AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka

Karnataka

ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.

ಇನ್ನೂ ಹೆಚ್ಚು ಓದಿ

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಇನ್ಮುಂದೆ ರೈಲಿಗೆ ಹೆಚ್ಚು ಹೊತ್ತು ಕಾಯಬೇಕಿಲ್ಲ

ಕೊಲ್ಕತ್ತಾದ ಟಿಟಾಗರ್​​ದಿಂದ ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ 6ನೇ ಹೊಸ ಮೆಟ್ರೋ ರೈಲು ಡಿಸೆಂಬರ್​ 23ರಿಂದ ತನ್ನ ಸಂಚಾರ ಆರಂಭಿಸಲಿದೆ. ಆ ಮೂಲಕ ಬಿಎಂಆರ್​ಸಿಎಲ್​ ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​​ ನ್ಯೂಸ್​​ ಕೊಟ್ಟಿದೆ. ಇನ್ಮುಂದೆ ರೈಲಿಗಾಗಿ ಹೆಚ್ಚು ಹೊತ್ತು ಕಾಯುವ ಅವಶ್ಯಕತೆ ಇಲ್ಲ.

ಅಣ್ಣನಾಗಬೇಕಿದ್ದವನ ಜತೆ ಅನೈತಿಕ ಸಂಬಂಧ: ಸೆಲ್ಫಿ ವಿಡಿಯೋ ಮಾಡುತ್ತಾ ಮಹಿಳೆ ನೇಣಿಗೆ ಶರಣು

ನಾಲ್ಕು ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆಯ ಗಂಡನಿಂದ ವಿಚ್ಛೇದನ ಪಡೆದುಕೊಂಡು ದೂರವಾಗಿದ್ದಳು. ಬಳಿಕ ಆಕೆ ವಿವಾಹಿತ ಪುರುಷನ ಜೊತೆಗೆ ಸಂಬಂಧ ಇಟ್ಟು ಕೊಂಡಿದ್ದಳು. ಆದ್ರೆ, ಇದೀಗ ಅವನು ಸಹ ಕೈಕೊಟ್ಟಿದ್ದು, ದಿಕ್ಕುತೋಚದೇ ದುರಂತ ಅಂತ್ಯಕಂಡಿದ್ದಾಳೆ. ಸಂಬಂಧದಲ್ಲಿ ಅಣ್ಣನಾಗಬೇಕಿದ್ದವನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದುಮ ಇದೀಗ ಸೆಲ್ಫಿ ವಿಡಿಯೋನಲ್ಲಿ ಕೆಲವರ ಹೆಸರುಗಳನ್ನು ಹೇಳುತ್ತಾ ನೇಣಿಗೆ ಶರಣಾಗಿದ್ದಾಳೆ. ಅಷ್ಟಕ್ಕೂ ಆಗಿದ್ದೇನು? ಈ ಘಟನೆ ನಡೆದಿದ್ದೆಲ್ಲಿ ಎನ್ನುವ ವಿವರ ಈ ಕೆಳಗಿನಂತಿದೆ.

ಪೇಪರ್ ಪಾರಿವಾಳ ತಂದ ಅವಾಂತರ: ಮೊದಲ ಮಹಡಿಯಿಂದ ಬಿದ್ರೂ ಬದುಕುಳಿದ 5ರ ಬಾಲಕ

ಕೊಪ್ಪಳದ ಹಮಾಲರ ಕಾಲೋನಿಯಲ್ಲಿ 5 ವರ್ಷದ ಬಾಲಕ ಮೊದಲನೇ ಮಹಡಿಯಿಂದ ಬಿದ್ದು ಗಾಯಗೊಂಡಿದ್ದಾನೆ. ಬಿದ್ದ ರಭಸಕ್ಕೆ ಬಾಲಕನ ತಲೆಗೆ ಪೆಟ್ಟಾಗಿದ್ದು, ವೈದ್ಯರ ಪರೀಕ್ಷೆಯಲ್ಲಿ ಬಿರುಕು ಪತ್ತೆಯಾಗಿದೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಾಲಕ ಬಿಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎದೆ ಝಲ್​​ ಎನ್ನುವಂತಿದೆ.

ಕುಡಿದು ಮಠದಲ್ಲಿ ಸ್ವಾಮೀಜಿ ರಂಪಾಟ: ಮತ್ತಿನಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶ್ರೀ

ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಕುಡಿದು ರಂಪಾಟ ಮಾಡಿದ್ದಾರೆ. ಕೆಲ ತಿಂಗಳಿನಿಂದ ನಾಪತ್ತೆಯಾಗಿದ್ದ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಮಠದ ಶಾಂತಲಿಂಗ ಶಿವಾಚಾರ್ಯ, ಇದೀಗ ದಿಢೀರ್ ಮಠದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಮಠಕ್ಕೆ ಹೊಸ ಪೀಠಾಧಿಪತಿ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿರುವ ಸುದ್ದಿ ತಿಳಿದು ಸ್ವಾಮೀಜಿ ಮಠಕ್ಕೆ ವಾಪಸ್ ಆಗಿದ್ದಾರೆ. ಆದ್ರೆ, ಕುಡಿದು ಮಠದ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಮೂಲಕ ತಮ್ಮ ವಿರೋಧಿಗಳನ್ನ ಹೆದರಿಸಲು ಗುಂಡು ಹಾರಿಸಿದ್ರಾ ಎನ್ನುವ ಚರ್ಚೆಗಳು ನಡೆದಿದ್ದು, ಸದ್ಯ ಗುಂಡು ಹಾರಿಸಿರುವ ವಿಡಿಯೋ ವೈರಲ್ ಆಗಿದೆ.

ಕಲಬುರಗಿ: ಕಿದ್ವಾಯಿ ಆಸ್ಪತ್ರೆಯಲ್ಲಿನ ಎಸಿ ಕಳ್ಳತನ: ವೈದ್ಯರ ವಿರುದ್ದವೇ ಗಂಭೀರ ಆರೋಪ

ಕಲಬುರಗಿಯ ಬಡ ಜನರಿಗಾಗಿ ಇರುವ ಕಿದ್ವಾಯಿ ಆಸ್ಪತ್ರೆಯಲ್ಲಿ ಲಕ್ಷಾಂತರ ಮೌಲ್ಯದ ಎ.ಸಿ ಕಳ್ಳತನವಾಗಿರುವ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ವೈದ್ಯರೇ ಎ.ಸಿಗಳನ್ನು ತಮ್ಮ ನಿವಾಸಕ್ಕೆ ಬಳಸಿದ್ದಾರೆ. ಅಷ್ಟೇ ಅಲ್ಲದೆ ಔಷಧಿಗಳನ್ನೂ ಕದ್ದೊಯ್ದಿದ್ದಾರೆ ಎಂಬ ಗಂಭೀರ ಆರೋಪ ಮಾಡಲಾಗಿದೆ. ಈ ಕುರಿತು ಬಿಜೆಪಿ ಸಮಗ್ರ ತನಿಖೆಗೆ ಆಗ್ರಹಿಸಿದೆ.

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ

ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಮೆಟ್ರೋ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಹತ್ವದ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಸಂಚಾರ ದಟ್ಟಣೆ ಕಡಿಮೆಗೊಳಿಸುವ ಉದ್ದೇಶದಿಂದ ಮೆಟ್ರೋ ಜಾಲವನ್ನು ವ್ಯಾಪಕವಾಗಿ ವಿಸ್ತರಿಸಲಾಗುತ್ತಿದೆ. ಸದ್ಯ 96 ಕಿ.ಮೀ. ಮೆಟ್ರೋ ಚಾಲನೆಯಲ್ಲಿದ್ದು, ಡಿಸೆಂಬರ್ 2027ರ ವೇಳೆಗೆ 175 ಕಿ.ಮೀ.ಗೆ ಹೆಚ್ಚಳವಾಗಲಿದೆ. ದೇಶದಲ್ಲೇ ಮೊದಲ ಬಾರಿಗೆ 50 ಕಿ.ಮೀ. ಉದ್ದದ ಎಲಿವೇಟೆಡ್ ಕಾರಿಡಾರ್ ನಿರ್ಮಾಣದ ಯೋಜನೆಯೂ ಇದರಲ್ಲಿ ಸೇರಿದೆ.

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

ಹುಬ್ಬಳ್ಳಿಯ (Hubballi) ಮಾನ್ಯ ಹಾಗೂ ವಿವೇಕಾನಂದ ಇವರಿಬ್ಬರು ಜಾತಿ ಗಡಿ ಮೀರಿ ಪ್ರೀತಿ ಮಾಡಿದ್ರು.. ಹೆತ್ತವರನ್ನ ಎದುರುಹಾಕಿಕೊಂಡು ಮದುವೆಯನ್ನೂ ಮಾಡಿಕೊಂಡಿದ್ರು. ಮದುವೆಯಾಗಿ 7 ತಿಂಗಳು ಕಳೆದಿತ್ತು. ಯುವತಿ ಸಹ 6 ತಿಂಗಳ ಗರ್ಭಿಣಿಯಾಗಿದ್ಳು. ಆದ್ರೆ ಜಾತಿ ಅಮಲು ತಲೆಗೇರಿಸಿಕೊಂಡಿದ್ದ ಯುವತಿ ತಂದೆ, ಗರ್ಭಿಣಿ ಮಗಳನ್ನೇ ಬಡಿದುಕೊಂದಿದ್ದಾನೆ. ಈ ಮರ್ಯಾದೆಗೇಡು ಹತ್ಯೆಗೆ ಹುಬ್ಬಳ್ಳಿ( Hubballi Honor Killing) ಬೆಚ್ಚಿಬಿದ್ದಿದೆ.

ಅತ್ತ ಮದ್ವೆಯಾದ ಗಂಡನೂ ಇಲ್ಲ, ಇತ್ತ ಪ್ರಿಯಕರನೂ ಇಲ್ಲ: ಯುವತಿಯನ್ನು ಒಂಟಿ ಮಾಡಿದ ಆ ವಿಡಿಯೋ

ಅವರಿಬ್ಬರೂ ಪರಸ್ಪರ ಪ್ರೀತಿಸಿ ಯಾವುದೋ ಕಾರಣಕ್ಕೆ ಬೇರೆಯಾಗಿದ್ರು. ಯುವತಿ ಎಲ್ಲವನ್ನು ಮರೆತು ಬೇರೊಬ್ಬರನ ಜೊತೆ ಮದುವೆ ಮಾಡಿಕೊಂಡು ಗಂಡನ ಮನೆ ಸೇರಿದ್ದಳು. ಆದ್ರೆ ಮಾಜಿ ಪ್ರಿಯಕರ ಮಾಡಿದ ಅದೊಂದು ಕಿತಾಪತಿಗೆ ಆಕೆಯ ಸಂಚಾರವೇ ಛಿದ್ರ ಛಿದ್ರವಾಗಿದೆ. ಪತಿ ಜೊತೆಗೆ ಬದುಕಿ ಬಾಳಬೇಕಿದ್ದ ಆಕೆಯ ಸಾಂಸಾರಿಕ ಜೀವನ ತಿಂಗಳು ಕಳೆಯುವುದರ ಒಳಗೆ ಅಂತ್ಯ ಕಂಡಿದೆ. ಅತ್ತ ಗಂಡ ಮನೆಯಿಂದ ಆಚೆ ಹಾಕಿದ್ರೆ, ಇತ್ತ ಪ್ರಿಯಕರ ಸಹ ಸೇರಿಸಿಕೊಳ್ಳುತ್ತಿಲ್ಲ. ಇದರಿಂದ ಯುವತಿ ಕಂಗಾಲಾಗಿದ್ದಾಳೆ.

ಕೊರೆಯುವ ಚಳಿಗೆ ನಡುಗಿದ ವಿಜಯಪುರ: ಶಾಲೆ ಸಮಯ ಬದಲಾವಣೆ, ಡಿಸಿ ಆದೇಶಕ್ಕೂ ಕಿಮ್ಮತ್ತಿಲ್ಲ

ವಿಜಯಪುರ ಜಿಲ್ಲೆಯಲ್ಲಿ ಚಳಿ ತೀವ್ರಗೊಂಡಿದೆ. ಮುಂದಿನ ದಿನಗಳನ್ನು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಮಕ್ಕಳ ಆರೋಗ್ಯ ದೃಷ್ಟಿಯಿಂದ ಶಾಲಾ ಸಮಯವನ್ನು ಬದಲಾವಣೆ ಮಾಡಿ ಡಿಸಿ ಆದೇಶಿಸಿದ್ದಾರೆ. ಆದರೆ ಬಹುತೇಕ ಖಾಸಗಿ ಹಾಗೂ ಅನುದಾನಿತ ಶಾಲೆಗಳು ಈ ಆದೇಶವನ್ನು ಪಾಲಿಸುತ್ತಿಲ್ಲ. ಹೀಗಾಗಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಕೊನೆ ಸಲ ಮಗಳ ಮುಖ ನೋಡಲು ಬಾರದ ಪೋಷಕರು, ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ

ಬಿಗಿ ಪೊಲೀಸ್ ಬಂದೋಬಸ್ತ್​​​ ನಲ್ಲೇ ಇನಾಮ್‌ ವೀರಾಪುರ ಗ್ರಾಮದ ಹಳ್ಳದಲ್ಲಿ ಮಾನ್ಯಾಳ ಅಂತ್ಯಕ್ರಿಯೆ ಆಗಿದ್ದು, ಹುಟ್ಟಿಸಿ ಬೆಳೆಸಿದ್ದ ಮಗಳ ಅಂತಿಮದರ್ಶನಕ್ಕೂ ಮಾನ್ಯಾ ಪೋಷಕರು ಬಂದಿಲ್ಲ. ಹೀಗಾಗಿ ಹತ್ಯೆಯಾದ ವಿವೇಕಾನಂದ ಕುಟುಂಬಸ್ಥರೇ ಮಾನ್ಯಾಳ ಶವಸಂಸ್ಕಾರ ನೆರವೇರಿಸಿದ್ದಾರೆ. ಪತಿ ವಿವೇಕಾನಂದ ದೊಡ್ಮನಿ ಮಾನ್ಯಾಳ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ಗೋಳಾಡಿದ್ದು, ಪತಿ ವಿವೇಕಾನಂದ ಮಾನ್ಯಾಳನ್ನು ಪ್ರೀತಿಸಿ ಕೊನೆಯವರೆಗೂ ಕೈಬಿಟ್ಟಿಲ್ಲ. ಈ ಸನ್ನಿವೇಶ ನೆರೆದವರ ಕಣ್ಣಲ್ಲಿ ನೀರು ತರಿಸಿದೆ.

ಮೋಜು ಮಸ್ತಿಗಾಗಿ ಲವರ್​​ ಜತೆ ಸೇರಿ ಸ್ನೇಹಿತೆಯರಿಗೆ ಪಂಗನಾಮ ಹಾಕಿದ ಮಿತ್ರದ್ರೋಹಿ ಯುವತಿ

ಚಿಕ್ಕಬಳ್ಳಾಪುರದಲ್ಲಿ ಪ್ರೇಮಿಗಳ ಜೋಡಿಯೊಂದು ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಸ್ನೇಹಿತೆಯರಿಂದ ಲಕ್ಷಾಂತರ ರೂ. ವಂಚಿಸಿದ ಘಟನೆಯೊಂದು ಬಯಲಾಗಿದೆ. ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಪಂಗನಾಮ ಹಾಕಿದ್ದಾರೆ. ಸದ್ಯ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರೇಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ನಿಷೇಧಾಜ್ಞೆ ಜಾರಿ, ಹೊರಬರದಂತೆ ಸೂಚನೆ

ಚಾಮರಾಜನಗರ ತಾಲೂಕಿನ ನಂಜೆದೇವಪುರ ಬಳಿ 5 ಹುಲಿಗಳು ಪತ್ತೆಯಾಗಿವೆ. ಸೆರೆಹಿಡಿಯುವ ಕಾರ್ಯಾಚರಣೆ ಹಿನ್ನೆಲೆ ನಂಜೆದೇವಪುರ ಸೇರಿ ಮೂರು ಗ್ರಾಮಗಳಿಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಹಿತಕರ ಘಟನೆಗಳನ್ನು ತಪ್ಪಿಸಲು ನಾಗರಿಕರು ಮನೆಯಲ್ಲೇ ಇರುವಂತೆ ತಹಶೀಲ್ದಾರ್ ಆದೇಶಿಸಿದ್ದಾರೆ. ಇನ್ನು ಶಾಸಕ ಪುಟ್ಟರಂಗಶೆಟ್ಟಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ