Karnataka
ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.
Karnataka Weather Forecast: ಕರಾವಳಿಯಲ್ಲಿ ರಣಮಳೆಯ ಹಾವಳಿ; ಉಡುಪಿ, ದಕ್ಷಿಣ ಕನ್ನಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿಯಿಂದ ಪಿಯುಸಿವರೆಗಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಜಾರಿಯಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ್ ಈ ರಜೆ ಆದೇಶ ಹೊರಡಿಸಿದ್ದಾರೆ. ಮಳೆಯಿಂದಾಗಿ ಸುರಕ್ಷತೆಗೆ ಆದ್ಯತೆ ನೀಡುವಂತೆ ಮನವಿ ಮಾಡಲಾಗಿದೆ.
- Bhavana Hegde
- Updated on: Jul 25, 2026
- 6:53 am
ನಗರಸಭೆ ಆಯುಕ್ತರ ಚೇಂಬರ್ಗೆ “ಸಾರ್ವಜನಿಕರಿಗೆ ಪ್ರವೇಶವಿಲ್ಲ”: ಬೋರ್ಡ್ ನೋಡಿ ಉಪ ಲೋಕಾಯುಕ್ತ ಶಾಕ್
ಉಪ ಲೋಕಾಯುಕ್ತರಾದ ಬಿ.ವೀರಪ್ಪ ಅವರು ಇಂದು (ಜುಲೈ 24) ಬಾಗಲಕೋಟೆಯಲ್ಲಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬಾಗಲಕೋಟೆ ನಗರಸಭೆ ಆಯುಕ್ತರ ಚೇಂಬರ್ಗೆ "ಸಾರ್ವಜನಿಕರಿಗೆ ಪ್ರವೇಶವಿಲ್ಲ" ಎಂಬ ಬೋರ್ಡ್ ಕಂಡು ಬಂದಿದ್ದು, ಇದನ್ನು ನೋಡಿ ಉಪ ಲೋಕಾಯುಕ್ತರಾದ ಬಿ.ವೀರಪ್ಪ ಶಾಕ್ ಆಗಿದ್ದಾರೆ. ಅಲ್ಲದೇ ಈ ಬೊರ್ಡ್ ಬಗ್ಗೆ ಕೆಂಡಾಮಂಡಲರಾಗಿದ್ದಾರೆ.
- Ravi H Mooki
- Updated on: Jul 24, 2026
- 10:33 pm
ಕರಾವಳಿಯಲ್ಲಿ ವರುಣನ ಆರ್ಭಟ: ಜು 25ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ!
Schools Holiday Tomorrow in dakshina kannada, Udupi: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 25ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಳಲಾಗಿದೆ. ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
- Pruthviraj
- Updated on: Jul 24, 2026
- 10:30 pm
ಪೊಲೀಸ್ ಸೇವೆ ಜತೆಗೆ ಸಮಾಜಮುಖಿ ಕೆಲಸಗಳಲ್ಲೂ ತೊಡಗಿಸಿಕೊಂಡಿರುವ ಎಸಿಪಿ ರಾಜೇಶ್ಗೆ ಡಿಜಿ ಪದಕ ಪ್ರದಾನ
ಕರ್ನಾಟಕದ ಪೊಲೀಸ್ ಅಧಿಕಾರಿ ಎಸಿಪಿ ಎಲ್.ವೈ ರಾಜೇಶ್ (LY Rajesh) ಅವರಿಗೆ ಡಿಜಿ ಪದಕವನ್ನು ಪ್ರದಾನ ಮಾಡಲಾಯಿತು. ಸದ್ಯ ರಾಜೇಶ್ ಅವರು ಸಿಸಿಬಿಯಲ್ಲಿ ಎಸಿಪಿ ಆಗಿ ಕೆಲಸ ಮಾಡುತ್ತಿದ್ದು, ಡ್ರಗ್ಸ್ ಮುಕ್ತ ಬೆಂಗಳೂರಿಗಾಗಿ ಸಾಕಷ್ಟು ಕೆಲಸ ಮಾಡುತ್ತಿರುವ ಹೆಮ್ಮೆ ಅವರದ್ದು. ಪೊಲೀಸ್ ಸೇವೆಯ ಜೊತೆ ಜೊತೆಗೆ ಸಮಾಜಮುಖಿ ಕೆಲಸಗಳಲ್ಲೂ ತೊಡಗಿಸಿಕೊಂಡಿದ್ದಾರೆ.
- Ramesh B Jawalagera
- Updated on: Jul 24, 2026
- 9:46 pm
ಮುಂದಿನ ತಿಂಗಳಿನಿಂದ ಹೊಸ ಕಾರುಗಳ ಬೆಲೆ ಭಾರೀ ಏರಿಕೆ: ಈ ತಿಂಗಳೇ ಬುಕ್ಕಿಂಗ್ ಮಾಡಲು ಮುಗಿಬಿದ್ದ ಜನ!
Car Price Hike: ಕಚ್ಚಾ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಆಗಸ್ಟ್ನಿಂದ ಹೊಸ ಕಾರುಗಳ ಬೆಲೆ 50-60 ಸಾವಿರ ರೂ. ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿಂದೆ ಜಿಎಸ್ಟಿ 2.0 ಜಾರಿಯಾದಾಗ ಕಡಿಮೆಯಾಗಿದ್ದ ಕಾರು ಬೆಲೆ, ಈಗ ಮತ್ತೆ ಏರಿಕೆಯಾಗುತ್ತಿರುವುದು ಗ್ರಾಹಕರಿಗೆ ಹೊರೆ ಆಗಲಿದೆ. ಹೀಗಾಗಿ ಗ್ರಾಹಕರು ಈಗಲೇ ಕಾರು ಬುಕ್ ಮಾಡುತ್ತಿದ್ದಾರೆ.
- Kiran Surya
- Updated on: Jul 24, 2026
- 8:58 pm
ನಿರ್ಲಕ್ಷಿತ ವೃದ್ಧರ ರಕ್ಷಣೆಗೆ ಹೊಸ ಕಾಯ್ದೆ: 24/7 ಸೇವೆ, ಆಶ್ರಯ ತಾಣಗಳಿಗೆ ಹೈಕೋರ್ಟ್ ಸೂಚನೆ
ನಿರ್ಲಕ್ಷಿತ ಹಿರಿಯ ನಾಗರಿಕರ ಆರೈಕೆ ಮತ್ತು ರಕ್ಷಣೆಗಾಗಿ ಸಮಗ್ರ ಕಾಯ್ದೆ ರೂಪಿಸಲು ಹೈಕೋರ್ಟ್ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಅಸಹಾಯಕ ವೃದ್ಧರಿಗೆ 24 ಗಂಟೆಗಳ ತುರ್ತು ಸ್ಪಂದನೆ, ಸಹಾಯವಾಣಿ, ತಾತ್ಕಾಲಿಕ ಆಶ್ರಯ ತಾಣಗಳು, ಸಮಗ್ರ ಆರೋಗ್ಯ ಸೇವೆಗಳು, ಮಾನಸಿಕ ಸಮಾಲೋಚನೆ ಮತ್ತು ಕಾನೂನು ನೆರವು ಒದಗಿಸುವ ಅಂಶಗಳನ್ನು ಈ ಕಾಯ್ದೆ ಒಳಗೊಂಡಿರಬೇಕು ಎಂದು ಪೀಠ ಸೂಚಿಸಿದೆ.
- Ramesha M
- Updated on: Jul 24, 2026
- 8:02 pm
ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ, ನಾನು ಹುಟ್ಟುವಾಗಲೇ ಅಪ್ಪ ಶಾಸಕ
: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಪುತ್ರಿಯರಾದ ಅನುಸೂಯಾ ಹಾಗೂ ಶೈಲಾಜಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ತಾಯಿ ಚೆನ್ನಮ್ಮರ ಬಗ್ಗೆ ಕೆಲವೊಂದಿರಷ್ಟು ಸಂಗತಿಳಗನ್ನು ಬಿಚ್ಚಿಟ್ಟಿದ್ದಾರೆ. ಪುತ್ರ ಶೈಲಜಾ ಮಾತನಾಡಿ, ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ. ನಾನು ಹುಟ್ಟುವಾಗಲೇ ಅಪ್ಪ ಶಾಸಕರಾಗಿದ್ದರು. ಲೋಕೋಪಯೋಗಿ ಸಚಿವರಾಗಿದ್ದಾಗ ಸರ್ಕಾರಿ ನಿವಾಸ ಕೊಟ್ಟಿದ್ರು. ಬಾಡಿಗೆ ಮನೆಗೆ ಹೋಗ್ತೀವಿ ಅಂತ ಅಮ್ಮ ಅಪ್ಪ ಹೇಳಿದ್ರು. ಆಗ ಸಮೀಪದಲ್ಲೇ ಬಾಡಿಗೆ ಮನೆ ಹುಡುಕಲು ಹೋದ್ವಿ. ನಮ್ಮನ್ನ ನೋಡೋಕೆ ಹೋದಾಗ ಪ್ರಧಾನಮಂತ್ರಿ ಹೆಂಡ್ತಿ ಬಾಡಿಗೆಗೆ ಬರ್ತಾರಾ ಅಂತ ಪ್ರಶ್ನೆ ಮಾಡಿದ್ರು. ಮನೆ ಕೊಡೋಕೆ ಹಿಂದೆಮುಂದೆ ನೋಡಿದ್ರು. ರಾಜಕೀಯವಾಗಿ ಏನಾದ್ರೂ ಹೇಳ್ತಿದ್ದಾರಾ ಅಂತ ಅನುಮಾನದಿಂದ ನೋಡಿದ್ರು. ಅಗ್ರಿಮೆಂಟ್ ಹಾಕಿಸಿಕೊಳ್ತೀರಾ? ಅದು ಇದು ಅಂತ ಸಾಕಷ್ಟು ಪ್ರಶ್ನೆ ಮಾಡಿದ್ರು ಎಂದು ಹಿಂದಿನ ನೆನಪುಗಳನ್ನ ಮೆಲುಕು ಹಾಕಿದ್ದಾರೆ.
- Anil Kalkere
- Updated on: Jul 24, 2026
- 7:33 pm
ಸೂರ್ಯಾಸ್ತದ ಸುಂದರ ತಾಣಕ್ಕೀಗ ಕತ್ತಲ ಛಾಯೆ: ಕ್ಷಿತಿಜ ನೇಸರಧಾಮಕ್ಕೆ ಬೇಕಿದೆ ತುರ್ತು ಕಾಯಕಲ್ಪ
kshitija nesara dhama: ಅರಬ್ಬಿ ಸಮುದ್ರದ ಸುಂದರ ನೋಟದ ಬೈಂದೂರು ನೇಸರಧಾಮವು ಮೂಲಸೌಕರ್ಯ ಕೊರತೆ ಮತ್ತು ನಿರ್ವಹಣೆಯಿಲ್ಲದೆ ತನ್ನ ವೈಭವ ಕಳೆದುಕೊಳ್ಳುತ್ತಿದೆ. ಶಿಥಿಲಗೊಂಡ ಕಟ್ಟಡಗಳು, ಕಳೆಗುಂದಿದ ಉದ್ಯಾನಗಳು, ಸುರಕ್ಷತೆಯಿಲ್ಲದ ಸೂರ್ಯಾಸ್ತ ವೀಕ್ಷಣಾ ಸ್ಥಳ ಪ್ರವಾಸಿಗರನ್ನು ವಿಮುಖಗೊಳಿಸುತ್ತಿವೆ. ನೈತಿಕ ಪೊಲೀಸ್ಗಿರಿ ಕೂಡ ಪ್ರವಾಸೋದ್ಯಮಕ್ಕೆ ಹಿನ್ನಡೆಯಾಗಿದೆ.
- Prajwal Amin
- Updated on: Jul 24, 2026
- 7:03 pm
ಕರ್ನಾಟಕದಲ್ಲಿ ಮಳೆ ಅಭಾವ: 31 ಜಿಲ್ಲೆಗಳ ಪೈಕಿ 25 ಕಡೆ ಶೇ.20ಕ್ಕಿಂತ ಹೆಚ್ಚು ಕೊರತೆ
Monsoon Crisis: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ ತೀವ್ರಗೊಂಡಿದ್ದು, ಒಟ್ಟು 31 ಜಿಲ್ಲೆಗಳ ಪೈಕಿ 25 ಜಿಲ್ಲೆಗಳಲ್ಲಿ ಶೇ.20ಕ್ಕಿಂತ ಹೆಚ್ಚು ಮಳೆ ಅಭಾವ ಸೃಷ್ಟಿಯಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಅತ್ಯಧಿಕ ಶೇ.60ರಷ್ಟು ಕೊರತೆ ದಾಖಲಾಗಿದೆ. ರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (KSNDMC) ಮಾಹಿತಿ ಪ್ರಕಾರ, ಸಾಮಾನ್ಯವಾಗಿ ಜೂನ್ಗೆ ಹೋಲಿಸಿದರೆ ಜುಲೈನಲ್ಲಿ ಮಳೆ ಪ್ರಮಾಣ ಕಡಿಮೆಯಿರುತ್ತದೆ. ಆದರೆ ಈ ವರ್ಷ ಜುಲೈನಲ್ಲಿ ಜೂನ್ಗಿಂತ ಹೆಚ್ಚು ಮಳೆಯ ದಿನಗಳು ದಾಖಲಾಗಿವೆ.
- Prasanna Hegde
- Updated on: Jul 24, 2026
- 6:19 pm
ಮಳೆರಾಯನ ಮುನಿಸು: KRS ನೀರಿನ ಮಟ್ಟ ಕುಸಿತ; ಮಂಡ್ಯದಲ್ಲಿ ಕೃಷಿ ಚಟುವಟಿಕೆ ಸಂಪೂರ್ಣ ಸ್ತಬ್ಧ
Mandya Drought Crisis: ಮಂಡ್ಯ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ತಬ್ಧಗೊಂಡಿವೆ. KRS ಜಲಾಶಯದ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ಕೃಷಿಗೆ ನೀರಿಲ್ಲದೆ ಬಿತ್ತನೆ ಕಾರ್ಯ ಅಸಾಧ್ಯವಾಗಿದೆ. 83% ಮಳೆ ಕೊರತೆ ಎದುರಿಸುತ್ತಿರುವ ಜಿಲ್ಲೆಯನ್ನು ಬರ ಪೀಡಿತ ಎಂದು ಘೋಷಿಸುವಂತೆ ರೈತರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
- Dileep CP
- Updated on: Jul 24, 2026
- 6:02 pm
ಹೆಚ್ಡಿ ದೇವೇಗೌಡರ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದು, ಚೆನ್ನಮ್ಮ ನಿಧನ ಹಿನ್ನೆಲೆಯಲ್ಲಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಜೊತೆಗೆ ದೇವೇಗೌಡ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ.
- Ramesh B Jawalagera
- Updated on: Jul 24, 2026
- 5:53 pm
ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟಕ್ಕೆ ಬ್ರೇಕ್ ಹಾಕಲು ಮುಂದಾದ ರಾಜ್ಯ ಸರ್ಕಾರ: ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಧಾರ
ಅನ್ನಭಾಗ್ಯ ಯೋಜನೆಯ ಅಕ್ಕಿ ಕಾಳಸಂತೆ ಮಾರಾಟಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಹಲವು ಮಹತ್ವದ ನಿರ್ಧಾರಗಳನ್ನು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಜೊತೆಗೆ ನ್ಯಾಯಬೆಲೆ ಅಂಗಡಿಗಳ ಸಮಯ ವಿಸ್ತರಣೆಗೂ ತೀರ್ಮಾನಿಸಲಾಗಿದ್ದು, ಇವೆಲ್ಲದರ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
- Prasanna Gaonkar
- Updated on: Jul 24, 2026
- 5:32 pm