AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep

Kichcha Sudeep

ಕಿಚ್ಚ ಸುದೀಪ್​ ಅವರು ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರು ಮೂಲತಃ ಶಿವಮೊಗ್ಗದವರು. ಹಲವು ವರ್ಷಗಳಿಂದ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು, ಹಿಂದಿ ಸಿನಿಮಾಗಳಲ್ಲೂ ನಟಿಸಿ ಅವರು ಫೇಮಸ್​ ಆಗಿದ್ದಾರೆ.

ಕಿಚ್ಚ ಸುದೀಪ್​ ಅವರು ನಟನೆ ಮಾತ್ರವಲ್ಲದೇ ನಿರ್ದೇಶನದ ಮೂಲಕವೂ ಜನಮನ ಗೆದ್ದಿದ್ದಾರೆ. ಅವರು ಮೊದಲು ನಿರ್ದೇಶನ ಮಾಡಿದ ಸಿನಿಮಾ ‘ಮೈ ಆಟೋಗ್ರಾಫ್​’ ಸೂಪರ್​ ಹಿಟ್​ ಆಯಿತು. ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಕನಾಗಿಯೂ ಸುದೀಪ್ ಅವರು ಜನರಿಗೆ ಹತ್ತಿರ ಆಗಿದ್ದಾರೆ. ಕನ್ನಡದಲ್ಲಿ 2023ರವರೆಗೆ ಎಲ್ಲ 10 ಸೀಸನ್​ಗಳ ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಣೆಯನ್ನು ಅವರು ಮಾಡಿದ್ದಾರೆ.

ಕಿಚ್ಚ ಸುದೀಪ್​ ಅವರ ಪತ್ನಿಯ ಹೆಸರು ಪ್ರಿಯಾ. ಈ ದಂಪತಿಗೆ ಶಾನ್ವಿ ಎಂಬ ಮಗಳು ಇದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಸುದೀಪ್​ ಅವರ ಮನೆ ಇದೆ. ‘ಸ್ಪರ್ಶ’, ‘ಹುಚ್ಚ’, ‘ವೀರ ಮದಕರಿ’, ‘ಕೆಂಪೇಗೌಡ’, ‘ಮಾಣಿಕ್ಯ’, ‘ವಿಕ್ರಾಂತ್​ ರೋಣ’, ‘ದಬಂಗ್​ 3’ ಮುಂತಾದವು ಸುದೀಪ್​ ನಟನೆಯ ಪ್ರಮುಖ ಸಿನಿಮಾಗಳು. ಗಾಯನದಲ್ಲೂ ಆಸಕ್ತಿ ಹೊಂದಿರುವ ಅವರು ಕೆಲವು ಸಿನಿಮಾದ ಗೀತೆಗಳಿಗೆ ಧ್ವನಿ ನೀಡಿದ್ದಾರೆ.

ಇನ್ನೂ ಹೆಚ್ಚು ಓದಿ

ನಟ್ಟು ಬೋಲ್ಟ್ ವಿಚಾರಕ್ಕೆ ಸುದೀಪ್ ಖಡಕ್ ತಿರುಗೇಟು; ‘ಕಾಲವೇ ಉತ್ತರ ಕೊಡುತ್ತೆ’ ಎಂದ ಡಿಕೆ ಶಿವಕುಮಾರ್  

ಡಿಕೆಶಿ ಅವರ ‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ’ ಎಂಬ ಹೇಳಿಕೆಯನ್ನು ಸುದೀಪ್ ಖಂಡಿಸಿದ್ದಾರೆ. ಚಿತ್ರರಂಗದವರನ್ನು ಗೌರವಿಸುವಂತೆ ಅವರು ಡಿಕೆಶಿಯವರನ್ನು ಕೋರಿದ್ದಾರೆ. ಡಿಕೆಶಿ ಅವರು ಈ ವಿಷಯದ ಬಗ್ಗೆ "ಕಾಲವೇ ಉತ್ತರ ಕೊಡುತ್ತದೆ" ಎಂದು ಪ್ರತಿಕ್ರಿಯಿಸಿದ್ದಾರೆ. ಈ ವಿವಾದವು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

Kichcha Sudeep: ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ನಿರೂಪಣೆ ಬಗ್ಗೆ ನಿಲುವು ತಿಳಿಸಿದ ಸುದೀಪ್

Bigg Boss Kannada Season 12: ಬಿಗ್ ಬಾಸ್ ಕನ್ನಡ ಸೀಸನ್ 11 ರ ನಂತರ ಕಿಚ್ಚ ಸುದೀಪ್ ಅವರು ನಿರೂಪಣೆಯಿಂದ ಹಿಂದೆ ಸರಿದಿದ್ದರು. ಆದರೆ, 12ನೇ ಸೀಸನ್‌ಗೆ ಅವರು ಮರಳುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಸುದೀಪ್ ಅವರು ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ ಎಂಬ ವದಂತಿಗಳಿವೆ. ಇತ್ತೀಚಿನ ಸಂದರ್ಶನದಲ್ಲಿ, ಈ ವಿಷಯದ ಬಗ್ಗೆ ಅವರು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.

ಅಂಬಿ ಬೈಕ್ ಮೇಲೆ ಸುದೀಪ್; ಅಪರೂಪದ ಫೋಟೋ ಇಲ್ಲಿದೆ

Ambareesh And Kichcha Sudeep: ಅಂಬರೀಶ್ ಮತ್ತು ಸುದೀಪ್ ಅವರ ನಿಕಟ ಬಾಂಧವ್ಯವನ್ನು ತೋರಿಸುವ ಅಪರೂಪದ ಫೋಟೋ ವೈರಲ್ ಆಗಿದೆ. ಸುದೀಪ್ ಅವರು ಅಂಬರೀಶ್ ಅವರನ್ನು ತುಂಬಾನೇ ಗೌರವಿಸುತ್ತಿದ್ದರು.ಅಂಬರೀಶ್ ಅವರ ನಿಧನದ ಬಳಿಕವೂ ಸುದೀಪ್ ಅವರ ಬೆಂಬಲ ಸುಮಲತಾ ಅವರಿಗೆ ಇದೆ.

ಅಖಿಲ್ ಅಕ್ಕಿನೇನಿ ಆರತಕ್ಷತೆಯಲ್ಲಿ ಮಿಂಚಿದ ಯಶ್-ಸುದೀಪ್; ರಾಕಿಭಾಯ್ ಹೊಸ ಲುಕ್ ರಿವೀಲ್

ಟಾಲಿವುಡ್ ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನ ಅವರ ಕಿರಿಯ ಪುತ್ರ ಅಖಿಲ್ ಅಕ್ಕಿನೇನಿ ಅವರು ಜೂನ್ 6ರಂದು ಝೈನಾಬ್ ಜೊತೆ ವಿವಾಹ ಆದರು. ಇದರ ಆರತಕ್ಷತೆ ಜೂನ್ 8ರಂದು ನಡೆಯಿತು. ಇದಕ್ಕೆ ಹಲವು ಸೆಲೆಬ್ರಿಟಿಗಳು ಆಗಮಿಸಿದ್ದರು. ಅದರ ಫೋಟೋಗಳು ವೈರಲ್ ಆಗಿವೆ.

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಟ್ರೇಲರ್​ಗೆ ಸಿಕ್ತು ಕಿಚ್ಚನ ಚಪ್ಪಾಳೆ

ನಟ ಕಿಚ್ಚ ಸುದೀಪ್ ಅವರು ಹೊಸ ಪ್ರಯತ್ನಗಳಿಗೆ ಬೆನ್ನು ತಟ್ಟುತ್ತಾರೆ. ಈಗ ಅವರು ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಟ್ರೇಲರ್​ ನೋಡಿ ಭೇಷ್ ಎಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ದಿಗಂತ್ ಮಂಚಾಲೆ ಅವರು ನಟಿಸಿದ್ದಾರೆ.

ಕಿಚ್ಚ ಸುದೀಪ್-ರಾಜೇಶ್ ಕೃಷ್ಣನ್ ಹಾಡಿನ್ ಜುಗಲ್​ಬಂದಿ; ಅಪರೂಪದ ವಿಡಿಯೋ

ಕಿಚ್ಚ ಸುದೀಪ್ ಮತ್ತು ರಾಜೇಶ್ ಕೃಷ್ಣನ್ ಅವರ ಅಪರೂಪದ ಹಾಡಿನ ಜುಗಲ್ಬಂದಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸರಿಗಮಪ ಕಾರ್ಯಕ್ರಮದಲ್ಲಿ ಈ ಜೋಡಿ ಹಾಡಿದ ‘ಇವಳಾ ಮುಗುಳು ನಗೆ’ ಹಾಡು ಪ್ರೇಕ್ಷಕರ ಮನಗೆದ್ದಿದೆ. ಸುದೀಪ್ ಅವರ ಧ್ವನಿಗೆ ಅಭಿಮಾನಿಗಳು ಮನಸೋತಿದ್ದಾರೆ. ಸದ್ಯ ಅವರು ‘ಬಿಲ್ಲ ರಂಗ ಭಾಷ’ ಚಿತ್ರದಲ್ಲಿ ಬ್ಯುಸಿ ಇದ್ದಾರೆ.

ಸುದೀಪ್ ಫೀಮೇಲ್ ಫ್ಯಾನ್ಸ್ ನೋಡಿ ಕಂಗಾಲಾಗಿದ್ದ ಪತ್ನಿ ಪ್ರಿಯಾ

ಸುದೀಪ್ ಮತ್ತು ಪ್ರಿಯಾ ಅವರದ್ದು ಪ್ರೇಮ ವಿವಾಹ. ವಿವಾಹದ ನಂತರ ಅನೇಕ ಸವಾಲುಗಳನ್ನು ಇವರು ಎದುರಿಸಿದರು. ಸುದೀಪ್ ಅವರ ಅಪಾರ ಮಹಿಳಾ ಅಭಿಮಾನಿಗಳನ್ನು ನೋಡಿ ಪ್ರಿಯಾ ಅವರು ಆರಂಭದಲ್ಲಿ ಕಂಗಾಲಾದರು. ಆದರೆ, ಸುದೀಪ್ ಅವರ ಪ್ರೀತಿ ಮತ್ತು ಬೆಂಬಲದಿಂದ ಅವರು ಅದನ್ನು ಜಯಿಸಿದರು.

ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ

Kichcha Sudeep: ನಟ ಸುದೀಪ್ ಕೈಗೆ ಗಾಯ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ‘ನಾನು ಮತ್ತು ಗುಂಡ 2’ ಸಿನಿಮಾಕ್ಕೆ ಶುಭ ಹಾರೈಸಲು ವಿಡಿಯೋ ಒಂದನ್ನು ಸುದೀಪ್ ಮಾಡಿದ್ದರು. ವಿಡಿಯೋನಲ್ಲಿ ಸುದೀಪ್ ಕೈಗೆ ಬ್ಯಾಂಡೇಜ್ ಹಾಕಿಕೊಂಡಿರುವುದು ಕಾಣಿಸಿತ್ತು. ಇದು ಕಿಚ್ಚನ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಸುದೀಪ್​ ಪ್ರಸ್ತುತ ‘ಬಿಲ್ಲ ರಂಗ ಭಾಷಾ’ ಸಿನಿಮಾ ಶೂಟಿಂಗ್​ನಲ್ಲಿದ್ದು ಚಿತ್ರೀಕರಣ ಸಮಯದಲ್ಲಿ ಸುದೀಪ್ ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಮದುವೆ ವಿಚಾರದಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತಿನಂತೆ ನಡೆದುಕೊಂಡ ಚೈತ್ರಾ ಕುಂದಾಪುರ

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಕನ್ನಡದಲ್ಲಿ ಭಾಗವಹಿಸಿದ್ದ ಸಮಯದಲ್ಲಿ ಸುದೀಪ್ ಅವರು ಮಾಡಿದ ಭವಿಷ್ಯವಾಣಿ ನಿಜವಾಗಿದೆ. ಅವರು ಒಬ್ಬ ಸಂಸ್ಕಾರವಂತ ವ್ಯಕ್ತಿಯನ್ನು ಮದುವೆಯಾಗುತ್ತಿದ್ದಾರೆ. ಅವರು ದೇವಸ್ಥಾನದ ಅರ್ಚಕರಂತೆ ಕಂಡು ಬಂದಿದೆ. ಅವರ ವಿವಾಹದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್

ನಟ ‘ನೆನಪಿರಲಿ’ ಪ್ರೇಮ್ ಅವರ ಪುತ್ರಿ ಅಮೃತಾಗೆ ಹೊಸ ಹೊಸ ಅವಕಾಶಗಳು ಸಿಗುತ್ತಿವೆ. ‘ಗೀತಾ ಪಿಕ್ಚರ್ಸ್’ ನಿರ್ಮಾಣದ ‘ಪಬ್ಬಾರ್’ ಸಿನಿಮಾದಲ್ಲಿ ಅಮೃತಾ ಪ್ರೇಮ್ ಅವರು ನಾಯಕಿ ಆಗಿದ್ದಾರೆ. ಈ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ ಪ್ರೇಮ್ ಭಾಗಿಯಾಗಿದ್ದಾರೆ. ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ