Karnataka
ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.
ಇನ್ನೂ ಹೆಚ್ಚು ಓದಿಕಾರವಾರ ಮೆಡಿಕಲ್ ಕಾಲೇಜು, ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಗೆ ರಾಮಕೃಷ್ಣ ಹೆಗಡೆ ಹೆಸರು: ಸಿಎಂ ಘೋಷಣೆ
"ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶನಿವಾರ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಜನ್ಮ ಶತಮಾನೋತ್ಸವ ಸಮಾರಂಭವನ್ನು ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರೊಂದಿಗೆ ಉದ್ಘಾಟಿಸಿ ಹೇಳಿದರು.
- Ramesh B Jawalagera
- Updated on: Aug 29, 2026
- 10:51 pm
AEEಗಳ ಆಯ್ಕೆಯಲ್ಲಿ ಅಕ್ರಮ ನಡೆದಿದೆ ಎಂದು ಸಿಎಂ ಹೇಳಿದ್ರೂ ಅಭ್ಯರ್ಥಿಗಳಿಗೆ ಸರ್ಕಾರಿ ಕೆಲಸ ಕೊಟ್ಟಿದ್ದು ಏಕೆ? ಹೆಚ್ಡಿಕೆ ಪ್ರಶ್ನೆ
ಎಇಇಗಳ ನೇಮಕಾತಿಯ ಅಕ್ರಮ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ಮುಂದುವರಿಸಿದ್ದಾರೆ. AEEಗಳ ಆಯ್ಕೆಯಲ್ಲಿ ಅಕ್ರಮ ನಡೆದಿದೆ ಎಂದು ಸದನದಲ್ಲಿ ಸಿಎಂ ಹೇಳಿದ್ದರು. ಹಾಗಿದ್ದರೂ ತಪ್ಪಿತಸ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸರ್ಕಾರಿ ಕೆಲಸ ಕೊಟ್ಟಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.
- Dileep CP
- Updated on: Aug 29, 2026
- 10:46 pm
‘ಆಡಳಿತದಲ್ಲಿ ನೈತಿಕತೆಗೆ ಉದಾಹರಣೆಯೇ ರಾಮಕೃಷ್ಣ ಹೆಗಡೆ’; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಣ್ಣನೆ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಜನ್ಮ ಶತಾಬ್ದಿ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿ ಹೆಗಡೆಯವರು ಜಾರಿಗೆ ತಂದ ಜನಪರ ಯೋಜನೆಗಳು, ಮೌಲ್ಯಾಧಾರಿತ ರಾಜಕಾರಣ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ನೀಡಿದ ಪ್ರೋತ್ಸಾಹವನ್ನು ಸಮಾರಂಭದಲ್ಲಿ ಉಪಸ್ಥಿತರಿದ್ದ ಗಣ್ಯರು ಸ್ಮರಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ತಮ್ಮ ಮೇಲೆ ಬೀರಿದ ಪರಿಣಾಮವನ್ನು ಮೆಲುಕು ಹಾಕಿದರು.
- Sushma Chakre
- Updated on: Aug 29, 2026
- 10:48 pm
KPSC ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ
ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೆಪಿಎಸ್ಸಿ (KPSC) ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಯುತ್ತಿದೆ. ಒಂದೆಡೆ ಸಿಐಡಿ ತನಿಖೆ ನಡೆಸುತ್ತಿದ್ದರೆ ಮತ್ತೊಂದು ಸಿಐಡಿ ಸಹ ತನಿಖೆ ಮಾಡುತ್ತಿದೆ. ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಎರಡು ದಿನಗಳ ಕಾಲ ಸುದೀರ್ಘ ವಿಚಾರಣೆಗೊಳಪಡಿಸಿದ ಸಿಐಡಿ, ಇದೀಗ ಅವರನ್ನ ವಶಕ್ಕೆ ಪಡೆದುಕೊಂಡಿದೆ.
- Shivaprasad B
- Updated on: Aug 29, 2026
- 10:38 pm
ಕೆಪಿಎಸ್ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
KPSC Scam Latest News: ಕೆಪಿಎಸ್ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ. ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಸರ್ಕಾರ ವಾದಿಸಿದರೆ, ವಾಲ್ಮೀಕಿ ಹಗರಣದಲ್ಲಿ ಸಿಐಡಿ ವೈಫಲ್ಯ ಮತ್ತು ಜ್ಞಾನೇಂದ್ರಕುಮಾರ್ ಪ್ರಕರಣಗಳನ್ನು ಉಲ್ಲೇಖಿಸಿ ಅರ್ಜಿದಾರರು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ.
- Ramesha M
- Updated on: Aug 29, 2026
- 9:22 pm
RSS ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ: ಸಿದ್ದರಾಮಯ್ಯ ವಿರುದ್ಧದ ಮರುಪರಿಶೀಲನಾ ಅರ್ಜಿ ವಜಾ
ಆರ್ಎಸ್ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಇನ್ನೊಂದು ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಮರುಪರಿಶೀಲನಾ ಅರ್ಜಿ ವಜಾಗೊಂಡಿದೆ.
- Ramesha M
- Updated on: Aug 29, 2026
- 8:44 pm
ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವದ ವೈಭವ: ಇಲ್ಲಿವೆ ಫೋಟೋಸ್
Mantralaya Raghavendra Swamy 355th Aradhana: ಮಂತ್ರಾಲಯದಲ್ಲಿ ಶ್ರೀಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಪೂರ್ವಾರಾಧನೆ ಸಡಗರದಿಂದ ನಡೆದಿದೆ. ಕಲಿಯುಗದ ಕಾಮಧೇನು ರಾಯರ ಪೂಜಾ ಕೈಂಕರ್ಯಗಳು, ಪಂಚಾಮೃತ ಅಭಿಷೇಕ, ರಜತ ಸಿಂಹವಾಹನೋತ್ಸವ ಭಕ್ತಿಪೂರ್ವಕವಾಗಿ ಜರುಗಿದವು. ಭಕ್ತಸಾಗರವೇ ಹರಿದುಬಂದು ರಾಯರ ದರ್ಶನ ಪಡೆಯುತ್ತಿದೆ. ಇಲ್ಲಿವೆ ನೋಡಿ ಫೋಟೋಸ್.
- Bhemesh Poojar
- Updated on: Aug 29, 2026
- 8:27 pm
ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ: ಹೆದರಿ ಓಡುವಾಗ ಜಾರಿ ಬಿದ್ದು ವ್ಯಕ್ತಿ ಸಾವು
chikkamagaluru News: ಚಿಕ್ಕಮಗಳೂರಿನ ಬಸಾಪುರದಲ್ಲಿ ಇಸ್ಪೀಟ್ ಆಟವಾಡುವವರ ಮೇಲೆ ಪೊಲೀಸರು ದಾಳಿ ನಡೆಸಿದಾಗ, ಭೀತಿಯಿಂದ ಓಡಿದ ವ್ಯಕ್ತಿ ಜಾರಿ ಬಿದ್ದು ತಲೆಗೆ ಬಂಡೆ ಬಡಿದು ಮೃತಪಟ್ಟಿದ್ದಾರೆ. ಕಾಡಿನಲ್ಲಿ ಅಕ್ರಮ ಜೂಜಾಟ ನಡೆಯುತ್ತಿದ್ದ ಸ್ಥಳದಲ್ಲಿ ಈ ದುರಂತ ಸಂಭವಿಸಿದೆ. ಬಾಳೆಹೊನ್ನೂರು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಾಗಿದೆ.
- Ashwith Mavinaguni
- Updated on: Aug 29, 2026
- 7:20 pm
ರಾಜ್ಯದ ನೀರಿನ ಸಮಸ್ಯೆ ಇರುವ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು: ಸದ್ಗುರು ಶ್ರೀ ಮಧುಸೂದನ ಸಾಯಿ
ಈ ಬಾರಿ ಮಳೆ ಇಲ್ಲದೇ ಕರ್ನಾಟಕದ ಹಲವೆಡೆ ಬೆಳೆಗೆ ಮಾತ್ರವಲ್ಲ ಕುಡಿಯಲು ನೀರಿನ ಸಮಸ್ಯೆಗಳು ಎದುರಾಗಿವೆ. ಪಕ್ಕದಲ್ಲೇ ನದಿ, ಕಾಲುವೆಗಳ ಹರಿಯುತ್ತಿದ್ದರೂ ಸಹ ಹಳ್ಳಿಗಳಲ್ಲಿ ನೀರಿನ ಕೊರತೆ ಎದುರಾಗಿದೆ. ಇನ್ನು ಕೆಲವು ಊರುಗಳಲ್ಲಿ ಕುಡಿಯುವ ನೀರಿಗಾಗಿ ಕಿಲೋಮೀಟರ್ ಗಟ್ಟಲೇ ಹೋಗಬೇಕಾದು ಪರಿಸ್ಥಿತಿಯೂ ಸಹ ಇದೆ. ಇದನ್ನ ಅರಿತ ನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ರಾಜ್ಯದ ನೀರಿನ ಸಮಸ್ಯೆ ಇರುವ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ನೀಡಲು ಮುಂದಾಗಿದ್ದಾರೆ.
- Ramesh B Jawalagera
- Updated on: Aug 29, 2026
- 7:06 pm
ಯೂನಿಫಾರ್ಮ್ ನಲ್ಲಿದ್ದ ಮಾತ್ರಕ್ಕೆ ಜನರ ಸ್ವಾತಂತ್ರ್ಯ ಕಸಿಯಲಾಗದು: ಪೊಲೀಸರಿಗೆ ಹೈಕೋರ್ಟ್ ಫುಲ್ ಕ್ಲಾಸ್
ಸ್ಟಾಂಡ್ ಅಪ್ ಕಾಮಿಡಿ ಶೋ ವಿರೋಧಿಸಿ ಟ್ವೀಟ್ ಮಾಡಿದ್ದಕ್ಕೆ ಕೇಸ್ ದಾಖಲಿಸಿದ ಬೆಂಗಳೂರಿನ ವೈಟ್ ಫೀಲ್ಡ್ ಠಾಣೆ ಎಸ್ಐ, ಎಸಿಪಿ, ಡಿಸಿಪಿ ಯನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ವಿನಾಕಾರಣ ಸಾರ್ವಜನಿಕರ ಮೇಲೆ ಕೇಸ್ ದಾಖಲಿಸುವ ಪೊಲೀಸರದ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೈಕೋರ್ಟ್ ಎಚ್ಚರಿಸಿದೆ. ಸಾಮಾಜಿಕ ಜಾಲತಾಣಗಳ ಪೋಸ್ಟ್ ಬಗ್ಗೆ ಕ್ರಮ ಕೈಗೊಳ್ಳುವಾಗ ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ. ಹೈಕೋರ್ಟ್ ತರಾಟೆಯ ಫುಲ್ ಡಿಟೈಲ್ಸ್ ಇಲ್ಲಿದೆ.
- Ramesha M
- Updated on: Aug 29, 2026
- 6:26 pm
ಕೋಲಾರದಲ್ಲಿ ವೈರಲ್ ಫೀವರ್: ಹೆಚ್1ಎನ್1 ಸೋಂಕು ಹೆಚ್ಚಳ; ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಐಸೋಲೇಶನ್ ವಾರ್ಡ್
Kolar H1N1 Outbreak: ಕೋಲಾರದಲ್ಲಿ ವೈರಲ್ ಜ್ವರ ಮತ್ತು H1N1 ಸೋಂಕುಗಳು ಹೆಚ್ಚಾಗುತ್ತಿವೆ. ಕಳೆದ ಆರು ತಿಂಗಳಲ್ಲಿ 16 H1N1 ಪ್ರಕರಣಗಳು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಐಸೋಲೇಶನ್ ವಾರ್ಡ್ಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಕೈಗಳನ್ನು ಆಗಾಗ ತೊಳೆಯುವುದು, ವೈಯಕ್ತಿಕ ನೈರ್ಮಲ್ಯ ಕಾಪಾಡುವುದು, ಮತ್ತು ಜ್ವರ ಬಂದ ತಕ್ಷಣ ವೈದ್ಯರ ಸಲಹೆ ಪಡೆಯುವ ಮೂಲಕ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ.
- Rajendra Simha BL
- Updated on: Aug 29, 2026
- 6:22 pm
ಒಂದೇ ಬಾರಿಗೆ ಬರೋಬ್ಬರಿ 15 IPS ಅಧಿಕಾರಿಗಳ ವರ್ಗಾವಣೆ: ಎಲ್ಲಿಗೆ-ಯಾರು?
ಕರ್ನಾಟಕ ಸರ್ಕಾರವು ಒಂದೇ ಬಾರಿಗೆ ಬರೋಬ್ಬರಿ 15 ಐಪಿಎಸ್ ಅಧಿಕಾರಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಅದರಲ್ಲೂ ಪ್ರಮುಖವಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿ ಕುಮಾರ್ ಅವರಿಗೆ ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದೆ. ಹಾಗಾದ್ರೆ, ಯಾರು ಎಲ್ಲಿಗೆ ವರ್ಗಾವಣೆ ಎನ್ನುವ ಡಿಟೇಲ್ಸ್ ಇಲ್ಲಿದೆ.
- Prajwal Kumar NY
- Updated on: Aug 29, 2026
- 5:46 pm