AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka

Karnataka

ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.

ಇನ್ನೂ ಹೆಚ್ಚು ಓದಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ITಗೆ ದೂರು

ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಕೆಯಾಗಿದೆ. ಬಳ್ಳಾರಿಯಲ್ಲಿ ಮೃತಪಟ್ಟ ರಾಜಶೇಖರ್ ಕುಟುಂಬಕ್ಕೆ ಜಮೀರ್ 25 ಲಕ್ಷ ರೂಪಾಯಿ ನಗದು ಪರಿಹಾರ ನೀಡಿದ್ದರು. ಇದು ಆರ್.ಬಿ.ಐ. ನಿಯಮಗಳ ಉಲ್ಲಂಘನೆಯಾಗಿದ್ದು, ಹಣದ ಮೂಲದ ಬಗ್ಗೆ ತನಿಖೆಗೆ ಹಿಂದೂಪರ ಕಾರ್ಯಕರ್ತ ತೇಜಸ್ ಗೌಡ ದೂರು ನೀಡಿದ್ದಾರೆ.

ಚಿತ್ರದುರ್ಗ: ಮರಕ್ಕೆ ಬೊಲೆರೊ ವಾಹನ ಡಿಕ್ಕಿ; ಒಂದೇ ಗ್ರಾಮದ ನಾಲ್ವರು ಕಾರ್ಮಿಕರು ಸಾವು

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಇನ್ನು ನಾಲ್ವರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ

ಇಬ್ಬರ ನಡುವೆ ಅಧಿಕಾರದ ವಿಷಯಕ್ಕೆ ಶೀತಲ ಸಮರ ನಡೆಯುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಇದರ ನಡುವೆ ಸಿದ್ದರಾಮಯ್ಯನವರ ಸಾಧನೆಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ‘ಶುಭವಾಗಲಿ,’ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರಿಗೆ ಒಳ್ಳೆಯದಾಗಲಿ. ನಾನು ಅವರಿಗೆ ಶುಭ ಹಾರೈಸುತ್ತೇನೆ. ಶುಭವಾಗಲಿ ಎಂದು ಡಿಕೆ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು

ಮಾಜಿ ಸಚಿವ ಶ್ರೀರಾಮುಲು ಬಳ್ಳಾರಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಗಲಭೆಯಲ್ಲಿ ಸಾವನ್ನಪ್ಪಿದ ರಾಜಶೇಖರ ಅವರ ಮೃತದೇಹವನ್ನು ಅವರ ಸಂಪ್ರದಾಯಕ್ಕೆ ವಿರುದ್ಧವಾಗಿ ಸುಡಲಾಗಿದೆ. ಸಾಕ್ಷಿ ನಾಶದ ಉದ್ದೇಶದಿಂದ ಈ ಕೃತ್ಯ ನಡೆದಿದೆ ಎಂದು ಶ್ರೀರಾಮುಲು ಹೇಳಿದ್ದಾರೆ. ಪೊಲೀಸರು ಕುಟುಂಬಸ್ಥರ ಮೇಲೆ ಒತ್ತಡ ಹೇರಿ, ಮೃತದೇಹ ಮರುಪರಿಶೀಲನೆ ತಪ್ಪಿಸಲು ಇದನ್ನು ಮಾಡಿದ್ದಾರೆ ಎಂದು ಅವರು ಆಪಾದಿಸಿದ್ದಾರೆ.

ಬಳ್ಳಾರಿಯಲ್ಲಿ ಶಾಂತಿಮಂತ್ರ ಜಪಿಸಿದ ಡಿಕೆ ಶಿವಕುಮಾರ್​: ರೆಡ್ಡಿ ಬ್ರದರ್ಸ್‌ ವಿರುದ್ಧ ವಾಗ್ದಾಳಿ

ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ, ಫೈರಿಂಗ್ ಮತ್ತು ಕಾರ್ಯಕರ್ತನ ಸಾವಿನಿಂದ ರಾಜಕೀಯ ಬಿಗುವಿಗೆ ತಿರುಗಿದೆ. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಬಳ್ಳಾರಿಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ್ದು, ಶಾಂತಿ ಮಂತ್ರ ಜಪಿಸಿದರು. ಜೊತೆಗೆ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಅರಸು ದಾಖಲೆ ಮುರಿದ ಸಿದ್ದರಾಮಯ್ಯ ಇಂದಿರಾ ಗಾಂಧಿಯನ್ನು ಖಂಡಿಸುತ್ತಾರಾ? ಸಂಸದ ಲೆಹರ್ ಸಿಂಗ್ ಪ್ರಶ್ನೆ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಯಾಗಿ ದಾಖಲೆ ನಿರ್ಮಿಸಿದ ಬಗ್ಗೆ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಪ್ರತಿಕ್ರಿಯಿಸಿದ್ದಾರೆ. "ನಾನು ಅವರನ್ನು ಅಭಿನಂದಿಸುತ್ತೇನೆ, ಆದರೆ ಇದರೊಂದಿಗೆ ಅವರು ಜನರ ಕಲ್ಯಾಣದ ಬಗ್ಗೆ ಕಾಳಜಿ ವಹಿಸಿದ್ದರೆ, ಅದು ಸಾರ್ವಜನಿಕರಿಗೆ ಒಳ್ಳೆಯದಾಗುತ್ತಿತ್ತು. ಅದು ಸಕಾರಾತ್ಮಕ ಸಾಧನೆಯಾಗುತ್ತಿತ್ತು" ಎಂದು ಲೆಹರ್ ಸಿಂಗ್ ಹೇಳಿದ್ದಾರೆ.

ಸುದೀರ್ಘ ಜನಸೇವೆಯ ಸಾರ್ಥಕ ಕ್ಷಣ: ನಿಮ್ಮೆಲ್ಲರ ಸೇವೆಗೈಯ್ಯುವ ಈ ಅವಕಾಶಕ್ಕಾಗಿ ಚಿರಋಣಿ; ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಆಗಿ ದೇವರಾಜ ಅರಸು ದಾಖಲೆ ಮುರಿಯುವ ಮೂಲಕ ರಾಜ್ಯದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅಭಿಮಾನಿಗಳಿಂದ ಎಲ್ಲೆಡೆ ಸಂಭ್ರಮಾಚರಣೆ ಮಾಡಲಾಗಿದೆ. ಖುದ್ಧು ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದು, ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದಿದ್ದಾರೆ.

ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ: ಬಸವಂತನ ಜೀವ ಉಳಿಸಿದ ಐಪಿಎಸ್ ಅಧಿಕಾರಿ

ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನಿಗೆ ಚಾಕು ಇರಿದಿರುವಂತಹ ಘಟನೆ ನಡೆದಿದೆ. ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ಕೆಎನ್​​ ರಾಜಣ್ಣ ಖಡಕ್​​ ಮಾತು

ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಅವರು ಸಿದ್ದರಾಮಯ್ಯನವರು 2028ರಲ್ಲೂ ಮುಖ್ಯಮಂತ್ರಿ ಆಗಬೇಕೆಂಬ ಆಶಯ ವ್ಯಕ್ತಪಡಿಸಿದ್ದಾರೆ. ದೇವರಾಜ ಅರಸು ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ ಅವರ ಅನ್ನಭಾಗ್ಯ ಕಾರ್ಯಕ್ರಮದಿಂದ ರಾಜ್ಯದಲ್ಲಿ ಯಾರೂ ಉಪವಾಸ ಇರಲಿಲ್ಲ ಎಂದು ರಾಜಣ್ಣ ಶ್ಲಾಘಿಸಿದರು. ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ ಎಂದಿದ್ದಾರೆ.

ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ನೀಡುವುದಾಗಿ ಭರವಸೆ

ಬಳ್ಳಾರಿಗೆ ಭೇಟಿ ನೀಡಿದ ಡಿಕೆಶಿ, ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ತಾಯಿ ತುಳಸಿ ಅವರಿಗೆ ಸಾಂತ್ವನ ಹೇಳಿದರು. 27 ವರ್ಷದ ರಾಜಶೇಖರ್ ಕುಟುಂಬಕ್ಕೆ ಆಧಾರವಾಗಿದ್ದನು. ತಾಯಿ ತುಳಸಿ ನ್ಯಾಯಕ್ಕಾಗಿ ಮತ್ತು ಮಗನ ಆತ್ಮಕ್ಕೆ ಶಾಂತಿಗಾಗಿ ಕಣ್ಣೀರಿಟ್ಟು ಮನವಿ ಮಾಡಿದರು. ಕುಟುಂಬಕ್ಕೆ ಪಕ್ಷದ ಬೆಂಬಲವಿದೆ ಎಂದು ಡಿಕೆಶಿ ಭರವಸೆ ನೀಡಿದ್ದಾರೆ.

ಇನ್ಮುಂದೆ ಸೆಟ್​ಬ್ಯಾಕ್ ಬಿಡದೆ ಮನೆ ನಿರ್ಮಾಣಕ್ಕೆ ಅವಕಾಶ: ಸಂಕ್ರಾಂತಿ ಗಿಫ್ಟ್ ನೀಡಿದ ಸರ್ಕಾರ

ಬೆಂಗಳೂರಿನಲ್ಲಿ ಗೃಹ ನಿರ್ಮಾಣ ಮಾಡುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ನಗರಾಭಿವೃದ್ಧಿ ಇಲಾಖೆ ಸೆಟ್ ಬ್ಯಾಕ್ ನಿಯಮಗಳನ್ನು ಸಡಿಲಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಸೆಟ್ ಬ್ಯಾಕ್ ಬಿಡದೆ ಸಮಸ್ಯೆ ಎದುರಿಸುತ್ತಿರುವ ಮನೆ ಮಾಲೀಕರು ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ.

ಮೈಸೂರು, ಬಾಗಲಕೋಟೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಪಾಸ್‌ಪೋರ್ಟ್ ಕಚೇರಿಗೂ ಬಂತು ಇ-ಮೇಲ್

ಮೈಸೂರು, ಬಾಗಲಕೋಟೆ ಜಿಲ್ಲಾ ನ್ಯಾಯಾಲಯಗಳು ಹಾಗೂ ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು ಆತಂಕ ಸೃಷ್ಟಿಸಿವೆ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ತಂಡಗಳು ಸ್ಥಳಕ್ಕೆ ತೆರಳಿ ತಪಾಸಣೆ ನಡೆಸಿದ್ದು, ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ.ಕಳೆದ ತಿಂಗಳು ಕೋಲಾರ, ಗದಗದಲ್ಲೂ ಇಂತಹ ಹುಸಿ ಬೆದರಿಕೆಗಳು ಬಂದಿದ್ದವು.

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು