Karnataka
ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.
ಕಾಂಗ್ರೆಸ್ ಪ್ರತಿಭಟನೆಯಲ್ಲೇ ASI ಮಾಂಗಲ್ಯ ಸರ ಕಳವು, ಲೇಡಿ ಪೊಲೀಸ್ ಚೈನ್ ಕದ್ದ ಆ ಕೈ ಯಾವುದು?
ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿಕೊಂಡು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಆ ವೇಳೆ ನೂಕುನುಗ್ಗಲಿನಲ್ಲಿ ಬಂದೋಬಸ್ತ್ನಲ್ಲಿದ್ದ ಲೇಡಿ ಪೊಲೀಸ್ ಅಧಿಕಾರಿಯ ಮಾಂಗಲ್ಯ ಸರ ಮಿಸ್ ಆಗಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆಯುವ ವೇಳೆಯಲ್ಲೇ ಎಎಸ್ಐ ಚಿನ್ನದ ಸರ ಕಳ್ಳತನವಾಗಿದ್ದು, ಮಹಿಳಾ ಪೊಲೀಸ್ ಕಣ್ಣೀರಿಟ್ಟಿದ್ದಾರೆ.
- Basavaraj Yaraganavi
- Updated on: Dec 18, 2025
- 6:26 pm
ಅತ್ತ ಸಿಎಂ ಕುರ್ಚಿಗಾಗಿ ಕದನ: ಇತ್ತ ಚಾಮರಾಜನಗರದಲ್ಲೂ ಸಹ ಕುರ್ಚಿ ಕಿತ್ತಾಟ
ಚಾಮರಾಜನಗರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸ್ಥಾನಕ್ಕಾಗಿ ಇಬ್ಬರು ಅಧಿಕಾರಿಗಳ ಮಧ್ಯೆ ತೀವ್ರ ಕಾದಾಟ ನಡೆಯುತ್ತಿದೆ. ವರ್ಗಾವಣೆಗೊಂಡ ಅಧಿಕಾರಿ ನ್ಯಾಯಾಲಯದಿಂದ ತಡೆ ತಂದಿದ್ದರೆ, ಮತ್ತೋರ್ವ ಅಧಿಕಾರಿ ಏಕಾಏಕಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ವಿವಾದ ಈಗ ಸಾರ್ವಜನಿಕ ನಗೆಪಾಟಲಿಗೀಡಾಗಿದೆ.
- Suraj Prasad SN
- Updated on: Dec 18, 2025
- 6:21 pm
ನಮ್ಮ ಮೆಟ್ರೋ ಹಳದಿ ಮಾರ್ಗ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು ತಲುಪಿದ ಡ್ರೈವರ್ಲೆಸ್ 7ನೇ ರೈಲು
ನಮ್ಮ ಮೆಟ್ರೋದ ಹಳದಿ ಮಾರ್ಗಕ್ಕೆ 7ನೇ ಚಾಲಕರಹಿತ ರೈಲು ಬೆಂಗಳೂರು ತಲುಪಿದೆ. ಇದು ಜನವರಿಯಲ್ಲಿ ವಾಣಿಜ್ಯ ಸಂಚಾರ ಆರಂಭಿಸಿ, ರೈಲುಗಳ ನಡುವಿನ ಓಡಾಟದ ಸಮಯವನ್ನು 8-10 ನಿಮಿಷಗಳಿಗೆ ಇಳಿಸಲಿದೆ. ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ ಸಂಪರ್ಕ ಕಲ್ಪಿಸುವ ಈ ಮಾರ್ಗದಲ್ಲಿ ಪ್ರಯಾಣಿಕರಿಗೆ ವೇಗದ ಸೇವೆ ಲಭ್ಯವಾಗಲಿದೆ. ಪಿಂಕ್ ಲೈನ್ ಮೆಟ್ರೋ 2026ರ ಮೇ ತಿಂಗಳಲ್ಲಿ ಚಾಲಕ ರಹಿತ ರೈಲುಗಳೊಂದಿಗೆ ಆರಂಭವಾಗುವ ನಿರೀಕ್ಷೆಯಿದೆ.
- Kiran Surya
- Updated on: Dec 18, 2025
- 5:45 pm
ಪ್ರೀತಿ ಹೆಸರಲ್ಲಿ ಕಾಮದ ತೀಟೆ ತೀರಿಸಿಕೊಂಡ ಪ್ರಿಯಕರ: ಸಾಲದಕ್ಕೆ ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ
ಆಕೆ ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿನಿ. ಆಕೆಯನ್ನ ಆದೊಬ್ಬ ಕಾಮುಕ ಪ್ರೀತಿಯ ಹೆಸರಲ್ಲಿ ತನ್ನ ಬಲೆಗೆ ಬೀಳಿಸಿಕೊಂಡಿದ್ದ. ಆನಂತರ ಬಣ್ಣ ಬಣ್ಣದ ಮಾತುಗಳೊಂದಿಗೆ ಆಕೆಯನ್ನು ಮಂಚಕ್ಕೆ ಕರೆಸಿಕೊಂಡು ತನ್ನ ಕಾಮದ ತೀಟೆ ತೀರಿಸಿಕೊಂಡಿದ್ದಾನೆ. ಅಲ್ಲದೇ ಅದನ್ನ ವಿಡಿಯೋ ಮಾಡಿಕೊಂಡಿದ್ದು, ಬಳಿಕ ಪ್ರೇಯಿಸಿಗೆ ಬ್ಲ್ಯಾಕ್ ಮೇಲ್ ಮಾಡಿ ತನ್ನಿಬ್ಬರು ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
- Prashantha B
- Updated on: Dec 18, 2025
- 5:23 pm
ಕೊಡಗಿನಲ್ಲಿ ವಿಶಿಷ್ಟ ಕೋವಿ ಹಬ್ಬ: ಬಂದೂಕಿಗೆ ಪೂಜೆ, ಗುಂಡು ಹೊಡೆದು ಶೌರ್ಯ ಮೆರೆದ ಕೊಡವರು
ಕೊಡಗಿನಲ್ಲಿ ವಿಶಿಷ್ಟ ಕೋವಿ ಹಬ್ಬ ನಡೆಯುತ್ತದೆ. ಈ ಕೋವಿ ಹಬ್ಬದಲ್ಲಿ ಕೊಡಗಿನ ಮೂಲನಿವಾಸಿಗಳ ಬಳಿಯಿರುವ ಬಂದೂಕನ್ನು ಪೂಜಿಸಲಾಗುತ್ತದೆ. ಬ್ರಿಟಿಷರ ಕಾಲದಿಂದಲೇ ಕೊಡಗಿನ ಮೂಲನಿವಾಸಿಗಳಿಗೆ ಬಂದೂಕು ಹೊಂದುವ ವಿಶೇಷ ಅಧಿಕಾರವಿರುವುದು ಈ ಹಬ್ಬದ ವಿಶೇಷ. ಇದು ಕೊಡವರ ಸಾಂಸ್ಕೃತಿಕ ಹೆಗ್ಗಳಿಕೆ ಆಗಿದೆ. ಈ ಹಬ್ಬದ ಚಿತ್ರನೋಟ ಇಲ್ಲಿದೆ ನೋಡಿ.
- Gopal AS
- Updated on: Dec 18, 2025
- 5:02 pm
ಮುಡಾ ಕೇಸ್ ವಿಚಾರಣೆ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ: ವಾದ-ಪ್ರತಿವಾದ ಹೇಗಿತ್ತು?
ಮುಡಾ ಸೈಟ್ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಲೋಕಾಯುಕ್ತ ಬಿ-ವರದಿಗೆ ದೂರುದಾರ ಸ್ನೇಹಮಯಿ ಕೃಷ್ಣ ಆಕ್ಷೇಪ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ. ತನಿಖೆ ಅಂತಿಮ ಹಂತದಲ್ಲಿದೆ ಎಂದು ಲೋಕಾಯುಕ್ತ ತಿಳಿಸಿದ್ದು, ದೂರುದಾರರು ತನಿಖೆ ವಿಳಂಬದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಬಿ ರಿಪೋರ್ಟ್ ಸಂಬಂಧಿಸಿದಂತೆ ಹೆಚ್ಚುವರಿ ವಾದಮಂಡನೆಯಿದ್ದರೆ ಸಲ್ಲಿಸಿ ಎಂದು ಇಡಿ, ದೂರುದಾರಿಗೆ ಸೂಚಿಸಿದೆ.
- Ramesha M
- Updated on: Dec 18, 2025
- 5:31 pm
ಸದನದಲ್ಲಿ ಚರ್ಚೆ ಬೆನ್ನಲ್ಲೇ ಶಕ್ತಿ ಯೋಜನೆ ಹಣ ಬಾಕಿ ರಿಲೀಸ್: ಯಾವ ನಿಗಮಕ್ಕೆ ಎಷ್ಟು?
ಶಕ್ತಿ ಯೋಜನೆ ಮೂಲಕ ಲಕ್ಷಾಂತರ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದರೂ, ಇದು ರಾಜ್ಯ ಸಾರಿಗೆ ನಿಗಮಗಳಿಗೆ ಆರ್ಥಿಕ ಸಂಕಷ್ಟ ತಂದಿದೆ. ಈ ಬಗ್ಗೆ ಸದನದಲ್ಲೂ ಚರ್ಚೆ ಬೆನ್ನಲ್ಲೇ ಇದೀಗ ನವೆಂಬರ್ ತಿಂಗಳ ಅನುದಾನವಾಗಿ 441 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ ಶಕ್ತಿ ಯೋಜನೆಯ ಬಾಕಿ 4006 ಕೋಟಿ ರೂ. ಹಣ ಹಾಗೆಯೇ ಉಳಿದಿದೆ.
- Prasanna Gaonkar
- Updated on: Dec 18, 2025
- 4:15 pm
BPL ಕಾರ್ಡ್ದಾರರಿಗೆ ಶೀಘ್ರವೇ ಗುಡ್ನ್ಯೂಸ್?: ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ
ಕರ್ನಾಟಕದಲ್ಲಿ BPL ಕಾರ್ಡ್ ಪಡೆಯಲು ಇದ್ದ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ. ಸಚಿವ ಕೆ.ಹೆಚ್. ಮುನಿಯಪ್ಪ ಅವರು ಕೇಂದ್ರದ ಮಿತಿಯ ನಡುವೆಯೂ ವಾಸ್ತವಿಕ ಆದಾಯದ ನಡುವಿನ ವ್ಯತ್ಯಾಸವನ್ನು ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ಶೇ.73ರಷ್ಟು ಕುಟುಂಬಗಳು BPL ಕಾರ್ಡ್ ಹೊಂದಿದ್ದು, ಇದನ್ನು ಪರಿಷ್ಕರಿಸುವ ಅಗತ್ಯವಿದೆ. ಪರಿಷ್ಕರಣೆ ಪ್ರಕ್ರಿಯೆ ಮುಗಿಯುವವರೆಗೆ ಯಾವುದೇ BPL ಕಾರ್ಡ್ಗಳನ್ನು ರದ್ದುಗೊಳಿಸುವುದಿಲ್ಲ ಎಂದಿದ್ದಾರೆ.
- Kiran Haniyadka
- Updated on: Dec 18, 2025
- 3:52 pm
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿ ಬಿದ್ದ ಕಾರು
ಬೈಕ್ ಸವಾರನನ್ನ ಬಚಾವು ಮಾಡಲು ಹೋಗಿ ಕಾರು ಹತ್ತು ಅಡಿ ಮೇಲೇ ಹಾರಿ ಬುಗುರಿ ತಿರುಗಿದಂತೆ ತಿರುಗಿ ಮತ್ತೆ ರಸ್ತೆ ಮೇಲೆ ಬಿದ್ದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೌಡಿಯಾಳ ಬಳಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಕಾರಿಗೆ ಬೈಕ್ ಅಡ್ಡ ಬಂದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಹತ್ತು ಅಡಿ ಮೇಲಕ್ಕೆ ಹಾರಿ ಬಿದ್ದಿದ್ದು, ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
- Ramesh B Jawalagera
- Updated on: Dec 18, 2025
- 3:18 pm
ರಾಜ್ಯದ 1,800 ಹಳ್ಳಿಗಿಲ್ಲ ಬಸ್ ಸಂಪರ್ಕ: ಸಾರಿಗೆ ಸಚಿವರೇ ಕೊಟ್ರು ಶಾಕಿಂಗ್ ಮಾಹಿತಿ
ರಾಜ್ಯದ 1800ಕ್ಕೂ ಹೆಚ್ಚು ಗ್ರಾಮಗಳಿಗೆ ಬಸ್ ಸಂಪರ್ಕವಿಲ್ಲ, ಇದರಿಂದ ಜನರು, ವಿಶೇಷವಾಗಿ ಮಹಿಳೆಯರು, ಬಸ್ಗಳಿಗಾಗಿ 2 ಕಿ.ಮೀ. ನಡೆಯಬೇಕಿದೆ. ರಸ್ತೆಗಳ ದುಸ್ಥಿತಿ ಇದಕ್ಕೆ ಪ್ರಮುಖ ಕಾರಣ. ಸಾರಿಗೆ ಸಚಿವರು ಈ ಮಾಹಿತಿ ಬಹಿರಂಗಪಡಿಸಿದ್ದು, KSRTC ವ್ಯಾಪ್ತಿಯಲ್ಲಿರುವ ಈ ಗ್ರಾಮಗಳಲ್ಲಿ ಸಮೀಕ್ಷೆ ನಡೆಸಿ ಸೇವೆ ವಿಸ್ತರಿಸುವುದಾಗಿ ಭರವಸೆ ನೀಡಿದ್ದಾರೆ. ಶಕ್ತಿ ಯೋಜನೆಯ ಲಾಭ ಪಡೆಯಲು ಸಹ ಇದು ಅಡ್ಡಿಯಾಗಿದೆ.
- Prasanna Hegde
- Updated on: Dec 18, 2025
- 3:19 pm
ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಮತ್ತೆ ಕೊಕ್: ಸಚಿವರ ಸೂಚನೆಗೂ ಕಿಮ್ಮತ್ತಿಲ್ಲ; ಸಿಡಿದೆದ್ದ ಕರವೇ
ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಕಡೆಗಣನೆ ಆರೋಪ ಮತ್ತೆ ಮುನ್ನಲೆಗೆ ಬಂದಿದೆ. ಈ ಕುರಿತಾಗಿ ಕರ್ನಾಟಕ ರಕ್ಷಣಾ ವೇದಿಕೆ ಸಿಡಿದೆದ್ದಿದೆ. ಕೂಡಲೇ ಪರೀಕ್ಷೆ ರದ್ದುಗೊಳಿಸಿ ಎಲ್ಲಾ ಪ್ರಾದೇಶಿಕ ಭಾಷೆಯಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಇಲ್ಲವಾದಲ್ಲಿ ಉಗ್ರಹೋರಾಟ ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿದೆ.
- Kiran Surya
- Updated on: Dec 18, 2025
- 3:12 pm
ತನ್ನದೇ ಪೊಲೀಸ್, ನ್ಯಾಯಾಲಯ, ಕಾನೂನು: ಬೆಂಗಳೂರಿನಲ್ಲಿ ಹೀಗೊಂದು ಅಪಾರ್ಟ್ಮೆಂಟ್ ರಾಜ್ಯ!
ಬೆಂಗಳೂರಿನ ಅಪಾರ್ಟ್ಮೆಂಟ್ ಅಸೋಸಿಯೇಷನ್ ಒಂದು ತನ್ನದೇ ಕಾನೂನು, ದಂಡ ವ್ಯವಸ್ಥೆ ಜಾರಿಗೆ ತಂದು ಲಕ್ಷಾಂತರ ರೂ. ವಸೂಲಿ ಮಾಡಿದ್ದು, ಇದೀಗ ಪೊಲೀಸ್ ಕೆಂಗಣ್ಣಿಗೆ ಗುರಿಯಾಗಿದೆ. ಅಕ್ರಮ ವಸ್ತು ಸಾಗಾಟ, ಮಾದಕವಸ್ತು ಸೇವನೆ, ನಿವಾಸಿಗಳ ದುರ್ವರ್ತನೆಗಳಿಗೆ ಅಪಾರ್ಟ್ಮೆಂಟೇ ಕಾನೂನುಬಾಹಿರವಾಗಿ ದಂಡ ಸಂಗ್ರಹ ಮಾಡಿದೆ. ಸದ್ಯ ಪೊಲೀಸ್ ತನಿಖೆ ಪ್ರಗತಿಯಲ್ಲಿದೆ.
- Ganapathi Sharma
- Updated on: Dec 18, 2025
- 1:51 pm