AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KMF Nandini

KMF Nandini

ಕರ್ನಾಟಕ ಹಾಲು ಒಕ್ಕೂಟ ಆರಂಭವಾಗಿ 50 ವರ್ಷ ಆಗಿದೆ. ವಿಶ್ವಬ್ಯಾಂಕ್​ನ ಡೇರಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲು ಸಹಾಯವಾಗಿ 1974-75ರಲ್ಲಿ ಕರ್ನಾಟಕ ಡೇರಿ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿತ್ತು. ಹತ್ತು ವರ್ಷದ ಬಳಿಕ ಅಂದರೆ 1984ರಲ್ಲಿ ಇದರ ಹೆಸರನ್ನು ಕರ್ನಾಟಕ ಮಿಲ್ಕ್ ಫೆಡರೇಶನ್ ಅಥವಾ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಎಂದು ಬದಲಿಸಲಾಯಿತು. ಕೆಎಂಎಫ್​ನಲ್ಲಿ ಇವತ್ತು ರಾಜ್ಯದ ವಿವಿಧ 14 ಹಾಲು ಒಕ್ಕೂಟಗಳು ಒಳಗೊಂಡಿವೆ. ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಪ್ರಾಥಮಿಕ ಹಾಲು ಸಹಕಾರ ಸಂಸ್ಥೆಗಳಿದ್ದು ಬೃಹತ್ ನೆಟ್ವರ್ಕ್ ಆಗಿ ರೂಪುಗೊಂಡಿದೆ. ನಂದಿನಿ ಎಂಬುದು ಕೆಎಂಎಫ್ ಉತ್ಪನ್ನಗಳ ಕಾರ್ಪೊರೇಟ್ ಬ್ರ್ಯಾಂಡಿಂಗ್ ಆಗಿದೆ. 1983ರಲ್ಲಿ ನಂದಿನಿ ಹೆಸರನ್ನು ತನ್ನ ಉತ್ಪನ್ನಗಳ ಬ್ರ್ಯಾಂಡ್ ಆಗಿ ಕೆಎಂಎಫ್ ಘೋಷಿಸಿತು

ಇನ್ನೂ ಹೆಚ್ಚು ಓದಿ

Nandini Milk Reel ನಂದಿನಿ ಸ್ಟ್ರಾಬೆರಿ ಹಾಲು ನಕಲಿ ಎಂದಿದ್ದ ವೈದ್ಯೆಗೆ ಹೈಕೋರ್ಟ್ ಶಾಕ್; ತನಿಖೆಗೆ ತಡೆ ನೀಡಲು ನಿರಾಕರಣೆ!

ನಂದಿನಿ ಸ್ಟ್ರಾಬೆರಿ ಫ್ಲೇವರ್ ಹಾಲು ನಕಲಿ ಮತ್ತು ಇದರಿಂದ ಕ್ಯಾನ್ಸರ್ ಬರುತ್ತದೆ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್ ಮಾಡಿದ್ದ ಬೆಂಗಳೂರಿನ ವೈದ್ಯೆಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ವೈದ್ಯೆ ವಿರುದ್ಧದ ಎಫ್‌ಐಆರ್ ತನಿಖೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಾಲಯ, ಸಾರ್ವಜನಿಕರಲ್ಲಿ ಆತಂಕ ಮೂಡಿಸಲು ಇನ್‌ಸ್ಟಾಗ್ರಾಮ್ ಬಳಸಬೇಡಿ ಎಂದು ಖಾರವಾಗಿ ಹೇಳಿದೆ. ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ.

ಇನ್ನೆರಡು ದಿನ ಕಳೆದ್ರೆ ನಂದಿನಿ ಉತ್ಪನ್ನಗಳೂ ಸಿಗೋದು ಡೌಟ್! ಕೆಎಂಎಫ್​ಗೂ ಎದುರಾಯ್ತು ಸಂಕಷ್ಟ

ಯುಗಾದಿ ಹಬ್ಬದ ಹೊತ್ತಲ್ಲೇ ನಂದಿನಿ ಉತ್ಪನ್ನಗಳಿಗೂ ಗ್ಯಾಸ್ ಸಂಕಷ್ಟ ಎದುರಾಗಿದೆ. ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್‌ನಿಂದ ಕೆಎಂಎಫ್‌ಗೆ ಕಮರ್ಷಿಯಲ್ ಸಿಲಿಂಡರ್ ಕೊರತೆ ಎದುರಾಗಿದ್ದು, ಇನ್ನೆರಡು ದಿನಗಳಲ್ಲಿ ಹಾಲಿನ ಉತ್ಪನ್ನಗಳ ತಯಾರಿಕೆ ಸ್ಥಗಿತಗೊಳ್ಳುವ ಭೀತಿ ಆವರಿಸಿದೆ. ಹಬ್ಬದ ಸಂಭ್ರಮಕ್ಕೆ ಈ ಬಿಸಿ ತಟ್ಟಲಿದೆಯೇ? ಪೂರ್ತಿ ವಿವರ ಇಲ್ಲಿದೆ.

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್‌ ಬರುತ್ತಾ? ಅಂತೆ-ಕಂತೆಗಳಿಗೆ ಕೆಎಂಎಫ್‌ ಎಂಡಿ ಸ್ಪಷ್ಟನೆ

ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್​​ ಕೆಎಂಎಫ್​​ ಉತ್ಪನ್ನಗಳು ಸೇವಿಸಿದರೆ ಕ್ಯಾನ್ಸರ್​ ಬರುತ್ತದೆ ಎಂಬ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ಜನ ಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ಸದ್ಯ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಇದು ಶುದ್ಧ ಸುಳ್ಳು ಎಂದಿದ್ದಾರೆ. ಜೊತೆಗೆ ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.​

Nandini Products: ಇನ್ಮುಂದೆ ಇಂದಿರಾ ಕ್ಯಾಂಟೀನ್​ಗಳಲ್ಲೂ ಸಿಗಲಿದೆ ನಂದಿನಿ ಉತ್ಪನ್ನ! ಜಿಬಿಎ ಹೊಸ ಪ್ಲಾನ್

ಬೆಂಗಳೂರಿನಲ್ಲಿ ಕಡಿಮೆ ದುಡ್ಡಿನಲ್ಲಿ ಬಡವರ ಹೊಟ್ಟೆ ತುಂಬಿಸುವ ತಾಣ ಎಂದರೆ ಅದು ಇಂದಿರಾ ಕ್ಯಾಂಟೀನ್. ತಿಂಡಿ, ಊಟ ಕೊಡುವ ಸಮಯ ಬಿಟ್ಟರೆ ಉಳಿದ ಸಂದರ್ಭಗಳಲ್ಲಿ ಇಂದಿರಾ ಕ್ಯಾಂಟೀನ್ ಖಾಲಿ ಹೊಡೆಯುತ್ತಿರುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್​ಗಳಲ್ಲಿ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕೊಡೋಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚಿಂತನೆ ನಡೆಸಿದೆ.

ನಂದಿನಿ ಬೂತ್​ಗಳಲ್ಲಿ ಬೇರೆ ಬ್ರಾಂಡ್ ಪ್ರಾಡಕ್ಟ್ ಗೆ ಬ್ರೇಕ್; ಕೆಎಂಎಫ್ ಹೊಸ ರೂಲ್ಸ್

ಕೆಎಂಎಫ್ ತನ್ನ ನಂದಿನಿ ಮಳಿಗೆಗಳಲ್ಲಿ ಬೇರೆ ಬ್ರ್ಯಾಂಡ್ ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ನಂದಿನಿ ಉತ್ಪನ್ನಗಳ ಜೊತೆ ಇತರೆ ಪ್ರಾಡಕ್ಟ್‌ಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆದಾರರಿಗೆ ನೋಟಿಸ್ ಜಾರಿ ಮಾಡಿದ್ದು, ಆದೇಶ ಉಲ್ಲಂಘಿಸಿದರೆ ಪರವಾನಗಿ ರದ್ದು ಮಾಡುವುದಾಗಿ ಎಚ್ಚರಿಸಿದೆ. ಇನ್ನು ಕೇವಲ ನಂದಿನಿ ಉತ್ಪನ್ನಗಳನ್ನೇ ಮಾರಾಟ ಮಾಡಬೇಕೆಂದು ಕೆಎಂಎಫ್ ತಿಳಿಸಿದೆ.

ಇನ್ಮುಂದೆ ಸೌದಿ ಅರೇಬಿಯಾ, ಅಮೆರಿಕ, ಆಸ್ಟ್ರೇಲಿಯಾದಲ್ಲೂ ‘KMF ನಂದಿನಿ’ ಹವಾ

ಸೌದಿ ಅರೇಬಿಯಾ, ಅಮೆರಿಕ, ಆಸ್ಟ್ರೇಲಿಯಾದಲ್ಲಿಯೂ ಇನ್ನು ಮುಂದೆ ಕೆಂಎಂಎಫ್​​ ನಂದಿನಿ ಹವಾ ಶೂರುವಾಗಲಿದೆ. ನಂದಿನಿ ತುಪ್ಪ ರಫ್ತು ಮಾಡುವ ವಾಹನಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕೃತ ನಿವಾಸ ಕಾವೇರಿ ಬಳಿ ಚಾಲನೆ ನೀಡಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ಹೊರ ರಾಜ್ಯ, ವಿದೇಶಗಳಲ್ಲಿಯೂ ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಕೇಳಿ ಬರುತ್ತಿರೋದು ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ.

ಕೆಎಸ್​ಆರ್​ಟಿಸಿಯ ಈ ಬಸ್​ನಲ್ಲಿ ಇಂದಿನಿಂದ ಸಿಗುತ್ತೆ ನಂದಿನಿ ಸ್ನ್ಯಾಕ್ ಕಿಟ್!

ಕರ್ನಾಟಕದ ವಿವಿಧ ನಗರಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೆಎಸ್​ಆರ್​ಟಿಸಿ ಫ್ಲೈಬಸ್ ಇಂದಿನಿಂದ ಹೊಸದೊಂದು ಕೊಡುಗಡೆಯನ್ನು ಪ್ರಯಾಣಿಕರಿಗೆ ನೀಡುತ್ತಿದೆ. ನಂದಿನಿ ಸ್ನ್ಯಾಕ್ ಕಿಟ್ ವಿತರಣೆ ಇಂದಿನಿಂದ ಶುರುವಾಗುತ್ತಿದೆ. ಏನಿದು ಕೆಎಸ್​ಆರ್​​ಟಿಸಿಯ ಹೊಸ ಯೋಜನೆ? ನಂದಿನಿ ಸ್ನ್ಯಾಕ್ ಕಿಟ್ ಕೊಡುವ ಉದ್ದೇಶವೇನು? ಇಲ್ಲಿದೆ ವಿವರ.

Video: ನಂದಿನಿ ತುಪ್ಪದ ಬೆಲೆ ಏರಿಕೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೊಟ್ಟ ಸಮರ್ಥನೆ ಏನು?

ನಂದಿನಿ ತುಪ್ಪದ ಬೆಲೆ 610 ರೂ.ನಿಂದ 700ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ನಿರ್ಧಾರವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಈ ಬೆಲೆ ಹೆಚ್ಚಳವು ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸುತ್ತದೆ ಎಂಬುದಾಗಿ ಹೇಳಿದ್ದಾರೆ. ನಂದಿನಿ ತುಪ್ಪದ ಬೆಲೆ ಏಕೆ ಏಕಾಏಕಿ 90 ರೂಪಾಯಿ ಹೆಚ್ಚಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಇದು ರೈತರಿಗೆ ಒಳ್ಳೆದಾಗಲಿದೆ ಎಂದು ಹೇಳಿದ್ದಾರೆ.

Nandini Ghee Price: ನಂದಿನಿ ತುಪ್ಪದ ಬೆಲೆ ಹೆಚ್ಚಳ, ಜನತೆಗೆ ಮತ್ತೆ ದರ ಏರಿಕೆ ಶಾಕ್ ಕೊಟ್ಟ ಕೆಎಂಎಫ್

ನಂದಿನಿ ತುಪ್ಪದ ದರ ಏರಿಕೆ: ಕರ್ನಾಟಕ ರಾಜ್ಯದ ಜನತೆಗೆ ಕೆಎಂಎಫ್ ಮತ್ತೊಂದು ದರ ಏರಿಕೆಯ ಬಿಸಿ ಮುಟ್ಟಿಸಿದೆ. ದಿಢೀರ್ ಆಗಿ ನಂದಿನಿ ತುಪ್ಪದ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಜಿಎಸ್‌ಟಿ ಪರಿಷ್ಕರಣೆ ನಂತರ ದರದಲ್ಲಿ ತುಸು ಇಳಿಕೆ ಮಾಡಿದ್ದ ಕೆಎಂಎಫ್, ಇದೀಗ ಮತ್ತೆ ದರ ಏರಿಕೆ ಮಾಡಿ ಜನತೆಗೆ ಶಾಕ್ ನೀಡಿದೆ.

ದಸರಾ, ದೀಪಾವಳಿ ಧಮಾಕಾ: 18.8 ಟನ್ ಸ್ವೀಟ್ ಮಾರಾಟ ಮಾಡಿ ದಾಖಲೆ ಬರೆದ ಧಾರವಾಡ ಕೆಎಂಎಫ್​

ದಸರಾ ಮತ್ತು ದೀಪಾವಳಿ ಹಬ್ಬಗಳಲ್ಲಿ ಧಾರವಾಡ ಕೆಎಂಎಫ್ (ಧಾಮುಲ್) 18.8 ಟನ್ ಸಿಹಿ ಉತ್ಪನ್ನಗಳ ಮಾರಾಟ ಮಾಡಿದ್ದು, 80 ಲಕ್ಷ ರೂ. ಆದಾಯ ಗಳಿಸಿದೆ. ಧಾರವಾಡ ಪೇಡಾ, ಮೈಸೂರು ಪಾಕ್ ಸೇರಿದಂತೆ ವಿವಿಧ ನಂದಿನಿ ಸಿಹಿ ಉತ್ಪನ್ನಗಳಿಗೆ ಅಪಾರ ಬೇಡಿಕೆ ಹೆಚ್ಚಾಗಿತ್ತು. ಖಾಸಗಿ ಸಂಸ್ಥೆಗಳೊಂದಿಗೆ ಪೈಪೋಟಿ ನಡೆಸಿ ಕೆಎಂಎಫ್ ಸಾಧನೆ ಮಾಡಿದೆ.

ಸಿಹಿ ಉತ್ಪನ್ನಗಳ ಮಾರಾಟದಲ್ಲಿ ದಾಖಲೆ: ದಸರಾ, ದೀಪಾವಳಿಯಲ್ಲಿ ನಂದಿನಿ ಕಮಾಲ್

ಕರ್ನಾಟಕ ಮಿಲ್ಕ್ ಫೆಡರೇಶನ್ (ಕೆಎಂಎಫ್) ನಿಂದ ಮಾರಾಟ ಮಾಡಲ್ಪಟ್ಟ ಹಾಲು ಮತ್ತು ಹಾಲಿನ ಉತ್ಪನ್ನಗಳ ನಂದಿನಿ ಬ್ರ್ಯಾಂಡ್ ವಿಶ್ವದೆಲ್ಲೆಡೆ ಗಮನಸೆಳೆದಿದೆ. ನಂದಿನಿ ತನ್ನ ಬ್ರ್ಯಾಂಡ್ ಉತ್ಪನ್ನಗಳ ಘಮವನ್ನು ಪ್ರಪಂಚದ ಮೂಲೆ ಮೂಲೆಯಲ್ಲೂ ಪಸರಿಸಿದೆ. ಕೇವಲ ಸಿಹಿ ತಿನ್ನುವವರಿಗೆ ಮಾತ್ರವಲ್ಲದೇ ಡಯಾಬಿಟಿಸ್ ಗ್ರಾಹಕರಿಗೂ ಸಹ ನಂದಿನಿ ಸಕ್ಕರೆ ರಹಿತ ಸಿಹಿ ಬಿಡುಗಡೆ ಮಾಡಿದೆ. ಹೀಗೆ ನಂದಿನಿ ಬ್ರ್ಯಾಂಡ್ ತನ್ನ ಗುಣಮಟ್ಟದ ಉತ್ಪನ್ನಗಳಿಂದ ಹೆಸರು ಮಾಡಿದ್ದು, ಇದೀಗ ದೀಪಾವಳಿಯಲ್ಲಿ ಹೊಸ ಕಮಾಲ್ ಮಾಡಿದೆ.

ಮಧುಮೇಹಿಗಳಿಗೆ ಕೆಎಂಎಫ್ ದೀಪಾವಳಿ ಗಿಫ್ಟ್: ನಂದಿನಿ ಶುಗರ್ ಫ್ರೀ ಸಿಹಿತಿಂಡಿಗಳು ಮಾರುಕಟ್ಟೆಗೆ

ಕೆಎಂಎಫ್ ನಂದಿನಿ ಬ್ರ್ಯಾಂಡ್ ಅಡಿಯಲ್ಲಿ ಮಧುಮೇಹಿಗಳಿಗಾಗಿ ಸಕ್ಕರೆ ರಹಿತ ಸಿಹಿತಿಂಡಿಗಳನ್ನು ದೀಪಾವಳಿಗೆ ಬಿಡುಗಡೆ ಮಾಡಿದೆ. ಆರೋಗ್ಯ ಕಾಳಜಿ ಹಾಗೂ ಹೆಚ್ಚುತ್ತಿರುವ ಬೇಡಿಕೆಯ ಹಿನ್ನೆಲೆಯಲ್ಲಿ ಈ ಉತ್ಪನ್ನಗಳನ್ನು ಪರಿಚಯಿಸಲಾಗಿದೆ. ನಂದಿನಿ ಖೋವಾ ಗುಲಾಬ್ ಜಾಮೂನ್, ಶುದ್ಧ ಪೇಡಾ, ಬೆಲ್ಲದ ಬರ್ಫಿ ಸೇರಿದಂತೆ ಶುಗರ್ ಫ್ರೀ ಸಿಹಿ ಲಭ್ಯವಿದೆ.

ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!