AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep

Kichcha Sudeep

ಕಿಚ್ಚ ಸುದೀಪ್​ ಅವರು ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರು ಮೂಲತಃ ಶಿವಮೊಗ್ಗದವರು. ಹಲವು ವರ್ಷಗಳಿಂದ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು, ಹಿಂದಿ ಸಿನಿಮಾಗಳಲ್ಲೂ ನಟಿಸಿ ಅವರು ಫೇಮಸ್​ ಆಗಿದ್ದಾರೆ.

ಕಿಚ್ಚ ಸುದೀಪ್​ ಅವರು ನಟನೆ ಮಾತ್ರವಲ್ಲದೇ ನಿರ್ದೇಶನದ ಮೂಲಕವೂ ಜನಮನ ಗೆದ್ದಿದ್ದಾರೆ. ಅವರು ಮೊದಲು ನಿರ್ದೇಶನ ಮಾಡಿದ ಸಿನಿಮಾ ‘ಮೈ ಆಟೋಗ್ರಾಫ್​’ ಸೂಪರ್​ ಹಿಟ್​ ಆಯಿತು. ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಕನಾಗಿಯೂ ಸುದೀಪ್ ಅವರು ಜನರಿಗೆ ಹತ್ತಿರ ಆಗಿದ್ದಾರೆ. ಕನ್ನಡದಲ್ಲಿ 2023ರವರೆಗೆ ಎಲ್ಲ 10 ಸೀಸನ್​ಗಳ ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಣೆಯನ್ನು ಅವರು ಮಾಡಿದ್ದಾರೆ.

ಕಿಚ್ಚ ಸುದೀಪ್​ ಅವರ ಪತ್ನಿಯ ಹೆಸರು ಪ್ರಿಯಾ. ಈ ದಂಪತಿಗೆ ಶಾನ್ವಿ ಎಂಬ ಮಗಳು ಇದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಸುದೀಪ್​ ಅವರ ಮನೆ ಇದೆ. ‘ಸ್ಪರ್ಶ’, ‘ಹುಚ್ಚ’, ‘ವೀರ ಮದಕರಿ’, ‘ಕೆಂಪೇಗೌಡ’, ‘ಮಾಣಿಕ್ಯ’, ‘ವಿಕ್ರಾಂತ್​ ರೋಣ’, ‘ದಬಂಗ್​ 3’ ಮುಂತಾದವು ಸುದೀಪ್​ ನಟನೆಯ ಪ್ರಮುಖ ಸಿನಿಮಾಗಳು. ಗಾಯನದಲ್ಲೂ ಆಸಕ್ತಿ ಹೊಂದಿರುವ ಅವರು ಕೆಲವು ಸಿನಿಮಾದ ಗೀತೆಗಳಿಗೆ ಧ್ವನಿ ನೀಡಿದ್ದಾರೆ.

ಇನ್ನೂ ಹೆಚ್ಚು ಓದಿ

ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?

‘ಬಿಗ್ ಬಾಸ್ ಕನ್ನಡ ಸೀಸನ್ 13’ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಈ ಸಲ ಸಾಮಾನ್ಯ ಜನರಿಗೂ ಅವಕಾಶ ಸಿಗುತ್ತಿದೆ ಎಂಬುದು. ಲಾಲ್ ಬಾಗ್ ಫ್ಲವರ್ ಶೋನಲ್ಲಿ ಕೂಡ ಬಿಗ್ ಬಾಸ್ ಪ್ರಚಾರ ಮಾಡಲಾಗುತ್ತಿದೆ. ಆಗಸ್ಟ್ 6ರಿಂದ ಶುರುವಾಗಿರುವ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಚೇರ್ ಇರಿಸಲಾಗಿದೆ.

ಅಭಿಮಾನಿಗಳು ಒದ್ದೆ ಆಗ್ತಿರೋದನ್ನು ನೋಡಿ ತಾವೂ ಮಳೆಯಲ್ಲಿ ನೆನೆದ ಕಿಚ್ಚ ಸುದೀಪ್

ರಾಮನಗರ ಕರಗ ಉತ್ಸವದಲ್ಲಿ ನಟ ಕಿಚ್ಚ ಸುದೀಪ್ ತಮ್ಮ ಅಭಿಮಾನಿಗಳಿಗಾಗಿ ಮಳೆಯಲ್ಲಿ ನೆನೆದು ಮಾತನಾಡುವ ಮೂಲಕ ಸರಳತೆ ಮೆರೆದಿದ್ದಾರೆ. ತಮಗಾಗಿ ಹಿಡಿದ ಛತ್ರಿಯನ್ನು ಬದಿಗೊತ್ತಿ ಮಾತನಾಡಿದ ಅವರು, ಅಭಿಮಾನಿಗಳ ಪ್ರೀತಿಗೆ ಧನ್ಯವಾದ ಅರ್ಪಿಸಿದ್ದಾರೆ. ಬಿಗ್ ಬಾಸ್ ಕುರಿತಾಗಿಯೂ ಖುಷಿಯ ವಿಷಯ ಹಂಚಿಕೊಂಡಿದ್ದಾರೆ.

ಆಗಸ್ಟ್ 16ರಿಂದ ‘ಬಿಗ್ ಬಾಸ್ ಕನ್ನಡ’ ಹೊಸ ಸೀಸನ್ ಶುರು; ಈ ಬಾರಿ ಅಗ್ನಿಪರೀಕ್ಷೆ

ಈ ಬಾರಿ ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಬಹಳ ಡಿಫರೆಂಟ್ ಆಗಿರಲಿದೆ. ದೊಡ್ಮನೆ ಒಳಗೆ ಕಾಲಿಡಲು ಜನಸಾಮಾನ್ಯರಿಗೂ ಅವಕಾಶ ಸಿಗುತ್ತಿದೆ. ಆದರೆ ಅದಕ್ಕೂ ಮುನ್ನ ದೊಡ್ಡ ಅಗ್ನಿಪರೀಕ್ಷೆ ನಡೆಯಲಿದೆ. ಈ ಅಗ್ನಿಪರೀಕ್ಷೆಯಲ್ಲಿ ಯಶಸ್ವಿ ಆದವರಿಗೆ ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸುವ ಅವಕಾಶ ಸಿಗಲಿದೆ.

‘ಬಿಲ್ಲ ರಂಗ ಭಾಷಾ’ ಚಿತ್ರದಲ್ಲಿ ಇರಲಿದೆ ಶೇ.90 ಸಿಜಿ, 2027ರ ಅಕ್ಟೋಬರ್​​ಗೆ ರಿಲೀಸ್

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ 'ಬಿಲ್ಲ ರಂಗ ಭಾಷಾ' ಸಿನಿಮಾದ ಶೂಟಿಂಗ್ ಮತ್ತು ಬಿಡುಗಡೆ ದಿನಾಂಕದ ಬಗ್ಗೆ ಚಿತ್ರತಂಡ ಮಹತ್ವದ ಅಪ್‌ಡೇಟ್ ನೀಡಿದೆ. ಪ್ರಸ್ತುತ ಶೇ. 40 ರಷ್ಟು ಚಿತ್ರೀಕರಣ ಪೂರ್ಣಗೊಳ್ಳಲಿದ್ದು, ಮುಂದಿನ ವರ್ಷದ ಜನವರಿ ವೇಳೆಗೆ ಸಂಪೂರ್ಣ ಶೂಟಿಂಗ್ ಮುಗಿಯಲಿದೆ. ಬರೋಬ್ಬರಿ ಶೇ. 90 ರಷ್ಟು ಗ್ರಾಫಿಕ್ಸ್ ಒಳಗೊಂಡಿರಲಿದೆ.

ಹೊಸ ಎಲೆಕ್ಟ್ರಿಕ್ ಕಾರು ಖರೀದಿ ಮಾಡಿದ ಸುದೀಪ್​; ಇಲ್ಲಿದೆ ವಿಡಿಯೋ

ಕಿಚ್ಚ ಸುದೀಪ್ ಅವರು ಐಷಾರಾಮಿ ಕಾರುಗಳ ಲಿಸ್ಟ್‌ಗೆ ಹೊಸ ಎಲೆಕ್ಟ್ರಿಕ್ ಕಾರನ್ನು ಸೇರಿಸಿದ್ದಾರೆ. ಮಹೀಂದ್ರಾ ಕಂಪನಿಯ 'BE 6' ಮಾದರಿಯ ಹೊಸ ಇವಿ ಕಾರನ್ನು ಅವರು ಅದ್ದೂರಿಯಾಗಿ ಮನೆಗೆ ತಂದಿದ್ದು, ಇದರ ವಿಡಿಯೋ ವೈರಲ್ ಆಗಿದೆ. ಸಿನಿಮಾಗಳು ಹಾಗೂ ಬಿಗ್ ಬಾಸ್ ಶೋ ನಡುವೆ ಕಿಚ್ಚನ ಈ ಹೊಸ ರೈಡ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಪ್ಯಾರಿಸ್‌ನಲ್ಲಿ ಸುದೀಪ್ ‘ಈಗ’ ಚಿತ್ರಕ್ಕೆ ಭಾರಿ ಪ್ರಶಂಸೆ; ರಾಜಮೌಳಿಗೆ ಸಿಕ್ಕಿತು ಅಪರೂಪದ ಗೌರವ

ಎಸ್.ಎಸ್. ರಾಜಮೌಳಿ ಯುರೋಪ್ ಪ್ರವಾಸದಲ್ಲಿದ್ದು, ಅವರ ಹಿಟ್ ಚಿತ್ರಗಳ ಪ್ರದರ್ಶನ ನಡೆಯುತ್ತಿದೆ. ಪ್ಯಾರಿಸ್‌ನಲ್ಲಿ 'ಈಗ' ಚಿತ್ರದ ದೃಶ್ಯವೊಂದಕ್ಕೆ ಪ್ರೇಕ್ಷಕರು ಹುಚ್ಚೆದ್ದು ಸಂಭ್ರಮಿಸಿದ್ದು, ಅದರ ವಿಡಿಯೋ ವೈರಲ್ ಆಗಿದೆ. 'ಸಿನೆಮಾಥೆಕ್ ಫ್ರಾಂಕೈಸ್' ಸಂಸ್ಥೆಯಿಂದ ರಾಜಮೌಳಿಗೆ ಜಾಗತಿಕ ಗೌರವ ಲಭಿಸಿದೆ. ನಾನಿ, ಸಮಂತಾ, ಸುದೀಪ್ ನಟಿಸಿದ್ದ 'ಈಗ' ಚಿತ್ರದ ವಿಭಿನ್ನ ಕಥೆ ಮತ್ತು ಸುದೀಪ್ ನಟನೆಗೆ ವಿಶ್ವಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಲಕ್ಷುರಿ ಕ್ಯಾರವನ್ ಖರೀದಿಸಿದ ಕಿಚ್ಚ ಸುದೀಪ್; ಇದರ ಬೆಲೆ ಎಷ್ಟು ಕೋಟಿ ಗೊತ್ತಾ?

ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್‌ಗಾಗಿ ₹6.5 ಕೋಟಿ ಮೌಲ್ಯದ ಅತ್ಯಾಧುನಿಕ ಐಷಾರಾಮಿ ಕ್ಯಾರವ್ಯಾನ್ ಸಿದ್ಧವಾಗಿದೆ. ಖ್ಯಾತ ಡಿಸೈನರ್ DC2 ವಿನ್ಯಾಸಗೊಳಿಸಿದ ಈ ಕ್ಯಾರವ್ಯಾನ್, ಸ್ಯಾಂಡಲ್‌ವುಡ್‌ನಲ್ಲೇ ಅತ್ಯಂತ ದುಬಾರಿ ಎನ್ನಲಾಗಿದೆ. ಸುದೀಪ್‌ರ ಇಷ್ಟದಂತೆ ಕಸ್ಟಮೈಸ್ ಮಾಡಲಾಗಿದ್ದು, 'K' ಸಿಂಬಲ್ ಹೊಂದಿದೆ. 'ಬಿಲ್ಲ ರಂಗ ಬಾಷಾ' ಚಿತ್ರದ ಚಿತ್ರೀಕರಣಕ್ಕೆ ಭರ್ಜರಿ ಎಂಟ್ರಿ ಕೊಟ್ಟಿರುವ ಈ ವಾಹನ, ಎಲ್ಲಾ ಸೌಲಭ್ಯಗಳೊಂದಿಗೆ ಎಲ್ಲರ ಗಮನ ಸೆಳೆಯುತ್ತಿದೆ.

‘ಸಮರ್ಪಣಾ ಭಾವಕ್ಕೆ ಹೃದಯಪೂರ್ವಕ ಸಲ್ಯೂಟ್’; ಪಿಎಂ ಮೋದಿ ಸಾಧನೆಗೆ ಕಿಚ್ಚನ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ರಾಜಕೀಯ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸತತ ಮೂರನೇ ಬಾರಿಗೆ ದೇಶ ಮುನ್ನಡೆಸುತ್ತಿರುವ ಮೋದಿ, ನೆಹರು ಅವರ ದಾಖಲೆಯನ್ನು (4,398 ದಿನಗಳು) ಹಿಂದಿಕ್ಕಿ, ಅತಿ ಹೆಚ್ಚು ದಿನ ಸೇವೆ ಸಲ್ಲಿಸಿದ ಮೊದಲ ಚುನಾಯಿತ ಪ್ರಧಾನಿಯಾಗಿದ್ದಾರೆ (4,399 ದಿನಗಳು). ಈ ಐತಿಹಾಸಿಕ ಸಾಧನೆಗೆ ಕನ್ನಡ ನಟ ಕಿಚ್ಚ ಸುದೀಪ್ ಸೇರಿದಂತೆ ಹಲವರು ಶ್ಲಾಘಿಸಿದ್ದಾರೆ, ಮೋದಿ ಅವರ ಅಚಲ ಸಮರ್ಪಣೆ ಮತ್ತು ನಾಯಕತ್ವವನ್ನು ಹೊಗಳಿದ್ದಾರೆ.

ಅಭಿಮಾನಿಗಳಿಗೆ ಕಿಚ್ಚನ್ ಸರ್​​ಪ್ರೈಸ್; ಸುದೀಪ್ ಕಡೆಯಿಂದ ಬ್ಯಾಕ್ ಟು ಬ್ಯಾಕ್ ಸಿನಿಮಾ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಚಿತ್ರರಂಗದಿಂದ ಪಡೆದಿದ್ದ ಬಿಡುವಿಗೆ ತೆರೆ ಬಿದ್ದಿದೆ. ಜೂನ್ 26ರಿಂದ ಅವರ ಬಹುನಿರೀಕ್ಷಿತ 'BRB' ಸಿನಿಮಾದ ಚಿತ್ರೀಕರಣ ಆರಂಭವಾಗಲಿದ್ದು, ಈಗಾಗಲೇ 4 ಪ್ರಮುಖ ಸ್ಕ್ರಿಪ್ಟ್‌ಗಳನ್ನು ಲಾಕ್ ಮಾಡಿದ್ದಾರೆ. ಅಭಿಮಾನಿಗಳ ನಿರಂತರ ಪ್ರಶ್ನೆಗಳಿಗೆ ಸ್ವತಃ ಸುದೀಪ್ ಅವರೇ ಟ್ವಿಟರ್ ಮೂಲಕ ಉತ್ತರ ನೀಡಿದ್ದು, ತಮ್ಮ ಮುಂದಿನ ಯೋಜನೆಗಳ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ.

ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ

ಬಿಗ್ ಬಾಸ್ ಕನ್ನಡ ಸೀಸನ್ 13ರ ಆಡಿಷನ್‌ ಆರಂಭವಾಗಿದೆ. ಮನೆಗೆ ಹೋಗಲು ಬಯಸುವ ಸ್ಪರ್ಧಿಗಳು ಆಡಿಷನ್ ವಿಡಿಯೋ ಮಾಡುವಾಗ ಸಾಮಾನ್ಯ ತಪ್ಪುಗಳನ್ನು ತಪ್ಪಿಸಬೇಕು. 3 ನಿಮಿಷದ ಸ್ಪಷ್ಟ, ಉತ್ತಮ ಗುಣಮಟ್ಟದ ವಿಡಿಯೋ ಮಾಡಿ. ನಿಮ್ಮ ವ್ಯಕ್ತಿತ್ವ ಹಾಗೂ ಅರ್ಹತೆಯನ್ನು ಪರಿಣಾಮಕಾರಿಯಾಗಿ ಪ್ರಸ್ತುತಪಡಿಸಿ. ಸರಿಯಾದ ವೆಬ್‌ಸೈಟ್‌ನಲ್ಲಿ ಮಾತ್ರ ಅಪ್‌ಲೋಡ್ ಮಾಡಿ, ನಿಮ್ಮ ಬಿಗ್ ಬಾಸ್ ಕನಸು ನನಸಾಗಿಸಿಕೊಳ್ಳಿ.

ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್​​​ಗೆ ಹೊಸ ಬಾಡಿಗಾರ್ಡ್?

ರಾಮ್ ಚರಣ್ ಅವರ ಹೊಸ ಬಾಡಿಗಾರ್ಡ್ ಕೆವಿನ್ ಕುಂಟಾ ಸುದ್ದಿ ಆದ ಬೆನ್ನಲ್ಲೇ, ಕಿಚ್ಚ ಸುದೀಪ್ ಜೊತೆ ವಿದೇಶಿ ಅಂಗರಕ್ಷಕರೊಬ್ಬರು ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಹಲವು ವರ್ಷಗಳಿಂದ ಸುದೀಪ್ ಜೊತೆಗಿರುವ ಕಿರಣ್ ಹೊರತಾಗಿ, ಈ ಎತ್ತರದ ವ್ಯಕ್ತಿ ಯಾರು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಇಂದಿಗಷ್ಟೇ ಅವರ ಭದ್ರತೆಗೆ ಬಂದಿದ್ದಾರೋ ಅಥವಾ ಸುದೀಪ್ ಅವರ ಹೊಸ ಅಂಗರಕ್ಷಕರೋ ಎಂಬ ಕುತೂಹಲವಿದೆ.

ಬಂದೇ ಬಿಡ್ತು ಬಿಗ್ ಬಾಸ್ ಹೊಸ ಸೀಸನ್: ಸರ್ಪ್ರೈಸ್ ನೀಡಿದ ‘ಕಲರ್ಸ್ ಕನ್ನಡ’

‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋ ಆರಂಭದ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ. ಹೊಸ ಪ್ರೋಮೋ ಬಿಡುಗಡೆ ಮಾಡುವ ಮೂಲಕ ಅಚ್ಚರಿ ನೀಡಲಾಗಿದೆ. ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋನ ಹೊಸ ಸೀಸನ್ ಈ ವರ್ಷ ಸ್ವಲ್ಪ ಬೇಗ ಶುರುವಾಗಲಿದೆ ಎಂಬುದು ಖಚಿತವಾಗಿದೆ.

ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ