AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka

Karnataka

ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.

ಇನ್ನೂ ಹೆಚ್ಚು ಓದಿ

‘ನನ್ನ ಮಗ ಆತ್ಮಹತ್ಯೆಗೆ ಯತ್ನಿಸಿಲ್ಲ’: ಎಸ್ಪಿ ಪವನ್ ನೆಜ್ಜೂರ್ ತಂದೆ ಸ್ಪಷ್ಟನೆ

ಬಳ್ಳಾರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತ್ತಾದ ಐಪಿಎಸ್ ಅಧಿಕಾರಿ ಪವನ್ ನೆಜ್ಜೂರ್ ತಂದೆ ಉದಯ್ ಶಂಕರ್ ನೆಜ್ಜೂರ್ ಫೇಸ್‌ಬುಕ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನನ್ನ ಮಗ ಆತ್ಮಹತ್ಯೆಗೆ ಪ್ರಯತ್ನಿಸಿಲ್ಲ, ಇದು ಕೇವಲ ವದಂತಿ ಎಂದು ಅವರು ಹೇಳಿದ್ದಾರೆ. ದಕ್ಷ ಅಧಿಕಾರಿಯ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ಮನವಿ ಮಾಡಿದ್ದಾರೆ.

ಕೋಗಿಲು ನಿವಾಸಿಗಳ ಪಟ್ಟಿ ಸಿದ್ಧ: ಲೇಔಟ್​ಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಕೋಗಿಲು ಲೇಔಟ್ ಅಕ್ರಮ ಒತ್ತುವರಿ ವಿವಾದ ಬೆಂಗಳೂರಿನಲ್ಲಿ ರಾಜಕೀಯ ಸಮರ ಸೃಷ್ಟಿಸಿದೆ. ಸರ್ಕಾರ ನಿರಾಶ್ರಿತ ಕುಟುಂಬಗಳಿಗೆ ಮನೆ ನೀಡಲು ಮುಂದಾಗಿದ್ದು, ಬಿಜೆಪಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಂದಾಯ ಇಲಾಖೆ 188 ಕುಟುಂಬಗಳ 1,007 ಸದಸ್ಯರನ್ನು ಒಳಗೊಂಡ ಸಂತ್ರಸ್ತರ ಪಟ್ಟಿಯನ್ನು ಸಿದ್ಧಪಡಿಸಿದೆ.

ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ, ರಾಜ್ಯಪಾಲರ ಮಧ್ಯಪ್ರವೇಶವಾಗಲಿ; ಬಿಜೆಪಿ ನಾಯಕ ರವಿಕುಮಾರ್ ಆಗ್ರಹ

ಸಿಎಂ ಸಿದ್ದರಾಮಯ್ಯನವರು ಕೋಗಿಲು ಲೇಔಟ್​ ಧ್ವಂಸ ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕೊಡುತ್ತೇವೆ ಎಂದು ಹೇಳುತ್ತಾರೆ. ಈಗಾಗಲೇ ಅರ್ಜಿ ಹಾಕಿರುವವರಿಗೆ ಮನೆಯೇ ಕೊಟ್ಟಿಲ್ಲ. ತುಂಬಾ ಅನುಭವಿ ಸಿಎಂ ನೀವು. ದೇವರಾಜ ಅರಸು ಅವರ ದಾಖಲೆ ಮುರಿಯಲು ಹೊರಟಿದ್ದೀರಿ ಎಂದು ಎನ್. ರವಿಕುಮಾರ್ ವ್ಯಂಗ್ಯವಾಡಿದ್ದಾರೆ.

ಪ್ರತ್ಯೇಕ ಘಟನೆ: 3 ಅಪ್ರಾಪ್ತ ಬಾಲಕರಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಬಾಲಕಿಗೆ ಕಿರುಕುಳ, ಹಲ್ಲೆ

ಹುಬ್ಬಳ್ಳಿಯಲ್ಲಿ ಮತ್ತೆ ಅಪ್ರಾಪ್ತರ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬಂದಿವೆ. ಅಪ್ರಾಪ್ತ ಬಾಲಕಿಯಿಂದ ಅತ್ಯಾಚಾರ, ಮತ್ತೊಬ್ಬ ಬಾಲಕಿಯ ಮೇಲೆ ಹಲ್ಲೆ ನಡೆಸಿರುವ ಘಟನೆಗಳು ನಗರವನ್ನು ಬೆಚ್ಚಿಬೀಳಿಸಿವೆ. ಕಳೆದ ವರ್ಷದ ಘೋರ ಘಟನೆಯ ನೆನಪು ಮರುಕಳಿಸಿದ್ದು, ಪೊಲೀಸರು ಪೋಷಕರಿಗೆ ಮಕ್ಕಳ ಚಲನವಲನಗಳ ಬಗ್ಗೆ ನಿಗಾ ವಹಿಸುವಂತೆ ಎಚ್ಚರಿಕೆ ನೀಡಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಸರ್ಕಾರದ ವಿರುದ್ಧ ಜೋಶಿ ಕಿಡಿ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರವು ಕಾನೂನು ಸುವ್ಯವಸ್ಥೆ ಕಾಪಾಡುವುದನ್ನು ಬಿಟ್ಟು, ತನ್ನ ಶಾಸಕರನ್ನು ರಕ್ಷಿಸುವಲ್ಲಿ ನಿರತವಾಗಿದೆ ಎಂದು ಆರೋಪಿಸಿದ್ದಾರೆ. ಈ ಗಲಭೆಯ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಬಳ್ಳಾರಿ ಗಲಭೆ: ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್

ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ರಾಜಶೇಖರ್ ಕುಟುಂಬಕ್ಕೆ ಸಚಿವ ಜಮೀರ್ ಭೇಟಿ ನೀಡಿದರು. ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಿ, ಸಾಲ, ಮಕ್ಕಳ ವಿದ್ಯಾಭ್ಯಾಸ ಮತ್ತು ಮನೆ ವ್ಯವಸ್ಥೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಶಾಸಕರಾದ ಭರತ್ ರೆಡ್ಡಿ, ಗಣೇಶ್ ಈ ವೇಳೆ ಜಮೀರ್ ಜೊತೆಗಿದ್ದರು.

Madras Eye: ಶೀತಗಾಳಿ ಪ್ರಭಾವ ಬೆನ್ನಲ್ಲೇ ಮದ್ರಾಸ್ ಐ ಸೋಂಕು ಹೆಚ್ಚಳ: ಮಕ್ಕಳೇ ಟಾರ್ಗೆಟ್​

ಬೆಂಗಳೂರಿನಲ್ಲಿ ಶೀತಗಾಳಿ ಮತ್ತು ತೇವಾಂಶದಿಂದಾಗಿ ಮದ್ರಾಸ್ ಐ ಕಣ್ಣಿನ ಸೋಂಕು ಹೆಚ್ಚಾಗಿದೆ, ವಿಶೇಷವಾಗಿ ಮಕ್ಕಳಲ್ಲಿ. ಇದು ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿದೆ. ಹೀಗಾಗಿ ವೈದ್ಯರು ಪೋಷಕರಿಗೆ ಎಚ್ಚರಿಕೆ ನೀಡಿದ್ದು, ಕಣ್ಣಿನ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಬೇಡ ಹಾಗೂ ವೈದ್ಯರ ಸಲಹೆಗಳನ್ನು ಪಾಲಿಸಲು ಸೂಚಿಸಿದ್ದಾರೆ.

ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಕೂದಲೆಳೆ ಅಂತರದಲ್ಲಿ ಸಚಿವ ಸತೀಶ್​ ಜಾರಕಿಹೊಳಿ ಪಾರು

ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಿಂದ ಸಚಿವ ಸತೀಶ್ ಜಾರಕಿಹೊಳಿ ನಿರ್ಗಮಿಸುವಾಗ ಭಾರಿ ಧೂಳು ಮಿಶ್ರಿತ ಸುಂಟರಗಾಳಿಗೆ ಬೃಹತ್ ಪೆಂಡಾಲ್ ಕುಸಿದಿದೆ. ಕೂದಲೆಳೆ ಅಂತರದಲ್ಲಿ ಜಾರಕಿಹೊಳಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ಘಟನೆ ನಡೆದಿದೆ. ಪೆಂಡಾಲ್ ಕುಸಿತದ ವಿಡಿಯೋ ನೋಡಿ.

ಯಲ್ಲಾಪುರ: ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಮದುವೆಗೆ ಒಪ್ಪದ ಮಹಿಳೆಯನ್ನು ಯುವಕನೊಬ್ಬ ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾದ ಘಟನೆ ಶನಿವಾರ ನಡೆದಿದೆ. ಯಲ್ಲಾಪುರ ಪಟ್ಟಣದ ನಿವಾಸಿ ರಂಜಿತಾ ಹತ್ಯೆಯಾದ ಮಹಿಳೆಯಾಗಿದ್ದು, 10 ವರ್ಷಗಳ ಹಿಂದೆ ವಿಚ್ಛೇದನ ಪಡೆದಿದ್ದರು. ನಂತರ ರಫೀಕ್ ಎಂಬಾತನ ಜತೆ ಸ್ನೇಹ ಮೂಡಿ ಅದು ಪ್ರೀತಿಗೆ ತಿರುಗಿದ್ದು, ಈಗ ದಾರುಣ ಅಂತ್ಯ ಕಾಣುವಂತಾಗಿದೆ.

ಬಳ್ಳಾರಿ ಗಲಭೆ: ಜನಾರ್ದನರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ

ಬಳ್ಳಾರಿಯಲ್ಲಿ ಉದ್ವಿಗ್ನ ಪರಿಸ್ಥಿತಿಗೆ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಅವರು ಶಾಸಕ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲುಗೆ ಕರೆ ಮಾಡಿ ಧೈರ್ಯ ತುಂಬಿದ್ದಾರೆ. ಘಟನೆಗಳ ಬಗ್ಗೆ ಮಾಹಿತಿ ಪಡೆದ ದೇವೇಗೌಡರು, ಆತಂಕದಲ್ಲಿರುವ ನಾಯಕರಿಗೆ ಸಾಂತ್ವನ ಹೇಳಿದ್ದಾರೆ. ನಿನ್ನೆ ಸಂಜೆ ಇಬ್ಬರು ನಾಯಕರೊಂದಿಗೆ ಮಾತನಾಡಿದ್ದಾರೆ.

‘ಕೊರಗಜ್ಜ’ ಸಿನಿಮಾ ತಂಡದ ವಿರುದ್ಧ ಕೊಡಗಿನ ದೈವಾರಾಧಕರು ಮತ್ತು ನರ್ತಕರು ರೊಚ್ಚಿಗೆದ್ದಿದ್ದೇಕೆ?

‘ಕೊರಗಜ್ಜ’ ಸಿನಿಮಾ ತಂಡ ಆಯೋಜಿಸಿರುವ ರೀಲ್ಸ್ ಸ್ಪರ್ಧೆ ಸದ್ಯ ತೀವ್ರ ವಿವಾದಕ್ಕೆ ಕಾರಣವಾಗಿದೆ. ದೈವದ ಹೆಸರಲ್ಲಿ ವೇಷ ಹಾಕಿ ಕುಣಿಯುವುದರಿಂದ ದೈವ ನಿಂದನೆಯಾಗುತ್ತದೆ, ಭಕ್ತರ ನಂಬಿಕೆ ಘಾಸಿಯಾಗುತ್ತದೆ ಎಂದು ಕೊಡಗಿನ ದೈವ ನರ್ತಕರು ಮತ್ತು ಆರಾಧಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರ ತಂಡದ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

  • Gopal AS
  • Updated on: Jan 3, 2026
  • 4:13 pm

ಮದ್ಯದ ನಶೆಯಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದ ಯುವಕರು ಜೈಲುಪಾಲು

ಹೊಸ ವರ್ಷದ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು. ಇಬ್ಬರು ಯುವಕರು ಡಿಸೆಂಬರ್ 31 ರಂದು ರಾತ್ರಿ ಕಂಠ ಪೂರ್ತಿ ಕುಡಿದಿದ್ದರು. ಸೀದಾ ಮನೆಗೆ ಹೋಗುವ ಬದಲು ರಸ್ತೆಯಲ್ಲಿ‌‌ ನಿಂತಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಲು ಶುರು ಮಾಡಿದ್ದರು. ಪ್ರಶ್ನೆ ಮಾಡಿದ್ದ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದರು. ಸಾಲದಕ್ಕೆ ಪೊಲೀಸ್ ಠಾಣೆಯಲ್ಲಿ ಆವಾಜ್ ಹಾಕಿ ಇದೀಗ ಜೈಲು ಸೇರಿದ್ದಾರೆ.

ಎಸ್​ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್
ಎಸ್​ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ