Karnataka
ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.
ಕಾಂಗ್ರೆಸ್ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ಖರ್ಗೆಗೆ ವಿಜಯೇಂದ್ರ ತಿರುಗೇಟು!
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾಂಗ್ರೆಸ್ ಅಕ್ರಮ ನಡೆಸುತ್ತಿದೆ ಎಂದು ಆರೋಪಿಸಿ ಬಿ.ವೈ.ವಿಜಯೇಂದ್ರ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ್ದಾರೆ. ಬಿಎಲ್ಓಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ಪರವಾಗಿ ಫಾರಂ ಹಂಚುತ್ತಿರುವುದು, ಮಸೀದಿ, ಚೌಲ್ಟ್ರಿ, ಶಾಸಕರ ಕಚೇರಿಗಳಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಆಯುಕ್ತರ ಗಮನಕ್ಕೆ ತಂದಿದ್ದಾರೆ. ವ್ಯವಸ್ಥೆ ಬುಡಮೇಲು ಮಾಡಲು ಯತ್ನಿಸುತ್ತಿರುವ ಕಾಂಗ್ರೆಸ್ "ಕತ್ತೆಗಳ" ಬಗ್ಗೆ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Kiran Haniyadka
- Updated on: Jul 4, 2026
- 11:14 pm
ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ: ನಾನು ಸೆಲೆಬ್ರಿಟಿ ಇನ್ಚಾರ್ಜ್ ಅಲ್ಲ; ಪ್ರಿಯಾಂಕ್ ಖರ್ಗೆ
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ವ್ಯವಸ್ಥೆಗಳ ಪರಿಶೀಲನೆ ಮಾಡಿದರು. ಈ ವೇಳೆ 24 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಡಗಿದೆ. ನಾನು ಸೆಲೆಬ್ರಿಟಿ ಇನ್ಚಾರ್ಜ್ ಅಲ್ಲ, ಗೃಹ ಇಲಾಖೆಯ ಉಸ್ತುವಾರಿ ಎಂದು ಹೇಳಿದ್ದಾರೆ.
- Ramu Ram
- Updated on: Jul 4, 2026
- 10:01 pm
ಶ್ರೀರಾಮನ ಚಿನ್ನಾಭರಣ ದೋಚಲು 200 ಖದೀಮರ ಜಾಲ: ಅಯೋಧ್ಯೆಯಿಂದ ರೈಲಿನಲ್ಲಿ ಕರ್ನಾಟಕಕ್ಕೆ ಬರ್ತಿತ್ತಾ ಕದ್ದ ಚಿನ್ನ?
ಅಯೋಧ್ಯೆ ಶ್ರೀರಾಮ ಮಂದಿರದ ಕಾಣಿಕೆ ಹಾಗೂ ಚಿನ್ನಾಭರಣ ಕಳ್ಳತನ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸ್ಫೋಟಕ ಸಂಗತಿಗಳು ಬಯಲಾಗುತ್ತಿವೆ. ಹುಂಡಿ ಹಣದ ಜೊತೆ, ದೇಣಿಗೆಯ ಚಿನ್ನವನ್ನೂ ದೋಚಲು 200 ಜನರ ಬೃಹತ್ ಜಾಲವೇ ಕೆಲಸ ಮಾಡುತ್ತಿತ್ತು. ಅಯೋಧ್ಯೆಯಿಂದ ಕರ್ನಾಟಕಕ್ಕೆ ರೈಲಿನಲ್ಲಿ ಚಿನ್ನ ಸಾಗಿಸಲಾಗುತ್ತಿತ್ತು ಎನ್ನಲಾಗುತ್ತಿದೆ.
- Gangadhar Saboji
- Updated on: Jul 4, 2026
- 9:28 pm
ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್!
ರಾಜ್ಯದ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಗೆ ಅವಾಂತರಗಳು ಸಂಭವಿಸಿವೆ. ಧಾರಾಕಾರ ಮಳೆಗೆ ಮನೆಯೊಂದರ ಗೋಡೆ ಕುಸಿದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ 7 ಜನರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ನಡೆದಿದೆ. ಇನ್ನು ವಾಣಿಜ್ಯ ನಗರಿ ಮುಂಬೈ ಜಲಾವೃತವಾಗಿದ್ದು, ಗುಜರಾತ್, ರಾಜಸ್ಥಾನ, ಜಮ್ಮು ಕಾಶ್ಮೀರ ಮತ್ತು ಉತ್ತರಾಖಂಡದಲ್ಲೂ ವರುಣಾರ್ಭಟ ಜೋರಾಗಿದೆ.
- Sahadev Mane
- Updated on: Jul 4, 2026
- 8:00 pm
SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು; ಸಿಬ್ಬಂದಿಯಿಂದ ಪ್ರತಿಭಟನೆ
SIR ಕರ್ತವ್ಯಕ್ಕೆ ತೆರಳುವಾಗ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದ ವಿಎಒ ಭುವನಾ ಕೊನೆಗೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಇತ್ತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನೂರಾರು ಕಂದಾಯ ಇಲಾಖೆ ಸಿಬ್ಬಂದಿ ನ್ಯಾಯಕ್ಕಾಗಿ ಪ್ರತಿಭಟನೆ ಮುಂದುವರೆಸಿದ್ದಾರೆ. ಇನ್ನು ದುರಂತಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಯ ಅಮಾನತ್ತಿಗೆ ಒತ್ತಾಯಿಸಿದ್ದಾರೆ.
- Jagadisha B
- Updated on: Jul 4, 2026
- 7:30 pm
SIRನಲ್ಲಿ ನಿಯಮ ಉಲ್ಲಂಘನೆ: ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು
ರಾಜ್ಯದಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ವ್ಯಾಪಕ ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ರಾಜ್ಯ ಚುನಾವಣಾ ಆಯೋಗಕ್ಕೆ ಇಂದು ದೂರು ನೀಡಿದೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಿಯೋಗ ಮುಖ್ಯ ಚುನಾವಣಾಧಿಕಾರಿಗೆ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ.
- Kiran Haniyadka
- Updated on: Jul 4, 2026
- 6:04 pm
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ಉಡುಪಿ ಮತ್ತು ಶಿವಮೊಗ್ಗವನ್ನು ಸಂಪರ್ಕಿಸುವ ಆಗುಂಬೆ ಘಾಟ್ನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತದ ಆತಂಕ ಹೆಚ್ಚಾಗಿದೆ. ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ, ಘನ ವಾಹನಗಳ ಸಂಚಾರವನ್ನು ನಿಷೇಧಿಸಿದೆ. ಸೆಪ್ಟೆಂಬರ್ 30ರವರೆಗೆ ಲಘು ವಾಹನಗಳಿಗೆ ಮಾತ್ರ ಅವಕಾಶವಿದ್ದು, ಮಳೆಗಾಲದಲ್ಲಿ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
- Prajwal Amin
- Updated on: Jul 4, 2026
- 5:02 pm
ತುಮಕೂರು: SIR ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತ; ಇಬ್ಬರು ಮಹಿಳಾ ಸಿಬ್ಬಂದಿ ಪೈಕಿ ಓರ್ವರ ಸ್ಥಿತಿ ಗಂಭೀರ
ರಾಜ್ಯದಲ್ಲಿ ಕಳೆದ 5 ದಿನಗಳಿಂದ SIR ಪ್ರಕ್ರಿಯೆ ನಡೆಯುತ್ತಿದೆ. ಸಾಲು ಸಾಲು ಲೋಪ ಆರೋಪಗಳ ಮಧ್ಯೆ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯಕ್ಕೆ ತೆರಳುತ್ತಿದ್ದ ಇಬ್ಬರು ವಿಎಒ ಸಿಬ್ಬಂದಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
- Jagadisha B
- Updated on: Jul 4, 2026
- 4:28 pm
ಕೋರ್ಟ್ನಲ್ಲಿ ಗೆದ್ದರೂ ಸಿಗದ ಸರ್ಕಾರಿ ಕೆಲಸ: ಒಂದು ದಶಕದಿಂದ ಕರ್ನಾಟಕದ ಮೂವರ ನಿರಂತರ ಹೋರಾಟ!
ನಗರಾಭಿವೃದ್ಧಿ ಇಲಾಖೆಯ ವರ್ಕ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆಯಾಗಿದ್ದ ಕರ್ನಾಟಕದ ಮೂವರು ಅಭ್ಯರ್ಥಿಗಳು ಹೈಕೋರ್ಟ್ನಲ್ಲಿ ಮೊಕದ್ದಮೆ ಗೆದ್ದರೂ ಉದ್ಯೋಗ ಸಿಗದೆ ದಶಕದಿಂದ ಹೋರಾಡುತ್ತಿದ್ದಾರೆ. ಕೋರ್ಟ್ ನೀಡಿದ್ದ ಎರಡು ತಿಂಗಳ ಗಡುವು ಮುಗಿದರೂ ನೇಮಕಾತಿ ಆದೇಶ ನೀಡದ ಸರ್ಕಾರದ ನಡೆಗೆ ಅಭ್ಯರ್ಥಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Bhavana Hegde
- Updated on: Jul 4, 2026
- 3:13 pm
ಕಸ ತಿಂದು ‘ಚಿನ್ನ’ ಕೊಡುವ ಪುಟ್ಟ ಕಾರ್ಮಿಕರು! ಉಡುಪಿಯ ವಂಡ್ಸೆಯಲ್ಲಿ ಕೀಟಗಳ ನೆರವಿನಿಂದ ಕಸ ಮುಕ್ತ ಕ್ರಾಂತಿ
ಉಡುಪಿ ಜಿಲ್ಲೆಯ ವಂಡ್ಸೆ ಗ್ರಾಮ ಪಂಚಾಯಿತಿಯು ಬ್ಲಾಕ್ ಸೋಲ್ಜರ್ ಫ್ಲೈ (Black Soldier Fly) ಎಂಬ ವಿಶೇಷ ಕೀಟಗಳ ಮೂಲಕ ಹಸಿ ಕಸವನ್ನು ಅತ್ಯಂತ ಪರಿಣಾಮಕಾರಿಯಾಗಿ ಜೈವಿಕ ಗೊಬ್ಬರವನ್ನಾಗಿ ಪರಿವರ್ತಿಸಿ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ದುರ್ವಾಸನೆ ಇಲ್ಲದೆ, ಒಂದೇ ರಾತ್ರಿಯಲ್ಲಿ ಕಸವನ್ನು ಗೊಬ್ಬರವಾಗಿಸುತ್ತಿರುವ ಈ ಪುಟ್ಟ ಕೀಟಗಳು ಗ್ರಾಮೀಣ ಆರ್ಥಿಕತೆಗೆ ಹೊಸ ಶಕ್ತಿ ತುಂಬುತ್ತಿವೆ.
- Prajwal Amin
- Updated on: Jul 4, 2026
- 3:09 pm
ಕೊಪ್ಪಳ: ಸಾಲಬಾಧೆಗೆ ನೇಣುಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಕೊಪ್ಪಳ ಜಿಲ್ಲೆಯ ಗಂಗಾವತಿಯ ಪ್ರಶಾಂತನಗರದ ಮನೆ ಒಂದರಲ್ಲಿ ಭೀಕರ ಘಟನೆಯೊಂದು ನಡೆದಿದೆ. ಒಂದೇ ಕುಟುಂಬದ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಸದ್ಯ ಸ್ಥಳಕ್ಕೆ ಗಂಗಾವತಿ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
- Shivakumar Pattar
- Updated on: Jul 4, 2026
- 3:08 pm
Karnataka SIR Row: ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್ ಜೋಶಿ
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಸರಿಯಾಗಿ ನಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ. ಸಾಮೂಹಿಕವಾಗಿ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗುತ್ತಿದೆ, ಇದು ಎಸ್ಐಆರ್ ಮಾಡುವ ಸರಿಯಾದ ವಿಧಾನವಲ್ಲ ಎಂದು ಅವರು ತಿಳಿಸಿದ್ದಾರೆ. ವಾರ್ಡ್ ನಂಬರ್ 69, ಬೂತ್ ನಂಬರ್ 116 ರಲ್ಲಿ ಮೂರು ಕುಟುಂಬಗಳಿಗೆ 50 ಫಾರ್ಮ್ಗಳನ್ನು ನೀಡಿರುವಂತಹ ಉದಾಹರಣೆಗಳನ್ನು ಅವರು ಉಲ್ಲೇಖಿಸಿದ್ದಾರೆ. ಬಿಎಲ್ಎಗಳು ಆಕ್ಷೇಪಿಸಿದಾಗಲೂ ಕ್ರಮ ಕೈಗೊಂಡಿಲ್ಲ ಎಂದು ಜೋಶಿ ದೂರಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮೃತರು, ಸ್ಥಳಾಂತರಗೊಂಡವರು ಮತ್ತು ಅಕ್ರಮ ವಲಸಿಗರನ್ನು ಗುರುತಿಸಲು ಎಸ್ಐಆರ್ ಮಾಡಬೇಕೇ ಹೊರತು ಸಾಮೂಹಿಕವಾಗಿ ಫಾರ್ಮ್ ಭರ್ತಿ ಮಾಡುವುದಕ್ಕಲ್ಲ ಎಂದು ಅವರು ಹೇಳಿದ್ದಾರೆ. ಈ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಬಗ್ಗೆ ಬಿಜೆಪಿ ಪ್ರಮುಖರೊಂದಿಗೆ ಚರ್ಚಿಸಲಾಗುವುದು ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
- Bhavana Hegde
- Updated on: Jul 4, 2026
- 2:45 pm