Karnataka

Karnataka

ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.

ಇನ್ನೂ ಹೆಚ್ಚು ಓದಿ

ಸೂರಜ್​ಗೆ ಮತ್ತೊಂದು ಸಂಕಷ್ಟ: ಆಪ್ತನೇ ಸಂತ್ರಸ್ತ ಈಗ ಸ್ಫೋಟಕ ಹೇಳಿಕೆ

ಸೂರಜ್ ರೇವಣ್ಣ(Suraj Revanna)​ನಿಂದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಇಂತಹುದೇ ಆರೋಪ ಕೇಳಿಬಂದಿದ್ದು, ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲೇ ಸೂರಜ್ ವಿರುದ್ಧ ಐಪಿಸಿ ಸೆಕ್ಷೆನ್ 377,342,506 ಅಡಿ ಎಫ್​ಐಆರ್ ದಾಖಲಾಗಿದೆ.

ಜೆಡಿಎಸ್ ಫ್ಲೆಕ್ಸ್​ಗಳಲ್ಲಿ ದೇವೇಗೌಡರ ಹಿರಿಯ ಮಗ ಹೆಚ್​ಡಿ ರೇವಣ್ಣ ಫೋಟೋಗೆ ಕೋಕ್

ಅದ್ಯಾಕೋ ಗೊತ್ತಿಲ್ಲ ಒಂದಿಲ್ಲೊಂದು ವಿವಾದಗಳು ಮಾಜಿ ಸಚಿವ ರೇವಣ್ಣ ಕುಟುಂಬವನ್ನ ಸುತ್ತಿಕೊಳ್ಳುತ್ತಿವೆ. ಇದು ಜೆಡಿಎಸ್ ಪಾಳಯಕ್ಕೂ ಕೂಡ ದೊಡ್ಡ ಮಟ್ಟಿನ ಪೆಟ್ಟನ್ನ ಕೊಟ್ಟಿದೆ. ಹೀಗಾಗಿ ದಳಪತಿಗಳು ರೇವಣ್ಣನಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದು, ಫೆಕ್ಸ್ ಗಳಲ್ಲಿ ರೇವಣ್ಣ ಭಾವಚಿತ್ರ ಹಾಕದೇ ಅಂತರ ಕಾಯ್ದುಕೊಂಡಿದೆ.

ಚಿಕಿತ್ಸೆಗೆ ಬಂದ ವೃದ್ಧಗೆ ಮೆಹಂದಿ ಕೋನ್‌ ʼಔಷಧಿʼ: ಸ್ಪಷ್ಟನೆ ನೀಡಿದ ಹಾಸನ ವೈದ್ಯಾಧಿಕಾರಿ

ಕಾಲಿನ ಮೂಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ವೃದ್ಧರೊಬ್ಬರಿಗೆ ಹಾಸನ ಜಿಲ್ಲಾಸ್ಪತ್ರೆ ನರ್ಸ್​ ಮೆಹಂದಿ ಕೋನ್‌ ಔಷಧಿ ಬರೆದುಕೊಟ್ಟಿದ್ದಾರೆ. ಅಚ್ಚರಿ ಎನ್ನಿಸಿದರೂ ಸತ್ಯ. ಮೆಹಂದಿ ಕೋನ್‌ ಬರೆದುಕೊಟ್ಟಿರುವ ಔಷಧಿ ಚೀಟಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ಇದರ ಬೆನ್ನಲ್ಲೇ ಈ ಬಗ್ಗೆ ಟಿವಿ9, ಹಾಸನ ವೈದ್ಯಾಧಿಕಾರಿಯನ್ನು ಸಂಪರ್ಕಿಸಿದ್ದು, ಮೆಹಂದಿ ಕೋನ್‌ ತರಲು ಹೇಳಿದ್ದು, ನಿಜ ಎಂದು ಒಪ್ಪಿಕೊಂಡಿದ್ದಾರೆ. ಹಾಗೇ ಅದರ ಬಳಕೆಯ ಮಹತ್ವವನ್ನೂ ಸಹ ತಿಳಿಸಿದ್ದಾರೆ.

ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ

ಕಬಾಬ್​ನಲ್ಲಿ ಕಲರ್ ಬ್ಯಾನ್ ಹಿನ್ನಲೆ ನ್ಯಾಚುರಲ್ ಕಲರ್ ಬಳಕೆಗೆ ವ್ಯಾಪಾರಸ್ಥರು ಮುಂದಾಗಿದ್ದಾರೆ. ಇನ್ನೂ ಕೆಲವೆಡೆ ಎಚ್ಚೆತ್ತ ಗ್ರಾಹಕರು ಚಿಕನ್ ಕಬಾಬ್‌ಗಳಲ್ಲಿ ಕಲರ್ ಬಳಕೆ ಮಾಡದೇ ಇರುವ ಅಂಗಡಿಗಳತ್ತ ಮುಖ ಮಾಡುತ್ತಿದ್ದಾರೆ. ಇದೀಗ ಕಲರ್ ಇಲ್ಲದ ಕಬಾಬ್ ಅದೇ ಟೆಸ್ಟ್ ಇದೆ. ಸರ್ಕಾರ ಆರೋಗ್ಯ ದೃಷ್ಟಿಯಿಂದ ಕಲರ್ ಬ್ಯಾನ್ ಮಾಡಿರೋದು ಒಳ್ಳೆಯದು ಎಂದು ಕಬಾಬ್ ಪ್ರೀಯರು ಹೇಳುತ್ತಿದ್ದಾರೆ.

ಸೂರಜ್​ಗೆ ಮತ್ತೊಂದು ಸಂಕಷ್ಟ: ಕೊರೋನಾ ಸಮಯದಲ್ಲಿ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ

ಈಗಾಗಲೇ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಡಿಯಲ್ಲಿ ಬಂಧನವಾಗಿರುವ ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೊರೋನಾ ಸಮಯದಲ್ಲಿ ತಮ್ಮ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮತ್ತೋರ್ವ ಸಂತ್ರಸ್ತ ಸೂರಜ್ ವಿರುದ್ಧ ದೂರು ನೀಡಿದ್ದು, ಈ ದೂರಿನ ಮೇರೆಗೆ ಇದೀಗ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲೇ ಮತ್ತೊಂದು ಎಸ್​ಐಆರ್ ದಾಖಲಾಗಿದೆ.

ಕಾವೇರಿ ನದಿ ಮಾಲಿನ್ಯದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಆದೇಶ

ಕಾವೇರಿ ನದಿ ಮಾಲಿನ್ಯದ ಕುರಿತು ಎಂಎಲ್‌ಸಿ ದಿನೇಶ್ ಗೂಳಿಗೌಡ ಅವರ ಮನವಿ ಮೇರೆಗೆ ನೀರಿನ ಮಾಲಿನ್ಯದ ಬಗ್ಗೆ ವರದಿ ನೀಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಆದೇಶಿಸಿದ್ದಾರೆ. ಜೊತೆಗೆ ಸಚಿವ ಎಂ.ಬಿ.ಪಾಟೀಲ್, ಈಶ್ವರ್​ ಖಂಡ್ರೆ ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಕೇವಲ ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಹೆಚ್ ಸಿ ಬಾಲಕೃಷ್ಣ

ಅಸಲಿಗೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಬಾಲಕೃಷ್ಣ ಜರಿದರು. ಯಾಕೆಂದರೆ ಪ್ರತಿಬಾರಿ ಹೆಚ್ಚುವರಿ ಡಿಸಿಎಂಗಳ ಚರ್ಚೆಯನ್ನು ಅವರೇ ಶುರುಮಾಡುತ್ತಾರೆ. ಯಾರೇನೇ ಹೇಳಿದರೂ ಅದು ಕೇವಲ ವೈಯಕ್ತಿಕ ಅಭಿಪ್ರಾಯ ಮಾತ್ರ. ಇನ್ನೂ ಡಿಸಿಎಂಗಳು ಬೇಕೆಂದು ತಮ್ಮ ಕ್ಷೇತ್ರಗಳಿಂದ ಅರಣ್ಯರೋದನ ಮಾಡುವವರು ಹೈಕಮಾಂಡ್ ಮುಂದೆ ಹೋಗಿ ತಮ್ಮ ಬೇಡಿಕೆ ಇಡಲಿ ಎಂದು ಬಾಲಕೃಷ್ಣ ಹೇಳಿದರು.

ಕರ್ನಾಟಕದ ಹಲವೆಡೆ ಹೆಚ್ಚಿದ ಕಲುಷಿತ ನೀರಿನ ಸಮಸ್ಯೆ; ಅಧಿಕಾರಿಗಳಿಂದ 3 ಲಕ್ಷ ನೀರಿನ ಮಾದರಿ ಸಂಗ್ರಹ

ಈ ಬಾರಿಯ ಬೇಸಿಗೆಯಲ್ಲಿ ಒಂದು ಕಡೆ ಸಿಕ್ಕಾಪಟೆ ಬಿಸಿಲಿನಿಂದ ಜನ ತತ್ತರಿಸಿ ಹೋಗಿದ್ದರು. ಮಳೆ ಇಲ್ಲದೆ ತೀವ್ರ ಬರ. ಇದರ ಮಧ್ಯ ಸಿಕ್ಕ ನೀರು ಕುಡಿದು ಜನರು ಆಸ್ಪತ್ರೆಗೆ ಸೇರಿದ ಸಾಕಷ್ಟು ಪ್ರಕರಣಗಳು ನಡೆದಿವೆ. ಅಲ್ಲದೇ ಕಲುಷಿತ ನೀರಿನಿಂದ ಹಲವು ಜೀವಗಳು ಬಲಿಯಾಗಿವೆ. ರಾಜ್ಯದ ಹಲವೆಡೆ ಕಲುಷಿತ ನೀರಿನ ಸಮಸ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಗ್ರಾಮಾಂತರ ಪ್ರದೇಶಗಳಲ್ಲಿ 3 ಲಕ್ಷ ನೀರಿನ ಮಾದರಿ ಸಂಗ್ರಹಿಸಿದೆ.

ಸಲಿಂಗ ಕಾಮ ಕೇಸ್​ಗೆ ಬಿಗ್ ಟಿಸ್ಟ್: ಸೂರಜ್ ವಿರುದ್ಧವೇ ತಿರುಗಿ ಬಿದ್ದು ದೂರು ದಾಖಲಿಸಿದ ಆಪ್ತ ಶಿವಕುಮಾರ್​!

ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ಕ್ರಿಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸೂರಜ್ ರೇವಣ್ಣ ಪರವಾಗಿ ಸಂತ್ರಸ್ತನ ವಿರುದ್ಧ ಬ್ಲ್ಯಾಕ್ ಮೇಲ್ ದೂರು ನೀಡಿದ್ದ ಶಿವಕುಮಾರ್ ಉಲ್ಟಾ ಹೊಡೆದಿದ್ದು, ಇದೀಗ ಸೂರಜ್ ರೇವಣ್ಣ ವಿರುದ್ಧವೇ ದೂರು ದಾಖಲಿಸಿದ್ದಾರೆ. ಇದರಿಂದ ಸೂರಜ್​ ಮತ್ತೊಂದು ಸಂಕಷ್ಟ ಎದುರಾಗಿದೆ.​

ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ, ರೇಣುಕಾಸ್ವಾಮಿ ತಂದೆ

ಕಾಶೀನಾಥಯ್ಯ ಕುಟುಂಬಕ್ಕೆ ಸರ್ಕಾರದ ನೆರವು ಅತ್ಯಂತ ಜರೂರಾಗಿ ಬೇಕಿದೆ. ದುಡಿದು ಮನೆ ನಡೆಸುತ್ತಿದ್ದ ಮಗನನ್ನು ಕಳೆದುಕೊಂಡು ಅವರ ಕುಟುಂಬ ಅಕ್ಷರಶಃ ಕಂಗಾಲಾಗಿದೆ. ಅವರ ಸೊಸೆ ಅಂದರೆ ರೇಣುಕಾಸ್ವಾಮಿ ಪತ್ನಿ ಗರ್ಭಿಣಿ. ಖಾಯಂ ನೌಕರಿ ಕೊಡಿಸುವ ವಾಗ್ದಾನ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವುದು ಸ್ವಾಗತಾರ್ಹ.

‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..