Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep

Kichcha Sudeep

ಕಿಚ್ಚ ಸುದೀಪ್​ ಅವರು ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರು ಮೂಲತಃ ಶಿವಮೊಗ್ಗದವರು. ಹಲವು ವರ್ಷಗಳಿಂದ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು, ಹಿಂದಿ ಸಿನಿಮಾಗಳಲ್ಲೂ ನಟಿಸಿ ಅವರು ಫೇಮಸ್​ ಆಗಿದ್ದಾರೆ.

ಕಿಚ್ಚ ಸುದೀಪ್​ ಅವರು ನಟನೆ ಮಾತ್ರವಲ್ಲದೇ ನಿರ್ದೇಶನದ ಮೂಲಕವೂ ಜನಮನ ಗೆದ್ದಿದ್ದಾರೆ. ಅವರು ಮೊದಲು ನಿರ್ದೇಶನ ಮಾಡಿದ ಸಿನಿಮಾ ‘ಮೈ ಆಟೋಗ್ರಾಫ್​’ ಸೂಪರ್​ ಹಿಟ್​ ಆಯಿತು. ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಕನಾಗಿಯೂ ಸುದೀಪ್ ಅವರು ಜನರಿಗೆ ಹತ್ತಿರ ಆಗಿದ್ದಾರೆ. ಕನ್ನಡದಲ್ಲಿ 2023ರವರೆಗೆ ಎಲ್ಲ 10 ಸೀಸನ್​ಗಳ ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಣೆಯನ್ನು ಅವರು ಮಾಡಿದ್ದಾರೆ.

ಕಿಚ್ಚ ಸುದೀಪ್​ ಅವರ ಪತ್ನಿಯ ಹೆಸರು ಪ್ರಿಯಾ. ಈ ದಂಪತಿಗೆ ಶಾನ್ವಿ ಎಂಬ ಮಗಳು ಇದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಸುದೀಪ್​ ಅವರ ಮನೆ ಇದೆ. ‘ಸ್ಪರ್ಶ’, ‘ಹುಚ್ಚ’, ‘ವೀರ ಮದಕರಿ’, ‘ಕೆಂಪೇಗೌಡ’, ‘ಮಾಣಿಕ್ಯ’, ‘ವಿಕ್ರಾಂತ್​ ರೋಣ’, ‘ದಬಂಗ್​ 3’ ಮುಂತಾದವು ಸುದೀಪ್​ ನಟನೆಯ ಪ್ರಮುಖ ಸಿನಿಮಾಗಳು. ಗಾಯನದಲ್ಲೂ ಆಸಕ್ತಿ ಹೊಂದಿರುವ ಅವರು ಕೆಲವು ಸಿನಿಮಾದ ಗೀತೆಗಳಿಗೆ ಧ್ವನಿ ನೀಡಿದ್ದಾರೆ.

ಇನ್ನೂ ಹೆಚ್ಚು ಓದಿ

ಅಂಬಿ ಮೊಮ್ಮಗನ ನಾಮಕರಣ: ವಿಶೇಷ ಗಿಫ್ಟ್ ನೀಡಿದ ಕಿಚ್ಚ ಸುದೀಪ್

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಅಂಬರೀಶ್ ಮೊಮ್ಮೊಗನ ನಾಮಕರಣ ಶಾಸ್ತ್ರ ನಡೆದಿದೆ. ಈ ಸಮಾರಂಭಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದಾರೆ. ಕಿಚ್ಚ ಸುದೀಪ್ ಅವರು ಪತ್ನಿ ಪ್ರಿಯಾ ಜೊತೆ ಬಂದು ವಿಶೇಷವಾದ ಉಡುಗೊರೆ ನೀಡಿದ್ದಾರೆ. ಅಭಿಷೇಕ್, ಅವಿವಾ ದಂಪತಿಯ ಮಗನಿಗೆ ರಾಣಾ ಅಮರ್ ಎಂದು ಹೆಸರು ಇಡಲಾಗಿದೆ.

ರನ್ಯಾ ಕಾರಣಕ್ಕೆ ಸುದೀಪ್​ಗೆ ಆದ ಕಷ್ಟ ಒಂದೆರಡಲ್ಲ: ಶಾಕಿಂಗ್ ವಿಚಾರ ತಿಳಿಸಿದ ರವಿ ಶ್ರೀವತ್ಸ

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾ ಬಗ್ಗೆ ನಿರ್ದೇಶಕ ರವಿ ಶ್ರೀವತ್ಸ ಮಾತನಾಡಿದ್ದಾರೆ. ‘ಮಾಣಿಕ್ಯ’ ಸಿನಿಮಾದ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ. ‘ಮಾಣಿಕ್ಯ’ ಸಿನಿಮಾಗೆ ರನ್ಯಾ ಅವರನ್ನು ಆಯ್ಕೆ ಮಾಡಿದ್ದರಿಂದ ಸುದೀಪ್ ಅವರಿಗೆ ತುಂಬಾ ಕಷ್ಟ ಆಗಿತ್ತು ಎಂದು ರವಿ ಶ್ರೀವತ್ಸ ಹೇಳಿದ್ದಾರೆ.

‘ಎಲ್ಲರ ಬಾಳಲ್ಲೂ ಆಗೋದು ಇದೇ’; ಜೀವನದ ಬಗ್ಗೆ ಸುದೀಪ್ ಮಾಡಿದ ಈ ಪಾಠ ನೆನಪಿದೆಯೇ

ಕಿಚ್ಚ ಸುದೀಪ್ ಅವರ ಹಳೆಯ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಜೀವನದ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ವಿಶೇಷವಾಗಿ ಅವರ ಅರೇಂಜ್ಡ್ ಮ್ಯಾರೇಜ್ ಅನುಭವ ಮತ್ತು ಜೀವನದಲ್ಲಿ ಒಪ್ಪಿಗೆಯ ಮಹತ್ವದ ಬಗ್ಗೆ ಮಾತನಾಡಿದ್ದಾರೆ. 'ಮ್ಯಾಕ್ಸ್' ಚಿತ್ರದ ಯಶಸ್ಸಿನ ನಂತರ, ಅವರು 'ಬಿಲ್ಲ ರಂಗ ಭಾಷ' ಚಿತ್ರದಲ್ಲಿ ನಟಿಸಲಿದ್ದಾರೆ ಮತ್ತು ನಿರ್ದೇಶನದಲ್ಲೂ ತೊಡಗಿಸಿಕೊಳ್ಳುವ ಯೋಜನೆಯನ್ನು ಹೊಂದಿದ್ದಾರೆ.

ಡಿಕೆಶಿ ಬೆನ್ನಲ್ಲೇ ರಶ್ಮಿಕಾ ಹಾಗೂ ಸಿಸಿಎಲ್ ಆಟಗಾರರ ವಿರುದ್ಧ ಕಾಂಗ್ರೆಸ್​ ಶಾಸಕ ಗರಂ

ಇತ್ತೀಚೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಟರಿಗೆ ಎಚ್ಚರಿಕೆ ನೀಡಿದ್ದರು. ಕಲಾವಿದರಿಗೆ ಅವಮಾನ ಮಾಡಿದ ಆರೋಪ ಅವರ ಮೇಲೆ ಕೇಳಿ ಬಂದಿದೆ. ಈ ಮಧ್ಯೆ ರಶ್ಮಿಕಾ ಮಂದಣ್ಣರ ಬಗ್ಗೆ ರವಿಕುಮಾರ್ ಗಣಿಗ ಮಾತನಾಡಿದ್ದಾರೆ. ಅವರಿಗೆ ಆಹ್ವಾನ ನೀಡಿದರೂ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

ರೋಚಕತೆ ಪಡೆದುಕೊಂಡ ಸಿಸಿಎಲ್ ಫೈನಲ್; ಗೆದ್ದವರು ಯಾರು?

ಪಂಜಾಬ್ ದೇ ಶೇರ್ ತಂಡವು ಭಾನುವಾರ ನಡೆದ ಸಿಸಿಎಲ್ 2024ರ ಫೈನಲ್ ಪಂದ್ಯದಲ್ಲಿ ಚೆನ್ನೈ ರೈನೋಸ್ ತಂಡವನ್ನು ಸೋಲಿಸಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು. ಚೆನ್ನೈ ತಂಡ ರನ್ನರ್ ಅಪ್ ಆಯಿತು. ಕರ್ನಾಟಕ ಬುಲ್ಡೋಜರ್ ತಂಡ ಸೆಮಿಫೈನಲ್‌ನಲ್ಲಿ ಸೋತಿತು. ಈ ಟೂರ್ನಮೆಂಟ್‌ನಲ್ಲಿ ಕರ್ನಾಟಕದ ಡಾರ್ಲಿಂಗ್ ಕೃಷ್ಣ ಅವರು ಅತ್ಯುತ್ತಮ ಬ್ಯಾಟರ್ ಪ್ರಶಸ್ತಿಯನ್ನು ಪಡೆದರು.

ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು

ಕಿಚ್ಚ ಸುದೀಪ್ ಅವರು ಪತ್ನಿ ಪ್ರಿಯಾ ಜೊತೆ ಇಂದು (ಫೆ.28) ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬಂದಿದ್ದಾರೆ. ಕರ್ನಾಟಕ ಬುಲ್ಡೋಜರ್ಸ್​ ತಂಡದ ಆಟಗಾರರು ಕೂಡ ಸಾಥ್ ನೀಡಿದ್ದಾರೆ. ಈ ವೇಳೆ ಸುದೀಪ್ ಜೊತೆ ಫೋಟೋಗಾಗಿ ಫ್ಯಾನ್ಸ್ ಮುತ್ತಿಕೊಂಡಿದ್ದಾರೆ. ದೇವರಿಗೆ ಕಿಚ್ಚ ಸುದೀಪ್ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

‘ಪಾರ್ಟಿ ಅನ್ನೋದು ವೈಯಕ್ತಿಕ’; ಕಿಚ್ಚ ಸುದೀಪ್ ಅವರ ಆಲೋಚೆನೆಯೇ ಬೇರೆ

Kichcha Sudeep: ನಟ ಕಿಚ್ಚ ಸುದೀಪ್ ಇತರೆ ನಟರಂತೆ ಅಲ್ಲ. ಪಾರ್ಟಿಗಳು ಇನ್ನಿತರೆಗಳಿಂದ ದೂರ. ಏನೇ ಪಾರ್ಟಿ ಮಾಡುವುದಿದ್ದರೂ ಕೆಲವೇ ಜನರ ಜೊತೆಗೆ ತಮ್ಮ ಮನೆಯ ತಾರಸಿ ಮೇಲೆಯೇ ಮಾಡುತ್ತಾರೆ. ಹೀಗೆ ಹೆಚ್ಚು ಜನರ ಜೊತೆಗೆ ಪಾರ್ಟಿ ಮಾಡದೇ ಇರುವುದಕ್ಕೆ ಕಾರಣವೂ ಇದೆ. ಈ ಬಗ್ಗೆ ಸುದೀಪ್ ವಿವರಣೆ ನೀಡಿದ್ದಾರೆ.

CCL 2025: ಮೈಸೂರಲ್ಲಿ ಕಿಚ್ಚನ ಕ್ರಿಕೆಟ್ ದಸರಾ; ಸಿಸಿಲ್ ಸೆಮೀಸ್ ಹಾಗೂ ಫಿನಾಲೆ ಅರಮನೆ ನಗರಿಯಲ್ಲಿ!

Mysore to Host CCL Semi-Finals & Finals: 11ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ಮೈಸೂರಿನಲ್ಲಿ ನಡೆಯಲಿವೆ. ಕರ್ನಾಟಕ ಬುಲ್ಡೋಜರ್ಸ್ ನಾಯಕ ಕಿಚ್ಚ ಸುದೀಪ್ ಅವರ ಒತ್ತಾಯದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಮೈಸೂರಿನಲ್ಲಿ ಸಿಸಿಎಲ್ ಪಂದ್ಯಗಳು ನಡೆಯುವುದು ಇದೇ ಮೊದಲು. ಕಿಚ್ಚ ಸುದೀಪ್ ತಮ್ಮ ಎಕ್ಸ್ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ಈ ನಾಕೌಟ್ ಸುತ್ತಿನ ಪಂದ್ಯಗಳು ಮಾರ್ಚ್ 1 ಮತ್ತು 2 ರಂದು ನಡೆಯಲಿವೆ.

ಏಕಕಾಲಕ್ಕೆ ಟಿವಿ, ಒಟಿಟಿಗೆ ಮ್ಯಾಕ್ಸ್ ಸಿನಿಮಾ ಎಂಟ್ರಿ; ದಿನಾಂಕ, ಸಮಯದ ಮಾಹಿತಿ ಇಲ್ಲಿದೆ..

2024ರ ಅಂತ್ಯದಲ್ಲಿ ಬಿಡುಗಡೆಯಾಗಿ ಸೂಪರ್ ಹಿಟ್ ಆದ ‘ಮ್ಯಾಕ್ಸ್’ ಸಿನಿಮಾ ಯಾವಾಗ ಒಟಿಟಿಯಲ್ಲಿ ಬರಲಿದೆ ಎಂದು ಸುದೀಪ್ ಫ್ಯಾನ್ಸ್ ಕೇಳುತ್ತಿದ್ದರು. ಆ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ವಿಶೇಷ ಏನೆಂದರೆ, ಟಿವಿ ಮತ್ತು ಒಟಿಟಿಯಲ್ಲಿ ಏಕಕಕಾಲಕ್ಕೆ ಈ ಸಿನಿಮಾ ಪ್ರಸಾರ ಆಗಲಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ತೆಲುಗು ಬಿಗ್ ಬಾಸ್ ವೇದಿಕೆ ಮೇಲೆ ಗತ್ತು ತೋರಿಸಿ ಬಂದಿದ್ದ ಕಿಚ್ಚ ಸುದೀಪ್

ಕಿಚ್ಚ ಸುದೀಪ್ ಅವರು ತೆಲುಗು ಚಿತ್ರರಂಗದಲ್ಲೂ, ಕಿರುತೆರೆಯಲ್ಲೂ ಗಮನಾರ್ಹ ಉಪಸ್ಥಿತಿಯನ್ನು ಹೊಂದಿದ್ದಾರೆ. ರಾಜಮೌಳಿ ನಿರ್ದೇಶನದ 'ಈಗ' ಚಿತ್ರದ ಮೂಲಕ ತೆಲುಗು ಪ್ರೇಕ್ಷಕರಿಗೆ ಪರಿಚಯವಾದ ಸುದೀಪ್, ತೆಲುಗು ಬಿಗ್ ಬಾಸ್‌ನಲ್ಲಿ ಅತಿಥಿಯಾಗಿ ಕಾಣಿಸಿಕೊಂಡು ಪ್ರೇಕ್ಷಕರನ್ನು ಮೆಚ್ಚಿಸಿದ್ದಾರೆ. ಬಿಗ್ ಬಾಸ್ ಕನ್ನಡದ ಯಶಸ್ವಿ ನಿರೂಪಣೆಯ ನಂತರ ಅವರು ಮರಳುತ್ತಾರೆಯೇ ಎಂಬುದು ಅಭಿಮಾನಿಗಳ ಕುತೂಹಲದ ವಿಷಯವಾಗಿದೆ.

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ