
KMF Nandini
ಕರ್ನಾಟಕ ಹಾಲು ಒಕ್ಕೂಟ ಆರಂಭವಾಗಿ 50 ವರ್ಷ ಆಗಿದೆ. ವಿಶ್ವಬ್ಯಾಂಕ್ನ ಡೇರಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲು ಸಹಾಯವಾಗಿ 1974-75ರಲ್ಲಿ ಕರ್ನಾಟಕ ಡೇರಿ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿತ್ತು. ಹತ್ತು ವರ್ಷದ ಬಳಿಕ ಅಂದರೆ 1984ರಲ್ಲಿ ಇದರ ಹೆಸರನ್ನು ಕರ್ನಾಟಕ ಮಿಲ್ಕ್ ಫೆಡರೇಶನ್ ಅಥವಾ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಎಂದು ಬದಲಿಸಲಾಯಿತು. ಕೆಎಂಎಫ್ನಲ್ಲಿ ಇವತ್ತು ರಾಜ್ಯದ ವಿವಿಧ 14 ಹಾಲು ಒಕ್ಕೂಟಗಳು ಒಳಗೊಂಡಿವೆ. ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಪ್ರಾಥಮಿಕ ಹಾಲು ಸಹಕಾರ ಸಂಸ್ಥೆಗಳಿದ್ದು ಬೃಹತ್ ನೆಟ್ವರ್ಕ್ ಆಗಿ ರೂಪುಗೊಂಡಿದೆ. ನಂದಿನಿ ಎಂಬುದು ಕೆಎಂಎಫ್ ಉತ್ಪನ್ನಗಳ ಕಾರ್ಪೊರೇಟ್ ಬ್ರ್ಯಾಂಡಿಂಗ್ ಆಗಿದೆ. 1983ರಲ್ಲಿ ನಂದಿನಿ ಹೆಸರನ್ನು ತನ್ನ ಉತ್ಪನ್ನಗಳ ಬ್ರ್ಯಾಂಡ್ ಆಗಿ ಕೆಎಂಎಫ್ ಘೋಷಿಸಿತು
KMF Nandini: ರಾಜಸ್ಥಾನ, ಮಧ್ಯ ಪ್ರದೇಶದಲ್ಲೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಕೆಎಂಎಫ್ ಸಿದ್ಧತೆ
ಕೆಎಂಎಫ್ ನಂದಿನಿ ಉತ್ಪನ್ನಗಳು: ಇತ್ತೀಚೆಗಷ್ಟೇ ದೆಹಲಿ ಮಾರುಕಟ್ಟೆ ಪ್ರವೇಶಿಸಿ ಜನಮನ್ನಣೆ ಗಳಿಸುತ್ತಿರುವ ಕೆಎಂಎಫ್ ನಂದಿನಿ ಉತ್ಪನ್ನಗಳು ಶೀಘ್ರದಲ್ಲೇ ಉತ್ತರ ಭಾರತದ ಇನ್ನಷ್ಟು ರಾಜ್ಯಗಳಿಗೆ ವಿಸ್ತರಣೆಯಾಗುವ ನಿರೀಕ್ಷೆ ಇದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಕೆಎಂಎಫ್ ಚಿಂತನೆ ನಡೆಸಿದ್ದು, ಸಿದ್ಧತೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ.
- Ganapathi Sharma
- Updated on: Apr 22, 2025
- 10:18 am
Coffee Tea Price in Bangalore: ಸಾಕಾ, ಬೇಕಾ… ಹಾಲಿನ ದರ 4 ರೂ. ಹೆಚ್ಚಾದ್ರೆ ಕಾಫಿ, ಚಹಾ ಬೆಲೆ 5 ರೂ.ವರೆಗೆ ದುಬಾರಿ
ಬೆಂಗಳೂರಿನಲ್ಲಿ ಕಾಫಿ ಟೀ ಬೆಲೆ ಏರಿಕೆ: ನಂದಿನಿ ಹಾಲಿನ ದರ 4 ರೂಪಾಯಿ ಹೆಚ್ಚಾಗಿದ್ದಾಯ್ತು. ಇದೀಗ ಕಾಫಿ, ಚಹಾದ ಸರದಿ. ಹಾಲಿನ ದರ 4 ರೂ. ಹೆಚ್ಚಾದರೆ ಇದೀಗ ಕಾಫಿ, ಚಹಾ ಬೆಲೆ 5 ರೂ. ಏರಿಕೆಯಾಗಿದೆ! ಆ ಮೂಲಕ ಗ್ರಾಹಕರಿಗೆ ಶಾಕ್ ಎದುರಾಗಿದೆ. ಬೆಂಗಳೂರಿನ ಅನೇಕ ದರ್ಶಿನಿಗಳಲ್ಲಿ, ಹೋಟೆಲ್ಗಳಲ್ಲಿ ಹಾಗೂ ಅಂಗಡಿಗಳಲ್ಲಿ ಕಾಫಿ ಮತ್ತು ಚಹಾ ದರ ಏರಿಕೆಯಾಗಿದೆ. 2, 3 ಹಾಗೂ 5 ರೂಪಾಯಿವರೆಗೆ ದರ ಏರಿಕೆ ಮಾಡಲಾಗಿದೆ.
- Ganapathi Sharma
- Updated on: Apr 3, 2025
- 12:09 pm
ಕಲ್ಯಾಣ ಕರ್ನಾಟಕ ರೈತರ 7 ಕೋಟಿ ರೂ. ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡ ಕೆಎಂಎಫ್
ಕರ್ನಾಟಕ ಸರ್ಕಾರ ನಂದಿನಿ ಹಾಲಿನ ದರವನ್ನು ಲೀಟರ್ಗೆ 4 ರೂಪಾಯಿ ಹೆಚ್ಚಿಸಿದೆ. ಕೆಎಂಎಫ್ನ ರಬಕೊವಿ ಒಕ್ಕೂಟ 7 ಕೋಟಿ ರೂಪಾಯಿ ಬಾಕಿ ಹಣವನ್ನು ಹಾಲು ಉತ್ಪಾದಕರಿಗೆ ನೀಡದ ಕಾರಣ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆದಿದೆ. ರಬಕೊವಿ ಅಧಿಕಾರಿಗಳು ಲೀಟರ್ಗೆ 1.50 ರೂಪಾಯಿ ಕಡಿತಗೊಳಿಸಿದ್ದಾರೆ. ರೈತರ ಮುತ್ತಿಗೆಯ ನಂತರ, ಅಧಿಕಾರಿಗಳು ಒಂದು ತಿಂಗಳೊಳಗೆ ಹಣ ಪಾವತಿಸುವ ಭರವಸೆ ನೀಡಿದ್ದಾರೆ.
- Vinayak Badiger
- Updated on: Mar 29, 2025
- 3:56 pm
ನಂದಿನಿ ಹಾಲಿನ ಬೆಲೆ ಏರಿಕೆ: ರೈತರಿಗೆ ಸಿಗೋದೆಷ್ಟು, ಲಾಭದಲ್ಲಿ ಸರ್ಕಾರದ ಪಾಲೆಷ್ಟು? ಇಲ್ಲಿದೆ ಮಾಹಿತಿ
ಕರ್ನಾಟಕದಲ್ಲಿ ನಂದಿನಿ ಹಾಲಿನ ಬೆಲೆ ಲೀಟರ್ಗೆ ನಾಲ್ಕು ರೂಪಾಯಿ ಏರಿಕೆಯಾಗಿದೆ. ಸರ್ಕಾರ ರೈತರಿಗೆ ನೇರವಾಗಿ ಹಣ ನೀಡುವುದಾಗಿ ಹೇಳಿದೆ. ಆದರೆ ರೈತರಿಗೆ ಕಡಿಮೆ ಹಣ ಸಿಗುತ್ತಿದೆ ಎಂಬ ಆರೋಪವಿದೆ. ಹಾಲಿನ ಖರೀದಿ ದರ ಎರಡು ಬಾರಿ ಇಳಿಕೆಯಾಗಿದೆ. ಗ್ರಾಹಕರಿಗೆ ಹೆಚ್ಚು ಬೆಲೆ, ರೈತರಿಗೆ ಕಡಿಮೆ ಲಾಭ, ಮತ್ತು ಸರ್ಕಾರಕ್ಕೆ ಭಾರಿ ಲಾಭ ಎಂಬ ಆರೋಪಗಳಿವೆ. ಹಾಲಿನ ದರ ಸಂಬಂಧಿತ ಅಂಕಿಅಂಶಗಳು ಇಲ್ಲಿವೆ.
- Rajendra Simha BL
- Updated on: Mar 28, 2025
- 1:10 pm
ಹಾಲು ಒಕ್ಕೂಟಗಳ ದರ ಏರಿಕೆ ಒತ್ತಡಕ್ಕೆ ಮಣಿಯದ ಸಿಎಂ: ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದ್ದೇನು?
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ನಂದಿನಿ ಹಾಲಿನ ದರ ಏರಿಕೆ ಕುರಿತ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. ಈ ವೇಳೆ ಒಕ್ಕೂಟದ ಬೇಡಿಕೆಗಳನ್ನು ಆಲಿಸಿ, ಹಾಲಿನ ಬೆಲೆಯೇರಿಕೆಯ ಸಂಬಂಧ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
- Web contact
- Updated on: Mar 24, 2025
- 7:36 pm
Nandini milk Price: ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ, ಮಹತ್ವದ ನಿರ್ಧಾರ ಸಾಧ್ಯತೆ
CM Siddaramaiah Meeting with KMF: ಮೆಟ್ರೋ, ಬಸ್, ವಿದ್ಯುತ್ ದರ ಏರಿಕೆಯಿಂದ ಕಂಗಾಲಾಗಿರುವ ಸಾರ್ವಜನಿಕರಿಗೆ ಮತ್ತೊಂದು ಆಘಾತ ನೀಡಲು ಕರ್ನಾಟಕ ಸರ್ಕಾರ ಸಿದ್ಧವಾಗಿದೆ. ನಂದಿನಿ ಹಾಲಿನ ಬೆಲೆ 5 ರೂ. ಹೆಚ್ಚಳ ಮಾಡುವ ಪ್ರಸ್ತಾವ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರ ಜತೆ ಸಭೆ ನಡೆಯಲಿದ್ದು, ಅಂತಿಮ ತೀರ್ಮಾನ ಪ್ರಕಟವಾಗುವ ಸಾಧ್ಯತೆ ಇದೆ.
- Ganapathi Sharma
- Updated on: Mar 24, 2025
- 10:43 am
ಹಾಲು ಉತ್ಪಾದಕರ 656 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡ ಸರ್ಕಾರ
ಕರ್ನಾಟಕ ಸರ್ಕಾರವು ಹಾಲು ಉತ್ಪಾದಕರಿಗೆ 656.07 ಕೋಟಿ ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿದೆ. ಆರ್ಥಿಕ ಇಲಾಖೆಯಿಂದ ಹಣ ಬಿಡುಗಡೆ ಆಗದಿರುವುದು ಇದಕ್ಕೆ ಕಾರಣ ಎಂದು ಪಶುಸಂಗೋಪನಾ ಸಚಿವರು ವಿಧಾನ ಪರಿಷತ್ಗೆ ತಿಳಿಸಿದ್ದಾರೆ. ಹಾಲಿನ ದರ ಹೆಚ್ಚಳದ ಬೇಡಿಕೆಯೂ ಇದೆ ಎಂದು ಅವರು ಹೇಳಿದ್ದು, ಸರ್ಕಾರ ಗ್ರಾಹಕರ ಅಭಿಪ್ರಾಯವನ್ನೂ ಪರಿಗಣಿಸಬೇಕೆಂದು ಸದಸ್ಯರು ಒತ್ತಾಯಿಸಿದ್ದಾರೆ.
- Prasanna Gaonkar
- Updated on: Mar 5, 2025
- 1:07 pm
ಮುಷ್ಕರದ ಎಚ್ಚರಿಕೆ ನೀಡಿದ ಕೆಎಂಎಫ್ ನೌಕರರು: ವೇತನ ಬಾಕಿ ಬಿಡುಗಡೆಗೆ ಆಗ್ರಹ
ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ಬಾಕಿ ವೇತನ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸುತ್ತಿದ್ದಾರೆ. ಫೆಬ್ರವರಿಯಿಂದ ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. 7ನೇ ವೇತನ ಆಯೋಗದ ಶಿಫಾರಸುಗಳನ್ನು ಸಂಪೂರ್ಣವಾಗಿ ಜಾರಿಗೆ ತರಲು ಒತ್ತಾಯಿಸಲಾಗಿದೆ. ಒಂದು ವೇಳೆ ಮುಷ್ಕರ ನಡೆದಲ್ಲಿ ರಾಜ್ಯದಲ್ಲಿ ನಂದಿನಿ ಹಾಲು ಪೂರೈಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
- Ganapathi Sharma
- Updated on: Jan 29, 2025
- 7:54 am
ಸಿಸಿ ಕ್ಯಾಮಮರಾ, ಸಿಬ್ಬಂದಿ ಸರ್ಪಗಾವಲು ಇದ್ದರೂ ಬಳ್ಳಾರಿ ಕೆಎಂಎಫ್ ಕಚೇರಿಯಲ್ಲಿ ನಡೆಯಿತು ವಾಮಾಚಾರ!
ಬಳ್ಳಾರಿ ನಗರದ ಕೆಎಂಎಫ್ ಆಡಳಿತ ಕಚೇರಿ ಮುಂದೆ ಕಿಡಿಗೇಡಿಗಳು ವಾಮಾಚಾರ ಮಾಡಿದ್ದು, ಬಳ್ಳಾರಿ ಜನತೆಯನ್ನು ಬೆಚ್ಚಿಬೀಳಿಸಿದೆ. ಸಿಸಿ ಕ್ಯಾಮರಾ, ಸಿಬ್ಬಂದಿಗಳ ಸರ್ಪಗಾವಲು ಮದ್ಯೆಯೇ ಕೆಎಂಎಫ್ ಆಡಳಿತ ಕಚೇರಿ ಮುಂದೆಯೇ ವಾಮಾಚಾರ ಮಾಡಿದ್ದಾರೆ. ಇದು ರಾಜಕೀಯ ಕಾರಣದಿಂದ ನಡೆಯಿತಾ ಅಥವಾ ಇದರ ಹಿಂದೆ ಬೇರೆ ಉದ್ದೇಶವಿತ್ತೇ ಎಂಬುದು ನಿಗೂಢವಾಗಿದೆ.
- Vinayak Badiger
- Updated on: Jan 21, 2025
- 7:30 am
ನೋಡಿ ದೆಹಲಿಯ 5 ಸ್ಟಾರ್ ಹೋಟೆಲ್ನಲ್ಲೂ ಕರ್ನಾಟಕದ ಬ್ರ್ಯಾಂಡ್ಗಳದ್ದೇ ಹವಾ; ಹೆಮ್ಮೆಯಿಂದ ಪೋಸ್ಟ್ ಶೇರ್ ಮಾಡಿದ ಕನ್ನಡಿಗ
ಕರ್ನಾಟಕದ ಹೆಮ್ಮೆಯ ನಂದಿನಿ ಬ್ರ್ಯಾಂಡ್ ಉತ್ಪನ್ನಗಳು ರಾಷ್ಟ್ರ ರಾಜಧಾನಿ ನವದೆಹಲಿಯವರೆಗೂ ತಲುಪಿರುವ ವಿಚಾರ ನಿಮ್ಗೆಲ್ಲರಿಗೂ ಗೊತ್ತೇ ಇದೆ ಅಲ್ವಾ. ಇಲ್ಲಿನ 5 ಸ್ಟಾರ್ ಹೋಟೆಲ್ಗಳಲ್ಲಿಯೂ ನಂದಿನಿ ಹಾಲನ್ನೇ ಉಪಯೋಗಿಸುತ್ತಿದ್ದು, ಈ ಹೆಮ್ಮೆಯ ವಿಚಾವನ್ನು ಕನ್ನಡಿಗರೊಬ್ಬರು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಪೋಸ್ಟ್ ಇದೀಗ ಸಖತ್ ವೈರಲ್ ಆಗುತಿದೆ.
- Malashree anchan
- Updated on: Jan 17, 2025
- 1:28 pm