Kichcha Sudeep
ಕಿಚ್ಚ ಸುದೀಪ್ ಅವರು ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರು ಮೂಲತಃ ಶಿವಮೊಗ್ಗದವರು. ಹಲವು ವರ್ಷಗಳಿಂದ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು, ಹಿಂದಿ ಸಿನಿಮಾಗಳಲ್ಲೂ ನಟಿಸಿ ಅವರು ಫೇಮಸ್ ಆಗಿದ್ದಾರೆ.
ಕಿಚ್ಚ ಸುದೀಪ್ ಅವರು ನಟನೆ ಮಾತ್ರವಲ್ಲದೇ ನಿರ್ದೇಶನದ ಮೂಲಕವೂ ಜನಮನ ಗೆದ್ದಿದ್ದಾರೆ. ಅವರು ಮೊದಲು ನಿರ್ದೇಶನ ಮಾಡಿದ ಸಿನಿಮಾ ‘ಮೈ ಆಟೋಗ್ರಾಫ್’ ಸೂಪರ್ ಹಿಟ್ ಆಯಿತು. ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕನಾಗಿಯೂ ಸುದೀಪ್ ಅವರು ಜನರಿಗೆ ಹತ್ತಿರ ಆಗಿದ್ದಾರೆ. ಕನ್ನಡದಲ್ಲಿ 2023ರವರೆಗೆ ಎಲ್ಲ 10 ಸೀಸನ್ಗಳ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಣೆಯನ್ನು ಅವರು ಮಾಡಿದ್ದಾರೆ.
ಕಿಚ್ಚ ಸುದೀಪ್ ಅವರ ಪತ್ನಿಯ ಹೆಸರು ಪ್ರಿಯಾ. ಈ ದಂಪತಿಗೆ ಶಾನ್ವಿ ಎಂಬ ಮಗಳು ಇದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಸುದೀಪ್ ಅವರ ಮನೆ ಇದೆ. ‘ಸ್ಪರ್ಶ’, ‘ಹುಚ್ಚ’, ‘ವೀರ ಮದಕರಿ’, ‘ಕೆಂಪೇಗೌಡ’, ‘ಮಾಣಿಕ್ಯ’, ‘ವಿಕ್ರಾಂತ್ ರೋಣ’, ‘ದಬಂಗ್ 3’ ಮುಂತಾದವು ಸುದೀಪ್ ನಟನೆಯ ಪ್ರಮುಖ ಸಿನಿಮಾಗಳು. ಗಾಯನದಲ್ಲೂ ಆಸಕ್ತಿ ಹೊಂದಿರುವ ಅವರು ಕೆಲವು ಸಿನಿಮಾದ ಗೀತೆಗಳಿಗೆ ಧ್ವನಿ ನೀಡಿದ್ದಾರೆ.
ಇನ್ನೂ ಹೆಚ್ಚು ಓದಿಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಅಂತ ಗೊತ್ತಾಯ್ತಾ?
‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋ ಆರಂಭಕ್ಕೆ ಸಕಲ ಸಿದ್ಧತೆ ನಡೆದಿದೆ. ಸೆ.6ರಂದು ಅದ್ದೂರಿಯಾಗಿ ಗ್ರ್ಯಾಂಡ್ ಪ್ರೀಮಿಯರ್ ಆಗಲಿದೆ. ಸ್ಪರ್ಧಿಗಳನ್ನು ಕಿಚ್ಚ ಸುದೀಪ್ ವೇದಿಕೆಗೆ ಕರೆದು ಪರಿಚಯ ಮಾಡಿಕೊಡಲಿದ್ದಾರೆ. ಆದರೆ ಅದಕ್ಕೂ ಮುನ್ನ ಕೆಲವು ಸ್ಪರ್ಧಿಗಳ ವಿಡಿಯೋವನ್ನು ‘ಕಲರ್ಸ್ ಕನ್ನಡ’ ಹಂಚಿಕೊಂಡಿದೆ.
- Madan Kumar
- Updated on: Sep 4, 2026
- 9:43 pm
’‘ಓಹ್ ಭ್ರಮೆ‘ ಅಲ್ಲ’’: ಮತ್ತೆ ಒಂದಾದ ಪ್ರೇಮ್-ಸುದೀಪ್
Kichcha Sudeep: ಸುದೀಪ್ ಅವರಿಗಾಗಿ ವಿಶೇಷ ವಿಡಿಯೋ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ನಿರ್ದೇಶಕ ಪ್ರೇಮ್ ಕೋರಿದ್ದಾರೆ. ಅದೇ ವಿಡಿಯೋನಲ್ಲಿ ತಮ್ಮ ಹಾಗೂ ಸುದೀಪ್ ಅವರ ಹೊಸ ಸಿನಿಮಾದ ಘೋಷಣೆಯನ್ನೂ ಸಹ ಮಾಡಿದ್ದಾರೆ. ಒಳ್ಳೆಯ ಹಿನ್ನೆಲೆ ಸಂಗೀತ, ಒಳ್ಳೆಯ ಕ್ಯಾರಿಕೇಚರ್ ಮಾದರಿಯ ಚಿತ್ರಗಳನ್ನು ಒಳಗೊಂಡ ವಿಡಿಯೋ ಅದಾಗಿದ್ದು, ವಿಡಿಯೋನಲ್ಲಿ ‘ಹೊಸ ಪ್ರಪಂಚ, ಹೊಸ ಅಧ್ಯಾಯ, ಹೊಸ ಆರಂಭ’ ಎಂದು ಬರೆಯಲಾಗಿದ್ದು, ಎಲ್ಲವೂ ಅಕ್ಟೋಬರ್ 20ರಿಂದ ಶುರು ಆಗಲಿದೆ ಎಂದು ಹೇಳಲಾಗಿದೆ.
- Manjunatha C
- Updated on: Sep 2, 2026
- 6:34 pm
ಸುದೀಪ್ ಬರ್ತ್ಡೇಗೆ ಬಿಗ್ ಸರ್ಪ್ರೈಸ್; ಶ್ರೀ ಕೃಷ್ಣದೇವರಾಯನಾಗಿ ಕಿಚ್ಚ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ಹುಟ್ಟುಹಬ್ಬದ ಸವಿನೆನಪಿನಲ್ಲಿ ಬೃಹತ್ ಐತಿಹಾಸಿಕ ಸಿನಿಮಾ 'ದೇವರಾಯ' ಘೋಷಿಸಿದ್ದಾರೆ. ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಶ್ರೀ ಕೃಷ್ಣದೇವರಾಯನ ಗಾಂಭೀರ್ಯದ ಪಾತ್ರದಲ್ಲಿ ಸುದೀಪ್ ಬಣ್ಣ ಹಚ್ಚುತ್ತಿದ್ದು, ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಿಸುತ್ತಿರುವ ಈ ಪ್ಯಾನ್-ಇಂಡಿಯಾ ಬಿಗ್ ಬಜೆಟ್ ಚಿತ್ರವು 2027ರ ಡಿಸೆಂಬರ್ನಲ್ಲಿ ವಿಶ್ವದ್ಯಂತ ಬಿಡುಗಡೆಯಾಗಲಿದೆ.
- Rajesh Duggumane
- Updated on: Sep 2, 2026
- 11:53 am
ತಮಿಳು ನಿರ್ದೇಶಕನೊಟ್ಟಿಗೆ ಸುದೀಪ್ ಸಿನಿಮಾ, ಚಿತ್ರದ ಹೆಸರೇನು?
Kichcha Sudeep: ಈ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲು ಆಗುತ್ತಿಲ್ಲವೆಂದು ಕಿಚ್ಚ ಹೇಳಿದಾಗ ಸಹಜವಾಗಿಯೇ ಅಭಿಮಾನಿಗಳು ತುಸು ಬೇಸರಗೊಂಡಿದ್ದರು, ಆದರೆ ಅದರ ಬದಲಾಗಿ ಸುದೀಪ್ ತಮ್ಮ ಸಿನಿಮಾಗಳ ಘೋಷಣೆಯನ್ನು ಮಾಡುವ ಮೂಲಕ ಅಭಿಮಾನಿಗಳ ಮನದಲ್ಲಿ ಖುಷಿ ಮತ್ತು ನಿರೀಕ್ಷೆಗಳನ್ನು ಮೂಡಿಸಿದ್ದಾರೆ. ಕೆಲ ದಿನಗಳ ಹಿಂದೆ ಸುದೀಪ್ ಹಂಚಿಕೊಂಡಿದ್ದ ಪೋಸ್ಟ್ನಲ್ಲಿ, ‘ಸಿಂಹ ಸುಮ್ಮನೆ ಕೂತಿದೆ ಎಂದರೆ ಸುಸ್ತಾಗಿದೆ ಎಂದಲ್ಲ, ಮುಂದಿನ ಭೇಟೆಗೆ ತಯಾರಾಗಿದೆ ಎಂದರ್ಥ’ ಎಂದಿದ್ದರು. ಸುದೀಪ್ ಅವರು ಹಾಗೆ ಹೇಳಿದ್ದೇಕೆ ಎಂಬುದು ಈಗ ತಿಳಿಯುತ್ತಿದೆ.
- Manjunatha C
- Updated on: Sep 2, 2026
- 11:02 am
‘ಬಿಲ್ಲ ರಂಗ ಬಾಷಾ’ ಚಿತ್ರದ ಹೊಸ ಪೋಸ್ಟರ್ ರಿಲೀಸ್; ಆ್ಯಕ್ಷನ್ ಅವತಾರದಲ್ಲಿ ಸುದೀಪ್
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜನ್ಮದಿನದ ಪ್ರಯುಕ್ತ ಬಹುನಿರೀಕ್ಷಿತ 'ಬಿಲ್ಲ ರಂಗ ಬಾಷಾ' ಸಿನಿಮಾದ ಧಮಾಕಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಅನೂಪ್ ಭಂಡಾರಿ ನಿರ್ದೇಶನದ ಈ ಬಿಗ್ ಬಜೆಟ್ ಚಿತ್ರದಲ್ಲಿ ಸುದೀಪ್ ರಗಡ್ ಲುಕ್ನಲ್ಲಿ ಮಿಂಚಿದ್ದು, ಸಿನಿಮಾ ಮುಂದಿನ ವರ್ಷ ಬಿಡುಗಡೆಯಾಗಲಿದೆ. ಚಿತ್ರದ ಮೇಲೆ ಭಾರಿ ನಿರೀಕ್ಷೆ ಸೃಷ್ಟಿಯಾಗಿದೆ.
- Rajesh Duggumane
- Updated on: Sep 2, 2026
- 8:53 am
ಸುದೀಪ್ ನಿರ್ದೇಶಕನಾಗಿದ್ದು ಹೇಗೆ? ಅವರೇ ವಿವರಿಸಿದ್ದು ಹೀಗೆ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಸಿನಿಪಯಣದ ಅಪರೂಪದ ಹಳೆಯ ನೆನಪು ಇಲ್ಲಿದೆ. ಸಾಲು ಸಾಲು ಸಿನಿಮಾಗಳ ಸೋಲಿನ ಕಷ್ಟದ ಸಮಯದಲ್ಲಿ ಯಾರೂ ನಿರ್ದೇಶನ ಮಾಡಲು ಮುಂದೆ ಬರದಿದ್ದಾಗ, ಪರಿಸ್ಥಿತಿಯ ಒತ್ತಡದಿಂದಾಗಿಯೇ 'ಮೈ ಆಟೋಗ್ರಾಫ್' ಸಿನಿಮಾ ಮೂಲಕ ನಟ ಸುದೀಪ್ ಆಕಸ್ಮಿಕವಾಗಿ ನಿರ್ದೇಶಕನಾಗಿ ಬದಲಾದ ಕಥೆಯನ್ನು ಹಂಚಿಕೊಂಡಿದ್ದರು.
- Shreelaxmi H
- Updated on: Sep 2, 2026
- 8:07 am
Kichcha Sudeep Birthday: ಕಿಚ್ಚ ಸುದೀಪ್ ಜನ್ಮದಿನ; ನಟ ಆಸ್ತಿ ಎಷ್ಟು ಗೊತ್ತಾ?
ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಆಸ್ತಿ ಮೌಲ್ಯ 165 ಕೋಟಿ ರೂಪಾಯಿ ತಲುಪಿದೆ. ಸಿನಿಮಾ ಸಂಭಾವನೆ, ಬಿಗ್ ಬಾಸ್ ಕಾರ್ಯಕ್ರಮ, ಬ್ರ್ಯಾಂಡ್ ಎಂಡಾರ್ಸ್ಮೆಂಟ್, ಬೆಂಗಳೂರಿನ 20 ಕೋಟಿ ಮೌಲ್ಯದ ಐಷಾರಾಮಿ ಬಂಗಲೆ ಹಾಗೂ ದುಬಾರಿ ಕಾರುಗಳ ಸಂಪೂರ್ಣ ವಿವರ ಇಲ್ಲಿದೆ. ಸಮಾಜ ಸೇವೆಯಲ್ಲೂ ಸುದೀಪ್ ಮುಂಚೂಣಿಯಲ್ಲಿದ್ದಾರೆ.
- Shreelaxmi H
- Updated on: Sep 2, 2026
- 7:47 am
Sudeep Birthday: ಕಿಚ್ಚ ಸುದೀಪ್ ಜನ್ಮದಿನ; 4 ಹೊಸ ಅನೌನ್ಸ್ಮೆಂಟ್ಗೆ ಕೌಂಟ್ಡೌನ್
Kichcha Sudeep Birthday: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು 53ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತಾಯಿಯ ಅಗಲಿಕೆಯಿಂದಾಗಿ ಅಭಿಮಾನಿಗಳ ಜೊತೆಗಿನ ನೇರ ಆಚರಣೆಗೆ ಬ್ರೇಕ್ ಹಾಕಿರುವ ಸುದೀಪ್, ಹುಟ್ಟುಹಬ್ಬದ ಅಂಗವಾಗಿ 4 ಹೊಸ ಸಿನಿಮಾಗಳ ಭರ್ಜರಿ ಅನೌನ್ಸ್ಮೆಂಟ್ ನೀಡಿ ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ ನೀಡಲಿದ್ದಾರೆ.
- Mangala RR
- Updated on: Sep 2, 2026
- 7:02 am
ಬಿಗ್ ಬಾಸ್ ಶೋ ಅನುಮತಿಗಾಗಿ ಯಾವುದೇ ಅರ್ಜಿ ಬಂದಿಲ್ಲ; ಜಿಲ್ಲಾಧಿಕಾರಿ ಹೇಳಿಕೆ
ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋಸ್ನಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋಗೆ ಸೆಟ್ ಹಾಕಲಾಗಿದೆ. ಆದರೆ ಶೋ ನಡೆಸಲು ಬೇಕಿರುವ ಅಗತ್ಯ ಅನುಮತಿಗಳನ್ನು ಆಯೋಜಕರು ಇನ್ನೂ ಪಡೆದಿಲ್ಲ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Prashantha B
- Updated on: Sep 1, 2026
- 4:45 pm
‘ಬಿಗ್ ಬಾಸ್’ ನಡೆಸಲು ಇನ್ನೂ ಸಿಕ್ಕಿಲ್ಲ ಸರ್ಕಾರದ ಅನುಮತಿ; ಸಚಿವರು ಹೇಳಿದ್ದೇನು?
ಎಲ್ಲವೂ ಅಂದುಕೊಂಡಂತೆ ನಡೆದರೆ ಸೆಪ್ಟೆಂಬರ್ 6ರಂದು ‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋ ಆರಂಭ ಆಗಲಿದೆ. ಆದರೆ ಕೆಲವೇ ದಿನಗಳು ಬಾಕಿ ಇದ್ದರೂ ಕೂಡ ಆಯೋಜಕರು ಇನ್ನೂ ಸರ್ಕಾರದಿಂದ ಅನುಮತಿ ಪಡೆದಿಲ್ಲ ಎಂಬ ಮಾಹಿತಿ ಗೊತ್ತಾಗಿದೆ. ಈ ಬಗ್ಗೆ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾತನಾಡಿದ್ದಾರೆ.
- Madan Kumar
- Updated on: Aug 31, 2026
- 6:02 pm
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ ಸೆಲೆಬ್ರಿಟಿಗಳ ಆಯ್ಕೆಗೆ ಅಗ್ನಿಪರೀಕ್ಷೆ ನಡೆಸುವುದಿಲ್ಲ ಎಂಬ ವಾದವನ್ನು ನಟ ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ. ಸೆಲೆಬ್ರಿಟಿಗಳಿಗೆ ಮಾನಸಿಕ ಪರೀಕ್ಷೆಗಳು ಸೇರಿದಂತೆ ಹಲವು ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಕಾರ್ಯಕ್ರಮದ ಮೌಲ್ಯ ಕಾಪಾಡಲು ಮತ್ತು ವೈಯಕ್ತಿಕ ಗೌಪ್ಯತೆ ಕಾರಣದಿಂದ ಈ ಪ್ರಕ್ರಿಯೆಗಳನ್ನು ಪ್ರಸಾರ ಮಾಡಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
- Rajesh Duggumane
- Updated on: Aug 31, 2026
- 12:00 pm
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
ಬಿಗ್ ಬಾಸ್ ಕನ್ನಡ ಸೀಸನ್ 13ರ ಮಾಧ್ಯಮಗೋಷ್ಠಿಯಲ್ಲಿ ಕಿಚ್ಚ ಸುದೀಪ್, ತಮ್ಮ ಸಂಭಾವನೆ, ಸ್ಪರ್ಧಿಗಳ ನಿರ್ವಹಣೆ ಹಾಗೂ ಸಾಮಾನ್ಯ ಜನರ ಆಯ್ಕೆ ಪ್ರಕ್ರಿಯೆ ಕುರಿತು ಮಾತನಾಡಿದ್ದಾರೆ. ಕಷ್ಟಕರ ಸಂದರ್ಭಗಳಲ್ಲಿ ಸ್ಪರ್ಧಿಗಳ ಹಿತಾಸಕ್ತಿಯನ್ನು ಹೇಗೆ ರಕ್ಷಿಸಲಾಗುತ್ತದೆ ಎಂಬುದನ್ನು ವಿವರಿಸಿದ ಅವರು, ತಮ್ಮ ಪಾತ್ರ ಮತ್ತು ಕನ್ನಡ ಭಾಷೆಗಾಗಿ ತಮ್ಮ ಸಮರ್ಪಣೆಯನ್ನು ಒತ್ತಿ ಹೇಳಿದರು. ಶೋನ ಹಲವು ಆಯಾಮಗಳ ಬಗ್ಗೆ ಬೆಳಕು ಚೆಲ್ಲಿದರು.
- Rajesh Duggumane
- Updated on: Aug 31, 2026
- 8:52 am