Karnataka

Karnataka

ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.

ಇನ್ನೂ ಹೆಚ್ಚು ಓದಿ

ಕುಮಾರಸ್ವಾಮಿ ಬೇಸರದಿಂದ ಆಡಿದ ಮಾತನ್ನು ಬಿಜೆಪಿ ನಾಯಕರು ಹೇಗೆ ಅರ್ಥೈಸಿಕೊಳ್ಳುತ್ತಾರೋ?

ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ಬಗ್ಗೆ ಸಿದ್ದರಾಮಯ್ಯ ಇನ್ನೂ ನಿರ್ಧರಿಸಿಲ್ಲ. ಆದರೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ತನಗೆ ಫೋನಾಯಿಸಿ, ಯೋಗೇಶ್ವರ್ ಜೆಡಿಎಸ್ ಪಕ್ಷಕ್ಕೆ ಸೇರಿಸಿಕೊಂಡು ಚನ್ನಪಟ್ಟಣದ ಟಿಕೆಟ್ ಕೊಡೋದಾದ್ರೆ ತನ್ನ ಅಭ್ಯಂತರವಿಲ್ಲ ಎಂದಿದ್ದರು, ಇದಕ್ಕಿಂತ ದೊಡ್ಡ ಮಾತು ಬೇಕೇ? ಎಂದು ಕುಮಾರಸ್ವಾಮಿಯರು ಯೋಗೇಶ್ವರ್​ರನ್ನು ಪರೋಕ್ಷವಾಗಿ ತಿವಿದರು.

ಕೆಂಗೇರಿ ಕೆರೆಗೆ ಬಿದ್ದಿದ್ದ ಅಣ್ಣ ತಂಗಿಯ ಮೃತ ದೇಹಗಳು ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಬೆಂಗಳೂರಿನ ಕೆಂಗೇರಿ (Kengeri) ಕೆರೆಯಲ್ಲಿ ಬಿದ್ದು ನಾಪತ್ತೆಯಾಗಿದ್ದ ಅಣ್ಣ ತಂಗಿಯ ಮೃತದೇಹಗಳು ಪತ್ತೆಯಾಗಿವೆ. ರಬ್ಬರ್ ಬೋಟ್ ಮೂಲಕ ಅಗ್ನಿಶಾಮಕ ದಳ, ಸಿವಿಲ್ ಡಿಫೆನ್ಸ್ ನಡೆಸಿದ ನಿರಂತರ ಶೋಧದ ಬಳಿಕ ಮೊದಲಿಗೆ ಅಣ್ಣನ ಮೃತದೇಹ ಪತ್ತೆಯಾಗಿದೆ. ಬಳಿಕ ಇದೀಗ ತಂಗಿಯ ಮೃತದೇಹ ಸಿಕ್ಕಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಯೋಗೇಶ್ವರ್ ಪಕ್ಷೇತರನಾಗಿ ಸ್ಪರ್ಧಿಸಲಿರೋದು ಚನ್ನಪಟ್ಟಣದಲ್ಲಿ ನಿಖಿಲ್​ಗೆ ಹಾದಿ ಸುಗಮವಾದಂತೆಯೇ!

ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಿದ ನಿಖಿಲ್ ಕುಮಾರಸ್ವಾಮಿ, ದೇವೇಗೌಡ ಮತ್ತು ಕುಮಾರಸ್ವಾಮಿ ಕಾರ್ಯಕರ್ತರನ್ನು ಕುಟುಂಬದ ಭಾಗವೆಂದು ಭಾವಿಸಿದ್ದಾರೆ; ಆದರೆ ಬಿಜೆಪಿಯಲ್ಲಿರುವ ಒಕ್ಕಲಿಗ ಸಮುದಾಯದ ನಾಯಕರನ್ನು ತುಳಿಯುವ ಪ್ರಯತ್ನ ಕುಮಾರಸ್ವಾಮಿ ಮಾಡುತ್ತಿದ್ದಾರೆ ಅಂಥ ಯೋಗೇಶ್ವರ್ ಆಪಾದಿಸಿಸುತ್ತಾರೆ ಎಂದು ಹೇಳಿದರು.

ಕೊಪ್ಪಳ: ಸವರ್ಣೀಯರು- ದಲಿತರ ನಡುವೆ ಘರ್ಷಣೆ, 101 ಆರೋಪಿಗಳು ಅಪರಾಧಿಗಳು

ಇಡೀ ದೇಶದ ಗಮನ ಸೆಳದಿದ್ದ ಕೊಪ್ಪಳ ಜಿಲ್ಲೆಯಲ್ಲಿನ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 101 ಆರೋಪಿಗಳನ್ನು ಕೋರ್ಟ್​ ಅಪರಾಧಿಗಳು ಎಂದು ತೀರ್ಪು ಪ್ರಕಟಿಸಿದೆ. ಅಟ್ರಾಸಿಟಿ ಪ್ರಕರಣದಲ್ಲಿ ಏಕಕಾಲದಲ್ಲಿ ಬರೋಬ್ಬರಿ 101 ಆರೋಪಿಗಳನ್ನು ಕೋರ್ಟ್​ ಅಪರಾಧಿಗಳು ಎಂದು ತೀರ್ಪು ನೀಡಿರುವುದು ಇದೇ ಮೊದಲು ಎಂದು ಹೇಳಲಾಗುತ್ತಿದೆ. ಹಾಗಾದ್ರೆ, ಏನಿದು ಪ್ರಕರಣ? ಸವರ್ಣೀಯರು ಮತ್ತು ದಲಿತರ ನಡುವಿನ ಘರ್ಷಣೆಗೆ ಕಾರಣವೇನು? ಎನ್ನುವ ಡಿಟೇಲ್ ಇಲ್ಲಿದೆ.

ಕಾಂಗ್ರೆಸ್ ನೀಡಿರಬಹುದಾದ ಆಫರ್ ಬಗ್ಗೆ ಏನನ್ನೂ ಹೇಳದೆ ಹಾರಿಕೆ ಉತ್ತರ ನೀಡಿದ ಯೋಗೇಶ್ವರ್

ಚನ್ನಪಟ್ಟಣ ಡಿಕೆ ಶಿವಕುಮಾರ್​ಗೆ ಪ್ರತಿಷ್ಠೆಯ ಕಣವಾಗಿದೆ, ಜೆಡಿಎಸ್/ಎನ್​ಡಿಎ ಅಭ್ಯರ್ಥಿಯನ್ನು ಸೋಲಿಸಲೇಬೇಕೆಂಬ ಛಲ ಅವರಲ್ಲಿದೆ. ಹಾಗಾಗೇ, ಕಾಂಗ್ರೆಸ್ ಪಕ್ಷದಿಂದ ಯೋಗೇಶ್ವರ್ ಅವರನ್ನು ಸ್ಪರ್ಧೆಗಿಳಿಸುವ ಯೋಚನೆ ಶಿವಕುಮಾರ್​ಗಿದೆ. ಯೋಗೇಶ್ವರ್ ಗೆದ್ದರೆ ಮಂತ್ರಿ ಮಾಡುವ ಆಫರ್ ಕೊಟ್ಟಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಕತ್ತು ಸೀಳಿ ಸ್ನೇಹಿತನನ್ನೇ ಕೊಲೆ ಮಾಡಿ ಬಳಿಕ ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

ಕ್ಷುಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಇನ್ನು ಗೆಳೆಯನನ್ನು ಕೊಲೆ ಮಾಡಿದ ಬಳಿಕ ವ್ಯಕ್ತಿ ತಾನೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಈ ಕೊಲೆಯಿಂದಾಗಿ ಉಡುಪಿ ನಗರದ ಜನತೆ ಬೆಚ್ಚಿಬಿದ್ದಿದ್ದಾರೆ.

ಮಂಗಳೂರಿನಲ್ಲಿ ಕುಣಿತ ಭಜನೆ ವಾರ್: ಹಿಂದುಳಿದ ವರ್ಗದ ಹೆಣ್ಮಕ್ಕಳನ್ನು ಬೀದಿಯಲ್ಲಿ ಕುಣಿಸಲಾಗುತ್ತಿದೆ ಎಂದ ಕಾಂಗ್ರೆಸ್ ನಾಯಕಿ

ಕರ್ನಾಟಕ ಕರಾವಳಿಯಲ್ಲಿ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಹೆಚ್ಚಿನ ಕಡೆಗಳಲ್ಲಿ ಕುಣಿತ ಭಜನೆ ಸಾಮಾನ್ಯವಾಗಿ ನಡೆಯುತ್ತದೆ. ಆದರೆ, ಈ ಭಜನೆಗಳಲ್ಲಿ ಭಾಗವಹಿಸುವ ಹಿಂದೂ ಹೆಣ್ಮಕ್ಕಳ ಬಗ್ಗೆ ಅರಣ್ಯಾಧಿಕಾರಿಯೊಬ್ಬರು ನೀಡಿದ್ದ ವಿವಾದಾದ್ಮತಕ ಹೇಳಿಕೆ ಬಳಿಕ ಮಂಗಳೂರಿನಲ್ಲಿ ಕುಣಿತ ಭಜನೆಯ ವಾರ್ ಆರಂಭವಾಗಿದೆ. ಈ ಪ್ರಕರಣ ಬೆನ್ನಲ್ಲೇ ಕಾಂಗ್ರೆಸ್ ನಾಯಕಿಯೊಬ್ಬರು ನೀಡಿರುವ ಹೇಳಿಕೆ ಹೊಸ ಚರ್ಚೆಗೆ ಎಡೆಮಾಡಿ ಕೊಟ್ಟಿದೆ. ವಿವರ ಇಲ್ಲಿದೆ.

  • Ashok
  • Updated on: Oct 22, 2024
  • 2:58 pm

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಯೋಗೇಶ್ವರ್​ರಿಂದ ಗುರುವಾರ ನಾಮಪತ್ರ ಸಲ್ಲಿಕೆ

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಯೋಗೇಶ್ವರ್​ಗೆ ಒಂದು ಚಿಹ್ನೆಯಂತೂ ಬೇಕೇಬೇಕು, ಆದರೆ ಯಾವುದೆಂದು ಅವರಿನ್ನೂ ನಿರ್ಧರಿಸಿಲ್ಲ. ಅಷ್ಟಕ್ಕೂ ಬೆಂಬಲಿಗರು ಚಿಹ್ನೆ ಯಾವುದೆಂದು ಅವರನ್ನು ಪ್ರಶ್ನಿಸಿದಾಗ ಇನ್ನೂ ಕೆಲದಿನಗಳ ಕಾಯುವಂತೆ ಹೇಳಿದರು. ಚಿಹ್ನೆ ಆಯ್ಕೆ ಮಾಡೋದು ಸುಲಭದ ಕೆಲಸವಲ್ಲ.

ದೇವನಹಳ್ಳಿ: ಚರಂಡಿಯಲ್ಲಿ ಅರ್ಧ ಕಿಮೀ ಕೊಚ್ಚಿ ಹೋಗಿದ್ದ ವ್ಯಕ್ತಿ ಕೊನೆಗೂ ಬಚಾವ್, ಸಾವು ಗೆದ್ದು ಮೃತ್ಯುಂಜಯನಾದ ವೆಂಕಟೇಶ್

ಕರ್ನಾಟಕದಾದ್ಯಂತ ಸೋಮವಾರ ಸುರಿದ ವರ್ಷಧಾರೆ ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಮಳೆಯಿಂದಾಗಿ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದರೆ, ಇನ್ನು ಹಲವೆಡೆ ಬೆಳೆ ನಾಶ, ಮನೆಗಳಿಗೆ ನೀರು ನುಗ್ಗಿದಂಥ ಘಟನೆಗಳು ಸಂಭವಿಸಿದೆ. ದೇವನಹಳ್ಳಿಯಲ್ಲಿ ಚರಂಡಿಯಲ್ಲಿ ಕೊಚ್ಚಿಹೋದ ವ್ಯಕ್ತಿಯನ್ನು ಸ್ಥಳೀಯರು ಸಿನಿಮೀಯವಾಗಿ ರಕ್ಷಿಸಿದ್ದು, ಸಿಸಿಟಿವಿ ದೃಶ್ಯ ಹಾಗೂ ಸಂಬಂಧಿತ ವಿಡಿಯೋಗಳು ಈಗ ವೈರಲ್ ಆಗುತ್ತಿವೆ.

ಯೋಗೇಶ್ವರ್ ಪ್ರಭಾವಿ ನಾಯಕ ಕಾಂಗ್ರೆಸ್​ಗೆ ಬಂದರೆ ಪಕ್ಷಕ್ಕೆ ಅನುಕೂಲ: ಹೆಚ್​ಸಿ ಬಾಲಕೃಷ್ಣ

ಡಿಕೆ ಸುರೇಶ್ ಚನ್ನಪಟ್ಟಣದಿಂದ ಸ್ಪರ್ಧಿಸುವುದಿಲ್ಲ, ಅವರು ಚುನಾವಣಾ ರಾಜಕೀಯದಿಂದ ದೂರವುಳಿಯಲು ನಿರ್ಧರಿಸಿದ್ದಾರೆ, ಅವರು ಸ್ಪರ್ಧಿಸುವುದು ನಿಜವಾಗಿದ್ದರೆ ಇಷ್ಟೊತ್ತಿಗಾಗಲೇ ಅವರ ಹೆಸರಿನ ಆಧಿಕೃತ ಘೋಷಣೆಯಾಗಿರುತಿತ್ತು ಎಂದು ಶಾಸಕ ಬಾಲಕೃಷ್ಣ ಹೇಳಿದರು.

ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ