Karnataka
ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.
ಫ್ರೀ ಬಸ್ ಪಾಸ್ ಬೆನ್ನಲ್ಲೇ ರಿಯಾಯಿತಿಯಲ್ಲಿ ಮೆಟ್ರೋ ಪಾಸ್ ನೀಡುವಂತೆ ಬೆಂಗಳೂರು ವಿದ್ಯಾರ್ಥಿಗಳ ಮನವಿ
ರಾಜ್ಯ ಸರ್ಕಾರ ಪ್ರಾಥಮಿಕ ಶಾಲೆಯಿಂದ ಸ್ನಾತಕೋತ್ತರ ಹಂತದವರೆಗಿನ ಪುರುಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ಗಳನ್ನು ನೀಡಲು ಘೋಷಣೆ ಮಾಡಿದೆ. ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನವೇ ಈ ಮೊದಲ ಘೋಷಣೆ ಮಾಡಿದ್ದಾರೆ. ಆದರೆ, ಇತ್ತ ಬೆಂಗಳೂರಿನಲ್ಲಿ ನಮ್ಮ ಮೆಟ್ರೋದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ತಿಂಗಳ ಅಥವಾ ಇಯರ್ಲಿ ಪಾಸ್ ನೀಡುವಂತೆ ವಿದ್ಯಾರ್ಥಿಗಳು ಸಿಎಂಗೆ ಮನವಿ ಮಾಡಿದ್ದಾರೆ.
- Kiran Surya
- Updated on: Jun 9, 2026
- 10:38 pm
ಪಾದಚಾರಿ ಅಲ್ಲ,ಸಾವಿನ ಮಾರ್ಗ: ಬೆಂಗಳೂರಿನಲ್ಲಿ ವರ್ಷದಿಂದ ವರ್ಷಕ್ಕೆ ಏರುತ್ತಿದೆ ಪಾದಚಾರಿಗಳ ಸಾವಿನ ಸಂಖ್ಯೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಾದಚಾರಿಗಳ ಜೀವ ಅಪಾಯದಲ್ಲಿದೆ. ಪಾದಚಾರಿಗಳು ಸುಗಮವಾಗಿ ಓಡಾಡಲು ನಗರದ ಬಹುತೇಕ ಕಡೆಗಳಲ್ಲಿ ಸರಿಯಾದ ಮಾರ್ಗಗಳೇ ಇಲ್ಲ. ಏಕೆಂದರೆ, ಪಾದಚಾರಿ ಮಾರ್ಗಗಳು ಅಂಗಡಿಗಳು, ಮನೆಗಳವರಿಂದ ಒತ್ತುವರಿಯಾಗಿದೆ. ಕೆಲವೆಡೆ ಹಾಳಾಗಿವೆ. ಹೀಗಾಗಿ ವರ್ಷದಿಂದ ವರ್ಷಕ್ಕೆ ಪಾದಚಾರಿಗಳ ಸಾವಿನ ಸಂಖ್ಯೆ ಏರುತ್ತಲೇ ಇದ್ದು, ಪಾದಚಾರಿಗಳು ರಸ್ತೆ ಮೇಲೆ ಓಡಾಡುವಾಗ ತಮ್ಮ ಜೀವವನ್ನು ಕೈಯಲ್ಲಿ ಹಿಡಿದಿಟ್ಟುಕೊಳ್ಳುವಂತಾಗಿದೆ.
- Ramesh B Jawalagera
- Updated on: Jun 9, 2026
- 9:53 pm
ಬೆಂಗಳೂರಿನಲ್ಲಿ ಮಿತಿಮೀರಿದ ಕಸದ ಬಿಕ್ಕಟ್ಟು: 5,445ಕ್ಕೆ ಏರಿಕೆಯಾದ ‘ಬ್ಲ್ಯಾಕ್ ಸ್ಪಾಟ್’ಗಳ ಸಂಖ್ಯೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಕಸದ ಕಂಟಕ ಶುರುವಾಗಿದೆ. ರಸ್ತೆ ಬದಿ, ಫುಟ್ಪಾತ್, ಚರಂಡಿ ಅಂತಾ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದ್ದು, ಕಸ ವಿಲೇವಾರಿ ಮಾಡದ ಗ್ರೇಟರ್ ಬೆಂಗಳೂರು( GBA) ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಅದರಲ್ಲೂ ಮುಂಗಾರು ಮಳೆ ಆರಂಭವಾಗಿರೋದ್ರಿಂದ, ಈ ಕಸ ಕೊಳೆತು ನಾರುತ್ತಿದ್ದು ರೋಗರುಜಿನಗಳ ಭೀತಿ ಆತಂಕ ಶುರುವಾಗಿದೆ.
- Ramesh B Jawalagera
- Updated on: Jun 9, 2026
- 9:13 pm
ಬೆಳಗಾವಿಯಲ್ಲಿ ವರುಣನ ಅಬ್ಬರಕ್ಕೆ ನೆಲಕ್ಕುರುಳಿದ 8 ಮನೆಗಳು, ಉಟ್ಟ ಬಟ್ಟೆ ಬಿಟ್ಟು ಎಲ್ಲಾ ನೀರುಪಾಲು
ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರ ಜಪರಾಗಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ಬೆಳಗಾವಿಯಲ್ಲಂತೂ ವ್ಯಾಪರಸ್ಥರು ವರುಣಾರ್ಭಟಕ್ಕೆ ಹೈರಾಣಾಗಿ ಹೋಗಿದ್ದಾರೆ. ಇನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಕಲ್ಮಠ ಎಂಬ ಓಣಿಯಲ್ಲಿ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ವರುಣಾರ್ಭಟಕ್ಕೆ ಒಂದೇ ಕಡೆ ಬರೋಬ್ಬರಿ 8 ಮನೆಗಳು ಧರೆಗುರುಳಿದ್ದು, ಅದೃಷ್ಟವಶಾತ್ 8 ಮನೆಗಳಲ್ಲಿದ್ದ ಜನ ಪವಾಡ ರೀತಿ ಪಾರಾಗಿದ್ದಾರೆ. ಇಲ್ಲಿ ಬಾಡಿಗೆಗೆ ಇದ್ದ ಜನರೆಲ್ಲರೂ ಕೂಲಿಕಾರ್ಮಿಕರು. ಬಟ್ಟೆ, ದವಸ ಧಾನ್ಯ, ದಾಖಲೆಗಳು, ಹಣ ಎಲ್ಲವೂ ಈಗ ಮಣ್ಣುಪಾಲಾಗಿದೆ. ಉಟ್ಟ ಬಟ್ಟೆ ಬಿಟ್ಟು ಎಲ್ಲವನ್ನೂ ಕಳೆದಕೊಂಡ ಜನ ಬೀದಿಗೆ ಬಿದ್ದಿದ್ದು, ಟಿವಿ9 ಬಳಿ ತಮ್ಮ ಅಳಲು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ
- Ramesh B Jawalagera
- Updated on: Jun 9, 2026
- 7:19 pm
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: ಬೆಂಗಳೂರಿಗೆ ಬರಬೇಕಿದ್ದ ‘ಕೈ’ ಶಾಸಕರ ಪ್ರವಾಸ ಕೊನೇ ಕ್ಷಣದಲ್ಲಿ ರದ್ದು
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಭೀತಿ ಹಿನ್ನೆಲೆ ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ. ಬೆಂಗಳೂರು ಏರ್ಪೋರ್ಟ್ಗೆ ಆಗಮಿಸಲಿರುವ ಶಾಸಕರು, ಕೆಐಎಬಿಯಿಂದ ವಂಡರ್ ಲಾ ರೆಸಾರ್ಟ್ಗೆ ತೆರಳಲಿದ್ದಾರೆ. ಅವರನ್ನು ಕರೆದೊಯ್ಯಲು ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಜೂನ್ 17ರ ರಾತ್ರಿ ಅಥವಾ 18ರ ಬೆಳಗ್ಗೆ 63 ಶಾಸಕರು ಇಲ್ಲಿಂದ ಹಿಂದಿರುಗಲಿದ್ದಾರೆ ಎನ್ನಲಾಗಿದೆ.
- Naveen Kumar
- Updated on: Jun 9, 2026
- 7:42 pm
Karnataka Weather Forecast: ರಾಜ್ಯದ ಎರಡು ಜಿಲ್ಲೆಗಳಿಗೆ ನಾಳೆ ಆರೆಂಜ್ ಅಲರ್ಟ್; ಎಲ್ಲೆಲ್ಲಿ ವರುಣಾರ್ಭಟ?
Monsoon 2026: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಜೂನ್ 10 ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಲಾಗಿದ್ದು, ಉಳಿದ ಹಲವೆಡೆ ಸಾಧಾರಣ ಮಳೆಯ ನಿರೀಕ್ಷೆ ಇದೆ.
- Prasanna Hegde
- Updated on: Jun 9, 2026
- 6:43 pm
ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲೂ ಜೋರಾದ ಶಾಸಕರ ಲಾಬಿ, ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ
ಡಿಕೆ ಶಿವಕುಮಾರ್ (DK Shivakumar) ಮೊದಲ ಹಂತದ ಸಂಪುಟದ ಸಚಿವರ ಖಾತೆ ಕ್ಯಾತೆ ಇನ್ನೂ ಮುಗಿದಿಲ್ಲ. ಖಾತೆ ಸಂಬಂಧ ರಾಮಲಿಂಗಾರೆಡ್ಡಿ, ಕೆಎಚ್ ಮುನಿಯಪ್ಪ ಹಾಗೂ ಕೃಷ್ಣಭೈರೇಗೌಡ ಅಸಮಾಧಾನಗೊಂಡಿದ್ದಾರೆ. ಇದರ ನಡುವೆ ಇದೀಗ ಎರಡನೇ ಹಂತದ ಸಚಿವ ಸಂಪುಟ ಪುನಾರಚನೆ ಕಸರತ್ತು ನಡೆದಿದ್ದು, ನವದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ ಜೋರಾಗಿದೆ. ಶ್ರೀನಿವಾಸ್ ಮಾನೆ, ಅಜಯ್ ಸಿಂಗ್, ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಶಾಸಕರು ದಿಲ್ಲಿಗೆ ಹಾರಿದ್ದು, ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ.
- Ramesh B Jawalagera
- Updated on: Jun 9, 2026
- 6:06 pm
ಕೇಂದ್ರ, ರಾಜ್ಯ ಸರ್ಕಾರಗಳ ಉದ್ಯೋಗ ಭರವಸೆ: 40ಕ್ಕೂ ಹೆಚ್ಚು ಮಂದಿಗೆ ವಂಚಿಸಿದ್ದ ತಂದೆ, ಮಗಳು ಅಂದರ್
ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ 40ಕ್ಕೂ ಹೆಚ್ಚು ಜನರಿಗೆ 5.30 ಕೋಟಿ ರೂ. ವಂಚಿಸಿದ್ದ ತಂದೆ-ಮಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಕಲಿ ತರಬೇತಿ ಕೇಂದ್ರ ತೆರೆದು ವಂಚಿಸುತ್ತಿದ್ದ ಆರೋಪಿಗಳು, ಸಂಶಯ ಮೂಡದಂತೆ ಹಾಗೂ ನಂಬಿಕೆ ಉಳಿಸಿಕೊಳ್ಳುವ ಉದ್ದೇಶದಿಂದ ಕೆಲ ಅಭ್ಯರ್ಥಿಗಳಿಗೆ ನಾಲ್ಕು ತಿಂಗಳವರೆಗೆ ಸಂಬಳವನ್ನೂ ನೀಡಿದ್ದರು. ತನಿಖೆಯಲ್ಲಿ ಸರ್ಕಾರಿ ಇಲಾಖೆಗಳ ಹೆಸರಿನಲ್ಲಿ ಇವರು ನಕಲಿ ನೇಮಕಾತಿ ಆದೇಶಗಳನ್ನು ನೀಡಿರುವುದು ದೃಢಪಟ್ಟಿದ್ದು, ಆರೋಪಿಗಳೀಗ ಖಾಕಿ ಅತಿಥಿಗಳಾಗಿದ್ದಾರೆ.
- Prasanna Hegde
- Updated on: Jun 9, 2026
- 6:04 pm
ಒಂದೇ ಕುಟುಂಬದ ಮೂವರು ನಿಗೂಢ ಸಾವು: ಡೆತ್ ನೋಟ್ನಿಂದ ಸಾವಿನ ರಹಸ್ಯ ಬಯಲಿಗೆ
ಮಂಡ್ಯ ಜಿಲ್ಲೆಯಲ್ಲಿ ದುರಂತ ಘಟನೆಯೊಂದು ನಡೆದು ಹೋಗಿದೆ. ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಪತಿ ಪ್ರಭಾಕರ್, ಪತ್ನಿ ಜ್ಯೋತಿ, ನವವಿವಾಹಿತ ಮಗ ಸಂತೋಷ್ ಸಾವನ್ನಪ್ಪಿದ್ದು, ಇಡೀ ನಗರವೇ ಬೆಚ್ಚಿಬಿದ್ದಿದೆ. ತಾಯಿ ಮಗನ ಶವ ಮನೆಯಲ್ಲೇ ಪತ್ತೆಯಾಗಿದ್ದರೆ, ಕುಟುಂಬದ ಯಜಮಾನನ ಮೃತದೇಹ ಬಟ್ಟೆ ಅಂಗಡಿಯಲ್ಲಿ ಪತ್ತೆಯಾಗಿದೆ. ಅಷ್ಟಕ್ಕೂ ಆಗಿದ್ದೇನು? ಸಾವಿಗೆ ಕಾರಣ ಏನು ಎನ್ನುವುದು ಡೆತ್ ನೋಟ್ ಬಹಿರಂಗಪಡಿಸಿದೆ.
- Dileep CP
- Updated on: Jun 9, 2026
- 5:33 pm
RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್ ಖರ್ಗೆ: ಏಕಾಏಕಿ ಖಡಕ್ ಎಚ್ಚರಿಕೆ ಕೊಟ್ಟಿದ್ದೇಕೆ ಗೃಹ ಸಚಿವ?
ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ (RSS) ನೋಂದಣಿ ದಾಖಲೆ ಸಿದ್ಧವಿಟ್ಟುಕೊಳ್ಳುವಂತೆ ಎಚ್ಚರಿಸಿದ್ದಾರೆ. ಇದಕ್ಕೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಜಟಾಪಟಿ ಆರಂಭವಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿಯೂ ಗ್ರಾಮೀಣಾಭಿವೃದ್ಧಿ ಮತ್ತು ಐಟಿಬಿಟಿ ಸಚಿವರಾಗಿದ್ದ ಪ್ರಿಯಾಂಕ್, ಆರ್ಎಸ್ಎಸ್ ವಿರುದ್ಧ ಸಮರ ಸಾರಿದ್ದರು ಎನ್ನುವುದಿಲ್ಲಿ ಗಮನಾರ್ಹ.
- Prasanna Hegde
- Updated on: Jun 9, 2026
- 5:30 pm
ಚುನಾವಣೆ ಇಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ, ಯಾರ್ಯಾರು?
ಕರ್ನಾಟಕ ವಿಧಾನಸಭೆಯಿಂದ 4 ಸ್ಥಾನಗಳ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಈಗಾಗಲೇ ಕಾಂಗ್ರೆಸ್ನಿಂದ ಮೂವರು ಹಾಗೂ ಬಿಜೆಪಿಯಿಂದ ಒಬ್ಬರು ನಾಮಪತ್ರ ಸಲ್ಲಿಸಿದ್ದು, ಎಲ್ಲರ ನಾಮಪತ್ರಗಳು ಕ್ರಮಬದ್ಧವಾಗಿವೆ. ಆದ್ರೆ, ಭೋಜಣ್ಣ ಸೋಮಣ್ಣ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತವಾಗಿದೆ. ಹೀಗಾಗಿ ಚುನಾವಣೆ ಇಲ್ಲದೇ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತವೊಂದೇ ಘೋಷಣೆಯೊಂದೆ ಬಾಕಿ ಇದೆ.
- Ramesh B Jawalagera
- Updated on: Jun 9, 2026
- 4:15 pm
‘ಶ್ರೀರಾಮ ದಶರಥನ ಮಗ ಅಲ್ಲ’: ವಿವಾದಾತ್ಮಕ ಹೇಳಿಕೆ ಕೊಟ್ಟ ಪ್ರೊ. ಭಗವಾನ್
ಶ್ರೀರಾಮನ ಕುರಿತು ಹಿರಿಯ ಪ್ರೊ. ಕೆ.ಎಸ್. ಭಗವಾನ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶ್ರೀರಾಮ ದಶರಥನ ಮಗನಲ್ಲ ಎಂದು ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. ಶೂದ್ರರೆಲ್ಲರೂ ಬ್ರಾಹ್ಮಣರ ಗುಲಾಮರು ಎಂದು ಮನಸ್ಮೃತಿ ಹೇಳುತ್ತೆ. ಪಂಚಾಂಗವನ್ನು ಕೇಳೋದು ಮೊದಲು ಬಿಟ್ಟು ಬಿಡಿ, ಮೊದಲು ನಿಮ್ಮ ಮೇಲೆ ನೀವು ನಂಬಿಕೆ ಬೆಳಸಿಕೊಳ್ಳುವುದನ್ನು ಅಭ್ಯಸಮಾಡಿ ಎಂದವರು ಕರೆ ನೀಡಿದ್ದಾರೆ.
- Basavaraj Doddamani
- Updated on: Jun 9, 2026
- 4:12 pm