AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KMF Nandini

KMF Nandini

ಕರ್ನಾಟಕ ಹಾಲು ಒಕ್ಕೂಟ ಆರಂಭವಾಗಿ 50 ವರ್ಷ ಆಗಿದೆ. ವಿಶ್ವಬ್ಯಾಂಕ್​ನ ಡೇರಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲು ಸಹಾಯವಾಗಿ 1974-75ರಲ್ಲಿ ಕರ್ನಾಟಕ ಡೇರಿ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿತ್ತು. ಹತ್ತು ವರ್ಷದ ಬಳಿಕ ಅಂದರೆ 1984ರಲ್ಲಿ ಇದರ ಹೆಸರನ್ನು ಕರ್ನಾಟಕ ಮಿಲ್ಕ್ ಫೆಡರೇಶನ್ ಅಥವಾ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಎಂದು ಬದಲಿಸಲಾಯಿತು. ಕೆಎಂಎಫ್​ನಲ್ಲಿ ಇವತ್ತು ರಾಜ್ಯದ ವಿವಿಧ 14 ಹಾಲು ಒಕ್ಕೂಟಗಳು ಒಳಗೊಂಡಿವೆ. ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಪ್ರಾಥಮಿಕ ಹಾಲು ಸಹಕಾರ ಸಂಸ್ಥೆಗಳಿದ್ದು ಬೃಹತ್ ನೆಟ್ವರ್ಕ್ ಆಗಿ ರೂಪುಗೊಂಡಿದೆ. ನಂದಿನಿ ಎಂಬುದು ಕೆಎಂಎಫ್ ಉತ್ಪನ್ನಗಳ ಕಾರ್ಪೊರೇಟ್ ಬ್ರ್ಯಾಂಡಿಂಗ್ ಆಗಿದೆ. 1983ರಲ್ಲಿ ನಂದಿನಿ ಹೆಸರನ್ನು ತನ್ನ ಉತ್ಪನ್ನಗಳ ಬ್ರ್ಯಾಂಡ್ ಆಗಿ ಕೆಎಂಎಫ್ ಘೋಷಿಸಿತು

ಇನ್ನೂ ಹೆಚ್ಚು ಓದಿ

ಅಮಾಯಕ ಪಶುಗಳ ಸಾವಿಗೆ ಪರೋಕ್ಷ ಪ್ರೇರಣೆ? ನಂದಿನಿ ಪಶು ಆಹಾರ ಖರೀದಿಗೆ ರೈತರ ಮೇಲೆ ಒತ್ತಡದ ಆರೋಪ

ಬಮೂಲ್ ವ್ಯಾಪ್ತಿಯಲ್ಲಿ 1,600ಕ್ಕೂ ಹೆಚ್ಚು ಪಶುಗಳ ಸಾವು, ಕಳಪೆ ಪಶು ಆಹಾರ ಮಾರಾಟ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ನಂದಿನಿ ಪಶು ಆಹಾರ ಖರೀದಿಸಲು ರೈತರ ಮೇಲೆ ಒತ್ತಡ ಹೇರಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಆಹಾರ ಖರೀದಿಸದ ರೈತರಿಂದ ಹಾಲು ಸ್ವೀಕರಿಸದೆ ಒತ್ತಡ ಹೇರಲಾಗುತ್ತಿತ್ತು ಎಂದು ರೈತರು ಆರೋಪಿಸಿದ್ದಾರೆ.

ಹಸುಗಳಿಗೆ ವಿಷವುಣಿಸುತ್ತಿದೆಯಾ KMF? ಆಹಾರ ಘಟಕದಲ್ಲಿ ಗೋಲ್ಮಾಲ್ ಶಂಕೆ: ಆಡಿಯೋದಿಂದ ಬಯಲಾಯ್ತು ಸ್ಫೋಟಕ ವಿಚಾರ

ಕೆಎಂಎಫ್‌ನ ರಾಜಾನುಕುಂಟೆ ಪಶು ಆಹಾರ ಘಟಕದಲ್ಲಿ ಕಳಪೆ ಗುಣಮಟ್ಟದ ಮೇವು ಉತ್ಪಾದಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಪಶು ಆಹಾರ ನಿರ್ದೇಶಕ ಜಯಕುಮಾರ್ ಅವರ ಆಡಿಯೋ ಒಂದು ವೈರಲ್ ಆಗಿದ್ದು,ಅವ್ಯವಹಾರದ ಸುಳಿವು ದೊರೆತಿದೆ. ರೈತರು ಹಾಗೂ ಗ್ರಾಹಕರ ನಂಬಿಕೆಗೆ ಧಕ್ಕೆ ಉಂಟಾಗಿದೆ.

  • Kiran HV
  • Updated on: Aug 19, 2026
  • 2:36 pm

ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ಲೀಟರ್‌ಗೆ ₹10 ದರ ಏರಿಕೆಗೆ ಆಗ್ರಹ

Kolar News: ಕೋಲಾರದಲ್ಲಿ ಹಾಲು ಉತ್ಪಾದಕರು ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು. ಹಾಲಿನ ಖರೀದಿ ದರವನ್ನು ಲೀಟರ್‌ಗೆ 10 ರೂಪಾಯಿಗೆ ಹೆಚ್ಚಿಸುವುದು, ಪಶು ಆಹಾರದ ಬೆಲೆ ಇಳಿಸುವುದು ಹಾಗೂ ಪ್ರೋತ್ಸಾಹಧನವನ್ನು 5 ರೂ.ನಿಂದ 7 ರೂ.ಗೆ ಏರಿಸುವಂತೆ ಆಗ್ರಹಿಸಿದರು.

ಕಳಪೆ ನಂದಿನಿ ಪಶು ಆಹಾರದಿಂದ ಹಸುಗಳ ಸಾವಾಯ್ತಾ? ಕಳಪೆ ಗುಣಮಟ್ಟದ ಬಗ್ಗೆ ಗಂಭೀರ ಆರೋಪ

ಬೆಂಗಳೂರಿನ ಯಲಹಂಕ ಸಮೀಪದ ರಾಜಾನುಕುಂಟೆ ಪಶು ಆಹಾರ ಘಟಕದಲ್ಲಿ ತಯಾರಾಗುತ್ತಿರುವ ನಂದಿನಿ ಪಶು ಆಹಾರದ ಗುಣಮಟ್ಟದ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ. ಕಳಪೆ ಗುಣಮಟ್ಟದ ಕಚ್ಚಾ ವಸ್ತು ಬಳಸಿ ಆಹಾರ ತಯಾರಿಸಲಾಗಿದೆ ಎಂಬ ಆರೋಪದ ಬೆನ್ನಲ್ಲೇ, ಆಹಾರ ಸೇವಿಸಿದ ಬಳಿಕ ಪಶುಗಳ ಆರೋಗ್ಯ ಹದಗೆಟ್ಟಿದ್ದು, ಹಾಲಿನ ಇಳುವರಿ ಕುಸಿದಿದೆ ಎಂದು ರೈತರು ದೂರಿದ್ದಾರೆ. ಕಳೆದ ಎರಡು ತಿಂಗಳಲ್ಲಿ 1,600ಕ್ಕೂ ಹೆಚ್ಚು ಹಸುಗಳು ಮೃತಪಟ್ಟಿವೆ ಎಂಬ ಆರೋಪವೂ ಕೇಳಿಬಂದಿದೆ.

ಕೆಎಂಎಫ್ ಪಶು ಆಹಾರ ಘಟಕದಲ್ಲಿ ಗೋಲ್ಮಾಲ್: ಕಳಪೆ ಆಹಾರದಿಂದ 1,600 ಹಸುಗಳ ಸಾವಿನ ಶಂಕೆ!

ರಾಜಾನುಕುಂಟೆಯ ಕೆಎಂಎಫ್ ಪಶು ಆಹಾರ ಘಟಕದಲ್ಲಿ ಕಳಪೆ ಕಚ್ಚಾ ವಸ್ತುಗಳನ್ನು ಬಳಸಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಕಳಪೆ 'ನಂದಿನಿ ಪಶು ಆಹಾರ' ಸೇವನೆಯಿಂದ ಕಳೆದ ಎರಡು ತಿಂಗಳಲ್ಲಿ 1,600 ಕ್ಕೂ ಹೆಚ್ಚು ಹಸುಗಳು ಸಾವನ್ನಪ್ಪಿದ್ದು, ಜಾನುವಾರುಗಳ ಹಾಲಿನ ಇಳುವರಿ ಕುಸಿದಿದೆ. ಇದರಿಂದ ಬೆಂಗಳೂರು ಸುತ್ತಮುತ್ತಲಿನ ಹೈನುಗಾರರು ತೀವ್ರ ಆತಂಕಗೊಂಡಿದ್ದು, ಟನ್‌ಗಟ್ಟಲೆ ಆಹಾರವನ್ನು ಘಟಕಕ್ಕೆ ವಾಪಸ್ ಕಳುಹಿಸುತ್ತಿದ್ದಾರೆ.

ಸಾರ್ವಜನಿಕರಿಗೆ ಮತ್ತೊಂದು ದರ ಏರಿಕೆಯ ಬಿಸಿ: KMF ನಂದಿನಿ ತುಪ್ಪ, ಬೆಣ್ಣೆ ದರ ಹೆಚ್ಚಳ

KMF Nandini prices hiked: ಜಿಎಸ್‌ಟಿ ಇಳಿಕೆಯ ಹಿನ್ನಲೆಯಲ್ಲಿ ಕೆಲ ಉತ್ಪನ್ನಗಳ ಬೆಲೆಯಲ್ಲಿ ಇಳಿಕೆ ಮಾಡಿದ್ದರಿಂದ ಕರ್ನಾಟಕ ಹಾಲು ಮಹಾಮಂಡಳವು (ಕೆಎಂಎಫ್​​) ತುಪ್ಪ, ಬೆಣ್ಣೆ ದರವನ್ನು ಇಳಿಕೆ ಮಾಡಿತ್ತು. ಆದ್ರೆ, ಇದೀಗ ಮತ್ತೆ ದಿಢೀರನೇ ಏರಿಕೆ ಮಾಡಿದ್ದು, ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಲಿದೆ. ಹಾಗಾದ್ರೆ, ತುಪ್ಪ, ಬೆಣ್ಣೆ ಕೆಜಿಗೆ ಎಷ್ಟು ಏರಿಕೆಯಾಗಿದೆ? ಹೊಸ ದರ ಯಾವಾಗಿನಿಂದ ಜಾರಿಗೆ ಎನ್ನುವ ವಿವರ ಇಲ್ಲಿದೆ.

Nandini Milk Reel ನಂದಿನಿ ಸ್ಟ್ರಾಬೆರಿ ಹಾಲು ನಕಲಿ ಎಂದಿದ್ದ ವೈದ್ಯೆಗೆ ಹೈಕೋರ್ಟ್ ಶಾಕ್; ತನಿಖೆಗೆ ತಡೆ ನೀಡಲು ನಿರಾಕರಣೆ!

ನಂದಿನಿ ಸ್ಟ್ರಾಬೆರಿ ಫ್ಲೇವರ್ ಹಾಲು ನಕಲಿ ಮತ್ತು ಇದರಿಂದ ಕ್ಯಾನ್ಸರ್ ಬರುತ್ತದೆ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್ ಮಾಡಿದ್ದ ಬೆಂಗಳೂರಿನ ವೈದ್ಯೆಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ವೈದ್ಯೆ ವಿರುದ್ಧದ ಎಫ್‌ಐಆರ್ ತನಿಖೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಾಲಯ, ಸಾರ್ವಜನಿಕರಲ್ಲಿ ಆತಂಕ ಮೂಡಿಸಲು ಇನ್‌ಸ್ಟಾಗ್ರಾಮ್ ಬಳಸಬೇಡಿ ಎಂದು ಖಾರವಾಗಿ ಹೇಳಿದೆ. ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ.

ಇನ್ನೆರಡು ದಿನ ಕಳೆದ್ರೆ ನಂದಿನಿ ಉತ್ಪನ್ನಗಳೂ ಸಿಗೋದು ಡೌಟ್! ಕೆಎಂಎಫ್​ಗೂ ಎದುರಾಯ್ತು ಸಂಕಷ್ಟ

ಯುಗಾದಿ ಹಬ್ಬದ ಹೊತ್ತಲ್ಲೇ ನಂದಿನಿ ಉತ್ಪನ್ನಗಳಿಗೂ ಗ್ಯಾಸ್ ಸಂಕಷ್ಟ ಎದುರಾಗಿದೆ. ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್‌ನಿಂದ ಕೆಎಂಎಫ್‌ಗೆ ಕಮರ್ಷಿಯಲ್ ಸಿಲಿಂಡರ್ ಕೊರತೆ ಎದುರಾಗಿದ್ದು, ಇನ್ನೆರಡು ದಿನಗಳಲ್ಲಿ ಹಾಲಿನ ಉತ್ಪನ್ನಗಳ ತಯಾರಿಕೆ ಸ್ಥಗಿತಗೊಳ್ಳುವ ಭೀತಿ ಆವರಿಸಿದೆ. ಹಬ್ಬದ ಸಂಭ್ರಮಕ್ಕೆ ಈ ಬಿಸಿ ತಟ್ಟಲಿದೆಯೇ? ಪೂರ್ತಿ ವಿವರ ಇಲ್ಲಿದೆ.

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್‌ ಬರುತ್ತಾ? ಅಂತೆ-ಕಂತೆಗಳಿಗೆ ಕೆಎಂಎಫ್‌ ಎಂಡಿ ಸ್ಪಷ್ಟನೆ

ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್​​ ಕೆಎಂಎಫ್​​ ಉತ್ಪನ್ನಗಳು ಸೇವಿಸಿದರೆ ಕ್ಯಾನ್ಸರ್​ ಬರುತ್ತದೆ ಎಂಬ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ಜನ ಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ಸದ್ಯ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಇದು ಶುದ್ಧ ಸುಳ್ಳು ಎಂದಿದ್ದಾರೆ. ಜೊತೆಗೆ ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.​

Nandini Products: ಇನ್ಮುಂದೆ ಇಂದಿರಾ ಕ್ಯಾಂಟೀನ್​ಗಳಲ್ಲೂ ಸಿಗಲಿದೆ ನಂದಿನಿ ಉತ್ಪನ್ನ! ಜಿಬಿಎ ಹೊಸ ಪ್ಲಾನ್

ಬೆಂಗಳೂರಿನಲ್ಲಿ ಕಡಿಮೆ ದುಡ್ಡಿನಲ್ಲಿ ಬಡವರ ಹೊಟ್ಟೆ ತುಂಬಿಸುವ ತಾಣ ಎಂದರೆ ಅದು ಇಂದಿರಾ ಕ್ಯಾಂಟೀನ್. ತಿಂಡಿ, ಊಟ ಕೊಡುವ ಸಮಯ ಬಿಟ್ಟರೆ ಉಳಿದ ಸಂದರ್ಭಗಳಲ್ಲಿ ಇಂದಿರಾ ಕ್ಯಾಂಟೀನ್ ಖಾಲಿ ಹೊಡೆಯುತ್ತಿರುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್​ಗಳಲ್ಲಿ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕೊಡೋಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚಿಂತನೆ ನಡೆಸಿದೆ.

ನಂದಿನಿ ಬೂತ್​ಗಳಲ್ಲಿ ಬೇರೆ ಬ್ರಾಂಡ್ ಪ್ರಾಡಕ್ಟ್ ಗೆ ಬ್ರೇಕ್; ಕೆಎಂಎಫ್ ಹೊಸ ರೂಲ್ಸ್

ಕೆಎಂಎಫ್ ತನ್ನ ನಂದಿನಿ ಮಳಿಗೆಗಳಲ್ಲಿ ಬೇರೆ ಬ್ರ್ಯಾಂಡ್ ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ನಂದಿನಿ ಉತ್ಪನ್ನಗಳ ಜೊತೆ ಇತರೆ ಪ್ರಾಡಕ್ಟ್‌ಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆದಾರರಿಗೆ ನೋಟಿಸ್ ಜಾರಿ ಮಾಡಿದ್ದು, ಆದೇಶ ಉಲ್ಲಂಘಿಸಿದರೆ ಪರವಾನಗಿ ರದ್ದು ಮಾಡುವುದಾಗಿ ಎಚ್ಚರಿಸಿದೆ. ಇನ್ನು ಕೇವಲ ನಂದಿನಿ ಉತ್ಪನ್ನಗಳನ್ನೇ ಮಾರಾಟ ಮಾಡಬೇಕೆಂದು ಕೆಎಂಎಫ್ ತಿಳಿಸಿದೆ.

ಇನ್ಮುಂದೆ ಸೌದಿ ಅರೇಬಿಯಾ, ಅಮೆರಿಕ, ಆಸ್ಟ್ರೇಲಿಯಾದಲ್ಲೂ ‘KMF ನಂದಿನಿ’ ಹವಾ

ಸೌದಿ ಅರೇಬಿಯಾ, ಅಮೆರಿಕ, ಆಸ್ಟ್ರೇಲಿಯಾದಲ್ಲಿಯೂ ಇನ್ನು ಮುಂದೆ ಕೆಂಎಂಎಫ್​​ ನಂದಿನಿ ಹವಾ ಶೂರುವಾಗಲಿದೆ. ನಂದಿನಿ ತುಪ್ಪ ರಫ್ತು ಮಾಡುವ ವಾಹನಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕೃತ ನಿವಾಸ ಕಾವೇರಿ ಬಳಿ ಚಾಲನೆ ನೀಡಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ಹೊರ ರಾಜ್ಯ, ವಿದೇಶಗಳಲ್ಲಿಯೂ ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಕೇಳಿ ಬರುತ್ತಿರೋದು ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ.

ಸೂರತ್‌ನಲ್ಲಿ ಗೋಮಯ ರಾಖಿಗಳ ಮೂಲಕ ಪರಿಸರ ಸ್ನೇಹಿ ರಕ್ಷಾಬಂಧನ ಆಚರಣೆ
ಸೂರತ್‌ನಲ್ಲಿ ಗೋಮಯ ರಾಖಿಗಳ ಮೂಲಕ ಪರಿಸರ ಸ್ನೇಹಿ ರಕ್ಷಾಬಂಧನ ಆಚರಣೆ
ಲೋಕಾ ದಾಳಿಗೆ ಹೆದರಿ ರಾಜೀನಾಮೆ ಕೊಟ್ಟಿದ್ದ ವಿಶೇಷ ಭೂ ಸ್ವಾಧೀನ ಅಧಿಕಾರಿ!
ಲೋಕಾ ದಾಳಿಗೆ ಹೆದರಿ ರಾಜೀನಾಮೆ ಕೊಟ್ಟಿದ್ದ ವಿಶೇಷ ಭೂ ಸ್ವಾಧೀನ ಅಧಿಕಾರಿ!
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ