AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep

Kichcha Sudeep

ಕಿಚ್ಚ ಸುದೀಪ್​ ಅವರು ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರು ಮೂಲತಃ ಶಿವಮೊಗ್ಗದವರು. ಹಲವು ವರ್ಷಗಳಿಂದ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು, ಹಿಂದಿ ಸಿನಿಮಾಗಳಲ್ಲೂ ನಟಿಸಿ ಅವರು ಫೇಮಸ್​ ಆಗಿದ್ದಾರೆ.

ಕಿಚ್ಚ ಸುದೀಪ್​ ಅವರು ನಟನೆ ಮಾತ್ರವಲ್ಲದೇ ನಿರ್ದೇಶನದ ಮೂಲಕವೂ ಜನಮನ ಗೆದ್ದಿದ್ದಾರೆ. ಅವರು ಮೊದಲು ನಿರ್ದೇಶನ ಮಾಡಿದ ಸಿನಿಮಾ ‘ಮೈ ಆಟೋಗ್ರಾಫ್​’ ಸೂಪರ್​ ಹಿಟ್​ ಆಯಿತು. ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಕನಾಗಿಯೂ ಸುದೀಪ್ ಅವರು ಜನರಿಗೆ ಹತ್ತಿರ ಆಗಿದ್ದಾರೆ. ಕನ್ನಡದಲ್ಲಿ 2023ರವರೆಗೆ ಎಲ್ಲ 10 ಸೀಸನ್​ಗಳ ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಣೆಯನ್ನು ಅವರು ಮಾಡಿದ್ದಾರೆ.

ಕಿಚ್ಚ ಸುದೀಪ್​ ಅವರ ಪತ್ನಿಯ ಹೆಸರು ಪ್ರಿಯಾ. ಈ ದಂಪತಿಗೆ ಶಾನ್ವಿ ಎಂಬ ಮಗಳು ಇದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಸುದೀಪ್​ ಅವರ ಮನೆ ಇದೆ. ‘ಸ್ಪರ್ಶ’, ‘ಹುಚ್ಚ’, ‘ವೀರ ಮದಕರಿ’, ‘ಕೆಂಪೇಗೌಡ’, ‘ಮಾಣಿಕ್ಯ’, ‘ವಿಕ್ರಾಂತ್​ ರೋಣ’, ‘ದಬಂಗ್​ 3’ ಮುಂತಾದವು ಸುದೀಪ್​ ನಟನೆಯ ಪ್ರಮುಖ ಸಿನಿಮಾಗಳು. ಗಾಯನದಲ್ಲೂ ಆಸಕ್ತಿ ಹೊಂದಿರುವ ಅವರು ಕೆಲವು ಸಿನಿಮಾದ ಗೀತೆಗಳಿಗೆ ಧ್ವನಿ ನೀಡಿದ್ದಾರೆ.

ಇನ್ನೂ ಹೆಚ್ಚು ಓದಿ

ಸುದೀಪ್ ಮನೆಯಲ್ಲಿ ಮದುವೆ ಸಂಭ್ರಮ; ಇಲ್ಲಿವೆ ಫೋಟೋಸ್

ಕಿಚ್ಚ ಸುದೀಪ್ ಅವರ ಮನೆಯಲ್ಲಿ ಸದ್ದಿಲ್ಲದೆ ಮದುವೆ ಸಂಭ್ರಮ ಜೋರಾಗಿದೆ. ಅರಿಶಿಣ ಶಾಸ್ತ್ರ ನಡೆದಿದ್ದು, ಡಿಸೆಂಬರ್ 4ರಂದು ಪ್ಯಾಲೆಸ್ ಗ್ರೌಂಡ್​ನಲ್ಲಿ ರಿಸೆಪ್ಶನ್ ನಡೆಯಲಿದೆ. ಹಾಗಾದರೆ ವಿವಾಹ ಆಗಿದ್ದು ಯಾರು? ಮದುವೆ ಆಗುತ್ತಿರೋದು ಯಾರು? ಆ ಬಗ್ಗೆ ಇಲ್ಲಿ ಇದೆ ವಿವರ .

ಸುದೀಪ್ ಇಲ್ಲದಿದ್ದಾಗ ಬಣ್ಣ ಬದಲಿಸುವ ಅಶ್ವಿನಿ ಗೌಡ: ಮುಖವಾಡ ಕಳಚಿದ ಗಿಲ್ಲಿ ನಟ

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಅವರು ಬಣ್ಣ ಬದಲಾಯಿಸುತ್ತಾರೆ. ಕಿಚ್ಚ ಸುದೀಪ್ ಅವರ ಎದುರಲ್ಲಿ ವಿನಯದಿಂದ ಮಾತನಾಡುವ ಅಶ್ವಿನಿ ಗೌಡ, ವಾರದ ದಿನಗಳಲ್ಲಿ ಬೇರೆ ರೀತಿ ಇರುತ್ತಾರೆ. ವಾರಾಂತ್ಯದಲ್ಲಿ ಕ್ಷಮೆ ಕೇಳುವ ಅವರು ಸೋಮವಾರದಿಂದ ಶುಕ್ರವಾರದ ತನಕ ಮತ್ತೆ ತಪ್ಪು ಮಾಡುತ್ತಾರೆ. ಇದು ಹಲವು ಬಾರಿ ಮರುಕಳಿಸಿದೆ.

ಬಿಗ್ ಬಾಸ್ ಮನೆಯಲ್ಲಿ ನೆಗೆಟಿವ್ ಎನರ್ಜಿ: ಸುದೀಪ್ ಎದುರು ದೂರು ಹೇಳಿದ ಗಿಲ್ಲಿ

ಬಿಗ್ ಬಾಸ್ ಮನೆಯ ಒಂದು ರೂಮ್​​ನಲ್ಲಿ ನೆಗೆಟಿವ್ ಎನರ್ಜಿ ಇದೆ ಎಂಬ ವಿಚಾರ ತುಂಬಾ ಚರ್ಚೆ ಆಗಿತ್ತು. ಅಶ್ವಿನಿ ಗೌಡ ಹಾಗೂ ಜಾಹ್ನವಿ ಪರಸ್ಪರ ದೃಷ್ಟಿ ತೆಗೆದುಕೊಂಡಿದ್ದರು. ಅದೇ ವಿಚಾರ ಇಟ್ಟುಕೊಂಡು ಭಾನುವಾರದ (ನ.23) ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಸ್ಪರ್ಧಿಗಳ ಜೊತೆ ಮಾತನಾಡಿದ್ದಾರೆ.

ಅಶ್ವಿನಿ ಗೌಡ ಎದುರಲ್ಲೇ ಕಿಚ್ಚನ ಚಪ್ಪಾಳೆ ಪಡೆದ ರಕ್ಷಿತಾ ಶೆಟ್ಟಿ: ಸುದೀಪ್ ಮೆಚ್ಚಿದ್ದು ಏನು?

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈ ವಾರ ರಕ್ಷಿತಾ ಶೆಟ್ಟಿ ಅವರ ಆಟವನ್ನು ಸುದೀಪ್​ ಹೊಗಳಿದ್ದಾರೆ. ಅಶ್ವಿನಿ ಗೌಡ ಅವರು ಕಳಪೆ ಪಟ್ಟ ಪಡೆದ ವಾರವೇ ರಕ್ಷಿತಾ ಶೆಟ್ಟಿ ಅವರು ಕಿಚ್ಚನ ಚಪ್ಪಾಳೆ ಪಡೆದುಕೊಂಡಿದ್ದಾರೆ. ನಾಮಿನೇಟ್ ಆಗಿದ್ದ ರಕ್ಷಿತಾ ಸೇಫ್ ಕೂಡ ಆಗಿದ್ದಾರೆ. ಇದರಿಂದಾಗಿ ಅವರಿಗೆ ದೊಡ್ಡ ಬಲ ಬಂದಂತೆ ಆಗಿದೆ.

‘ಈ ಮನೆಯಲ್ಲಿ ವುಮನ್ ಕಾರ್ಡ್ ಬೇಡ’; ಅಶ್ವಿನಿಗೆ ಬೆವರಿಳಿಸಿದ ಸುದೀಪ್

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಅವರು ವುಮನ್ ಕಾರ್ಡ್ ಬಳಕೆ ಮಾಡಿದ್ದು ಸ್ಪಷ್ಟವಾಗುತ್ತಿದೆ. ಈಗ ಸುದೀಪ್ ಅವರು ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಎಲ್ಲರನ್ನೂ ಏಕವಚನದಲ್ಲಿ ಮಾತನಾಡೋ ಅವರು, ಗೌರವ ಕೊಡೋದಿಲ್ಲ ಎಂಬ ಮಾತಿದೆ. ಇದನ್ನು ಸುದೀಪ್ ಅವರು ಪ್ರಸ್ತಾಪ ಮಾಡಿದ್ದಾರೆ.

ಪಿತ್ತ ನೆತ್ತಿಗೇರುತ್ತೆ ಎಂದು ರಕ್ಷಿತಾ ಶೆಟ್ಟಿಗೆ ಬೈಯ್ದಿದ್ದಕ್ಕೆ ಸುದೀಪ್ ವಿರುದ್ಧ ದೂರು ದಾಖಲು

ನಟ ಕಿಚ್ಚ ಸುದೀಪ್ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಎಸ್.ಪಿ. ಕಚೇರಿಯಲ್ಲಿ ದೂರು ದಾಖಲಾಗಿದೆ. ಬಿಗ್ ಬಾಸ್ ನಿರೂಪಣೆ ಮಾಡುವಾಗ ರಕ್ಷಿತಾ ಶೆಟ್ಟಿ ಮೇಲೆ ಸುದೀಪ್ ಗರಂ ಆಗಿದ್ದಕ್ಕೆ ದೂರು ನೀಡಲಾಗಿದೆ. ಸಾಮಾಜಿಕ ಹೋರಾಟಗಾರ್ತಿ ಸಂಧ್ಯಾ ಎಂಬುವವರು ದೂರು ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಸುದೀಪ್ ಮಾತಿಗೂ ಬೆಲೆ ಕೊಡದ ಜಾಹ್ನವಿ, ಅಶ್ವಿನಿ ಗೌಡ: ಮನೆ ದಾರಿ ನೆನಪಿಸಿದ ಬಿಗ್ ಬಾಸ್

ಬಿಗ್ ಬಾಸ್ ಮನೆಯಲ್ಲಿ ಕಿಚ್ಚ ಸುದೀಪ್ ನೀಡಿದ ಸೂಚನೆಯನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಆದರೆ ಅಶ್ವಿನಿ ಗೌಡ ಹಾಗೂ ಜಾಹ್ನವಿ ಅವರು ಸುದೀಪ್ ಮಾತಿಗೆ ಈ ವಾರ ಕಿಂಚಿತ್ತೂ ಬೆಲೆ ಕೊಟ್ಟಿಲ್ಲ. ಸುದೀಪ್ ನೀಡಿದ್ದ ಎಚ್ಚರಿಕೆಯನ್ನೂ ಮೀರಿ ಅವರಿಬ್ಬರು ಮನೆಯ ನಿಯಮ ಉಲ್ಲಂಘನೆ ಮಾಡಿದ್ದಾರೆ.

ಕಿಚ್ಚ ಸುದೀಪ್ ರೀತಿಯಲ್ಲೇ ಬಿಗ್​ ಬಾಸ್ ನಿರೂಪಣೆ ಮಾಡಿದ ಗಿಲ್ಲಿ ನಟ

ನವೆಂಬರ್ 16ರಂದು ಯಾರು ಎಲಿಮಿನೇಟ್ ಆಗುತ್ತಾರೆ ಎಂಬ ಕೌತುಕದ ನಡುವೆ ಗಿಲ್ಲಿ ನಟ ಮಸ್ತ್ ಕಾಮಿಡಿ ಮಾಡಿದ್ದಾರೆ. ಕಿಚ್ಚ ಸುದೀಪ್ ಬಿಗ್ ಬಾಸ್ ಶೋ ನಿರೂಪಣೆ ಮಾಡುವ ಶೈಲಿಯನ್ನು ಗಿಲ್ಲಿ ನಟ ಅವರು ಅನುಕರಣೆ ಮಾಡಿ ತೋರಿಸಿದ್ದಾರೆ. ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಗಿಲ್ಲಿ ನಟ ಅವರ ಕಾಮಿಡಿಗೆ ಸುದೀಪ್ ಕೂಡ ನಕ್ಕಿದ್ದಾರೆ.

ದುಡ್ಡು ಕೊಟ್ಟು ‘ಜೈ’ ಸಿನಿಮಾ ಮೊದಲ ಟಿಕೆಟ್ ಖರೀದಿಸಿದ ಸುದೀಪ್

‘ಬಿಗ್ ಬಾಸ್ ಕನ್ನಡ ಸೀಸನ್ 9’ರ ವಿನ್ನರ್ ಹೊರ ಹೊಮ್ಮಿದವರು ರೂಪೇಶ್ ಶೆಟ್ಟಿ. ಅವರು ಈಗ ತುಳು ಹಾಗೂ ಕನ್ನಡ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಈ ಸಿನಿಮಾದ ಮೊದಲ ಟಿಕೆಟ್​ನ ಸುದೀಪ್ ಅವರು ಖರೀದಿ ಮಾಡಿದ್ದಾರೆ ಎಂಬುದು ವಿಶೇಷ. ಆ ಬಗ್ಗೆ ಇಲ್ಲಿದೆ ವಿವರ.

ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್

‘ಮಾರ್ನಮಿ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ರಿತ್ವಿಕ್ ಅವರು ನಟಿಸಿದ್ದಾರೆ. ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಟ್ರೇಲರ್​​ನಲ್ಲಿ ಕಿಚ್ಚ ಸುದೀಪ್ ಅವರ ಧ್ವನಿ ಗಮನ ಸೆಳೆದಿದೆ. ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಬಂದ ಸುದೀಪ್ ಅವರು ವೇದಿಕೆಯಲ್ಲಿ ಮಾತನಾಡಿದರು. ವಿಡಿಯೋ ನೋಡಿ..