AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep

Kichcha Sudeep

ಕಿಚ್ಚ ಸುದೀಪ್​ ಅವರು ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರು ಮೂಲತಃ ಶಿವಮೊಗ್ಗದವರು. ಹಲವು ವರ್ಷಗಳಿಂದ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು, ಹಿಂದಿ ಸಿನಿಮಾಗಳಲ್ಲೂ ನಟಿಸಿ ಅವರು ಫೇಮಸ್​ ಆಗಿದ್ದಾರೆ.

ಕಿಚ್ಚ ಸುದೀಪ್​ ಅವರು ನಟನೆ ಮಾತ್ರವಲ್ಲದೇ ನಿರ್ದೇಶನದ ಮೂಲಕವೂ ಜನಮನ ಗೆದ್ದಿದ್ದಾರೆ. ಅವರು ಮೊದಲು ನಿರ್ದೇಶನ ಮಾಡಿದ ಸಿನಿಮಾ ‘ಮೈ ಆಟೋಗ್ರಾಫ್​’ ಸೂಪರ್​ ಹಿಟ್​ ಆಯಿತು. ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಕನಾಗಿಯೂ ಸುದೀಪ್ ಅವರು ಜನರಿಗೆ ಹತ್ತಿರ ಆಗಿದ್ದಾರೆ. ಕನ್ನಡದಲ್ಲಿ 2023ರವರೆಗೆ ಎಲ್ಲ 10 ಸೀಸನ್​ಗಳ ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಣೆಯನ್ನು ಅವರು ಮಾಡಿದ್ದಾರೆ.

ಕಿಚ್ಚ ಸುದೀಪ್​ ಅವರ ಪತ್ನಿಯ ಹೆಸರು ಪ್ರಿಯಾ. ಈ ದಂಪತಿಗೆ ಶಾನ್ವಿ ಎಂಬ ಮಗಳು ಇದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಸುದೀಪ್​ ಅವರ ಮನೆ ಇದೆ. ‘ಸ್ಪರ್ಶ’, ‘ಹುಚ್ಚ’, ‘ವೀರ ಮದಕರಿ’, ‘ಕೆಂಪೇಗೌಡ’, ‘ಮಾಣಿಕ್ಯ’, ‘ವಿಕ್ರಾಂತ್​ ರೋಣ’, ‘ದಬಂಗ್​ 3’ ಮುಂತಾದವು ಸುದೀಪ್​ ನಟನೆಯ ಪ್ರಮುಖ ಸಿನಿಮಾಗಳು. ಗಾಯನದಲ್ಲೂ ಆಸಕ್ತಿ ಹೊಂದಿರುವ ಅವರು ಕೆಲವು ಸಿನಿಮಾದ ಗೀತೆಗಳಿಗೆ ಧ್ವನಿ ನೀಡಿದ್ದಾರೆ.

ಇನ್ನೂ ಹೆಚ್ಚು ಓದಿ

ಥಿಯೇಟರ್ ಬಳಿಕ ಒಟಿಟಿಯಲ್ಲೂ ಒಂದೇ ದಿನ ‘45’-‘ಮಾರ್ಕ್’ ಸಿನಿಮಾ ರಿಲೀಸ್

ಡಿಸೆಂಬರ್ 25ರಂದು ತೆರೆಕಂಡ ಸುದೀಪ್ ನಟನೆಯ 'ಮಾರ್ಕ್' ಮತ್ತು ಶಿವರಾಜ್‌ಕುಮಾರ್, ರಾಜ್ ಬಿ ಶೆಟ್ಟಿ, ಉಪೇಂದ್ರ ಅಭಿನಯದ '45' ಚಿತ್ರಗಳು ಈಗ OTTಗೆ ಬರುತ್ತಿವೆ. ಭರ್ಜರಿ ಕಲೆಕ್ಷನ್ ಮಾಡಿದ 'ಮಾರ್ಕ್' ಜನವರಿ 23ರಿಂದ ಲಭ್ಯ. '45' ಚಿತ್ರದ ಕೂಡ ಅದೇ ದಿನ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಒಂದೇ ದಿನ ತೆರೆಕಂಡ ಈ ಎರಡೂ ಬಹುನಿರೀಕ್ಷಿತ ಚಿತ್ರಗಳು ಈಗ ಒಂದೇ ದಿನ OTTಯಲ್ಲಿ ಪ್ರೇಕ್ಷಕರನ್ನು ತಲುಪಲು ಸಿದ್ಧವಾಗಿವೆ.

‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

ಕಿಚ್ಚ ಸುದೀಪ್ ಅವರು ‘ವಾರಸ್ದಾರ’ ಧಾರಾವಾಹಿಯ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಮಾತನಾಡಿದ್ದಾರೆ. 60 ಲಕ್ಷ ರೂಪಾಯಿ ನೀಡಬೇಕು ಎಂಬ ಪ್ರಕರಣದ ವಿಷಯ ಇದಾಗಿದೆ. ಈಗ ಚಕ್ರವರ್ತಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಆ ವಿಡಿಯೋ ಇಲ್ಲಿದೆ.

ಬಿಗ್ ಬಾಸ್ ಮುಗೀತಿದ್ದಂತೆ ಸುದೀಪ್​​ಗೆ ಶಾಕ್; ವಂಚನೆ ಆರೋಪದಡಿ ದೂರು ದಾಖಲು

ಬಿಗ್ ಬಾಸ್ ಕನ್ನಡ ಸೀಸನ್ 12 ಮುಗಿಯುತ್ತಿದ್ದಂತೆ ಕಿಚ್ಚ ಸುದೀಪ್‌ಗೆ ಶಾಕ್ ಎದುರಾಗಿದೆ. ನಿರ್ಮಾಪಕ ಸುದೀಪ್ ಮತ್ತು ಚಕ್ರವರ್ತಿ ಚಂದ್ರಚೂಡ್ ವಿರುದ್ಧ 10 ವರ್ಷಗಳ ಹಿಂದಿನ 'ವಾರಸ್ದಾರ' ಧಾರಾವಾಹಿ ಪ್ರಕರಣದ ವಂಚನೆ ಆರೋಪ ಮತ್ತೆ ಮುನ್ನೆಲೆಗೆ ಬಂದಿದೆ. ಹಣ ನೀಡುವ ಭರವಸೆ ನೀಡಿ ಪ್ರಕರಣ ಹಿಂಪಡೆದು ಬಳಿಕ ವಂಚಿಸಿದ್ದಾರೆ ಎಂದು ಮನೆ ಮಾಲೀಕ ದೀಪಕ್ ಮಯೂರ್ ಬೆಂಗಳೂರು ಕಮಿಷನ್ ಕಚೇರಿಯಲ್ಲಿ ದೂರು ನೀಡಿದ್ದಾರೆ.

ಕಿಚ್ಚ ಸುದೀಪ್ ಅವರ ಈ ಸೂಪರ್ ಜಾಕೆಟ್ ಉಡುಗೊರೆಯಾಗಿ ಸಿಕ್ಕಿದ್ದು ಯಾರಿಗೆ?

Kichcha Sudeep Jacket: ಕಳೆದ ಬಾರಿ ಕಿಚ್ಚ ಧರಿಸಿದ್ದ ಜಾಕೇಟ್​​ಗಳ ಪೈಕಿ ಕೆಲವನ್ನು ಉಡುಗೊರೆಯಾಗಿ ನೀಡಿದ್ದರು. ರಜತ್ ಅವರು ಜಾಕೆಟ್​​​ನ ಉಡುಗೊರೆಯಾಗಿ ಕೇಳಿ ಪಡೆದಕೊಂಡಿದ್ದರು. ಈ ಬಾರಿಯೂ ಅವ ಜಾಕೆಟ್ ಓರ್ವ ಸ್ಪರ್ಧಿಗೆ ಗಿಫ್ಟ್ ಆಗಿ ಸಿಕ್ಕಿದೆ. ಅವರು ಯಾರು? ಆ ಬಗ್ಗೆ ಇಲ್ಲಿದೆ ವಿವರ.

ಸುದೀಪ್ ಹೃದಯ ವೈಶಾಲ್ಯತೆ ನೋಡಿ; ವೇದಿಕೆ ಮೇಲೆ ಗಿಲ್ಲಿಗೆ 10 ಲಕ್ಷ ಬಹುಮಾನ ಘೋಷಿಸಿದ ಕಿಚ್ಚ

ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆಯಲ್ಲಿ ಗಿಲ್ಲಿ ವಿಜೇತರಾದರು. ವಿವಾದಗಳ ನಡುವೆಯೂ ಕಿಚ್ಚ ಸುದೀಪ್ ಅವರು ಗಿಲ್ಲಿಗೆ ಸ್ವತಃ 10 ಲಕ್ಷ ರೂ. ಬಹುಮಾನ ಘೋಷಿಸಿ ತಮ್ಮ ಹೃದಯ ವೈಶಾಲ್ಯತೆಯನ್ನು ಮೆರೆದರು. ಈ ಮೂಲಕ ಗಿಲ್ಲಿ ಬಗ್ಗೆ ಸುದೀಪ್‌ಗೆ ಆಗಲ್ಲ ಎಂಬ ಮಾತುಗಳಿಗೆ ತೆರೆ ಬಿದ್ದಿತು. ಇದು ಅವರ ವೇದಿಕೆಯ ಮೇಲಿನ ಪ್ರೀತಿಗೆ ಸಾಕ್ಷಿ. ಗಿಲ್ಲಿ 50 ಲಕ್ಷ ರೂ. ಮತ್ತು ಕಾರನ್ನೂ ಪಡೆದರು.

‘ಸಾಯೋವರೆಗೆ ನಿಮ್ಮ ಮರೆಯಲ್ಲ’; ಸುದೀಪ್​​ಗೆ ತಲೆಬಾಗಿ ನಮಸ್ಕರಿಸಿ ಧನ್ಯವಾದ ಹೇಳಿದ ಗಿಲ್ಲಿ

ಗಿಲ್ಲಿ ಅವರು ಸುದೀಪ್​​ಗೆ ಧನ್ಯವಾದ ಹೇಳಿದ್ದಾರೆ. ತಲೆಬಾಗಿ ನಮಸ್ಕರಿಸಿದ್ದಾರೆ ಗಿಲ್ಲಿ. ಇದಕ್ಕೆ ಕಾರಣವೂ ಇದೆ. ಪ್ರತಿ ಹಂತದಲ್ಲಿ ಸುದೀಪ್ ಅವರು ಗಿಲ್ಲಿಯನ್ನು ತಿದ್ದಿದ್ದಾರೆ. ಈ ಕಾರಣಕ್ಕೆ ಗಿಲ್ಲಿಗೆ ಖುಷಿಯಾಗಿದೆ. ಹೀಗಾಗಿ, ವಿಟಿ ನೋಡಿದ ಬಳಿಕ ಅವರು ಧನ್ಯವಾದ ಹೇಳಿದರು. ಆ ಬಗ್ಗೆ ಇಲ್ಲಿದೆ ವಿವರ.

‘ಗೆದ್ದವರು 50 ಲಕ್ಷ ರೂಪಾಯಿನ ನಿಮಗೆ ಕೊಡಲ್ಲ’; ಚರ್ಚೆ ಹುಟ್ಟುಹಾಕಿದ ಸುದೀಪ್ ಮಾತು

ಬಿಗ್ ಬಾಸ್ ಕನ್ನಡ ಸೀಸನ್ 12ರ ಅಂತಿಮ ಘಟ್ಟದಲ್ಲಿ ಕಿಚ್ಚ ಸುದೀಪ್ ಅವರ ಮಾತುಗಳು ಚರ್ಚೆಗೆ ಕಾರಣವಾಗಿವೆ. ಧ್ರುವಂತ್‌ಗೆ ನೀಡಿದ 'ಕಿಚ್ಚನ ಚಪ್ಪಾಳೆ' ಬಗ್ಗೆ ಅಭಿಮಾನಿಗಳು ಪ್ರಶ್ನಿಸಿದ್ದರು. ಅದಕ್ಕೆ ಸುದೀಪ್ ಅದು ವೈಯಕ್ತಿಕ ಎಂದಿದ್ದರು. 'ಗೆದ್ದವರು 50 ಲಕ್ಷ ಬಹುಮಾನವನ್ನು ಯಾರಿಗೂ ಕೊಡಲ್ಲ' ಎಂಬ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ಹುಟ್ಟುಹಾಕಿದೆ.

ಮುಗಿಯಿತು ಬಿಗ್ ಬಾಸ್ ಕನ್ನಡ ಸೀಸನ್ 12: ಕಿಚ್ಚ ಸುದೀಪ್ ಕೊನೆಯ ಮಾತು ಇದು

ಸತತ 12 ಸೀಸನ್​​ಗಳಲ್ಲಿ ‘ಬಿಗ್ ಬಾಸ್ ಕನ್ನಡ’ ನಿರೂಪಣೆ ಮಾಡಿದ ಖ್ಯಾತಿ ಕಿಚ್ಚ ಸುದೀಪ್ ಅವರಿಗೆ ಸಲ್ಲುತ್ತದೆ. 12ನೇ ಸೀಸನ್ ಮುಕ್ತಾಯ ಆಗುತ್ತಿರುವ ಹೊತ್ತಿನಲ್ಲಿ ಸುದೀಪ್ ಅವರು ಈ ಪೋಸ್ಟ್ ಹಂಚಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳಿಗೆ ಮತ್ತು ವಿನ್ನರ್​ಗೆ ಸುದೀಪ್ ಅವರು ಅಭಿನಂದನೆ ತಿಳಿಸಿದ್ದಾರೆ. ಅವರ ಪೋಸ್ಟ್ ವೈರಲ್ ಆಗಿದೆ.

Bigg Boss Kannada Winner: ಗಿಲ್ಲಿ ನಟ ಗೆದ್ದಾಯಿತು; ತೀರ್ಪು ನೀಡಿದ ‘ಬಿಗ್ ಬಾಸ್ ಕನ್ನಡ 12’ ವೀಕ್ಷಕರು

Bigg Boss Kannada Finale: ‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಇಂದು (ಜ.18) ನಡೆಯಲಿದೆ. ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ಧನುಷ್, ಮ್ಯೂಟೆಂಟ್ ರಘು, ಗಿಲ್ಲಿ ನಟ ಅವರು ಫಿನಾಲೆ ತಲುಪಿದ್ದಾರೆ. ಯಾರು ವಿನ್ ಎಂಬುದನ್ನು ಕಿಚ್ಚ ಸುದೀಪ್ ಇಂದು ರಾತ್ರಿ ಘೋಷಿಸಲಿದ್ದಾರೆ. ಆದರೆ ಸುದೀಪ್ ಹೇಳುವುದಕ್ಕೂ ಮುನ್ನವೇ ವೀಕ್ಷಕರು ಭವಿಷ್ಯ ನುಡಿದಿದ್ದಾರೆ.

ಧ್ರುವಂತ್​​ಗೆ ‘ಸೀಸನ್ ಚಪ್ಪಾಳೆ’ ಕೊಟ್ಟಿದ್ದನ್ನು ಟೀಕಿಸಿದವರಿಗೆ ಕ್ಲ್ಯಾರಿಟಿ ಕೊಟ್ಟ ಸುದೀಪ್

ಧ್ರುವಂತ್ ಬದಲು ಗಿಲ್ಲಿಗೆ ಸೀಸನ್ ಚಪ್ಪಾಳೆ ಕೊಡಬಹುದಿತ್ತು ಎಂಬುದು ಅನೇಕರ ಅಭಿಪ್ರಾಯ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಈ ವಿಷಯದಲ್ಲಿ ಸಾಕಷ್ಟು ಚರ್ಚೆ ಆದವು. ಸುದೀಪ್ ಅವರನ್ನೇ ಅನೇಕರು ಟೀಕಿಸಿದರು. ಈ ವಿಷಯದಲ್ಲಿ ಸುದೀಪ್ ಅಭಿಪ್ರಾಯ ಬೇರೆಯದೇ ಇದೆ ಎನ್ನಬಹುದು. ಅವರು ಜನವರಿ 17ರ ಪ್ರೀ-ಫಿನಾಲೆಯಲ್ಲಿ ಈ ಬಗ್ಗೆ ಅವರು ಮಾತನಾಡಿದರು.

ವಯಸ್ಸು ನಂಬರ್ ಮಾತ್ರ; ಸಿಸಿಎಲ್​​ನಲ್ಲಿ ಅದ್ಭುತ ಕ್ಯಾಚ್ ಹಿಡಿದ ಕಿಚ್ಚ ಸುದೀಪ್ 

ಕಿಚ್ಚ ಸುದೀಪ್ ಅವರು ಅದ್ಭುತ ಕ್ಯಾಚ್ ಹಿಡಿದು ಅಚ್ಚರಿ ಮೂಡಿಸಿದ್ದಾರೆ. ವಯಸ್ಸು 50 ದಾಟಿದ್ದರೂ ಆಟದಲ್ಲಿ ಅವರಿಗೆ ಇದು ಅಡ್ಡಿ ಆಗುತ್ತಿಲ್ಲ. ಸುದೀಪ್ ಅವರು ಸಿಸಿಎಲ್​​​ನಲ್ಲಿ ಕರ್ನಾಟಕ ಬುಲ್ಡೋಜರ್ ತಂಡದಲ್ಲಿ ಇದ್ದಾರೆ. ಅವರು ಕೀಪರ್ ಕೂಡ ಹೌದು. ಆ ಕ್ಯಾಚ್ ಹಿಡಿದ ವಿಡಿಯೋ ಇಲ್ಲಿದೆ. 

‘ಡಿಯರ್ ಹಸ್ಬೆಂಡ್’ ಸಿನಿಮಾಗೆ ಸಿಕ್ತು ಕಿಚ್ಚ ಸುದೀಪ್ ಬೆಂಬಲ; ಟೈಟಲ್ ಟೀಸರ್ ನೋಡಿ..

ನಟ ಕಿಚ್ಚ ಸುದೀಪ್ ಅವರು ‘ಡಿಯರ್ ಹಸ್ಬೆಂಡ್’ ಸಿನಿಮಾ ತಂಡದ ಬೆನ್ನು ತಟ್ಟಿದ್ದಾರೆ. ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಸೂರಜ್ ಗೌಡ, ಶರಣ್ಯಾ ಶೆಟ್ಟಿ ಮತ್ತು ಪ್ರವೀಣ್ ಅವರು ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಗುರುರಾಜ ಕುಲಕರ್ಣಿ ನಿರ್ದೇಶನ ಮಾಡುತ್ತಿರುವ ‘ಡಿಯರ್ ಹಸ್ಬೆಂಡ್’ ಸಿನಿಮಾಗೆ ಶೀಘ್ರದಲ್ಲೇ ಶೂಟಿಂಗ್ ಶುರು ಆಗಲಿದೆ.

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್