Kichcha Sudeep

Kichcha Sudeep

ಕಿಚ್ಚ ಸುದೀಪ್​ ಅವರು ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರು ಮೂಲತಃ ಶಿವಮೊಗ್ಗದವರು. ಹಲವು ವರ್ಷಗಳಿಂದ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು, ಹಿಂದಿ ಸಿನಿಮಾಗಳಲ್ಲೂ ನಟಿಸಿ ಅವರು ಫೇಮಸ್​ ಆಗಿದ್ದಾರೆ.

ಕಿಚ್ಚ ಸುದೀಪ್​ ಅವರು ನಟನೆ ಮಾತ್ರವಲ್ಲದೇ ನಿರ್ದೇಶನದ ಮೂಲಕವೂ ಜನಮನ ಗೆದ್ದಿದ್ದಾರೆ. ಅವರು ಮೊದಲು ನಿರ್ದೇಶನ ಮಾಡಿದ ಸಿನಿಮಾ ‘ಮೈ ಆಟೋಗ್ರಾಫ್​’ ಸೂಪರ್​ ಹಿಟ್​ ಆಯಿತು. ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಕನಾಗಿಯೂ ಸುದೀಪ್ ಅವರು ಜನರಿಗೆ ಹತ್ತಿರ ಆಗಿದ್ದಾರೆ. ಕನ್ನಡದಲ್ಲಿ 2023ರವರೆಗೆ ಎಲ್ಲ 10 ಸೀಸನ್​ಗಳ ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಣೆಯನ್ನು ಅವರು ಮಾಡಿದ್ದಾರೆ.

ಕಿಚ್ಚ ಸುದೀಪ್​ ಅವರ ಪತ್ನಿಯ ಹೆಸರು ಪ್ರಿಯಾ. ಈ ದಂಪತಿಗೆ ಶಾನ್ವಿ ಎಂಬ ಮಗಳು ಇದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಸುದೀಪ್​ ಅವರ ಮನೆ ಇದೆ. ‘ಸ್ಪರ್ಶ’, ‘ಹುಚ್ಚ’, ‘ವೀರ ಮದಕರಿ’, ‘ಕೆಂಪೇಗೌಡ’, ‘ಮಾಣಿಕ್ಯ’, ‘ವಿಕ್ರಾಂತ್​ ರೋಣ’, ‘ದಬಂಗ್​ 3’ ಮುಂತಾದವು ಸುದೀಪ್​ ನಟನೆಯ ಪ್ರಮುಖ ಸಿನಿಮಾಗಳು. ಗಾಯನದಲ್ಲೂ ಆಸಕ್ತಿ ಹೊಂದಿರುವ ಅವರು ಕೆಲವು ಸಿನಿಮಾದ ಗೀತೆಗಳಿಗೆ ಧ್ವನಿ ನೀಡಿದ್ದಾರೆ.

ಇನ್ನೂ ಹೆಚ್ಚು ಓದಿ

‘ಬಿಗ್ ಬಾಸ್​ಗೆ ಬರೋಕೆ ಇನ್ನೊಂದು ಅವಕಾಶ ಕೊಡಿ ’; ಸುದೀಪ್ ಬಳಿ ಮನವಿ ಮಾಡಿದ ಹುಚ್ಚ ವೆಂಕಟ್

‘ಬಿಗ್ ಬಾಸ್ ಕನ್ನಡ ಸೀಸನ್ 11’ ಸೆಪ್ಟೆಂಬರ್ 29ರಿಂದ ಆರಂಭ ಆಗಲಿದೆ. ಈಗಾಗಲೇ ಸ್ಪರ್ಧಿಗಳ ಹೆಸರು ಕೂಡ ಫೈನಲ್ ಆಗಿದೆ. ಈ ಮಧ್ಯೆ ಹುಚ್ಚ ವೆಂಕಟ್ ಅವರು ಒಂದು ಮನವಿ ಮಾಡಿದ್ದಾರೆ. ಈ ಕುರಿತು ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದಾರೆ.

BBK 11: ‘ಬಿಗ್ ಬಾಸ್ ಕನ್ನಡ ಸೀಸನ್ 11’ ಸ್ಪರ್ಧಿಗಳ ಫೋಟೋ ಲೀಕ್

Bigg Boss Kannada Season 11 Contestant List: ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆಗಮನಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 29ರಂದು ಬಿಗ್ ಬಾಸ್​ಗೆ ಅದ್ದೂರಿ ಓಪನಿಂಗ್ ಸಿಗಲಿದೆ. ಈ ಬಾರಿಯೂ 17 ಸ್ಪರ್ಧಿಗಳು ಮನೆ ಸೇರುವ ನಿರೀಕ್ಷೆ ಇದೆ. ಅದಕ್ಕೂ ಮೊದಲು ಸ್ಪರ್ಧಿಗಳ ಮುಖವನ್ನು ಬ್ಲರ್ ಆಗಿ ತೋರಿಸಲಾಗಿದೆ.

Bigg Boss Kannada: ಈ ಬಾರಿ ಬಿಗ್ ಬಾಸ್​ನಲ್ಲಿ ಎರಡು ಮನೆ; ಅಪ್​ಡೇಟ್​ ಕೊಟ್ಟ ಸುದೀಪ್

ಲವೇ ದಿನಗಳಲ್ಲಿ ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಆರಂಭ ಆಗಲಿದೆ. ಅದಕ್ಕಾಗಿ ಸಕಲ ತಯಾರಿ ನಡೆದಿದೆ. ಕಿಚ್ಚ ಸುದೀಪ್​ ಅವರು ಎಂದಿನ ಉತ್ಸಾಹದಲ್ಲಿ ನಿರೂಪಣೆ ಮಾಡಲು ಬರುತ್ತಿದ್ದಾರೆ. ಈಗ ಹೊಸ ಪ್ರೋಮೋ ಬಿಡುಗಡೆ ಮಾಡಲಾಗಿದ್ದು, ಬಿಗ್ ಬಾಸ್​ನಲ್ಲಿ ಎರಡು ಮನೆ ಇರಲಿದೆ ಎಂಬ ವಿಚಾರ ರಿವೀಲ್ ಆಗಿದೆ.

ಕನ್ನಡದ ಬಿಗ್ ಬಾಸ್​ನಲ್ಲಿ ಸ್ವರ್ಗ-ನರಕ; ಹಿಂದಿಯಲ್ಲಿ ಏನು ಥೀಮ್? ಸುಳಿವು ಕೊಟ್ಟ ಸಲ್ಲು

‘ಬಿಗ್​ ಬಾಸ್ 18’ ಕಾರ್ಯಕ್ರಮ ಅಕ್ಟೋಬರ್ 6ರಂದು ಶುರುವಾಗಲಿದೆ. ಅದರ ಥೀಮ್​ ಬಗ್ಗೆ ಸುಳಿವು ನೀಡಲು ಹೊಸ ಪ್ರೋಮೋ ರಿಲೀಸ್ ಮಾಡಲಾಗಿದೆ. ಸಲ್ಮಾನ್​ ಖಾನ್​ ಅವರು ಸಮಯದ ಬಗ್ಗೆ ಮಾತನಾಡಿದ್ದಾರೆ. ಇತ್ತ, ಕನ್ನಡದಲ್ಲಿ ಕಿಚ್ಚ ಸುದೀಪ್​ ಅವರು ಸ್ವರ್ಗ ಮತ್ತು ನರಕದ ಕಾನ್ಸೆಪ್ಟ್​ ಬಗ್ಗೆ ಕಿರು ಪರಿಚಯ ಮಾಡಿಕೊಟ್ಟಿದ್ದಾರೆ. ವೀಕ್ಷಕರಲ್ಲಿ ಕ್ರೇಜ್​ ಹೆಚ್ಚಿದೆ.

ರಿಷಬ್​ನ ತಮ್ಮ ಎಂದು ಕರೆದ ಸುದೀಪ್; ಕಿಚ್ಚನ ಮಾತಿಗೊಂದು ಅರ್ಥವಿದೆ..

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಮೂಲಕ ದೊಡ್ಡ ಮಟ್ಟದ ಗೆಲುವು ಕಂಡಿದ್ದಾರೆ. ಆದರೂ ಅವರಿಗೆ ಸುದೀಪ್ ಅವರ ಮೇಲಿರುವ ಪ್ರೀತಿ, ಅಭಿಮಾನ ಕಡಿಮೆ ಆಗಿಲ್ಲ. ಈಗ ಸುದೀಪ್ ಅವರು ಕೂಡ ರಿಷಬ್ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ. ಆ ವಿಡಿಯೋ ವೈರಲ್ ಆಗಿದೆ.

‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್

‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಆರಂಭಕ್ಕೆ ಇನ್ನು ಉಳಿದಿರೋದು ಕೆಲವೇ ದಿನಗಳು ಮಾತ್ರ. ಶನಿವಾರ (ಸೆಪ್ಟೆಂಬರ್ 28) ಶೂಟಿಂಗ್ ನಡೆಯಲಿದ್ದು, ಸೆಪ್ಟೆಂಬರ್ 29ರಂದು ಕಲರ್ಸ್ ಕನ್ನಡದಲ್ಲಿ ಈ ಶೋ ಪ್ರಸಾರ ಕಾಣಲಿದೆ. ಇದರ ಸುದ್ದಿಗೋಷ್ಠಿಯಲ್ಲಿ ಸುದೀಪ್ ಮಾತನಾಡಿದ್ದಾರೆ.

Bigg Boss Kannada: ‘ಬಿಗ್ ಬಾಸ್​’ನಲ್ಲಿ ಮುಂದುವರೆದ ಹಳೆಯ ಟೆಕ್ನಿಕ್? ಏನದು?

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶೋ ಸೆಪ್ಟೆಂಬರ್​ 29ರಂದು ಅದ್ದೂರಿಯಾಗಿ ಲಾಂಚ್​ ಆಗಲಿದೆ. ಆ ಬಗ್ಗೆ ಮಾತನಾಡಲು ಸೆ.23ರಂದು ಪ್ರೆಸ್​ಮೀಟ್​ ಮಾಡಲಾಯಿತು. ಈ ವೇಳೆ ಕೆಲವು ವಿಚಾರಗಳನ್ನು ತಂಡ ರಿವೀಲ್ ಮಾಡಿದೆ. ಇದರಲ್ಲಿ ಸ್ವರ್ಗ-ನರಕ ಕೂಡ ಕೂಡಿದೆ.

‘ಬಿಗ್​ ಬಾಸ್​ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್​ ಉತ್ತರ ಏನು?

ಕಿಚ್ಚ ಸುದೀಪ್​ ಅವರು ಸತತ 11ನೇ ಸೀಸನ್​ನಲ್ಲಿ ಬಿಗ್​ ಬಾಸ್​ ಕನ್ನಡ ಶೋ ನಿರೂಪಣೆ ಮಾಡುತ್ತಿದ್ದಾರೆ. ಪ್ರತಿ ಬಾರಿಯೂ ಅವರಿಗೆ ಎಷ್ಟು ಸಂಭಾವನೆ ಸಿಕ್ಕಿದೆ ಎಂಬ ಪ್ರಶ್ನೆ ಎದುರಾಗುತ್ತದೆ. ಈ ಬಾರಿ ಕೂಡ ಆ ಪ್ರಶ್ನೆ ಮಿಸ್​ ಆಗಿಲ್ಲ. ಅದಕ್ಕೆ ಸುದೀಪ್​ ಅವರು ತಮ್ಮದೇ ರೀತಿಯಲ್ಲಿ ಉತ್ತರ ನೀಡಿದ್ದಾರೆ. ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಸುದ್ದಿಗೋಷ್ಠಿಯ ವಿಡಿಯೋ ಇಲ್ಲಿದೆ..

ಬಿಗ್ ಬಾಸ್ ನಿರೂಪಣೆಗೆ ಬ್ರೇಕ್ ಹಾಕಲು ನಿರ್ಧರಿಸಿದ್ದ ಸುದೀಪ್; ಮತ್ತೆ ಒಪ್ಪಿದ್ದು ಹೇಗೆ?

ಈ ವರ್ಷ ಬಿಗ್​ ಬಾಸ್​ ಕಾರ್ಯಕ್ರಮಕ್ಕೆ ಸುದೀಪ್ ನಿರೂಪಣೆ ಮಾಡುತ್ತಾರೋ ಇಲ್ಲವೋ ಎಂಬ ಅನುಮಾನ ಅನೇಕರಲ್ಲಿತ್ತು. ಅಂತಿಮವಾಗಿ ಆ ಅನುಮಾನ ಬಗೆಹರಿಯಿತು. ಸುದೀಪ್​ ಅವರೇ ಆ್ಯಂಕರ್​ ಎಂಬುದು ಖಚಿತವಾಯಿತು. ಆದರೆ ಈ ಬಾರಿ ಬಿಗ್​ ಬಾಸ್​ ನಿರೂಪಣೆಗೆ ಬ್ರೇಕ್​ ಹಾಕಬೇಕು ಎಂಬ ಆಲೋಚನೆ ಸ್ವತಃ ಸುದೀಪ್​ ಅವರ ಮನಸ್ಸಲ್ಲಿ ಬಂದಿತ್ತು. ಆ ಬಗ್ಗೆ ಅವರೇ ಮಾತನಾಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋ ಆರಂಭಕ್ಕೂ ಮೊದಲೇ ತಿಳಿಯುತ್ತೆ ಸ್ಪರ್ಧಿಗಳ ಹೆಸರು

ಇಷ್ಟು ವರ್ಷಗಳ ಕಾಲ ಬಿಗ್​ ಬಾಸ್​ ಕಾರ್ಯಕ್ರಮದ ಗ್ರ್ಯಾಂಡ್​ ಓಪನಿಂಗ್​ ದಿನದಂದು ಸ್ಪರ್ಧಿಗಳು ಯಾರು ಎಂಬುದು ಗೊತ್ತಾಗುತ್ತಿತ್ತು. ಆದರೆ ಈ ಬಾರಿ ಅದಕ್ಕೂ ಮುನ್ನವೇ ಕಂಟೆಸ್ಟೆಂಟ್​ಗಳ ಹೆಸರನ್ನು ಬಹಿರಂಗ ಮಾಡಲು ‘ಕಲರ್ಸ್​ ಕನ್ನಡ’ ವಾಹಿನಿ ನಿರ್ಧರಿಸಿದೆ. ಈ ಬಗ್ಗೆ ಕಿಚ್ಚ ಸುದೀಪ್​ ಅವರ ಸಮ್ಮುಖದಲ್ಲೇ ಬಿಸ್ನೆಸ್​ ಹೆಡ್​ ಪ್ರಶಾಂತ್ ನಾಯಕ್ ಅವರು ಮಾಹಿತಿ ನೀಡಿದ್ದಾರೆ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ