
Karnataka
ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.
ಕರ್ನಾಟಕದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿ ಮಾಡುತ್ತೇವೆ: ಸಿದ್ದರಾಮಯ್ಯ
ಕರ್ನಾಟಕ ಸರ್ಕಾರವು ರೋಹಿತ್ ವೇಮುಲ ಕಾಯ್ದೆಯನ್ನು ಶೀಘ್ರದಲ್ಲೇ ಜಾರಿಗೆ ತರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪತ್ರಕ್ಕೆ ಪ್ರತಿಕ್ರಿಯಿಸಿ ಅವರು ಈ ವಿಷಯವನ್ನು ಖಚಿತಪಡಿಸಿದ್ದಾರೆ. ಈ ಕಾಯ್ದೆಯು ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲಿನ ತಾರತಮ್ಯವನ್ನು ತಡೆಯುವ ಗುರಿ ಹೊಂದಿದೆ.
- Vivek Biradar
- Updated on: Apr 18, 2025
- 10:06 pm
ವಲಸಿಗ ಕಾರ್ಮಿಕರ ಮಾಹಿತಿ ಕೇಳಿದ ರಾಜ್ಯ ಗೃಹ ಇಲಾಖೆ: ಅಚ್ಚರಿಯ ಅಂಶ ಬಯಲು
ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಅಪಹರಣ ಹತ್ಯೆ ಪ್ರಕರಣದ ನಂತರ ಕರ್ನಾಟಕದಲ್ಲಿ ವಲಸಿಗ ಕಾರ್ಮಿಕರ ಸಂಖ್ಯೆ ಮತ್ತು ನೋಂದಣಿ ಕುರಿತು ಆತಂಕ ಹೆಚ್ಚಾಗಿದೆ. ಕರ್ನಾಟಕ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಂಡಳಿ ವಲಸಿಗರ ಕಾರ್ಮಿಕರ ಲೆಕ್ಕಪರಿಶೀಲನೆ ನಡೆಸಿದ ವೇಳೆ ಅಚ್ಚರಿಯ ಅಂಶ ಬಯಲಾಗಿದೆ. ಈ ಕುರಿತು ವಿವರ ಇಲ್ಲಿದೆ.
- Kiran Surya
- Updated on: Apr 18, 2025
- 9:23 pm
ತಲೆಮಾರಿಗೊಮ್ಮೆ ನಡೆಯುವ ಹುಟ್ಟೂರಿನ ಹಬ್ಬದಲ್ಲಿ ಕೃಷ್ಣಬೈರೇಗೌಡ: 29 ವರ್ಷಕ್ಕೊಮ್ಮೆ ನಡೆಯುವ ಜಾತ್ರೆ
ಅದು ತಲೆಮಾರಿಗೊಮ್ಮೆ ನಡೆಯುವ ಊರ ಹಬ್ಬ ದೇವರ ಉತ್ಸವ, ಸ್ವತಂತ್ರ್ಯ ಬಂದ ಹೊಸದರಲ್ಲಿ ಅಂದರೆ 1952 ರಲ್ಲಿ ನಡೆದಿದ್ದ ಊರ ಹಬ್ಬ ನಂತರದಲ್ಲಿ 1996 ರಲ್ಲಿ ನಡೆದಿತ್ತು ಸದ್ಯ ಈಗ 29 ವರ್ಷಗಳ ನಂತರ ಊರ ಅಬ್ಬ ಅದ್ದೂರಿಯಾಗಿ ಆಯೋಜನೆಗೊಂಡಿದೆ. ಅಷ್ಟಕ್ಕು, ಅದು ಯಾವ ಊರ ಹಬ್ಬ? ಫೋಟೋಸ್ ನೋಡಿ.
- Rajendra Simha BL
- Updated on: Apr 18, 2025
- 8:45 pm
ರಾಜಕಾರಣಿಯಾಗುವ ಹುಚ್ಚು ತಲೆಗೆ ಹೋಗಿರದಿದ್ದರೆ ಸತೀಶ್ ಜಾರಕಿಹೊಳಿ ಕ್ರಿಕೆಟರ್ ಅಗಿರುತ್ತಿದ್ದರು!
ನೀಳಕಾಯದ ಸತೀಶ್ ಜಾರಕಿಹೊಳಿ ಒಬ್ಬ ಕ್ರೀಡಾಪಟ್ಟುವಿನ ದೇಹದಾರ್ಢ್ಯ ಹೊಂದಿದ್ದಾರೆ ಎಂದರೆ ತಪ್ಪಾಗಲಾರದು. ಅವರಿಗೀಗ 62ರ ಪ್ರಾಯ. ರಾಜಕಾರಣಿಗಳಿಗೆ 40 ರ ವಯಸ್ಸಿನಿಂದಲೇ ದೇಹದ ಆಕಾರ ಬಿಗಡಾಯಿಸಲಾರಂಭಿಸುತ್ತದೆ. ಚುನಾವಣೆ ಸಮಯದಲ್ಲಿ ಓಡಾಡುವ ಹಾಗೆ ಬೇರೆ ಟೈಮಲ್ಲೂ ಓಡಾಡಿದರೆ, ಅಥವಾ ವಾರಕ್ಕೆರಡು ಬಾರಿ ಜಿಮ್ ಗೆ ಹೋದರೆ ಬೊಜ್ಜು ಬರಲಾರದು.
- Arun Belly
- Updated on: Apr 18, 2025
- 8:38 pm
ಬೆಂಗಳೂರಿನಲ್ಲೋರ್ವ ವಿಕೃತ ಕಾಮುಕ: ಮಹಿಳೆಯರಿಗೆ ಖಾಸಗಿ ಅಂಗ ತೋರಿಸುವುದೇ ಈತನ ಕಾಯಕ
ಆತ ಇನ್ನೂ 21 ವರ್ಷ ಪ್ರಾಯದ ಯುವಕ. ಆದ್ರೆ ವಿಕೃತ ಕಾಮಿಯಾಗಿದ್ದ. ಕಂಡ ಕಂಡ ಮಹಿಳೆಯರಿಗೆ ಖಾಸಗಿ ಅಂಗ ತೋರಿಸಿ ಲೈಂಗಿಕ ಕ್ರಿಯೆಗೆ ಕರೆಯುತ್ತಿದ್ದ. ಏರಿಯಾದಲ್ಲಿ ಈತನ ಆಟಾಟೋಪ ಮಿತಿ ಮೀರಿತ್ತು..ಇದರಿಂದ ಬೇಸತ್ತು ಬುದ್ಧಿ ಹೇಳಲು ಬಂದವರ ಮೇಲೆಯೇ ಅಟ್ಟಹಾಸ ಮೆರೆದಿದ್ದ. ಕಲ್ಲು,ದೊಣ್ಣೆಯಿಂದ ಹಲ್ಲೆ ಮಾಡಿದವನಿಗೆ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ.
- Rachappaji Naik S
- Updated on: Apr 18, 2025
- 8:35 pm
ಜನಿವಾರ ಧರಿಸಬಾರದೆಂದು ಪ್ರಾಧಿಕಾರವು ವಸ್ತ್ರಸಂಹಿತೆ ವಿಷಯದಲ್ಲಿ ಹೇಳಿಲ್ಲ: ಹೆಚ್ ಪ್ರಸನ್ನ, ಕಾರ್ಯನಿರ್ವಾಹಕ ನಿರ್ದೇಶಕ-ಕೆಇಎ
ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಜನಿವಾರ ಧರಿಸಬಾದು ಅಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿಲ್ಲ, ವೆಬ್ಸೈಟ್ನಲ್ಲಿ ಅದನ್ನು ಪರಿಶೀಲಿಸಬಹುದು, ಸಿಇಟಿಯ ಉಸ್ತುವಾರಿಯನ್ನು 20,000 ಶಿಕ್ಷಕರಿಗೆ ವಹಿಸಲಾಗಿತ್ತು, ಅದರೆ ಕಾಲೇಜಿನ ಮುಖ್ಯದ್ವಾರದ ಬಳಿಯ ಒಬ್ಬ ಸಿಬ್ಬಂದಿಯಿಂದ ಉಳಿದವರೆಲ್ಲ ನೋವು ಅನುಭವಿಸುತ್ತಿದ್ದಾರೆ, ಅಚಾತುರ್ಯ ನಡೆದಿದ್ದೇಯಾದರೆ ಪ್ರಾಧಿಕಾರದ ಪರವಾಗಿ ಮತ್ತು ವೈಯಕ್ತಿಕವಾಗಿ ತಾನು ಬ್ರಾಹ್ಮಣ ಸಮಾಜದ ಕ್ಷಮೆ ಕೋರುವುದಾಗಿ ಪ್ರಸನ್ನ ಹೇಳಿದರು.
- Arun Belly
- Updated on: Apr 18, 2025
- 7:36 pm
ಇತಿಹಾಸದಲ್ಲಿ ಮೊದಲ ಬಾರಿಗೆ ಮಾದಪ್ಪನ ಬೆಟ್ಟದಲ್ಲಿ ಸಂಪುಟ ಸಭೆ: ಹಲವು ನಿರೀಕ್ಷೆ
ಏಪ್ರಿಲ್ 24 ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಮೈಸೂರು ವಿಭಾಗದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಸ್ತಾವನೆಗಳು ಚರ್ಚೆಗೆ ಬರಲಿವೆ. ಜಿಲ್ಲೆಯ ಪ್ರವಾಸೋದ್ಯಮ, ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನಿರೀಕ್ಷಿಸಲಾಗಿದೆ. ಸಭೆಗೆ ಸಂಪೂರ್ಣ ತಯಾರಿ ನಡೆದಿದೆ.
- Suraj Prasad SN
- Updated on: Apr 18, 2025
- 7:19 pm
ಮಂಗಳೂರಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸಲ್ಮಾನರಿಂದ ಬೃಹತ್ ಪ್ರತಿಭಟನೆ, ನಿರೀಕ್ಷೆಗೂ ಮೀರಿದ ಜನ
ಪ್ರತಿಭಟನೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಅಡ್ಯಾರ್ ಕಣ್ಣೂರು ಷಾ ಮೈದಾನದ ಸುತ್ತಮುತ್ತ ಮತ್ತು ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಾಟು ಮಾಡಲಾಗಿದೆ. ಅದರೆ, ನಿರೀಕ್ಷೆಗೆ ಮೀರಿದ ಜನ ಧರಣಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರಿಂದ ಅವರನ್ನು ನಿಯಂತ್ರಿಸಲು ಪೊಲೀಸರು ಕಷ್ಟ ಪಡಬೇಕಾಯಿತು. ಪ್ರತಿಭಟನೆಯ ಕಾರಣ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 73ಅನ್ನು ಬಂದ್ ಮಾಡಲಾಗಿದೆ.
- Arun Belly
- Updated on: Apr 18, 2025
- 6:16 pm
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಜಾತಿಗಣತಿ ವರದಿ ಬಗ್ಗೆ ಇಬ್ರಾಹಿಂ ಹೇಳಿದ್ದಿಷ್ಟು
ಕರ್ನಾಟಕದಲ್ಲಿ ಜಾತಿಗಣತಿ ವರದಿ ಜ್ವಾಲೆ ಸ್ಫೋಟಕಗೊಂಡಿದ್ದು, ಪರ ವಿರೋಧದ ಚರ್ಚೆಗಳು ಜೋರಾಗಿವೆ. ಇನ್ನು ಈ ಬಗ್ಗೆ ಟಿವಿ9ಗೆ ಹಿರಿಯ ರಾಜಕಾರಣಿ ಸಿ.ಎಂ ಇಬ್ರಾಹಿಂದ ಪ್ರತಿಕ್ರಿಯಿಸಿದ್ದು, ಮುಸಲ್ಮಾನರ ಜನಸಂಖ್ಯೆ ಇನ್ನೂ ಹೆಚ್ಚಿದೆ. ನಾವು 75 ಲಕ್ಷ ಅಲ್ಲ, 1 ಕೋಟಿಗೂ ಅಧಿಕ ಜನಸಂಖ್ಯೆ ಇದ್ದೇವೆ. ಅತಂಕಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ,
- Ramesh B Jawalagera
- Updated on: Apr 18, 2025
- 6:12 pm
ಉಡುಪಿ, ತಿರುಪತಿ ಟ್ರಸ್ಟ್ಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ (Waqf Amendment Act) ವಿರುದ್ದ ಮುಸ್ಲಿಂ ಸಂಘಟನೆಗಳು ಭಾರೀ ವಿರೋಧ ವ್ಯಕ್ತಪಡಿಸುತ್ತಿವೆ. ಇತ್ತ ಕರ್ನಾಟಕದಲ್ಲೂ ಸಹ ಪ್ರತಿಭಟನೆಗಳು ನಡೆದಿವೆ. ಮಂಗಳೂರಿನಲ್ಲಿ (Mangaluru) ಮುಸ್ಲಿಂ ಸಂಘಟನೆಗಳಿಂದ (Muslim organizations) ಭಾರೀ ಪ್ರತಿಭಟನೆ (protest) ನಡೆದಿದೆ. ಇನ್ನು ಈ ಬಗ್ಗೆ ಹಿರಿಯ ರಾಜಕಾರಣಿ ಸಿ.ಎಂ. ಇಬ್ರಾಹಿಂ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದು ಇಲ್ಲಿದೆ.
- Ramesh B Jawalagera
- Updated on: Apr 18, 2025
- 5:59 pm