಮೀಯ ದರೋಡೆಯ ಸುಳಿವನ್ನು ಪೊಲೀಸರು ಭೇದಿಸಿದ್ದಾರೆ. ಮೆಣಸಿನಕಾಯಿ ಪುಡಿ ಎರಚಿ ಚಿನ್ನಾಭರಣ ದೋಚಿದ್ದ ನಾಲ್ವರು ಆರೋಪಿಗಳನ್ನು, ಸಾರ್ವಜನಿಕರ ಹಾಗೂ ಪೊಲೀಸ್ ತಂಡಗಳ ಸಹಕಾರದಿಂದ ದರೋಡೆ ನಡೆದ ಕೆಲವೇ ಗಂಟೆಗಳಲ್ಲಿ ಬಂಧಿಸಿ, ಸಂಪೂರ್ಣ ಕದ್ದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ: ಎಳನೀರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಫೆಬ್ರವರಿಯಲ್ಲೇ ಬಿಸಿಲಿನ ತೀವ್ರತೆ ಹೆಚ್ಚಿದ್ದು, ಜನರು ಕಲ್ಲಂಗಡಿ ಹಾಗೂ ಎಳನೀರಿನ ಮೊರೆ ಹೋಗಿದ್ದಾರೆ. ಎಳನೀರಿನ ಬೆಲೆ ಈಗಾಗಲೇ ಏರಿಕೆಯಾಗಿದ್ದು, ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಹವಾಮಾನ ವೈಪರೀತ್ಯದಿಂದ ಇಳುವರಿ ಕಡಿಮೆಯಾಗಿರುವುದು, ಹಾಗೂ ಅಗತ್ಯವಿರುವವರಿಂದ ಬೇಡಿಕೆ ಹೆಚ್ಚಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ತಿಳಿಸಿದ ವಿನಯ್ ಕುಮಾರ್

ಇದೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯ ನಡೆಯುತ್ತಿದೆ. ಕರ್ನಾಟಕ (Karnataka Team) ಮತ್ತು ಜಮ್ಮು ಕಾಶ್ಮೀರ ತಂಡಗಳ ನಡುವಿನ ಫೈನಲ್ ಪಂದ್ಯ ನಾಳೆ (ಫೆಬ್ರವರಿ 24) ಆರಂಭವಾಗಲಿದ್ದು, ಈ ಐತಿಹಾಸಿಕ ಕ್ಷಣಕ್ಕೆ ವಾಣಿಜ್ಯ ನಗರಿ ಸಾಕ್ಷಿಯಾಗಲಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆವಲ ಹುಬ್ಬಳ್ಳಿ ಮಾತ್ರವಲ್ಲದೇ ಉತ್ತರ ಕರ್ನಾಟಕ ಜನತೆ ಕಾತುರದಿಂದ ಕಾಯುತ್ತಿದೆ. ಇನ್ನೊಂದೆಡೆ ತಮ್ಮ ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಇನ್ನು ಕರ್ನಾಟಕದ ಸ್ಟ್ರೆಂತ್ ಹೇಗಿದೆ?  ಬ್ಯಾಟಿಂಗ್ ಮತ್ತು ಬೌಲಿಂಗ್ ಹೇಗಿದೆ  ಎನ್ನುವುದನ್ನು ಮಾಜಿ ಆಟಗಾರ ಆರ್ ವಿನಯ್ ಕುಮಾರ್ ಅವರು ವಿವರಿಸಿದ್ದಾರೆ ಕೇಳಿ.

ಸರ್ಕಾರದ ವಿರುದ್ಧ ಸಿಡಿದ ಡಾಕ್ಟರ್ಸ್: ಆಸ್ಪತ್ರೆಗೆ ಹೋಗುವ ಮುನ್ನ ಈ ಸುದ್ದಿ ನೋಡಿ

ಕರ್ನಾಟಕ ಸಾರಿಗೆ ನಿಗಮಗಳ ನೌಕರರ ಮುಷ್ಕರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ (Karnataka Government) ವಿರುದ್ಧ ವೈದ್ಯರು ಸಿಡಿದೆದ್ದಿದ್ದಾರೆ. ಔಷಧ ಸರಬರಾಜು, ವೈದ್ಯರ ನೇಮಕ, ಬಡ್ತಿ ಸಹಿತ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರ (Strike) ನಡೆಸಲು ಮುಂದಾಗಿದ್ದಾರೆ. ಹೌದು...ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮಾರ್ಚ್ 11 ರಿಂದ ಮುಷ್ಕರ ಆರಂಭಿಸಲಿದೆ.

ಮಂಡ್ಯದಲ್ಲೊಂದು ಅಮಾನುಷ ಕೃತ್ಯ: ಕೈಮುಗಿದು ಬೇಡಿದ್ರೂ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಹಲ್ಲೆ

ಐವರ ಗುಂಪೊಂದು ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಕಲ್ಲಿನಿಂದ ಮಾರಣಾಂತಿಕ ಹಲ್ಲೆ ಮಾಡಿರುವಂತಹ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದಲ್ಲಿ ನಡೆದಿದೆ. ಕಿರಾತಕರು ಕ್ರೌರ್ಯವನ್ನು ವಿಡಿಯೋ ಕೂಡ ಮಾಡಿದ್ದಾರೆ. ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 14 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ: . ಪೊಲೀಸರ ತನಿಖೆ ಬಗ್ಗೆ DCP ಸ್ಫೋಟಕ ಮಾಹಿತಿ

ಶೇಷಾದ್ರಿಪುರಂ (Seshadripuram) ಬಳಿ ಇರುವ ಕೆನರಾ ಬ್ಯಾಂಕ್​​ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಖದೀಮರು ಕೆನರಾ ಬ್ಯಾಂಕಿನ (Canara Bank) ಒಳಗೆ ನುಗ್ಗಿದ್ದು, ಸೈರನ್ ಮೊಳಗುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವೃದ್ಧೆ ಅನುಮಾಸ್ಪದ ಸಾವು: ಇನ್ನೇನು ಅಂತ್ಯಕ್ರಿಯೆ ಮಾಡ್ಬೇಕು ಎನ್ನುವಷ್ಟರಲ್ಲೇ ಸಾವಿನ ರಹಸ್ಯ ಬಯಲು

ಆ ತಾಯಿಗೆ ನಾಲ್ವರು ಹೆಣ್ಣು ಮಕ್ಕಳು. ಅವರವರ ಪತಿ ಮನೆಯಲ್ಲಿದ್ದರು. ಹೀಗಾಗಿ 64 ವರ್ಷ ವರ್ಷದ ವೃದ್ಧೆ ತನ್ನ ಸ್ವಗ್ರಾಮದಲ್ಲಿ ಒಬ್ಬಳೇ ವಾಸವಿದ್ದಳು. ಆದ್ರ, ಬೆಳಿಗ್ಗೆ ಹೊರಗೆ ಬರಲಿಲ್ಲ. ಮೇಲಾಗಿ ಮನೆಯ ಬಾಗಿಲು ಸಹ ಓಪನ್ ಇತ್ತು. ಆದರೂ ವೃದ್ಧೆ ಮನೆಯಿಂದ ಹೊರಗೇ ಬರಲೇ ಇಲ್ಲ. ಹೋಗಿ ನೋಡಿದಾಗ ವೃದ್ಧೆ ಸತ್ತು ಬಿದ್ದಿದ್ದಳು.ಹಾರ್ಟ್ ಅಟ್ಯಾಕ್ ಆಗಿದೆ ಎಂದು ಶವ ಸಂಸ್ಕಾರಕ್ಕೆ ಸಿದ್ದತೆ ನಡೆಸಲಾಗಿತ್ತು. ಆದ್ರೆ, ಸಂಬಂಧಿಕನಿಗೆ ಬಂದ ಅನುಮಾನದಿಂದ ವೃದ್ಧೆ ಸಾವಿನ ರಹಸ್ಯ ಬಟಾಬಯಲಾಗಿದೆ.

ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಿನಲ್ಲಿ ಮಹತ್ವದ ಸಭೆ

ತಂಬಾಕು ದರ ಪಾತಾಳಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಆತಂಕಗೊಂಡಿದ್ದಾರೆ. ಹೀಗಾಗಿ ಈ ಸಂಬಂಧ ತಂಬಾಕು ಬೆಳೆಗಾರರು, ತಂಬಾಕು ಮಂಡಳಿ ಅಧಿಕಾರಿಗಳು ಇಂದು (ಫೆಬ್ರವರಿ 23) ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದರು. ಈ ಸಭೆಯಲ್ಲಿ ತಂಬಾಕು ಕೊಂಡುಕೊಳ್ಳುವ ಕಂಪನಿಗಳ ಪ್ರತಿನಿಧಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು.

  • Ram
  • Updated on: Feb 23, 2026
  • 8:19 pm

ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್: ಉತ್ತರ ಕರ್ನಾಟಕದ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬ, ಟಿಕೆಟ್ ದರ ಎಷ್ಟು?

ಹುಬ್ಬಳ್ಳಿಯಲ್ಲಿ ನಡೆಯಲಿರುವ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯವು ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ತಂಡಗಳಿಗೆ ಬಹಳ ಮುಖ್ಯ ಪಂದ್ಯವಾಗಿದೆ. ಕರ್ನಾಟಕ 11 ವರ್ಷಗಳ ನಂತರ ಫೈನಲ್ ತಲುಪಿದರೆ, ಜಮ್ಮು ಕಾಶ್ಮೀರ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದೆ. ಪಂದ್ಯ ವೀಕ್ಷಣೆಗೆ ಟಿಕೆಟ್ ದರ ಸೇರಿದಂತೆ ಇತರೆ ಮಾಹಿತಿ ಇಲ್ಲಿದೆ.

ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್​ ವಿವಾದಾತ್ಮಕ ಹೇಳಿಕೆ ವೈರಲ್

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಾದಗಿರಿಯಲ್ಲಿ ಗಾಂಧಿ ಭಾರತದ ರಾಷ್ಟ್ರಪಿತರಲ್ಲ, ಪಾಕಿಸ್ತಾನದವರು ಎಂದಿದ್ದಾರೆ. ನೆಹರೂ ಮೊದಲ ಪ್ರಧಾನಿಯಲ್ಲ, ನೇತಾಜಿ ಸುಭಾಷ್ ಚಂದ್ರ ಬೋಸ್ ಮೊದಲ PM ಆಗಿದ್ದರು ಎಂದು ವಾದಿಸಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ವೈರಲ್ ಆಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ

ಗದಗ ಜಿಲ್ಲೆಯ ಶಿರಹಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅವಧಿ ಮೀರಿದ ಔಷಧಿಗಳನ್ನು ವಿತರಿಸಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರಶ್ನಿಸಿದರೆ ಚಿಕಿತ್ಸೆಗೆ ಬಂದ ರೋಗಿಗಳನ್ನು ವೈದ್ಯರು ಹೊರಹಾಕಿ, ಗೂಂಡಾಗಳಂತೆ ವರ್ತಿಸುತ್ತಿದ್ದಾರೆಂದು ರೋಗಿಗಳು ಆರೋಪಿಸಿದ್ದಾರೆ. ಆಸ್ಪತ್ರೆಯು ಬಡವರ ಪಾಲಿಗೆ ಯಮಸ್ವರೂಪಿಯಾಗಿದೆ ಎಂದು ದೂರಿದ್ದಾರೆ.

ಬಾಗಲಕೋಟೆ ಬೂದಿ ಮುಚ್ಚಿದ ಕೆಂಡ: ಹಿಂದೂ ಸಂಘಟನೆಗಳ ತಂತ್ರಕ್ಕೆ ಪೊಲೀಸ್ ಪ್ರತಿತಂತ್ರ

ಶಿವಾಜಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಕಾವು ಶರಣರ ನಾಡಲ್ಲಿ ಇನ್ನೂ ಆರಿಲ್ಲ. ಬಾಗಲಕೋಟೆ ಸದ್ಯ ಬೂದಿ ಮುಚ್ಚಿದ ಕೆಂಡವಾಗಿದೆ. ಈ ಮಧ್ಯೆ ಹಿಂದೂ ಸಂಘಟನೆಗಳು ಬೃಹತ್ ಹೋರಾಟಕ್ಕೆ ಮುಂದಾಗಿವೆ. ಆದರೆ ಯಾವುದೇ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ಎಸ್​ಪಿ ಹೇಳಿದ್ದಾರೆ. ಆ ಮೂಲಕ ಸಂಘಟನೆಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸಿದ್ದಾರೆ.

ಇಂಥ ತಾಯಿಯೂ ಇರ್ತಾರಾ! ಮಗನಿಗಿಂತ ಸೀರೆಯೇ ಹೆಚ್ಚಾಯ್ತಾ?
ಇಂಥ ತಾಯಿಯೂ ಇರ್ತಾರಾ! ಮಗನಿಗಿಂತ ಸೀರೆಯೇ ಹೆಚ್ಚಾಯ್ತಾ?
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ