AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KMF Nandini

KMF Nandini

ಕರ್ನಾಟಕ ಹಾಲು ಒಕ್ಕೂಟ ಆರಂಭವಾಗಿ 50 ವರ್ಷ ಆಗಿದೆ. ವಿಶ್ವಬ್ಯಾಂಕ್​ನ ಡೇರಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲು ಸಹಾಯವಾಗಿ 1974-75ರಲ್ಲಿ ಕರ್ನಾಟಕ ಡೇರಿ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿತ್ತು. ಹತ್ತು ವರ್ಷದ ಬಳಿಕ ಅಂದರೆ 1984ರಲ್ಲಿ ಇದರ ಹೆಸರನ್ನು ಕರ್ನಾಟಕ ಮಿಲ್ಕ್ ಫೆಡರೇಶನ್ ಅಥವಾ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಎಂದು ಬದಲಿಸಲಾಯಿತು. ಕೆಎಂಎಫ್​ನಲ್ಲಿ ಇವತ್ತು ರಾಜ್ಯದ ವಿವಿಧ 14 ಹಾಲು ಒಕ್ಕೂಟಗಳು ಒಳಗೊಂಡಿವೆ. ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಪ್ರಾಥಮಿಕ ಹಾಲು ಸಹಕಾರ ಸಂಸ್ಥೆಗಳಿದ್ದು ಬೃಹತ್ ನೆಟ್ವರ್ಕ್ ಆಗಿ ರೂಪುಗೊಂಡಿದೆ. ನಂದಿನಿ ಎಂಬುದು ಕೆಎಂಎಫ್ ಉತ್ಪನ್ನಗಳ ಕಾರ್ಪೊರೇಟ್ ಬ್ರ್ಯಾಂಡಿಂಗ್ ಆಗಿದೆ. 1983ರಲ್ಲಿ ನಂದಿನಿ ಹೆಸರನ್ನು ತನ್ನ ಉತ್ಪನ್ನಗಳ ಬ್ರ್ಯಾಂಡ್ ಆಗಿ ಕೆಎಂಎಫ್ ಘೋಷಿಸಿತು

ಇನ್ನೂ ಹೆಚ್ಚು ಓದಿ

ರಾಬಕೊವಿ ಹಾಲು ಒಕ್ಕೂಟದ ಚುನಾವಣೆಯಲ್ಲಿ ಗೆಲುವು; ಮತ್ತೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಲಾಬಿ ಶುರು ಮಾಡಿದ ಭೀಮಾ ನಾಯ್ಕ್

ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕೆಎಂಎಫ್ ಮಾಜಿ ಅಧ್ಯಕ್ಷ ಎಲ್​.ಬಿ.ಪಿ. ಭೀಮಾ ನಾಯ್ಕ್ ಗೆಲುವು ಸಾಧಿಸಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುತ್ತಿದ್ದಂತೆ ಮತ್ತೊಮ್ಮೆ ಅವರು ಬಳ್ಳಾರಿಯಿಂದ ನಾನು ಕೆಎಂಎಫ್ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಎಂದಿದ್ದಾರೆ. ಈಗಾಗಲೇ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಾಯಕರ ನಡುವೆ ಲಾಬಿ ಜೋರಾಗಿದೆ.

ನಂದಿನಿ ಹಾಲಿಗೆ ಪರಿಸರಸ್ನೇಹಿ ಪ್ಯಾಕಿಂಗ್: ಇನ್ನು ಮೆಕ್ಕೆಜೋಳದಲ್ಲಿ ತಯಾರಾಗಲಿದೆ ಹಾಲಿನ ಪ್ಯಾಕೆಟ್!

ಕರ್ನಾಟಕದಲ್ಲಷ್ಟೇ ಅಲ್ಲದೇ ದೇಶ-ವಿದೇಶಗಳಲ್ಲೂ ಜನರ ಮೆಚ್ಚುಗೆ ಗಳಿಸಿರುವ ನಂದಿನಿ ಹಾಲಿಗೆ ಇನ್ಮುಂದೆ ಹೊಸ ರೂಪ ಬರುವ ಸೂಚನೆ ಸಿಕ್ಕಿದೆ. ಈಗ ಪಾಲಿಥಿನ್ ಕವರ್​​​ನಲ್ಲಿ ಪ್ಯಾಕ್ ಆಗಿ ಹೊರಬರುತ್ತಿರುವ ನಂದಿನಿ ಹಾಲಿಗೆ ಇದೀಗ ಪರಿಸರಸ್ನೇಹಿ ಟಚ್ ಕೊಡಲು ಬಮೂಲ್ ಮುಂದಾಗಿದೆ. ಅಲ್ಲದೆ, ದೇಶದಲ್ಲೇ ಮೊದಲ ಬಾರಿಗೆ ವಿಭಿನ್ನ ತಂತ್ರಜ್ಞಾನ ಬಳಸಿ ಪ್ಯಾಕ್ ಮಾಡುವ ಸುಳಿವು ನೀಡಿದೆ.

ಅಮುಲ್ ಡೈರಿ ಉತ್ಪನ್ನಗಳ ಮಾರಾಟಕ್ಕೆ ಕೇವಲ ಎರಡು ಮೆಟ್ರೋ ನಿಲ್ದಾಣಗಳನ್ನು ಮಾತ್ರ ನೀಡಲಾಗಿದೆ: ಶಿವಕುಮಾರ್

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಯುಎಸ್ ತೆರಳಲು ಕೇಂದ್ರ ಗೃಹ ಸಚಿವಾಲಯ ಅನುಮತಿ ನಿರಾಕರಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ತಾನು ಇಂಧನ ಸಚಿವನಾಗಿದ್ದಾಗಲೂ ವಿದೇಶದಲ್ಲಿ ನಡೆಯುತ್ತಿದ್ದ ಸಮ್ಮೇಳನವೊಂದರಲ್ಲಿ ಭಾಗಿಯಾಗದಂತೆ ತಡೆಯಲಾಗಿತ್ತು, ಆದರೆ ಅದೇ ಸಮ್ಮೇಳನದಲ್ಲಿ ಬಿಜೆಪಿ ನಿಯೋಗವೊಂದು ಭಾಗಿಯಾಗಲು ಅನುಮತಿ ನೀಡಲಾಗಿತ್ತು, ಕೇಂದ್ರದ ಧೋರಣೆಯೇ ಹಾಗೆ, ಕಾಮೆಂಟ್ ಮಾಡೋದು ಇಷ್ಟವಿಲ್ಲ ಎಂದರು.

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಉತ್ಪನ್ನ ಮಳಿಗೆಗೆ ಅನುಮತಿ: ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ಅಮುಲ್ ಉತ್ಪನ್ನ ಮಳಿಗೆಗಳನ್ನು ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಸ್ಥಾಪಿಸುವ ವಿಚಾರವಾಗಿ ಉಂಟಾಗಿರುವ ವಿವಾದದ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಕೇವಲ ಎರಡು ನಿಲ್ದಾಣಗಳಲ್ಲಿ ಮಾತ್ರ ಅಮುಲ್‌ಗೆ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಮೆಟ್ರೋ ನಿಲ್ದಾಣಗಳಲ್ಲಿ ಎಂಟು ಮಳಿಗೆಗಳಿಗೆ ಕೆಎಂಎಫ್‌ಗೆ ಟೆಂಡರ್ ನೀಡಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್​ ಮಳಿಗೆ ಸ್ಥಾಪನೆಗೆ ಮುಂದಾದ ಬಿಎಂಆರ್​ಸಿಎಲ್​: ಸಾರ್ವಜನಿಕರಿಂದ ಆಕ್ಷೇಪ

ಬೆಂಗಳೂರಿನ ಹತ್ತು ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್‌ ಮಳಿಗೆ ಸ್ಥಾಪನೆ ಕುರಿತು ಭಾರಿ ಚರ್ಚೆ ಏರ್ಪಟ್ಟಿದೆ. ಕರ್ನಾಟಕದ​ ನಂದಿನಿ ಇರುವಾಗ ಗುಜರಾತ್​ನ ಅಮುಲ್​ಗೆ ಏಕೆ ಅವಕಾಶ ಎಂದು ಆಕ್ರೋಶವಾಗುತ್ತಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ ಮಾಡಿದೆ. ​

ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸಿ ದಾಖಲೆ ಬರೆದ ಕೆಎಂಎಫ್​

ಹಾಲು ಸಂಗ್ರಹದಲ್ಲಿ ಕೆಎಂಎಫ್ ಮತ್ತೆ ದಾಖಲೆ ಬರೆದಿದೆ. ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹ ಮಾಡುವ ಮೂಲಕ ಕಳೆದ ವರ್ಷದ ತನ್ನದೇ ದಾಖಲೆಯನ್ನು ಹಿಂದಿಕ್ಕಿದೆ. ಮುಂಗಾರು ಮಳೆ ಚುರುಕು, ಹಸಿರು ಹುಲ್ಲು ಹಾಗೂ ಮೇವಿನ ಲಭ್ಯತೆಯ ಕಾರಣದಿಂದ ಹಾಲು ಉತ್ಪಾದನೆ ಹೆಚ್ಚಳವಾಗಿರುವುದು ಹಾಲು ಸಂಗ್ರಹ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಕೆಎಂಎಫ್ ತಿಳಿಸಿದೆ.

ಎಲ್ಲ ವಯಸ್ಕರಿಗೂ ಇಷ್ಟವಾಗುವ ಕೇಕ್​ ಉತ್ಪನ್ನಗಳನ್ನು ಬಿಡುಗಡೆ ಮಾಡಿದ KMF

ಅಂತಾರಾಷ್ಟ್ರೀಯ ಹಾಲು ದಿನಾಚರಣೆಯಂದು, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) 18 ಹೊಸ ಡೈರಿ ಉತ್ಪನ್ನಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಫಿನ್ಸ್, ಕೇಕ್‌ಗಳು (ಸ್ಲೈಸ್, ಸ್ಪಾಂಜ್, ಬಾರ್) ಸೇರಿವೆ. ವಿವಿಧ ರುಚಿಗಳಲ್ಲಿ ಲಭ್ಯವಿರುವ ಈ ಉತ್ಪನ್ನಗಳು ಗ್ರಾಹಕರಿಗೆ ಹೊಸ ಅನುಭವ ನೀಡಲಿವೆ ಎಂದು ಕೆಎಂಎಫ್ ವಿಶ್ವಾಸ ವ್ಯಕ್ತಪಡಿಸಿದೆ. ಕೆಎಂಎಫ್ ಪನ್ನೀರ್ ಖಾದ್ಯ ಸ್ಪರ್ಧೆಯನ್ನೂ ಆಯೋಜಿಸಿತ್ತು.

ಬಮೂಲ್ ಅಧ್ಯಕ್ಷನಾಗಲು ಚುನಾವಣೆ ಎದುರಿಸಬೇಕು ಮತ್ತು ಪಕ್ಷದ ನಾಯಕರ ಸಮ್ಮತಿ ಬೇಕು: ಡಿಕೆ ಸುರೇಶ್

ನಿನ್ನೆ ಹೊಸಪೇಟೆಯಲ್ಲಿ ಕರ್ನಾಟಕ ಸರ್ಕಾರ ನಡೆಸಿದ ಸಾಧನಾ ಸಮಾವೇಶದ ಬಗ್ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮಾಡಿರುವ ಕಟುವಾದ ಟ್ವೀಟ್​ಗೆ ಪ್ರತಿಕ್ರಿಯಿಸಿದ ಸುರೇಶ್, ಅವರು ಹೇಳಿರುವುದಕ್ಕೆ ಏನು ಪ್ರತಿಕ್ರಿಯೆ ನೀಡೋದು, ಅವರೊಬ್ಬ ಕಳ್ಸಾಮಿ, ಅವರಂಥ ಹಿಟ್ ಅಂಡ್ ರನ್ ಗಿರಾಕಿಯನ್ನು ಎಲ್ಲೂ ನೋಡಿಲ್ಲ ಎಂದು ಸುರೇಶ್ ಹೇಳಿದರು.

KMF Nandini: ರಾಜಸ್ಥಾನ, ಮಧ್ಯ ಪ್ರದೇಶದಲ್ಲೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಕೆಎಂಎಫ್​ ಸಿದ್ಧತೆ

ಕೆಎಂಎಫ್​ ನಂದಿನಿ ಉತ್ಪನ್ನಗಳು: ಇತ್ತೀಚೆಗಷ್ಟೇ ದೆಹಲಿ ಮಾರುಕಟ್ಟೆ ಪ್ರವೇಶಿಸಿ ಜನಮನ್ನಣೆ ಗಳಿಸುತ್ತಿರುವ ಕೆಎಂಎಫ್ ನಂದಿನಿ ಉತ್ಪನ್ನಗಳು ಶೀಘ್ರದಲ್ಲೇ ಉತ್ತರ ಭಾರತದ ಇನ್ನಷ್ಟು ರಾಜ್ಯಗಳಿಗೆ ವಿಸ್ತರಣೆಯಾಗುವ ನಿರೀಕ್ಷೆ ಇದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಕೆಎಂಎಫ್ ಚಿಂತನೆ ನಡೆಸಿದ್ದು, ಸಿದ್ಧತೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ.

Coffee Tea Price in Bangalore: ಸಾಕಾ, ಬೇಕಾ… ಹಾಲಿನ ದರ 4 ರೂ. ಹೆಚ್ಚಾದ್ರೆ ಕಾಫಿ, ಚಹಾ ಬೆಲೆ 5 ರೂ.ವರೆಗೆ ದುಬಾರಿ

ಬೆಂಗಳೂರಿನಲ್ಲಿ ಕಾಫಿ ಟೀ ಬೆಲೆ ಏರಿಕೆ: ನಂದಿನಿ ಹಾಲಿನ ದರ 4 ರೂಪಾಯಿ ಹೆಚ್ಚಾಗಿದ್ದಾಯ್ತು. ಇದೀಗ ಕಾಫಿ, ಚಹಾದ ಸರದಿ. ಹಾಲಿನ ದರ 4 ರೂ. ಹೆಚ್ಚಾದರೆ ಇದೀಗ ಕಾಫಿ, ಚಹಾ ಬೆಲೆ 5 ರೂ. ಏರಿಕೆಯಾಗಿದೆ! ಆ ಮೂಲಕ ಗ್ರಾಹಕರಿಗೆ ಶಾಕ್ ಎದುರಾಗಿದೆ. ಬೆಂಗಳೂರಿನ ಅನೇಕ ದರ್ಶಿನಿಗಳಲ್ಲಿ, ಹೋಟೆಲ್​ಗಳಲ್ಲಿ ಹಾಗೂ ಅಂಗಡಿಗಳಲ್ಲಿ ಕಾಫಿ ಮತ್ತು ಚಹಾ ದರ ಏರಿಕೆಯಾಗಿದೆ. 2, 3 ಹಾಗೂ 5 ರೂಪಾಯಿವರೆಗೆ ದರ ಏರಿಕೆ ಮಾಡಲಾಗಿದೆ.

ತಮ್ಮನ ಮಗನ ಸಿನಿಮಾ ಜೊತೆಗೆ ರೆಡ್ಡಿ ಮಗನ ಸಿನಿಮಾಕ್ಕೂ ಶುಭ ಹಾರೈಸಿದ ಶಿವಣ್ಣ
ತಮ್ಮನ ಮಗನ ಸಿನಿಮಾ ಜೊತೆಗೆ ರೆಡ್ಡಿ ಮಗನ ಸಿನಿಮಾಕ್ಕೂ ಶುಭ ಹಾರೈಸಿದ ಶಿವಣ್ಣ
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ