AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka

Karnataka

ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.

ಇನ್ನೂ ಹೆಚ್ಚು ಓದಿ

ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆ ಬೆನ್ನಲ್ಲೇ ಕೆಇಎ ಫುಲ್​​ ಅಲರ್ಟ್: ವಿವಾದ ತಡೆಯಲು ಮಾಸ್ಟರ್ ಪ್ಲಾನ್

ಕಳೆದ ವರ್ಷ ಸಿಇಟಿ ಪರೀಕ್ಷೆ ವೇಳೆ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ವಿವಾದಗಳು ಉಂಟಾಗಿದ್ದವು. ಸದ್ಯ ಅದರಿಂದ ಎಚ್ಚೆತ್ತ ಕೆಇಎ, ಈ ವರ್ಷ ಯಾವುದೇ ಗೊಂದಲಗಳಿಲ್ಲದೆ ಪರೀಕ್ಷೆ ನಡೆಸಲು ಮುಂದಾಗಿದೆ. ಆ ನಿಟ್ಟಿನಲ್ಲಿ ಹೊಸ ಯೋಜನೆ ರೂಪಿಸಿದೆ. ಹಾಗಾದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೈಗೊಂಡಿರುವ ಹೊಸ ಪ್ಲಾನ್​ ಏನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರಿಗರೇ ಎಚ್ಚರ! ಕಸ ವಿಂಗಡಣೆ ಮಾಡದಿದ್ರೆ ದಂಡ ಗ್ಯಾರಂಟಿ: ನಿಯಮ ಬಿಗಿಗೊಳಿಸಲು ಮುಂದಾದ ಜಿಬಿಎ

ಬೆಂಗಳೂರಿನಲ್ಲಿ ಕಸ ವಿಂಗಡಣೆ ನಿಯಮವನ್ನು ಏಪ್ರಿಲ್ 1ರಿಂದಲೇ ಕಡ್ಡಾಯಗೊಳಿಸಲಾಗಿದೆ. ಆದರೆ ಜನರು ಮಾತ್ರ ಹಸಿ, ಒಣ ಕಸವನ್ನು ಪ್ರತ್ಯೇಕಿಸುತ್ತಿಲ್ಲ. ಈ ನಿಟ್ಟಿನಲ್ಲಿ ಘನತ್ಯಾಜ್ಯ ನಿರ್ವಹಣೆಯನ್ನು ಸುಧಾರಿಸುವ ಸಲುವಾಗಿ ಜಿಬಿಎ ನಿಯಮ ಬಿಗಿಗೊಳಿಸಲು ಮುಂದಾಗಿದೆ. ಇನ್ಮುಂದೆ ಕಸ ವಿಂಗಡಣೆ ಮಾಡದಿದ್ರೆ ದಂಡ ಬೀಳುವುದು ಗ್ಯಾರಂಟಿ.

ಬ್ಯಾಂಕ್​ ಕ್ಯಾಶಿಯರ್​ನಿಂದ ಅಸಭ್ಯ ವರ್ತನೆ: ಗ್ರಾಹಕರ ಎದುರೇ ಕ್ಲಾಸ್​​ ತೆಗೆದುಕೊಂಡ ಮಹಿಳಾ ಸಿಬ್ಬಂದಿ

ಚಿಕ್ಕಮಗಳೂರಿನ NR ಪುರದ ಕೆನರಾ ಬ್ಯಾಂಕ್‌ನಲ್ಲಿ ಸಿಬ್ಬಂದಿ ನಡುವೆ ನಡೆದ ಗಲಾಟೆ ವಿಡಿಯೋ ವೈರಲ್ ಆಗಿದೆ. ಮಹಿಳಾ ಸಿಬ್ಬಂದಿ ಕ್ಯಾಶಿಯರ್ ವಿರುದ್ಧ ಅಸಭ್ಯ ವರ್ತನೆಯ ಆರೋಪ ಮಾಡಿದ್ದು, ಅಷ್ಟೇ ಅಲ್ಲದೆ ಆತನ ಕೊರಳಪಟ್ಟಿ ಹಿಡಿದು ಜಗಳವಾಡಿದ್ದಾರೆ. ಗ್ರಾಹಕರ ಸಮ್ಮುಖದಲ್ಲೇ ಘಟನೆ ನಡೆದಿದೆ.

ಟುರ್‌ ಪದ ಬಳಕೆ: ಕುರುಬ ಸಮುದಾಯದ ಆಕ್ರೋಶ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಬಿಜೆಪಿ ಶಾಸಕ

ಬಾಗಲಕೋಟೆ ಉಪಚುನಾವಣೆ ಪ್ರಚಾರದಲ್ಲಿ ಶಾಸಕ ಸಿ.ಸಿ.ಪಾಟೀಲ್ ಅವರು ಕುರುಬ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಅವಮಾನಕಾರಿ ಪದಗಳನ್ನು ಬಳಸಿದ್ದರು. ಇದರಿಂದ ಕುರುಬ ಸಮುದಾಯದಲ್ಲಿ ತೀವ್ರ ಆಕ್ರೋಶ ಭುಗಿಲೆದ್ದಿತ್ತು. ವೀರಶೈವ ಲಿಂಗಾಯತ ಸಮುದಾಯದ ಒಗ್ಗಟ್ಟಿನ ಬಗ್ಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದ ಪಾಟೀಲ್, ಸಾರ್ವಜನಿಕ ಒತ್ತಡಕ್ಕೆ ಮಣಿದು ತಮ್ಮ ಮಾತುಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತದ 40 ವರ್ಷಗಳ ಸಾರ್ಥಕ ಪಯಣ: ಸಾಧನೆಯ ಹಾದಿ ಮೆಲುಕು ಹಾಕಿದ ನ್ಯಾಯಮೂರ್ತಿಗಳು

ಕರ್ನಾಟಕ ಲೋಕಾಯುಕ್ತ ತನ್ನ 40 ವರ್ಷಗಳ ಅರ್ಥಪೂರ್ಣ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದೆ. ಈ ಸಾರ್ಥಕ ಪಯಣದ ಅಂಗವಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಉದ್ಘಾಟಿಸಿದರು. ಈ ವೇಳೆ ನಾಲ್ಕು ದಶಕಗಳ ಕಾರ್ಯಸೇವೆ ಮೆಲುಕು ಹಾಕಲಾಯಿತು.

ಸಿದ್ದರಾಮಯ್ಯ ಟಗರು ಇದ್ದಂತೆ; ಯಾವಾಗ ಗುದ್ದಬೇಕೋ ಗುದ್ದುತ್ತದೆ: ಸಚಿವ ಮಹದೇವಪ್ಪ

ಸಚಿವ ಎಚ್.ಸಿ. ಮಹದೇವಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು "ಟಗರು" ಎಂದು ಬಣ್ಣಿಸಿ, ಅವರು ಎಂದಿಗೂ ದುರ್ಬಲರಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಸಚಿವ ಮಹದೇವಪ್ಪ ಮಾತನಾಡಿ, ಸಿದ್ದರಾಮಯ್ಯ ಅವ್ರು ಎಂದಿಗೂ ದುರ್ಬಲ ಆಗಿಲ್ಲ. ಅವರು ಟಗರು ಇದ್ದಂತೆ. ಈಗ ಗುರಾಯಿಸುತ್ತಿದೆ. ಯಾವಾಗ ಗುದ್ದಬೇಕೋ ಗುದ್ದುತ್ತದೆ ಎಂದು ಸಿಎಂ ಪರ ಬ್ಯಾಟ್ ಬೀಸಿದ್ದಾರೆ.

ಮೂರು ವಿಧೇಯಕ ಮಿಕ್ಸ್ ಮಾಡಿದ್ದರಿಂದ ಬಿದ್ದೋಗಿದೆ: ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇಲ್ಲ; ಸಿಎಂ ಸಿದ್ದರಾಮಯ್ಯ

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಹಿನ್ನಡೆಯಾಗಿದೆ. ಮಹಿಳಾ ಮೀಸಲಾತಿ ಮಸೂದೆಯನ್ನು ಇಂಡಿಯಾ ಒಕ್ಕೂಟ ಸೋಲಿಸಿರುವುದು ಇದಕ್ಕೆ ಕಾರಣ. ಈ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಮಹಿಳಾ ಮೀಸಲಾತಿಗೆ ವಿರೋಧಿಯಲ್ಲ ಎಂದಿದ್ದಾರೆ.

ಹಾವೇರಿ: ಎಲ್​ಪಿಜಿ ಸಿಗದೆ ಆಟೋಗೆ ಹಗ್ಗ ಕಟ್ಟಿ 10 ಕಿ.ಮೀ ಕಾರು ಎಳೆತಂದ ಮಾಲೀಕ

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಹಾವೇರಿಯಲ್ಲಿ ತೀವ್ರ ಎಲ್‌ಪಿಜಿ ಸಿಲಿಂಡರ್ ಕೊರತೆ ಸೃಷ್ಟಿಸಿದೆ. ಗೋ ಗ್ಯಾಸ್ ಬಂಕ್ ಮುಚ್ಚಿರುವುದರಿಂದ, ರೊಟ್ಟಿ ವ್ಯಾಪಾರಿಯೊಬ್ಬರು 10 ಕಿ.ಮೀ. ದೂರದಿಂದ ಆಟೋಗೆ ಹಗ್ಗ ಕಟ್ಟಿ ಸಿಲಿಂಡರ್ ತರಲು ಪರದಾಡಿದ್ದಾರೆ. ಪ್ರತಿ ಕೆ.ಜಿ.ಗೆ 120 ರೂ. ಇದ್ದರೂ ಸಿಲಿಂಡರ್ ಸಿಗುತ್ತಿಲ್ಲ. ಆಟೋ ಚಾಲಕರು ಮತ್ತು ಜನಸಾಮಾನ್ಯರು ಯುದ್ಧ ನಿಲ್ಲಿಸಿ, ಸುಗಮ ಎಲ್‌ಪಿಜಿ ಪೂರೈಕೆಗೆ ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಮತದಾರರ ಅಂತಿಮ ಪಟ್ಟಿಪ್ರಕಟ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ 5 ನಗರ ಪಾಲಿಕೆಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಸುದ್ದಿಗೋಷ್ಠಿಯಲ್ಲಿ ಮತದಾರರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಮತದಾರರು, ಒಟ್ಟು ವಾರ್ಡ್‌ಗಳು ಮತ್ತು ಯಾವ ವಾರ್ಡ್‌ಗಳಲ್ಲಿ ಹೆಚ್ಚು ಮತದಾರರಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಮೈನಡುಗಿಸುವ ವಿಡಿಯೋ: ಪ್ಯಾರಚೂಟ್‌ ತರಬೇತಿ ವೇಳೆ 50 ಅಡಿ ಎತ್ತರದಿಂದ ಜಿಗಿದ ಸೈನಿಕ ಆಯತಪ್ಪಿ ಬಿದ್ದೇ ಬಿಟ್ರು!

ಬಳ್ಳಾರಿಯ ಪಿಡಿ ಹಳ್ಳಿ ಬಳಿ ಪ್ಯಾರಚೂಟ್ ತರಬೇತಿ ವೇಳೆ 50 ಅಡಿ ಎತ್ತರದಿಂದ ಬಿದ್ದು ಚಿನ್ನರಾಜ್ ಎಂಬ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಲಿನ ಮೂಳೆ ಮುರಿದಿರುವ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಸೇನಾ ಹೆಲಿಕಾಪ್ಟರ್ ಮೂಲಕ ಬಳ್ಳಾರಿಯಿಂದ ಬೆಂಗಳೂರಿಗೆ ಏರ್‌ಲಿಫ್ಟ್ ಮಾಡಲಾಗಿದೆ. ಘಟನೆಯ ವಿಡಿಯೋ ಇಲ್ಲಿದೆ.

ಆಫ್ರಿಕಾದಿಂದ ಬಂದ ಚೀತಾಗಳು ಹೇಗಿವೆ ನೋಡಿ!

ದಕ್ಷಿಣ ಆಫ್ರಿಕಾದಿಂದ ತರಲಾಗಿರುವ ನಾಲ್ಕು ಚೀತಾಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪುನರ್ವಸತಿ ಕೇಂದ್ರಕ್ಕೆ ಸುರಕ್ಷಿತವಾಗಿ ಆಗಮಿಸಿವೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತಡರಾತ್ರಿ ತರಲಾಗಿರುವ ಈ ಎರಡು ಗಂಡು ಹಾಗೂ ಎರಡು ಹೆಣ್ಣು ಚೀತಾಗಳನ್ನು 40 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಲಾಗುತ್ತದೆ.

  • Ramu Ram
  • Updated on: Apr 18, 2026
  • 12:38 pm

ಸಿದ್ದರಾಮಯ್ಯ ಇಲಿಗಳನ್ನು ಹೊಡೆದರೆ ಡಿಕೆಶಿ ಹುಲಿಗಳನ್ನೇ ಹುಡುಕಿ ಹುಡುಕಿ ಹೊಡೆಯುತ್ತಿದ್ದಾರೆ: ಅಶೋಕ್ ಹೀಗಂದಿದ್ಯಾಕೆ ನೋಡಿ!

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಿ ಹೊರಹಾಕಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ಸಿದ್ದರಾಮಯ್ಯ ಸಣ್ಣ ಇಲಿಗಳನ್ನು ಗುರಿಯಾಗಿಸಿಕೊಂಡರೆ, ಡಿಸಿಎಂ ಡಿಕೆಶಿ ದೊಡ್ಡ ಹುಲಿಗಳನ್ನು ಗುರಿಯಾಗಿಸುತ್ತಿದ್ದಾರೆ ಎಂದು ಅಶೋಕ್ ಹೇಳಿದ್ದಾರೆ. ಇದರ ಜೊತೆಗೆ, ವಿದ್ಯುತ್ ದರ ಏರಿಕೆ ಕುರಿತು ಆಡಳಿತದ ಕುತಂತ್ರದ ಬಗ್ಗೆಯೂ ಧ್ವನಿ ಎತ್ತಿದ್ದಾರೆ.

ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ