AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep

Kichcha Sudeep

ಕಿಚ್ಚ ಸುದೀಪ್​ ಅವರು ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರು ಮೂಲತಃ ಶಿವಮೊಗ್ಗದವರು. ಹಲವು ವರ್ಷಗಳಿಂದ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು, ಹಿಂದಿ ಸಿನಿಮಾಗಳಲ್ಲೂ ನಟಿಸಿ ಅವರು ಫೇಮಸ್​ ಆಗಿದ್ದಾರೆ.

ಕಿಚ್ಚ ಸುದೀಪ್​ ಅವರು ನಟನೆ ಮಾತ್ರವಲ್ಲದೇ ನಿರ್ದೇಶನದ ಮೂಲಕವೂ ಜನಮನ ಗೆದ್ದಿದ್ದಾರೆ. ಅವರು ಮೊದಲು ನಿರ್ದೇಶನ ಮಾಡಿದ ಸಿನಿಮಾ ‘ಮೈ ಆಟೋಗ್ರಾಫ್​’ ಸೂಪರ್​ ಹಿಟ್​ ಆಯಿತು. ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಕನಾಗಿಯೂ ಸುದೀಪ್ ಅವರು ಜನರಿಗೆ ಹತ್ತಿರ ಆಗಿದ್ದಾರೆ. ಕನ್ನಡದಲ್ಲಿ 2023ರವರೆಗೆ ಎಲ್ಲ 10 ಸೀಸನ್​ಗಳ ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಣೆಯನ್ನು ಅವರು ಮಾಡಿದ್ದಾರೆ.

ಕಿಚ್ಚ ಸುದೀಪ್​ ಅವರ ಪತ್ನಿಯ ಹೆಸರು ಪ್ರಿಯಾ. ಈ ದಂಪತಿಗೆ ಶಾನ್ವಿ ಎಂಬ ಮಗಳು ಇದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಸುದೀಪ್​ ಅವರ ಮನೆ ಇದೆ. ‘ಸ್ಪರ್ಶ’, ‘ಹುಚ್ಚ’, ‘ವೀರ ಮದಕರಿ’, ‘ಕೆಂಪೇಗೌಡ’, ‘ಮಾಣಿಕ್ಯ’, ‘ವಿಕ್ರಾಂತ್​ ರೋಣ’, ‘ದಬಂಗ್​ 3’ ಮುಂತಾದವು ಸುದೀಪ್​ ನಟನೆಯ ಪ್ರಮುಖ ಸಿನಿಮಾಗಳು. ಗಾಯನದಲ್ಲೂ ಆಸಕ್ತಿ ಹೊಂದಿರುವ ಅವರು ಕೆಲವು ಸಿನಿಮಾದ ಗೀತೆಗಳಿಗೆ ಧ್ವನಿ ನೀಡಿದ್ದಾರೆ.

ಇನ್ನೂ ಹೆಚ್ಚು ಓದಿ

ಮೊದಲ ದಿನವೇ ಅಬ್ಬರದ ಕಲೆಕ್ಷನ್ ಮಾಡಿದ ‘ಮಾರ್ಕ್’ ಹಾಗೂ ‘45’ ಸಿನಿಮಾ

ಕ್ರಿಸ್‌ಮಸ್‌ಗೆ ಬಿಡುಗಡೆಯಾದ '45' ಮತ್ತು 'ಮಾರ್ಕ್' ಕನ್ನಡ ಚಲನಚಿತ್ರಗಳು ಮೊದಲ ದಿನವೇ ಉತ್ತಮ ಗಳಿಕೆ ಕಂಡಿವೆ. ಶನಿವಾರ, ಭಾನುವಾರ ಮತ್ತು ಹೊಸ ವರ್ಷದಂದು ಈ ಚಿತ್ರ ಅಬ್ಬರದ ಕಲೆಕ್ಷನ್ ಮಾಡೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟಾಗುತ್ತದೆ ಎಂಬ ಕುತೂಹಲ ಮೂಡಿದೆ. ಮೊದಲ ದಿನದ ಗಳಿಕೆ ಬಗ್ಗೆ ಇಲ್ಲಿದೆ ವಿವರ.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಕೆಲವು ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕುರಿತು ಅಶ್ಲೀಲ ಕಮೆಂಟ್ ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಈಗಾಗಲೇ ವಿಜಯಲಕ್ಷ್ಮಿ ದರ್ಶನ್ ದೂರು ನೀಡಿದ್ದಾರೆ. ಈ ಎಲ್ಲ ಘಟನೆಗಳ ಬಗ್ಗೆ ನಟ ಶಿವರಾಜ್​ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಮಾತನಾಡಿದ ವಿಡಿಯೋ ಇಲ್ಲಿದೆ.

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್

ಇತ್ತೀಚಿನ ದಿನಗಳಲ್ಲಿ ಫ್ಯಾನ್ಸ್ ವಾರ್ ಜೋರಾಗಿದೆ. ಕಿಚ್ಚ ಸುದೀಪ್ ಅಭಿಮಾನಿಗಳು ಮತ್ತು ದರ್ಶನ್ ಅಭಿಮಾನಿಗಳು ಪರಸ್ಪರ ಕಿತ್ತಾಡಿಕೊಳ್ಳುತ್ತಿದ್ದಾರೆ. ಕೆಟ್ಟ ಕಮೆಂಟ್​​ಗಳನ್ನು ಮಾಡಲಾಗುತ್ತಿದೆ. ಇದರಿಂದ ಸಿನಿಮಾದ ಮೇಲೆ ಪರಿಣಾಮ ಬೀರುತ್ತಿದೆ. ಈ ಕುರಿತು ಶಿವರಾಜ್​​ಕುಮಾರ್ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

Mark Movie Review: ಮ್ಯಾಕ್ಸ್ ಛಾಯೆಯಲ್ಲೇ ಮೂಡಿಬಂದ ‘ಮಾರ್ಕ್’; ಈ ಬಾರಿ ಹೊಸದೇನು?

ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿಸೆಂಬರ್ 25ಕ್ಕೆ ‘ಮಾರ್ಕ್’ ಸಿನಿಮಾ ಕನ್ನಡ ಮತ್ತು ತಮಿಳಿನಲ್ಲಿ ಬಿಡುಗಡೆ ಆಗಿದೆ. ‘ಮ್ಯಾಕ್ಸ್’ ಖ್ಯಾತಿಯ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ‘ಮಾರ್ಕ್’ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಕನ್ನಡ, ತಮಿಳು, ಮಲಯಾಳಂ ಚಿತ್ರರಂಗದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಮಾರ್ಕ್ ವಿಮರ್ಶೆ ಇಲ್ಲಿದೆ..

Mark Movie First Half Review: ಇಂಟರ್​ವಲ್ ತನಕ ಎಷ್ಟು ಥ್ರಿಲ್ಲಿಂಗ್ ಆಗಿದೆ ‘ಮಾರ್ಕ್’ ಸಿನಿಮಾ? ಫಸ್ಟ್ ಹಾಫ್ ವಿಮರ್ಶೆ ನೋಡಿ

Mark First Half Review: ಭಾರಿ ನಿರೀಕ್ಷೆ ಮೂಡಿಸಿದ್ದ ‘ಮಾರ್ಕ್’ ಸಿನಿಮಾ ತೆರೆಕಂಡಿದೆ. ಮುಂಜಾನೆಯೇ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಕಿಚ್ಚ ಸುದೀಪ್ ಜೊತೆ ಶೈನ್ ಟಾಮ್ ಚಾಕೋ, ಯೋಗಿ ಬಾಬು ಮುಂತಾದ ಸ್ಟಾರ್ ಕಲಾವಿದರು ಅಭಿನಯಿಸಿದ್ದಾರೆ. ಬೆಳಗಿನ ಜಾವ 6 ಗಂಟೆಗೆ ‘ಮಾರ್ಕ್’ ಸಿನಿಮಾದ ಮೊದಲ ಶೋ ಶುರುವಾಗಿದೆ. ಫಸ್ಟ್ ಹಾಫ್ ಹೇಗಿದೆ ಎಂಬುದಕ್ಕೆ ಇಲ್ಲಿದೆ ಉತ್ತರ.

ಯುದ್ಧಕ್ಕೆ ಸಿದ್ಧ ಎಂದ ಸುದೀಪ್ ಮಾತಿಗೆ ಅರ್ಜುನ್ ಜನ್ಯ ಮೊದಲ ರಿಯಾಕ್ಷನ್

ನಟ ಸುದೀಪ್ ಹುಬ್ಬಳ್ಳಿಯಲ್ಲಿ ನಡೆದ ‘ಮಾರ್ಕ್’ ಚಿತ್ರದ ಪ್ರೀ-ರಿಲೀಸ್ ಇವೆಂಟ್​​ನಲ್ಲಿ ‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಹೇಳಿದ್ದರು. ಹಾಗಾದ್ರೆ ಅವರು ಆ ಮಾತು ಹೇಳಿದ್ದು ಯಾರಿಗೆ ಎನ್ನುವ ಪ್ರಶ್ನೆ ಜನರ ಮನದಲ್ಲಿ ಮೂಡಿತ್ತು. ಅರ್ಜುನ್ ಜನ್ಯ ಅವರು ಈಗ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ..

ಈ ವಾರ ಅಖಾಡಕ್ಕೆ ‘ಮಾರ್ಕ್’, ‘45’: ಇನ್ನೂ ಕಡಿಮೆ ಆಗುತ್ತಾ ‘ದಿ ಡೆವಿಲ್’ ಕಲೆಕ್ಷನ್?

ಒಂದೇ ದಿನ ‘ಮಾರ್ಕ್’ ಹಾಗೂ ‘45’ ಸಿನಿಮಾಗಳು ಬಿಡುಗಡೆ ಆಗುತ್ತಿದ್ದು, ಬಾಕ್ಸ್ ಆಫೀಸ್​​ನಲ್ಲಿ ಪೈಪೋಟಿ ಜೋರಾಗಿದೆ. ಪರಭಾಷೆಯ ಸಿನಿಮಾಗಳು ಕೂಡ ತೆರೆಕಾಣುತ್ತಿವೆ. ಈ ನಡುವೆ ‘ದಿ ಡೆವಿಲ್’ ಸಿನಿಮಾ ಸಹ ಚಿತ್ರಮಂದಿರದಲ್ಲಿ ಇದೆ. ಡಿಸೆಂಬರ್ 25ರಂದು ಕ್ರಿಸ್ಮಸ್ ರಜೆ ಇರುವ ಕಾರಣ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ ಇದೆ.

ದರ್ಶನ್ ಬಗ್ಗೆ ಸುದೀಪ್ ಯಾವತ್ತೂ ಕೆಟ್ಟದಾಗಿ ಮಾತನಾಡಿಲ್ಲ: ಜೋಗಿ ಪ್ರೇಮ್

ದರ್ಶನ್ ಮತ್ತು ಸುದೀಪ್ ಅವರು ಕನ್ನಡ ಚಿತ್ರರಂಗದ ಸ್ಟಾರ್ ನಟರು. ಅವರ ಫ್ಯಾನ್ಸ್ ನಡುವೆ ಬಿರುಕು ಮೂಡಿದೆ. ಈ ಪರಿಸ್ಥಿತಿಯ ಬಗ್ಗೆ ‘ಕೆಡಿ’ ಚಿತ್ರದ ನಿರ್ದೇಶಕ ಜೋಗಿ ಪ್ರೇಮ್ ಅವರು ತಮ್ಮ ಅಭಿಪ್ರಾಯ ಏನೆಂಬುದನ್ನು ತಿಳಿಸಿದ್ದಾರೆ. ಸುದೀಪ್ ಮತ್ತು ದರ್ಶನ್ ಜೊತೆ ಒಡನಾಟ ಹೊಂದಿರುವ ಪ್ರೇಮ್ ಅವರು ಟಿವಿ9 ಜೊತೆ ಮಾತನಾಡಿದ್ದಾರೆ.

ವಿಷ್ಣುವರ್ಧನ್ ಕೊನೆಯ ವರ್ಷಗಳಲ್ಲಿ ಹಾಗೆ ನಡೆದುಕೊಂಡಿದ್ದೇಕೆ? ವಿವರಿಸಿದ ಕಿಚ್ಚ ಸುದೀಪ್

ಸುದೀಪ್ ಅವರ ‘ಮಾರ್ಕ್’ ಸಿನಿಮಾ ಪ್ರಚಾರದ ನಡುವೆ ಎದುರಾದ ವಿವಾದದ ಬಗ್ಗೆ ಮಾತನಾಡಿದ್ದಾರೆ. ಅವರು ನೀಡಿದ ಜೀವನ ಪಾಠ ಎಲ್ಲರಿಗೂ ಅನ್ವಯ ಆಗುವಂಥದ್ದು. ‘ನಮ್ಮ ಜೊತೆ ನಿಲ್ಲುವವರು ಇದ್ದರೆ ಮಾತ್ರ ಯುದ್ಧಕ್ಕೆ ಹೋಗಿ’ ಎಂಬ ಕಿವಿಮಾತು ಹೇಳಿದ್ದಾರೆ. ವಿಷ್ಣುವರ್ಧನ್ ಅವರ ಮೌನದ ತಾತ್ವಿಕತೆಯನ್ನು ಕಿಚ್ಚ ಹತ್ತಿರದಿಂದ ಕಂಡಿದ್ದರು.

‘ಈ ಹಿಂದೆ ದರ್ಶನ್ ಬಗ್ಗೆ ಕೆಟ್ಟದ್ದು ಮಾತನಾಡಿದ್ರೆ ತೋರಿಸಲಿ’; ಕಿಚ್ಚ ಸುದೀಪ್ ಸವಾಲು

Kichcha Sudeep About Controversy: ಕಿಚ್ಚ ಸುದೀಪ್ ಅವರು ಹುಬ್ಬಳ್ಳಿ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ್ದಾರೆ. ಅದು ಪೈರಸಿ ಬಗ್ಗೆಯಾಗಿತ್ತು, ದರ್ಶನ್ ಅಭಿಮಾನಿಗಳ ಬಗ್ಗೆ ಅಲ್ಲ ಎಂದಿದ್ದಾರೆ. ದರ್ಶನ್ ಬಗ್ಗೆ ಎಂದಿಗೂ ಕೆಟ್ಟದಾಗಿ ಮಾತನಾಡಿಲ್ಲ ಎಂದು ಹೇಳಿದ್ದಾರೆ. ‘ನಮ್ಮಿಬ್ಬರ ಮಧ್ಯೆ ಸಾವಿರ ಇರಬಹುದು, ಅದು ನಮ್ಮಿಬ್ಬರ ಮಧ್ಯೆ ಇರೋ ವಿಷಯ’ ಎಂದರು ಕಿಚ್ಚ.

ಬಿಗ್ ಬಾಸ್ ನಿರೂಪಣೆ ಬಗ್ಗೆ ಕಂಡಕಂಡವರ ತಕರಾರು; ಸುದೀಪ್ ಖಡಕ್ ರಿಯಾಕ್ಷನ್

ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವ ರೀತಿಯ ಬಗ್ಗೆ ಕೆಲವು ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಮಾಡಿ ಹಂಚಿಕೊಳ್ಳುತ್ತಾರೆ. ಅವುಗಳು ವೈರಲ್ ಕೂಡ ಆಗುತ್ತವೆ. ಆ ಬಗ್ಗೆ ಕಿಚ್ಚ ಸುದೀಪ್ ಅವರು ಈಗ ಪ್ರತಿಕ್ರಿಯೆ ನೀಡಿದ್ದಾರೆ. ಟೀಕೆ ಮಾಡುವವರಿಗೆ ಅವರು ಉತ್ತರ ಕೊಟ್ಟಿದ್ದಾರೆ.

ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್

ಕನ್ನಡ ಚಿತ್ರರಂಗದಲ್ಲಿ ಸುದೀಪ್ ಫ್ಯಾನ್ಸ್ ಮತ್ತು ದರ್ಶನ್ ಫ್ಯಾನ್ಸ್ ನಡುವೆ ವಾರ್ ಶುರುವಾಗಿದೆ. ಈ ಬಗ್ಗೆ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ತಾವು ಕಂಡಂತೆ ದರ್ಶನ್ ಫ್ಯಾನ್ಸ್ ಎಂಥವರು ಎಂಬುದನ್ನು ತರುಣ್ ಸುಧೀರ್ ವಿವರಿಸಿದ್ದಾರೆ. ವಿಡಿಯೋ ನೋಡಿ..

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ