Karnataka
ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.
ಎಣ್ಣೆ ಪಾರ್ಟಿಗೆ ಬಂದು ಗೆಳೆಯನ ಹೆಂಡ್ತಿ ಜತೆ ಚಕ್ಕಂದ: ಕಣ್ಣಾರೆ ಕಂಡ ಪತಿ ಮಾಡಿದ್ದೇನು ಗೊತ್ತಾ?
ಇಬ್ಬರು ಒಂದೇ ತಾಯಿ ಹೊಟ್ಟೆಯಲ್ಲಿ ಹುಟ್ಟದೇ ಇರಬಹುದು. ಆದರೆ ಒಂದೇ ತಟ್ಟೆಯಲ್ಲಿ ಉಂಡು- ಕುಡಿದು ಬೆಳೆದವರು. ಆದರೆ ತಮ್ಮನ ರೀತಿಯಲ್ಲಿ ಗೆಳೆಯನನ್ನು ಮನೆಗೆ ಕರೆದು ಎಣ್ಣೆ ಕೊಟ್ಟು ಊಟ ಹಾಕಿದ್ದಾನೆ. ಆದ್ರೆ, ಸ್ನೇಹಿತ ಮಾತ್ರ ಆತನ ಮಡದಿ ಮೇಲೆ ಕಣ್ಣು ಹಾಕಿದ್ದಾನೆ. ಎಣ್ಣೆಗೆ ಸೈಡ್ಸ್ ತರಲು ಹೋದಾಗ ಗೆಳೆಯ ತನ್ನ ಹೆಂಡ್ತಿ ಜತೆ ಚಕ್ಕಂದವಾಡತ್ತಿರುವುದನ್ನು ಕಣ್ಣಾರೆ ಕಂಡಿದ್ದಾನೆ. ಮೇಲೆ ನಡೆದಿದ್ದು ಎಲ್ಲವೂ ರಕ್ತಸಿಕ್ತ ಚರಿತ್ರೆ.
- Web contact
- Updated on: Dec 12, 2025
- 10:37 pm
ಕನ್ನಡ ಚಿತ್ರರಂಗದ ಮೇಕಪ್ ಆರ್ಟಿಸ್ಟ್ ಮನೆಯಲ್ಲಿ ಚಿನ್ನಾಭರಣ ಕಳ್ಳತನ: 24 ಗಂಟೆಯಲ್ಲೇ ಆರೋಪಿಗಳ ಬಂಧನ
ಕನ್ನಡ ಚಿತ್ರರಂಗದಲ್ಲಿ ಮೇಕಪ್ ಆರ್ಟಿಸ್ಟ್ ಆಗಿದ್ದ ಕಲಾವಿದೆ ಮನೆಯಲ್ಲಿ ಕಳ್ಳತನ ನಡೆದಿರುವಂತಹ ಘಟನೆ ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣದಲ್ಲಿ ನಡೆದಿದೆ. ಚಿನ್ನಾಭರಣ ಸೇರಿ ಚಿನ್ನದ ಪದಕವನ್ನು ಕಳ್ಳರು ಹೊತ್ತೊಯ್ದಿದ್ದರು. ಪ್ರಕರಣ ದಾಖಲಾದ 24 ಗಂಟೆಯಲ್ಲೇ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
- Jagadisha B
- Updated on: Dec 12, 2025
- 10:28 pm
ಹಣೆಗೆ ಬಾಸಿಂಗ, ತಲೆಗೆ ಪೇಟ: ರೈತರ ಪರವಾಗಿ ತಾಂಬೂಲ ಹಿಡಿದು ಡಿಸಿ ಆಫೀಸಿಗೆ ಹೆಣ್ಣು ಕೇಳಲು ಬಂದ ಬಿಜೆಪಿಗರು
ಹೆಣ್ಣೆತ್ತವರು ರೈತರ ಮಕ್ಕಳಿಗೆ ಹೆಣ್ಣು ಕೊಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಮಂಡ್ಯ ಜಿಲ್ಲೆಯೊಂದರಲ್ಲೇ ಮದುವೆಯಾಗದೆ ಸಾವಿರಾರು ಯುವಕರು ಉಳಿದುಕೊಂಡಿದ್ದು, ಅವರ ಪರವಾಗಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿನೂತ ಪ್ರತಿಭಟನೆ ಮಾಡಲಾಯಿತು. ಶಾದಿ ಭಾಗ್ಯ ಮಾದರಿ ಹೊಸ ಯೋಜನೆ ಜಾರಿಗೊಳಿಸುವಂತೆ ಪ್ರತಿಭಟನಾಕಾರರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
- Dileep CP
- Updated on: Dec 12, 2025
- 9:37 pm
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ಸಕ್ಕರೆ ನಾಡು ಮಂಡ್ಯ ಕೃಷಿ ಪ್ರಧಾನ ಜಿಲ್ಲೆ. ಇಲ್ಲಿನ ಜನರ ಜೀವನಕ್ಕೆ ಕೃಷಿಯೇ ಆಧಾರ. ಒಂದುಕಡೆ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ರೆ ಮತ್ತೊಂದೆಡೆ ರೈತರು ತಮ್ಮ ಗಂಡು ಮಕ್ಕಳಿಗೆ ಮದುವೆ ಮಾಡೋದಕ್ಕೆ ಪರಿತಪಿಸುವಂತಾಗಿದೆ. ಕಾರಣ ಹೆಣ್ಣೆತ್ತವರು ರೈತರ ಮಕ್ಕಳಿಗೆ ಹೆಣ್ಣು ಕೊಡೋದಕ್ಕೆ ಹಿಂದೇಟು ಹಾಕ್ತಿದ್ದಾರೆ. ಇದು ಸದ್ಯ ಸಾಮಾಜಿಕ ಪಿಡುಗಾಗಿ ಮಾರ್ಪಾಡಾಗಿದೆ. ಇನ್ನು 35 ವರ್ಷ ಕಳೆದರೂ ಹೆಣ್ಣು ಸಿಗದ್ದಿದ್ದಕ್ಕೆ ಇತ್ತೀಚೆಗೆ ಅವಿವಾಹಿತರು ಮಾದಪ್ಪನ ಮೊರೆಯೋಗಿದ್ರು. ಹೆಣ್ಣು ಸಿಗಲಿ ಅಂತ ಹರಕೆ ಕಟ್ಟಿಕೊಂಡು ಪಾದಯಾತ್ರೆ ನಡೆಸಿದ್ರು. ಇದೀಗ ಅವರ ಪರವಾಗಿ ಬಿಜೆಪಿ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದು, ಹೊಸದೊಂದು ಯೋಜನೆ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
- Ramesh B Jawalagera
- Updated on: Dec 12, 2025
- 9:22 pm
ಚಿಕ್ಕಮಗಳೂರು: ಧರ್ಮ ಸಂಘರ್ಷಕ್ಕೆ ಕಾರಣವಾಯ್ತು ಕ್ರಿಸ್ಮಸ್ ಶಾಲಾ ರಜೆ
ಕ್ರಿಶ್ಚಿಯನ್ ಒಡೆತನದ ಶಾಲೆಗಳಲ್ಲಿ ಕ್ರಿಸ್ಮಸ್ಗೆ ನೀಡುವ 10 ದಿನದ ರಜೆ ಸದ್ಯ ವಿವಾದಕ್ಕೆ ಕಾರಣವಾಗಿದೆ. ಈ ಕುರಿತಾಗಿ ಶ್ರೀರಾಮಸೇನೆ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಿಸ್ಮಸ್ಗೆ ಒಂದೇ ದಿನ ರಜೆ ನೀಡುವಂತೆ ಪಟ್ಟುಹಿಡಿದೆ. ಇಲ್ಲಾಂದ್ರೆ ರಾಜ್ಯಾದ್ಯಂತ ಹೋರಾಟ ಮಾಡುವ ಎಚ್ಚರಿಕೆ ನೀಡಿದೆ. ಏನಿದು ಹೊಸ ವಿವಾದ?
- Ashwith Mavinaguni
- Updated on: Dec 12, 2025
- 8:40 pm
ವಿಶ್ವ ವಿಖ್ಯಾತ ಮೈಸೂರು ಅರಮನೆ ಅಪಾಯದಲ್ಲಿದೆಯಾ? ಆ ಘಟನೆ ಮುನ್ಸೂಚನೆ ಕೊಡ್ತಾ?
ಮೈಸೂರು ಅರಮನೆ ಎಂದೂ ಕರೆಯಲ್ಪಡುವ ಅಂಬಾ ವಿಲಾಸ ಅರಮನೆಯು ಒಂದು ಕಾಲದಲ್ಲಿ ಮೈಸೂರು ಸಾಮ್ರಾಜ್ಯದ ಕೇಂದ್ರವಾಗಿತ್ತು. ಇದೀಗ ವಿಶ್ವ ವಿಖ್ಯಾತ ಮೈಸೂರು ಅರಮನೆ ಅಪಾಯದಲ್ಲಿದೆಯಾ? ಕಟ್ಟಡ ಶಿಥಿಲಗೊಂಡಿದೆಯಾ ? ಯಾವಾಗ ಬೇಕಾದರೂ ಕುಸಿದು ಬೀಳುತ್ತಾ ? ಇಂತಹ ಅನುಮಾನಕ್ಕೆ ಕಾರಣವಾಗಿರೋದು ಇಂದು ಅರಮನೆ ದ್ವಾರದ ಬಳಿಯ ಮೇಲ್ಚಾವಣಿಯ ಗಾರೆ ಕಳಚಿ ಕೆಳಗೆ ಬಿದ್ಷಿರುವುದು.
- Ram
- Updated on: Dec 12, 2025
- 8:31 pm
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಡಿನ್ನರ್ ಮೀಟಿಂಗ್ ಮೂಲಕ ಶಕ್ತಿ ಪ್ರದರ್ಶನನಾ ಎಂಬ ವಿಚಾರವಾಗಿ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನನ್ನ ಹಿಂದೆ ಯಾರೂ ಬರೋದು ಬೇಡ, ಯಾವ ಪ್ರದರ್ಶನ ಬೇಡ. ಕಾಂಗ್ರೆಸ್ನ 140 ಶಾಸಕರು ಕೂಡ ಒಂದೇ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
- Anil Kalkere
- Updated on: Dec 12, 2025
- 8:10 pm
ದರ್ಗಾ ಸಮೀಪ ಕಾರ್ತಿಕ ದೀಪ ಹಚ್ಚಲು ಅನುಮತಿ: ಜಡ್ಜ್ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕದ ಕೈ ಸಂಸದರು
ದರ್ಗಾದ ಸಮೀಪದಲ್ಲಿರುವ ಸ್ಥಳದಲ್ಲಿ ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿ ಕೋರ್ಟ್ ಅನುಮತಿ ನೀಡಿದ್ದು, ಇದರು ಭಾರೀ ಪರ ವಿರೋಧದ ಚರ್ಚೆಗೆ ಗ್ರಾಸವಾಗಿದೆ. ಇದೀಗ ಆದೇಶ ನೀಡಿದ ನ್ಯಾಯಮೂರ್ತಿಯನ್ನು ಪದಚ್ಯುತಿಗೊಳಿಸಬೇಕೆಂಬ ಆಗ್ರಹ ವ್ಯಕ್ತವಾಗಿದ್ದು, ಮಹಾಭಿಯೋಗ ನೋಟೀಸ್ಗೆ ಕರ್ನಾಟಕ ಕಾಂಗ್ರೆಸ್ನ ಮೂವರು ಸಂಸದರು ಸಹಿ ಹಾಕಿದ್ದಾರೆ.ಈ ಮೂಲಕ ಹಿಂದೂಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಏನಿದು ಪ್ರಕರಣ? ಸಹಿ ಹಾಕಿದ ಕರ್ನಾಟಕದ ಸಂಸದರು ಯಾರು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
- Ramesh B Jawalagera
- Updated on: Dec 12, 2025
- 7:46 pm
ಬದುಕಿರುವ ಮಹಿಳೆಗೆ ಡೆತ್ ಸರ್ಟಿಫಿಕೇಟ್: ಆಸ್ತಿಗಾಗಿ ಬದುಕಿರುವ ವೃದ್ಧೆಯನ್ನೇ ಸಾಯಿಸಿದ್ರು!
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿ ಒಂದುವರೆ ಎಕರೆ ಭೂಮಿ ಲಪಟಾಯಿಸಲು ದೊಡ್ಡ ಗೋಲ್ಮಾಲೇ ನಡೆದಿದೆ. ವೃದ್ಧೆ ಬದುಕಿರುವಾಗಲೇ ಮರಣ ಪ್ರಮಾಣ ಪತ್ರ ಸಿದ್ಧಪಡಿಸಿ ಆಸ್ತಿ ಲಪಟಾಯಿಸಿದ ಆರೋಪ ಕೇಳಿಬಂದಿದೆ. ನಕಲಿ ದಾಖಲೆ ಸೃಷ್ಟಿಸಿ ವಂಚಿಸಿರುವ ವ್ಯಕ್ತಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗಿದೆ.
- Manjunath KB
- Updated on: Dec 12, 2025
- 7:23 pm
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರ ಪ್ರತಿಭಟನೆ ವೇಳೆ ಯುವಕನೋರ್ವ ರೈತರಿಗೆ ಕನ್ಯಾ ಕೊಡತ್ತಿಲ್ಲ ಎಂದು ಹೇಳಿದ್ದಾರೆ. ಈ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಬೆಳಗಾವಿ ಡಿಸಿ ಮಹ್ಮದ್ ರೋಷನ್ ನಿಮಗೆ ಹೆಣ್ಣು ಹುಡುಕಿ ಕೊಡುತ್ತೇವೆ ಎಂದು ಹೇಳಿದ್ದಾರೆ. ನಗರದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟಿಸಿದ್ದಾರೆ.
- Sahadev Mane
- Updated on: Dec 12, 2025
- 6:29 pm
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಪ್ರೀತಿಸಿ, ದೈಹಿಕ ಸಂಪರ್ಕ ಬೆಳೆಸಿ ನಂತರ ಮದುವೆಯ ನಾಟಕವಾಡಿ ಮೋಸ ಮಾಡಿದ ಆರೋಪದ ಮೇಲೆ ಯುವಕನೊಬ್ಬನ ಅದ್ಧೂರಿ ಮದುವೆಯನ್ನು (Marriage) ಸಂತ್ರಸ್ತ ಯುವತಿ ನಿಲ್ಲಿಸಿದ ಘಟನೆ ರಾಯಚೂರು (Raichur) ನಗರದಲ್ಲಿ ನಡೆದಿದೆ. ಬಳ್ಳಾರಿಯಲ್ಲಿ ಓದುತ್ತಿದ್ದ ವೇಳೆ ರಿಷಬ್, ಕೊಪ್ಪಳದ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಗರ್ಭಪಾತ ಮಾಡಿಸಿ ಕೈಕೊಟ್ಟಿದ್ದು, ಇದೀಗ ಬೇರೆ ಯುವತಿ ಜತೆ ಮದುವೆ ಮಾಡಿಕೊಳ್ಳಲು ಮುಂದಾಗಿದ್ದ.
- Ramesh B Jawalagera
- Updated on: Dec 12, 2025
- 6:03 pm
ಡಿ 16ರಂದು ಸುತ್ತೂರು ಜಯಂತೋತ್ಸವಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು: ಮಳವಳ್ಳಿಯಲ್ಲಿ ಬಿಗಿ ಭದ್ರತೆ
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯುವ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಲಿದ್ದಾರೆ. ಹಾಗಾಗಿ ಡಿಸೆಂಬರ್ 16ರಂದು ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸದ್ಯ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಳವಳ್ಳಿಗೆ ದ್ರೌಪದಿ ಮುರ್ಮು ಭೇಟಿಯ ಸಂಪೂರ್ಣ ಮಾಹಿತಿ ಇಲ್ಲಿದೆ.
- Kiran Haniyadka
- Updated on: Dec 12, 2025
- 5:53 pm