Karnataka

Karnataka

ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.

ಇನ್ನೂ ಹೆಚ್ಚು ಓದಿ

ಯುವತಿಗೆ ಮದ್ವೆಯಾಗಿದ್ದೂ ಬಿಡಲಿಲ್ಲ, ಕೊನೆಗೆ ಪ್ರೀತಿಯ ಹುಚ್ಚಾಟಕ್ಕೆ ಬಿದ್ದು ಪ್ರಾಣ ಕಳೆದುಕೊಂಡ ಯುವಕ

ಆತ ಆಕೆಯನ್ನು ಬಾಲ್ಯದಿಂದ ಪ್ರೀತಿಸುತ್ತಿದ್ದ. ಆದ್ರೆ, ಆಕೆಗೆ ಬೇರೊಬ್ಬನ ಜೊತೆ ಮದುವೆಯಾಗಿದೆ. ಆದರೂ ಸಹ ಆಕೆಯ ಮೇಲಿನ ಪ್ರೀತಿ ಮಾತ್ರ ಕಮ್ಮಿಯಾಗಿರಲಿಲ್ಲ. ಆಕೆಯನ್ನು ಬಿಡದೆ ಹುಚ್ಚನಂತೆ ಪ್ರೀತಿಸುತ್ತಿದ್ದ. ಅಲ್ಲದೇ ಪ್ರೇಯಸಿ ಜೊತೆ ಒಡನಾಟ ಹೊಂದಿದ್ದ. ಇದೀಗ ಆ ಹುಚ್ಚು ಪ್ರೀತಿಯೇ ಆತನ ಪ್ರಾಣಕ್ಕೆ ಸಂಚಕಾರ ತಂದಿದೆ. ಹಾಗಾದ್ರೆ, ಏನಿದು ಪ್ರಕರಣ? ಲವರ್ ಬಾಯ್ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ?

  • Ram
  • Updated on: Jan 17, 2025
  • 11:09 pm

ಡೈರಿ ಸಿಬ್ಬಂದಿಯಿಂದಲೇ ನಂದಿನಿ ಹಾಲಿಗೆ ನೀರು ಬೆರಸಿ ವಂಚನೆ

ಚಿಕ್ಕಬಳ್ಳಾಪುರದ ಚಿಮುಲ್ ಡೈರಿಯಲ್ಲಿ ಹಾಲಿಗೆ ನೀರು ಮಿಶ್ರಣ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮಾಡಿಕೆರೆ ಡೈರಿಯ ಸಿಬ್ಬಂದಿ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಚಿಮುಲ್ ಎಂ.ಡಿ. ತನಿಖಾ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಮಾಡಿಕೆರೆ ಹಾಲಿನ ಡೈರಿ ಬಿ.ಎಂ.ಸಿ ಕೇಂದ್ರ ಸಹಾಯಕನನ್ನು ವಜಾ ಮಾಡಲಾಗಿದೆ.

ವರ್ಷದ ಹಿಂದಷ್ಟೇ ಮದ್ವೆಯಾಗಿದ್ದ ಧಾರವಾಡ ವ್ಯಕ್ತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಪತ್ನಿ ಕಿರುಕುಳಕ್ಕೆ ಮನನೊಂದು ಪತಿಯೇ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿವೆ. ಇಂಥದ್ದೇ ಒಂದು ಪ್ರಕರಣ ಧಾರವಾಡದಲ್ಲಿಯೂ ನಡೆದಿರೋದು ತಡವಾಗಿ ಬೆಳಕಿಗೆ ಬಂದಿದೆ. ಕುಡಿತದ ನಶೆಯಲ್ಲಿ ಆಗಿದೆ ಎನ್ನಲಾದ ಆತ್ಯಹತ್ಯೆಯೊಂದರ ಹಿಂದೆ ಈಗ ಪತ್ನಿಯ ಕಿರುಕುಳದ ಸಂಶಯ ಬಂದಿದೆ. ಸಾಯುವ ಮುನ್ನ ಬರೆದಿಟ್ಟಿದ್ದ ಡೆತ್​ನೋಟ್​ ಪತ್ತೆಯಾಗಿದ್ದು, ಕೇಸ್​ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಕನ್ಯಾಕುಮಾರಿ ಟು ಕಾಶ್ಮೀರ: ಸ್ಕೂಟಿಲಿ 8033 ಕಿಮೀ ರೈಡ್​ ಮಾಡಿದ ಬಾಗಲಕೋಟೆ ಯುವತಿ

ನಾಗರತ್ನಾ ಮೇಟಿ ಎಂಬ ಡಿಪ್ಲೋಮಾ ವಿದ್ಯಾರ್ಥಿನಿ ತಮ್ಮ ಬಾಲ್ಯದ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಏಕಾಂಗಿ ಬೈಕ್ ಪ್ರಯಾಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. 8033 ಕಿಮೀ ದೂರವನ್ನು ಬೈಕಿನಲ್ಲಿ ಪ್ರಯಾಣಿಸಿ, ಕಾಶ್ಮೀರದಲ್ಲಿ ಕನ್ನಡ ಧ್ವಜವನ್ನು ಹಾರಿಸಿದ್ದಾರೆ. ಈ ಸಾಹಸಯಾತ್ರೆಯಲ್ಲಿ ಎದುರಾದ ಸವಾಲುಗಳನ್ನು ಎದುರಿಸಿ ಅವರು ತಮ್ಮ ಗುರಿಯನ್ನು ತಲುಪಿದ್ದಾರೆ.

ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಕಿತ್ತುಕೊಂಡು ಹೋದ್ರು..!

ಕರ್ನಾಟಕದಲ್ಲಿ ಒಂದರ ಮೇಲೋಂದರಂತೆ ಬ್ಯಾಂಕ್ ದರೋಡೆ ಕೇಸ್​ಗಳು ನಡೆಯುತ್ತಿವೆ. ಗುರುವಾರ ಅಷ್ಟೇ ಬೀದರ್​​ನಲ್ಲಿ ಎಂಟಿಎಂಗೆ ಹಣ ತುಂಬಿಸೋ ಸಂದರ್ಭದಲ್ಲಿ ಸಿಬ್ಬಂದಿಗೆ ಗುಂಡು ಹಾರಿಸಿ ದರೋಡೆ ಮಾಡಲಾಗಿತ್ತು. ಈ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅದು ಮಂಗಳೂರಲ್ಲಿ ಎಂಬುದು ಅಚ್ಚರಿ. ಇನ್ನು ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದ ಟೆಕ್ನಿಷಿಯನ್​​ ವಜ್ರದ ಉಂಗುರವನ್ನೇ ಕಿತ್ತುಕೊಂಡು ಹೋಗಿದ್ದಾರೆ.

ಬೆಳಗಾವಿ ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಶೆಟ್ಟರ್​​ರನ್ನು ಆಹ್ವಾನಿಸಿದ್ದಕ್ಕೆ ಸಮರ್ಥನೆ ನೀಡಿದ ಶಿವಕುಮಾರ್

ದಲಿತ ಕಾಂಗ್ರೆಸ್ ನಾಯಕರ ಡಿನ್ನರ್ ಮೀಟಿಂಗ್ ಶಿವಕುಮಾರ್ ಒತ್ತಡದ ಮೇರೆಗೆ ರದ್ದಾಯಿತು, ಎಂದು ಬೇಸರ ಮಾಡಿಕೊಂಡಿರುವ ಸತೀಶ್ ಜಾರಕಿಹೊಳಿ ಕೆಲ ಶಾಸಕರೊಂದಿಗೆ ದುಬೈ ಪ್ರವಾಸ ಹೊರಟಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಸಮಂಜಸ ಉತ್ತರ ನೀಡದ ಶಿವಕುಮಾರ್ ಯಾರು ಏನು ಬೇಕಾದರೂ ಮಾತಾಡಿಕೊಳ್ಳಲಿ, ತನಗೂ ಇದಕ್ಕೂ ಸಂಬಂಧವಿಲ್ಲ, ಸುರ್ಜೆವಾಲಾ ಇಲ್ಲೇ ಇದ್ದಾರೆ ಅವರನ್ನೇ ಕೇಳಿ ಎಂದರು.

ಪ್ರಯಾಣಿಕರ ಗಮನಕ್ಕೆ: ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಜನವರಿ 19, 2025ರಂದು ಬೆಳಿಗ್ಗೆ 7 ರಿಂದ 10 ಗಂಟೆಯವರೆಗೆ ನಮ್ಮ ಮೆಟ್ರೋದ ನೇರಳೆ ಮಾರ್ಗದ ಕೆಂಪೇಗೌಡ ಮೆಜೆಸ್ಟಿಕ್ ಮತ್ತು ಇಂದಿರಾನಗರ ನಿಲ್ದಾಣಗಳ ನಡುವಿನ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ. ರೋಡ್ ನಡುವೆ ಹಳಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಈ ವ್ಯತ್ಯಯ ಉಂಟಾಗುತ್ತಿದೆ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇಲ್ಲ.

ಮುಡಾ ಹಗರಣ: ಇಡಿಯಿಂದ 300 ಕೋಟಿ ರೂ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಲ್​​ ಎಸ್ಟೇಟ್​ ಉದ್ಯಮಿಗಳ ಹೆಸರಿನಲ್ಲಿ ನೋಂದಣಿಯಾಗಿದ್ದ 142 ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳ ಹೆಸರಿನಲ್ಲಿ ನೋಂದಾಯಿತ ಆಸ್ತಿಗಳ ಮೇಲೆ ಪಿಎಂಎಲ್‌ಎ ಕಾಯ್ದೆಯಡಿ ಈ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ.

ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಬಹಳಷ್ಟು ಜನ ಸಹಾಯ ಮಾಡಿದ್ದಾರೆ: ಕಾಂಗ್ರೆಸ್ ಕಾರ್ಯಕರ್ತ

ಕಾರ್ಯಕರ್ತನ ಮತ್ತೊಂದು ಅಕ್ಷೇಪಣೆಯೆಂದರೆ, ಸಭೆಗೆ ಬೆಳಗಾವಿ ಜಿಲ್ಲೆಯ ಶಾಸಕರು ಗೈರಾಗಿರುವುದು. ಚುನಾವಣೆ ಸಮಯದಲ್ಲಿ ಬಿ ಫಾರಂ ಪಡೆಯಲು ಮಾತ್ರ ಅವರು ಸೀಮಿತವೇ? ಇವರು ಮಾಡೋದೇ ಹೀಗೆ, ಹೊಸಬರಿಗೆ ಮಣೆ ಹಾಕುತ್ತಾರೆ, ಹಳಬರನ್ನು ಮೂಲೆ ಗುಂಪು ಮಾಡುತ್ತಾರೆ, ಸೋನಿಯಾ ಗಾಂಧಿ ಅವರಲ್ಲ್ಲಿಗೆ ಹೋಗಿ ದೂರು ಸಲ್ಲಿಸುತ್ತೇನೆ ಎಂದು ಅವರು ಹೇಳುತ್ತಾರೆ.

ಕೋಟೆಕಾರು ಬ್ಯಾಂಕ್​ ದರೋಡೆ: ಪುಣ್ಯಕ್ಕೆ 6 ಕೋಟಿ ಚಿನ್ನ ಬಿಟ್ಟು ಹೋದ ಖದೀಮರು, ಟೋಲ್​ನಲ್ಲಿ ಕಾರು ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೋಟೆಕಾರು ಬ್ಯಾಂಕ್​ ಕೆ.ಸಿ.ರೋಡ್ ಶಾಖೆಯಲ್ಲಿ ಭಾರೀ ದರೋಡೆ ನಡೆದಿದೆ. ಬೀದರ್ ದರೋಡೆ ಬೆನ್ನಲ್ಲೇ ಇದೀಗ ಮಂಗಳೂರಿನಲ್ಲೂ ಬ್ಯಾಂಕ್ ಕಳ್ಳತನ ನಡೆದಿದ್ದು, ಈಗ ಕರ್ನಾಟಕದಲ್ಲಿ ದೊಡ್ಡ ಸುದ್ದಿಯುಂಟಾಗಿದೆ. ಮಾರಾಕಾಸ್ತ್ರ ತೋರಿಸಿದ ತಂಡ ದರೋಡೆ ನಡೆಸಿದೆ. ಹಾಡಹಗಲೇ ಐದು ಮಂದಿ ಆಗಂತುಕರ ತಂಡದಿಂದ ಈ ಕೃತ್ಯ ನಡೆದಿದ್ದು, ಫಿಯೇಟ್ ಕಾರಿನಲ್ಲಿ ಬಂದ ಐದು ಮಂದಿ ಆಗಂತುಕರ ತಂಡ, ಕೈಗೆ ಸಿಕ್ಕಷ್ಟು ಚಿನ್ನ ಹಾಗೂ ನಗದು ಹಣವನ್ನು ದೋಚಿಕೊಂಡು ಹೋಗಿದೆ. ಇನ್ನು ಈ ಪ್ರಕರಣದ ಲೆಟೆಸ್ಟ್ ಅಪ್ಡೇಟ್ಸ್​ ಇಲ್ಲಿದೆ ನೋಡಿ.

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?