Kichcha Sudeep
ಕಿಚ್ಚ ಸುದೀಪ್ ಅವರು ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರು ಮೂಲತಃ ಶಿವಮೊಗ್ಗದವರು. ಹಲವು ವರ್ಷಗಳಿಂದ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು, ಹಿಂದಿ ಸಿನಿಮಾಗಳಲ್ಲೂ ನಟಿಸಿ ಅವರು ಫೇಮಸ್ ಆಗಿದ್ದಾರೆ.
ಕಿಚ್ಚ ಸುದೀಪ್ ಅವರು ನಟನೆ ಮಾತ್ರವಲ್ಲದೇ ನಿರ್ದೇಶನದ ಮೂಲಕವೂ ಜನಮನ ಗೆದ್ದಿದ್ದಾರೆ. ಅವರು ಮೊದಲು ನಿರ್ದೇಶನ ಮಾಡಿದ ಸಿನಿಮಾ ‘ಮೈ ಆಟೋಗ್ರಾಫ್’ ಸೂಪರ್ ಹಿಟ್ ಆಯಿತು. ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕನಾಗಿಯೂ ಸುದೀಪ್ ಅವರು ಜನರಿಗೆ ಹತ್ತಿರ ಆಗಿದ್ದಾರೆ. ಕನ್ನಡದಲ್ಲಿ 2023ರವರೆಗೆ ಎಲ್ಲ 10 ಸೀಸನ್ಗಳ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಣೆಯನ್ನು ಅವರು ಮಾಡಿದ್ದಾರೆ.
ಕಿಚ್ಚ ಸುದೀಪ್ ಅವರ ಪತ್ನಿಯ ಹೆಸರು ಪ್ರಿಯಾ. ಈ ದಂಪತಿಗೆ ಶಾನ್ವಿ ಎಂಬ ಮಗಳು ಇದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಸುದೀಪ್ ಅವರ ಮನೆ ಇದೆ. ‘ಸ್ಪರ್ಶ’, ‘ಹುಚ್ಚ’, ‘ವೀರ ಮದಕರಿ’, ‘ಕೆಂಪೇಗೌಡ’, ‘ಮಾಣಿಕ್ಯ’, ‘ವಿಕ್ರಾಂತ್ ರೋಣ’, ‘ದಬಂಗ್ 3’ ಮುಂತಾದವು ಸುದೀಪ್ ನಟನೆಯ ಪ್ರಮುಖ ಸಿನಿಮಾಗಳು. ಗಾಯನದಲ್ಲೂ ಆಸಕ್ತಿ ಹೊಂದಿರುವ ಅವರು ಕೆಲವು ಸಿನಿಮಾದ ಗೀತೆಗಳಿಗೆ ಧ್ವನಿ ನೀಡಿದ್ದಾರೆ.
ಥಿಯೇಟರ್ ಬಳಿಕ ಒಟಿಟಿಯಲ್ಲೂ ಒಂದೇ ದಿನ ‘45’-‘ಮಾರ್ಕ್’ ಸಿನಿಮಾ ರಿಲೀಸ್
ಡಿಸೆಂಬರ್ 25ರಂದು ತೆರೆಕಂಡ ಸುದೀಪ್ ನಟನೆಯ 'ಮಾರ್ಕ್' ಮತ್ತು ಶಿವರಾಜ್ಕುಮಾರ್, ರಾಜ್ ಬಿ ಶೆಟ್ಟಿ, ಉಪೇಂದ್ರ ಅಭಿನಯದ '45' ಚಿತ್ರಗಳು ಈಗ OTTಗೆ ಬರುತ್ತಿವೆ. ಭರ್ಜರಿ ಕಲೆಕ್ಷನ್ ಮಾಡಿದ 'ಮಾರ್ಕ್' ಜನವರಿ 23ರಿಂದ ಲಭ್ಯ. '45' ಚಿತ್ರದ ಕೂಡ ಅದೇ ದಿನ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಒಂದೇ ದಿನ ತೆರೆಕಂಡ ಈ ಎರಡೂ ಬಹುನಿರೀಕ್ಷಿತ ಚಿತ್ರಗಳು ಈಗ ಒಂದೇ ದಿನ OTTಯಲ್ಲಿ ಪ್ರೇಕ್ಷಕರನ್ನು ತಲುಪಲು ಸಿದ್ಧವಾಗಿವೆ.
- Rajesh Duggumane
- Updated on: Jan 21, 2026
- 3:02 pm
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್
ಕಿಚ್ಚ ಸುದೀಪ್ ಅವರು ‘ವಾರಸ್ದಾರ’ ಧಾರಾವಾಹಿಯ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಮಾತನಾಡಿದ್ದಾರೆ. 60 ಲಕ್ಷ ರೂಪಾಯಿ ನೀಡಬೇಕು ಎಂಬ ಪ್ರಕರಣದ ವಿಷಯ ಇದಾಗಿದೆ. ಈಗ ಚಕ್ರವರ್ತಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಆ ವಿಡಿಯೋ ಇಲ್ಲಿದೆ.
- Rajesh Duggumane
- Updated on: Jan 21, 2026
- 12:49 pm
ಬಿಗ್ ಬಾಸ್ ಮುಗೀತಿದ್ದಂತೆ ಸುದೀಪ್ಗೆ ಶಾಕ್; ವಂಚನೆ ಆರೋಪದಡಿ ದೂರು ದಾಖಲು
ಬಿಗ್ ಬಾಸ್ ಕನ್ನಡ ಸೀಸನ್ 12 ಮುಗಿಯುತ್ತಿದ್ದಂತೆ ಕಿಚ್ಚ ಸುದೀಪ್ಗೆ ಶಾಕ್ ಎದುರಾಗಿದೆ. ನಿರ್ಮಾಪಕ ಸುದೀಪ್ ಮತ್ತು ಚಕ್ರವರ್ತಿ ಚಂದ್ರಚೂಡ್ ವಿರುದ್ಧ 10 ವರ್ಷಗಳ ಹಿಂದಿನ 'ವಾರಸ್ದಾರ' ಧಾರಾವಾಹಿ ಪ್ರಕರಣದ ವಂಚನೆ ಆರೋಪ ಮತ್ತೆ ಮುನ್ನೆಲೆಗೆ ಬಂದಿದೆ. ಹಣ ನೀಡುವ ಭರವಸೆ ನೀಡಿ ಪ್ರಕರಣ ಹಿಂಪಡೆದು ಬಳಿಕ ವಂಚಿಸಿದ್ದಾರೆ ಎಂದು ಮನೆ ಮಾಲೀಕ ದೀಪಕ್ ಮಯೂರ್ ಬೆಂಗಳೂರು ಕಮಿಷನ್ ಕಚೇರಿಯಲ್ಲಿ ದೂರು ನೀಡಿದ್ದಾರೆ.
- Ashwith Mavinaguni
- Updated on: Jan 21, 2026
- 7:32 am
ಕಿಚ್ಚ ಸುದೀಪ್ ಅವರ ಈ ಸೂಪರ್ ಜಾಕೆಟ್ ಉಡುಗೊರೆಯಾಗಿ ಸಿಕ್ಕಿದ್ದು ಯಾರಿಗೆ?
Kichcha Sudeep Jacket: ಕಳೆದ ಬಾರಿ ಕಿಚ್ಚ ಧರಿಸಿದ್ದ ಜಾಕೇಟ್ಗಳ ಪೈಕಿ ಕೆಲವನ್ನು ಉಡುಗೊರೆಯಾಗಿ ನೀಡಿದ್ದರು. ರಜತ್ ಅವರು ಜಾಕೆಟ್ನ ಉಡುಗೊರೆಯಾಗಿ ಕೇಳಿ ಪಡೆದಕೊಂಡಿದ್ದರು. ಈ ಬಾರಿಯೂ ಅವ ಜಾಕೆಟ್ ಓರ್ವ ಸ್ಪರ್ಧಿಗೆ ಗಿಫ್ಟ್ ಆಗಿ ಸಿಕ್ಕಿದೆ. ಅವರು ಯಾರು? ಆ ಬಗ್ಗೆ ಇಲ್ಲಿದೆ ವಿವರ.
- Rajesh Duggumane
- Updated on: Jan 19, 2026
- 3:13 pm
ಸುದೀಪ್ ಹೃದಯ ವೈಶಾಲ್ಯತೆ ನೋಡಿ; ವೇದಿಕೆ ಮೇಲೆ ಗಿಲ್ಲಿಗೆ 10 ಲಕ್ಷ ಬಹುಮಾನ ಘೋಷಿಸಿದ ಕಿಚ್ಚ
ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆಯಲ್ಲಿ ಗಿಲ್ಲಿ ವಿಜೇತರಾದರು. ವಿವಾದಗಳ ನಡುವೆಯೂ ಕಿಚ್ಚ ಸುದೀಪ್ ಅವರು ಗಿಲ್ಲಿಗೆ ಸ್ವತಃ 10 ಲಕ್ಷ ರೂ. ಬಹುಮಾನ ಘೋಷಿಸಿ ತಮ್ಮ ಹೃದಯ ವೈಶಾಲ್ಯತೆಯನ್ನು ಮೆರೆದರು. ಈ ಮೂಲಕ ಗಿಲ್ಲಿ ಬಗ್ಗೆ ಸುದೀಪ್ಗೆ ಆಗಲ್ಲ ಎಂಬ ಮಾತುಗಳಿಗೆ ತೆರೆ ಬಿದ್ದಿತು. ಇದು ಅವರ ವೇದಿಕೆಯ ಮೇಲಿನ ಪ್ರೀತಿಗೆ ಸಾಕ್ಷಿ. ಗಿಲ್ಲಿ 50 ಲಕ್ಷ ರೂ. ಮತ್ತು ಕಾರನ್ನೂ ಪಡೆದರು.
- Rajesh Duggumane
- Updated on: Jan 19, 2026
- 10:14 am
‘ಸಾಯೋವರೆಗೆ ನಿಮ್ಮ ಮರೆಯಲ್ಲ’; ಸುದೀಪ್ಗೆ ತಲೆಬಾಗಿ ನಮಸ್ಕರಿಸಿ ಧನ್ಯವಾದ ಹೇಳಿದ ಗಿಲ್ಲಿ
ಗಿಲ್ಲಿ ಅವರು ಸುದೀಪ್ಗೆ ಧನ್ಯವಾದ ಹೇಳಿದ್ದಾರೆ. ತಲೆಬಾಗಿ ನಮಸ್ಕರಿಸಿದ್ದಾರೆ ಗಿಲ್ಲಿ. ಇದಕ್ಕೆ ಕಾರಣವೂ ಇದೆ. ಪ್ರತಿ ಹಂತದಲ್ಲಿ ಸುದೀಪ್ ಅವರು ಗಿಲ್ಲಿಯನ್ನು ತಿದ್ದಿದ್ದಾರೆ. ಈ ಕಾರಣಕ್ಕೆ ಗಿಲ್ಲಿಗೆ ಖುಷಿಯಾಗಿದೆ. ಹೀಗಾಗಿ, ವಿಟಿ ನೋಡಿದ ಬಳಿಕ ಅವರು ಧನ್ಯವಾದ ಹೇಳಿದರು. ಆ ಬಗ್ಗೆ ಇಲ್ಲಿದೆ ವಿವರ.
- Rajesh Duggumane
- Updated on: Jan 18, 2026
- 10:28 pm
‘ಗೆದ್ದವರು 50 ಲಕ್ಷ ರೂಪಾಯಿನ ನಿಮಗೆ ಕೊಡಲ್ಲ’; ಚರ್ಚೆ ಹುಟ್ಟುಹಾಕಿದ ಸುದೀಪ್ ಮಾತು
ಬಿಗ್ ಬಾಸ್ ಕನ್ನಡ ಸೀಸನ್ 12ರ ಅಂತಿಮ ಘಟ್ಟದಲ್ಲಿ ಕಿಚ್ಚ ಸುದೀಪ್ ಅವರ ಮಾತುಗಳು ಚರ್ಚೆಗೆ ಕಾರಣವಾಗಿವೆ. ಧ್ರುವಂತ್ಗೆ ನೀಡಿದ 'ಕಿಚ್ಚನ ಚಪ್ಪಾಳೆ' ಬಗ್ಗೆ ಅಭಿಮಾನಿಗಳು ಪ್ರಶ್ನಿಸಿದ್ದರು. ಅದಕ್ಕೆ ಸುದೀಪ್ ಅದು ವೈಯಕ್ತಿಕ ಎಂದಿದ್ದರು. 'ಗೆದ್ದವರು 50 ಲಕ್ಷ ಬಹುಮಾನವನ್ನು ಯಾರಿಗೂ ಕೊಡಲ್ಲ' ಎಂಬ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ಹುಟ್ಟುಹಾಕಿದೆ.
- Rajesh Duggumane
- Updated on: Jan 18, 2026
- 2:37 pm
ಮುಗಿಯಿತು ಬಿಗ್ ಬಾಸ್ ಕನ್ನಡ ಸೀಸನ್ 12: ಕಿಚ್ಚ ಸುದೀಪ್ ಕೊನೆಯ ಮಾತು ಇದು
ಸತತ 12 ಸೀಸನ್ಗಳಲ್ಲಿ ‘ಬಿಗ್ ಬಾಸ್ ಕನ್ನಡ’ ನಿರೂಪಣೆ ಮಾಡಿದ ಖ್ಯಾತಿ ಕಿಚ್ಚ ಸುದೀಪ್ ಅವರಿಗೆ ಸಲ್ಲುತ್ತದೆ. 12ನೇ ಸೀಸನ್ ಮುಕ್ತಾಯ ಆಗುತ್ತಿರುವ ಹೊತ್ತಿನಲ್ಲಿ ಸುದೀಪ್ ಅವರು ಈ ಪೋಸ್ಟ್ ಹಂಚಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳಿಗೆ ಮತ್ತು ವಿನ್ನರ್ಗೆ ಸುದೀಪ್ ಅವರು ಅಭಿನಂದನೆ ತಿಳಿಸಿದ್ದಾರೆ. ಅವರ ಪೋಸ್ಟ್ ವೈರಲ್ ಆಗಿದೆ.
- Madan Kumar
- Updated on: Jan 18, 2026
- 12:52 pm
Bigg Boss Kannada Winner: ಗಿಲ್ಲಿ ನಟ ಗೆದ್ದಾಯಿತು; ತೀರ್ಪು ನೀಡಿದ ‘ಬಿಗ್ ಬಾಸ್ ಕನ್ನಡ 12’ ವೀಕ್ಷಕರು
Bigg Boss Kannada Finale: ‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಇಂದು (ಜ.18) ನಡೆಯಲಿದೆ. ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ಧನುಷ್, ಮ್ಯೂಟೆಂಟ್ ರಘು, ಗಿಲ್ಲಿ ನಟ ಅವರು ಫಿನಾಲೆ ತಲುಪಿದ್ದಾರೆ. ಯಾರು ವಿನ್ ಎಂಬುದನ್ನು ಕಿಚ್ಚ ಸುದೀಪ್ ಇಂದು ರಾತ್ರಿ ಘೋಷಿಸಲಿದ್ದಾರೆ. ಆದರೆ ಸುದೀಪ್ ಹೇಳುವುದಕ್ಕೂ ಮುನ್ನವೇ ವೀಕ್ಷಕರು ಭವಿಷ್ಯ ನುಡಿದಿದ್ದಾರೆ.
- Madan Kumar
- Updated on: Jan 18, 2026
- 7:22 am
ಧ್ರುವಂತ್ಗೆ ‘ಸೀಸನ್ ಚಪ್ಪಾಳೆ’ ಕೊಟ್ಟಿದ್ದನ್ನು ಟೀಕಿಸಿದವರಿಗೆ ಕ್ಲ್ಯಾರಿಟಿ ಕೊಟ್ಟ ಸುದೀಪ್
ಧ್ರುವಂತ್ ಬದಲು ಗಿಲ್ಲಿಗೆ ಸೀಸನ್ ಚಪ್ಪಾಳೆ ಕೊಡಬಹುದಿತ್ತು ಎಂಬುದು ಅನೇಕರ ಅಭಿಪ್ರಾಯ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಈ ವಿಷಯದಲ್ಲಿ ಸಾಕಷ್ಟು ಚರ್ಚೆ ಆದವು. ಸುದೀಪ್ ಅವರನ್ನೇ ಅನೇಕರು ಟೀಕಿಸಿದರು. ಈ ವಿಷಯದಲ್ಲಿ ಸುದೀಪ್ ಅಭಿಪ್ರಾಯ ಬೇರೆಯದೇ ಇದೆ ಎನ್ನಬಹುದು. ಅವರು ಜನವರಿ 17ರ ಪ್ರೀ-ಫಿನಾಲೆಯಲ್ಲಿ ಈ ಬಗ್ಗೆ ಅವರು ಮಾತನಾಡಿದರು.
- Shreelaxmi H
- Updated on: Jan 17, 2026
- 9:38 pm
ವಯಸ್ಸು ನಂಬರ್ ಮಾತ್ರ; ಸಿಸಿಎಲ್ನಲ್ಲಿ ಅದ್ಭುತ ಕ್ಯಾಚ್ ಹಿಡಿದ ಕಿಚ್ಚ ಸುದೀಪ್
ಕಿಚ್ಚ ಸುದೀಪ್ ಅವರು ಅದ್ಭುತ ಕ್ಯಾಚ್ ಹಿಡಿದು ಅಚ್ಚರಿ ಮೂಡಿಸಿದ್ದಾರೆ. ವಯಸ್ಸು 50 ದಾಟಿದ್ದರೂ ಆಟದಲ್ಲಿ ಅವರಿಗೆ ಇದು ಅಡ್ಡಿ ಆಗುತ್ತಿಲ್ಲ. ಸುದೀಪ್ ಅವರು ಸಿಸಿಎಲ್ನಲ್ಲಿ ಕರ್ನಾಟಕ ಬುಲ್ಡೋಜರ್ ತಂಡದಲ್ಲಿ ಇದ್ದಾರೆ. ಅವರು ಕೀಪರ್ ಕೂಡ ಹೌದು. ಆ ಕ್ಯಾಚ್ ಹಿಡಿದ ವಿಡಿಯೋ ಇಲ್ಲಿದೆ.
- Rajesh Duggumane
- Updated on: Jan 17, 2026
- 8:05 am
‘ಡಿಯರ್ ಹಸ್ಬೆಂಡ್’ ಸಿನಿಮಾಗೆ ಸಿಕ್ತು ಕಿಚ್ಚ ಸುದೀಪ್ ಬೆಂಬಲ; ಟೈಟಲ್ ಟೀಸರ್ ನೋಡಿ..
ನಟ ಕಿಚ್ಚ ಸುದೀಪ್ ಅವರು ‘ಡಿಯರ್ ಹಸ್ಬೆಂಡ್’ ಸಿನಿಮಾ ತಂಡದ ಬೆನ್ನು ತಟ್ಟಿದ್ದಾರೆ. ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಸೂರಜ್ ಗೌಡ, ಶರಣ್ಯಾ ಶೆಟ್ಟಿ ಮತ್ತು ಪ್ರವೀಣ್ ಅವರು ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಗುರುರಾಜ ಕುಲಕರ್ಣಿ ನಿರ್ದೇಶನ ಮಾಡುತ್ತಿರುವ ‘ಡಿಯರ್ ಹಸ್ಬೆಂಡ್’ ಸಿನಿಮಾಗೆ ಶೀಘ್ರದಲ್ಲೇ ಶೂಟಿಂಗ್ ಶುರು ಆಗಲಿದೆ.
- Madan Kumar
- Updated on: Jan 14, 2026
- 4:16 pm