Karnataka
ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.
ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್: ಪೊಲೀಸ್ ಇಲಾಖೆಯಿಂದಲೇ ವಿಶೇಷ ತರಬೇತಿ ಕಾರ್ಯಾಗಾರ
ಉದ್ಯೋಗಾಕಾಂಕ್ಷಿಗಳಿಗಾಗಿ ಪೊಲೀಸ್ ಇಲಾಖೆಯಿಂದಲೇ ವಿಶೇಷ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ. ಅಧಿವೇಶನ ಹಿನ್ನಲೆ ಹಲವಾರು ಕಡೆಗಳಿಂದ ಪಿಎಸ್ಐ ಪ್ರಶಿಕ್ಷಣಾರ್ಥಿಗಳು ಬಂದಿದ್ಧಾರೆ. ಟಾಪ್ 10 ಪ್ರಶಿಕ್ಷಣಾರ್ಥಿಗಳ ಮೂಲಕ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
- Narasimha Murti Pyati
- Updated on: Dec 15, 2025
- 4:55 pm
ನಾಳೆಯ ಹವಾಮಾನ: ಚಳಿಗೆ ತತ್ತರಿಸಲಿದೆ ಕರ್ನಾಟಕದ ಉತ್ತರ; ಬೆಂಗಳೂರಲ್ಲೂ ಶೀತ ಗಾಳಿಯ ಅಬ್ಬರ
Karnataka Weather Tomorrow: ರಾಜ್ಯದಲ್ಲಿ ತಾಪಮಾನ ಗಣನೀಯವಾಗಿ ಇಳಿದಿದ್ದು, ನಾಳೆಯೂ ಭಾರಿ ಚಳಿ ಮುಂದುವರಿಯಲಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಬೆಂಗಳೂರು ಸೇರಿದಂತೆ ಹಲವೆಡೆ ಶೀತ ಗಾಳಿ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ 14-18 ಡಿಗ್ರಿ ಸೆಲ್ಸಿಯಸ್ ತಾಪಮಾನ ನಿರೀಕ್ಷಿಸಲಾಗಿದೆ. ಉಳಿದೆಡೆ ಒಣ ಹವೆ ಅಥವಾ ಸಾಧಾರಣ ಚಳಿ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- Prasanna Hegde
- Updated on: Dec 15, 2025
- 4:42 pm
ಭರ್ಜರಿ ಕಾರ್ಯಚರಣೆ: 4 ಕಳ್ಳತನ ಪ್ರಕರಣ ಭೇದಿಸಿದ ಕಲಬುರಗಿ ಪೊಲೀಸ್; 6 ಖದೀಮರ ಬಂಧನ
ಕಲಬುರಗಿ ಜಿಲ್ಲೆಯ ಪೊಲೀಸರು ಭರ್ಜರಿ ಕಳ್ಳರ ಬೇಟೆ ಆಡಿದ್ದಾರೆ. ಜಿಲ್ಲೆಯ ಶಹಾಬಾದ್ ಹಾಗೂ ಜೇವರ್ಗಿ ಠಾಣೆಯಲ್ಲಿ ದಾಖಲಾಗಿದ್ದ 4 ಪ್ರತ್ಯೇಕ ಕಳ್ಳತನದಲ್ಲಿ 6 ಆರೋಪಿಗಳನ್ನು ಬಂಧಿಸುವ ಮೂಲಕ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ್ದಾರೆ. ಸದ್ಯ ಬಂಧಿತ ಆರೋಪಿಗಳಿಂದ ಚಿನ್ನಾಭರಣ ಸೇರಿದಂತೆ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
- Dattatraya Patil
- Updated on: Dec 15, 2025
- 4:35 pm
ದುಬೈನಲ್ಲಿ ಕುಳಿತು ಕರಾವಳಿಯಲ್ಲಿ ಕೋಮು ಭಾವನೆ ಕೆರಳಿಸಿ ಮಜಾ ತೆಗೆದುಕೊಳ್ಳುತ್ತಿದ್ದವ ಪೊಲೀಸ್ ಖೆಡ್ಡಕ್ಕೆ
ಕರಾವಳಿ ಮೊದಲೇ ಕೋಮುಸೂಕ್ಷ್ಮ ಪ್ರದೇಶ. ಸ್ವಲ್ಪ ಏನಾದರೂ ಹೆಚ್ಚು ಕಮ್ಮಿ ಆದ್ರೆ ಸಾಕು ಹಿಂದೂ ಮುಸ್ಲಿಂ ಗಲಾಟೆಗಳು, ಕೊಲೆಗಳು ಆಗುತ್ತವೆ. ಹೀಗಾಗಿ ಉಡುಪಿ, ದಕ್ಷಿಣ ಕನ್ನಡ ಕೋಮುಸೂಕ್ಷ್ಮ ಜಿಲ್ಲೆಯಾಗಿದೆ. ಹೀಗಿರುವಾಗ ವ್ಯಕ್ತಿಯೋರ್ವ ದೂರದ ದುಬೈನಲ್ಲಿ ಕುಳಿತು ಮಂಗಳೂರಿನಲ್ಲಿ ಕೋಮು ಭಾವನೆ ಕೆರಳಿಸುವಂತಹ ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ. ಇದೀಗ ಆ ಯುವಕ ಪೊಲೀಸರ ಖೆಡಕ್ಕೆ ಬಿದ್ದಿದ್ದಾನೆ.
- Ramesh B Jawalagera
- Updated on: Dec 15, 2025
- 4:16 pm
ರೆಬೆಲ್ ನಾಯಕನ ನೇತೃತ್ವ: ಕರ್ನಾಟಕದಲ್ಲಿ ಮತ್ತೊಂದು ಪ್ರಾದೇಶಿಕ ಪಕ್ಷ; ಜನವರಿ 24ಕ್ಕೆ ಮುಹೂರ್ತ
ರಾಜ್ಯದಲ್ಲಿ ಮತ್ತೊಂದು ಪ್ರಾದೇಶಿಕ ಪಕ್ಷದ ಉದಯಕ್ಕೆ ಮುಹೂರ್ತ ನಿಗದಿಯಾಗಿದೆ. ರೆಬೆಲ್ ನಾಯಕನ ನೇತೃತ್ವದಲ್ಲಿ ಹೊಸ ಪೊಲಿಟಿಕಲ್ ಪಾರ್ಟಿ ಅಸ್ತಿತ್ವಕ್ಕೆ ಬರುತ್ತಿದ್ದು, ಪಕ್ಷದ ಲೋಗೋ ಇನ್ನಷ್ಟೇ ಫೈನಲ್ ಆಗಬೇಕಿದೆ. ಬಸವಣ್ಣ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳ ಆಧಾರದಲ್ಲಿ ಪಕ್ಷ ಸ್ಥಾಪಿಸಲು ಸಮಾನ ಮನಸ್ಕರು ಉದ್ದೇಶಿಸಿದ್ದಾರೆ.
- Prasanna Hegde
- Updated on: Dec 15, 2025
- 3:59 pm
ಮತ್ತೊಮ್ಮೆ ಸುದ್ದಿಯಾದ ಕಾರವಾರ ಕಾರಾಗೃಹ; ಕೈದಿಗಳ ಬಳಿ ಏಳು ಮೊಬೈಲ್ ಪತ್ತೆ
ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿಯಿದ್ದ ಏಳು ಮೊಬೈಲ್ಗಳು ಮತ್ತು ಚಾರ್ಜರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇತ್ತೀಚೆಗೆ ತಂಬಾಕು ನಿರಾಕರಿಸಿದ್ದಕ್ಕೆ ಜೈಲರ್ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ, ಜೈಲಿನಲ್ಲಿ ಟಿವಿ ನಾಶಪಡಿಸಿದ ಘಟನೆಗಳು ನಡೆದಿವೆ. ಈ ಸರಣಿ ಘಟನೆಗಳ ನಂತರ ಕೈಗೊಂಡ ತಪಾಸಣೆಯಲ್ಲಿ ಮೊಬೈಲ್ಗಳು ಪತ್ತೆಯಾಗಿವೆ. ಇದು ಕಾರಾಗೃಹದ ಭದ್ರತೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
- Bhavana Hegde
- Updated on: Dec 15, 2025
- 3:40 pm
ಗದಗ, ಮಂಗಳೂರಿನ ಸರ್ಕಾರಿ ಕಚೇರಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ
ರಾಜ್ಯದಲ್ಲಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ರವಾನೆ ಹೆಚ್ಚಾಗಿವೆ. ಇತ್ತೀಚೆಗೆ ಕೋಲಾರ ಮತ್ತು ಬೀದರ್ ಜಿಲ್ಲಾಧಿಕಾರಿ ಕಚೇರಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿತ್ತು. ಇದೀಗ ಅದೇ ರೀತಿಯಾಗಿ ಗದಗ ಮತ್ತು ಮಂಗಳೂರಿನ ಸರ್ಕಾರಿ ಕಚೇರಿಯನ್ನು ಸ್ಫೋಟಿಸುವುದಾಗಿ ಕಿಡಿಗೇಡಿಗಳು ಧಮ್ಕಿ ಹಾಕಿದ್ದಾರೆ.
- Sanjeev Pandre
- Updated on: Dec 15, 2025
- 3:47 pm
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಚಾಮರಾಜನಗರ ಜಿಲ್ಲೆ ಗಡಿ ತಮಿಳುನಾಡಿನ ಮಾರ್ಗಮಧ್ಯ ಕಾಡಾನೆಗಳ ಓಡಾಟ ಜೋರಾಗಿದೆ. ಎತ್ತಕಟ್ಟಿ ಬೆಟ್ಟ ಹಾಗೂ ತಾಳವಾಡಿ ಸೇರಿದಂತೆ ಅಕ್ಕ ಪಕ್ಕ ಗ್ರಾಮಗಳ ಬಳಿ ಕಾಡಾನೆಗಳು ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಮುಖ್ಯರಸ್ತೆಯಲ್ಲೇ ಕಾಡಾನೆಗಳು, ಓಡಾಡುತ್ತಿವೆ. ಅದರಲ್ಲೂ ಒಂದು ಆನೆ ದಿಂಬಂ ಘಾಟ್ನಲ್ಲಿ ಪೊಲೀಸರ ರೀತಿ ಲಾರಿಗಳನ್ನು ತಪಾಸಣೆ ನಡೆಸಿದೆ. ಹೌದು... ಚಾಮರಾಜನಗರದಿಂದ ತಮಿಳುನಾಡಿನ ಬಣ್ಣಾರಿಗೆ ತೆರಳುವ ರಸ್ತೆ ಮಧ್ಯೆ ಲಾರಿಗಳನ್ನು ಅಡ್ಡ ಹಾಕಿ ಕಬ್ಬು ತರಕಾರಿ ಕೀಳುತ್ತಿವೆ. ಒಂದು ವೇಳೆ ತಿನ್ನಲು ಲಾರಿಯಲ್ಲಿ ಏನು ಇಲ್ಲದಿದ್ದರೆ ಹಾಗೇ ಕಳುಹಿಸುತ್ತಿದೆ. ವಿಡಿಯೋ ನೋಡುತ್ತಿದ್ದರೆ ಥೇಟ್ ಸೇಮ್ ಟು ಸೇಮ್ ಪೊಲೀಸರ ರೀತಿಯಲ್ಲೇ ಕಾಡಾನೆ ವಾಹನಗಳನ್ನ ಅಡ್ಡ ಹಾಕಿ ಪರಿಶೀಲನೆ ಮಾಡುತ್ತಿದೆ.
- Ramesh B Jawalagera
- Updated on: Dec 15, 2025
- 2:48 pm
ಮೊದಲ ಭೇಟಿಯಲ್ಲೇ ಪರಪ್ಪನ ಅಗ್ರಹಾರದಲ್ಲಿ ಎಲ್ಲರ ಬೆವರಿಳಿಸಿದ ನೂತನ ಡಿಜಿಪಿ ಅಲೋಕ್ ಕುಮಾರ್
ಕೈದಿಗಳಿಗೆ ರಾಜಾತಿಥ್ಯದಿಂದ ರಾಜ್ಯದಲ್ಲಿ ಸುದ್ದಿಯಲ್ಲಿರೋ ಪರಪ್ಪನ ಅಗ್ರಹಾರ ಜೈಲಿಗೆ ಬಂದಿಖಾನೆ ಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದಾರೆ. ಜೈಲಿನ ಹೊರಾಂಗಣ ಸೇರಿ ಪ್ರತಿ ಬ್ಯಾರಕ್, ಅಡುಗೆ ಮನೆ, ಆಸ್ಪತ್ರೆ, ಬೇಕರಿಗಳಿಗೂ ವಿಸಿಟ್ ನೀಡಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಾರ್ಕಿಂಗ್ ವಿಚಾರವಾಗಿ ಅಧಿಕಾರಿಗಳನ್ನು ಈ ವೇಳೆ ಅವರು ತರಾಟೆಗೆ ಪಡೆದ ಪ್ರಸಂಗವೂ ನಡೆದಿದೆ.
- Ramu Ram
- Updated on: Dec 15, 2025
- 2:31 pm
ಕೋಮುಸೂಕ್ಷ್ಮ ಮಂಗಳೂರಿನಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್ಬುಕ್ ಪೋಸ್ಟ್: ಇಬ್ಬರ ಬಂಧನ
ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡಿ ವಿಡಿಯೋ ಪೋಸ್ಟ್ ಮಾಡಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ‘‘ಟೀಮ್ ಎಸ್ಡಿಪಿಐ 2022’’ ಎಂಬ ಫೇಸ್ಬುಕ್ ಪೇಜ್ನಲ್ಲಿ ಹಿಂದೂಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿರುವ ವ್ಯಕ್ತಿಯನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- Ashok
- Updated on: Dec 15, 2025
- 2:18 pm
ಧಾರವಾಡ ಸರ್ಕಾರಿ ಹುದ್ದೆಗಳ ಭರ್ತಿ: ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಭೇಟಿಗೆ ಅವಕಾಶ ನೀಡಿ ಹೈಕೋರ್ಟ್ ಆದೇಶ
ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪರಿಗಣಿಸಿದೆ. ಸಿಎಂ ಭೇಟಿಯಾಗಿ ಮನವಿ ಸಲ್ಲಿಸಲು ಹೈಕೋರ್ಟ್ ನಿರ್ದೇಶಿಸಿದ್ದು, ಸಾವಿರಾರು ನಿರುದ್ಯೋಗಿ ಯುವಕರಿಗೆ ಇದರಿಂದ ಹೊಸ ಭರವಸೆ ಮೂಡಿದೆ.
- Narasimha Murti Pyati
- Updated on: Dec 15, 2025
- 3:34 pm
ಅನ್ಯಜಾತಿ ಯುವತಿ ಜೊತೆ ಮಗ ಮದುವೆ ಆಗಿದ್ದಕ್ಕೆ ತಾಯಿಗೆ ಶಿಕ್ಷೆ?: ಪೊಲೀಸರ ಮೇಲೆಯೇ ಆರೋಪ
ಮಗ ಅನ್ಯಜಾತಿಯ ಯುವತಿಯೊಂದಿಗೆ ಮದುವೆಯಾದ ಕಾರಣಕ್ಕೆ ಆತನ ತಾಯಿಗೆ ಪೊಲೀಸರು ಹಲ್ಲೆ ಮಾಡಿದ್ದಾರೆಂಬ ಗಂಭೀರ ಆರೋಪ ಹುಬ್ಬಳ್ಳಿಯಲ್ಲಿ ಕೇಳಿಬಂದಿದೆ. ಮಗನ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಕ್ಕೆ ಮಹಿಳೆಯ ಮೇಲೆ ಪೊಲೀಸರು ಬೆಲ್ಟ್ನಿಂದ ಥಳಿಸಿದ್ದಾರೆ. ವಿಚಾರಣೆ ನೆಪದಲ್ಲಿ ಕರೆಸಿಕೊಂಡು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಧಾರವಾಡ ಎಸ್ಪಿ ತಿಳಿಸಿದ್ದಾರೆ.
- Sanjayya Chikkamath
- Updated on: Dec 15, 2025
- 1:51 pm