AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections

Lok Sabha Elections

ಸಾರ್ವತ್ರಿಕ ಚುನಾವಣೆ ಎಂದು ಕರೆಯಲ್ಪಡುವ ಲೋಕಸಭೆ ಚುನಾವಣೆಗಳು ಭಾರತದಲ್ಲಿ ನಿರ್ಣಾಯಕ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಆಗಿದೆ. ಪ್ರತಿ ಐದು ವರ್ಷಗಳಿಗೊಮ್ಮೆ ನಡೆಯುವ ಈ ಚುನಾವಣೆಗಳು ಭಾರತದ ಸಂಸತ್ತಿನ ಕೆಳಮನೆಯಾದ ಲೋಕಸಭೆಯ ಸದಸ್ಯರ ಚುನಾವಣೆ ಆಗಿದೆ. ಅತೀ ಹೆಚ್ಚು ಲೋಕಸಭಾ ಸ್ಥಾನವನ್ನು ಗೆದ್ದ ಪಕ್ಷವು ಕೇಂದ್ರದಲ್ಲಿ ಸರ್ಕಾರ ರೂಪಿಸುತ್ತದೆ. ವಿವಿಧ ಹಿನ್ನೆಲೆ ಮತ್ತು ಪ್ರದೇಶಗಳ ಅರ್ಹ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೆ, ವಿವಿಧ ರಾಜಕೀಯ ಪಕ್ಷಗಳನ್ನು ಪ್ರತಿನಿಧಿಸುವ ಅಭ್ಯರ್ಥಿಗಳಿಗೆ ತಮ್ಮ ಮತಗಳನ್ನು ಚಲಾಯಿಸುತ್ತಾರೆ. ಚುನಾವಣಾ ಫಲಿತಾಂಶಗಳ ಆಧಾರದಲ್ಲಿ ಕೇಂದ್ರ ಸರ್ಕಾರದ ರಚನೆ ಆಗುತ್ತಿದ್ದು, ಈ ಸರ್ಕಾರ ನೀತಿಗಳು, ಶಾಸನಗಳನ್ನು ರೂಪಿಸುತ್ತವೆ. ಚುನಾವಣಾ ಆಯೋಗವು ನ್ಯಾಯಯುತ ಮತ್ತು ಪಾರದರ್ಶಕ ನಡವಳಿಕೆಯನ್ನು ನೋಡಿಕೊಳ್ಳುತ್ತದೆ. ಈ ಚುನಾವಣೆಗಳು ಭಾರತೀಯ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುತ್ತಿದ್ದು,ಜನಸಂಖ್ಯೆಯ ವೈವಿಧ್ಯಮಯ ಅಭಿಪ್ರಾಯಗಳು ಮತ್ತು ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತವೆ.

ಇನ್ನೂ ಹೆಚ್ಚು ಓದಿ

ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತದಾನ; ‘ಅಟಂ ಬಾಂಬ್’ ಸಿಡಿಸಿದ ರಾಹುಲ್ ಗಾಂಧಿ

ಪ್ರಮುಖ ರಾಜ್ಯಗಳ ಲೋಕಸಭಾ ಚುನಾವಣೆಯಲ್ಲಿ ನಕಲಿ ಮತದಾನ ಅಥವಾ ವೋಟ್ ಚೋರಿ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಅದನ್ನು ಚುನಾವಣಾ ಆಯೋಗ ನಿರಾಕರಿಸಿತ್ತು. ಆದರೆ, ಕಾಂಗ್ರೆಸ್​ನಿಂದ ಈ ಬಗ್ಗೆ ಸಂಪೂರ್ಣವಾಗಿ ಸಂಶೋಧನೆ ಮಾಡಿಸಲಾಗಿದ್ದು, ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರವೊಂದರಲ್ಲೇ 6.5 ಲಕ್ಷ ಒಟ್ಟು ಮತಗಳ ಪೈಕಿ 1,00,250 ನಕಲಿ ಮತ ಚಲಾವಣೆಯಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆ ಅನುಷ್ಠಾನಗೊಳಿಸುವುದು ಹೇಗೆ? ಸರ್ಕಾರದ ಪ್ಲ್ಯಾನ್ ಬಗ್ಗೆ ಇಲ್ಲಿದೆ ಸಮಗ್ರ ಮಾಹಿತಿ

ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ, ದೇಶದಲ್ಲಿ ಇದು ಜಾರಿಯಾಗುವುದು ಹೇಗೆ? ಪ್ರಕ್ರಿಯೆಗಳೇನು? ಸಮಿತಿಯ ಶಿಫಾರಸುಗಳೇನು? ಈ ಮೊದಲು ಭಾರತದಲ್ಲಿ ಎಲ್ಲಾ ಚುನಾವಣೆಗಳು ಒಟ್ಟಿಗೆ ನಡೆದ ನಿದರ್ಶನಗಳಿವೆಯೇ?, ಯಾವ ಯಾವ ರಾಷ್ಟ್ರದ ಚುನಾವಣಾ ಪ್ರಕ್ರಿಯೆಗಳು ಹೇಗಿರುತ್ತವೆ, ಸಂವಿಧಾನದ ಯಾವ ವಿಧಿಗಳ ತಿದ್ದುಪಡಿ ಅಗತ್ಯವಿದೆ ಎಂಬುದರ ಕುರಿತ ಸಮಗ್ರ ವರದಿ ಇಲ್ಲಿದೆ.

ಕರ್ನಾಟಕ ಕಾಂಗ್ರೆಸ್​ನ ಇಬ್ಬರು ಸಂಸದರ ಆಯ್ಕೆ ಅಸಿಂಧು ಕೋರಿ ಕೋರ್ಟ್​ಗೆ ಅರ್ಜಿ

ಲೋಕಸಭಾ ಚುನಾವಣೆ ಮುಗಿದಿದ್ದು ಆಯ್ತು. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಸರ್ಕಾರ ರಚನೆ ಆಗಿದ್ದು ಆಯ್ತು. ಆದ್ರೆ, ಇದೀಗ ಕರ್ನಾಟಕದಲ್ಲಿ ಇಬ್ಬರು ಕಾಂಗ್ರೆಸ್​ ಸಂಸದರ ಆಯ್ಕೆ ಅಸಿಂಧುಗೊಳಿಸುವಂತೆ ಬಿಜೆಪಿ ಪರಾಜಿತ ಅಭ್ಯರ್ಥಿಗಳು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಎಂಪಿ ಎಲೆಕ್ಷನ್​ಗೆ ನಿಗಮದ 20 ಕೋಟಿ ರೂ. ಬಳಕೆ ಮಾಡಿಕೊಂಡ್ರಾ ನಾಗೇಂದ್ರ? ಪುಷ್ಟಿ ನೀಡುತ್ತಿದೆ ಹಗರಣದ ಟೈಮ್ ಲೈನ್

ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಆಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ನಾಗೇಂದ್ರನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಒಂದೊಂದೆ ಸ್ಫೋಟಕ ಮಾಹಿತಿ ಹೊರಬರುತ್ತಿವೆ. ತಾವು ಉಸ್ತುವಾರಿ ಹೊತ್ತಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮಾಜಿ ಸಚಿವ ಬಿ.ನಾಗೇಂದ್ರ 20 ಕೋಟಿ ರೂಪಾಯಿ ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಅಂಶ ಬೆಳಕಿಗೆ ಬಂದಿದೆ.

ತಮ್ಮ ಲೋಕಸಭಾ ಭಾಷಣದ ಭಾಗಗಳ ಮರುಸೇರ್ಪಡೆಗೆ ಒತ್ತಾಯ; ಸ್ಪೀಕರ್‌ಗೆ ಪತ್ರ ಬರೆದ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು (ಮಂಗಳವಾರ) ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರವನ್ನು ಬರೆದಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ತಮ್ಮ ಚೊಚ್ಚಲ ಭಾಷಣದ ಭಾಗವನ್ನು ಮರುಸ್ಥಾಪಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

Lok Sabha Session: ಮೋದಿ, ಬಿಜೆಪಿ, ಆರ್‌ಎಸ್‌ಎಸ್ ಎಂದರೆ ಹಿಂದೂ ಸಮಾಜವಲ್ಲ; ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

Rahul Gandhi: ಲೋಕಸಭೆಯಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಸೋಮವಾರ) ವಾಗ್ದಾಳಿ ನಡೆಸಿದ್ದಾರೆ. ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು ಹಗಲಿರುಳು ಹಿಂಸಾಚಾರ ಮತ್ತು ದ್ವೇಷದಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಆಡಳಿತ ಪಕ್ಷದ ನಾಯಕರಿಂದ ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಡಿಕೆ ಸುರೇಶ್​ ಸೋಲಿಸಿದ್ದು ಸಿದ್ದರಾಮಯ್ಯ: ಉರಿಯುವ ಬೆಂಕಿಗೆ ತುಪ್ಪ ಸುರಿದ ಅಶೋಕ್

ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್​​ನ ಡಿಕೆ ಸುರೇಶ್​ ಸೋಲುಕಂಡಿದ್ದು, ರಾಜ್ಯ ರಾಜಕಾರಣದಲ್ಲಿ ಅಚ್ಚರಿಕೆಗೆ ಕಾರಣವಾಗಿದೆ. ಅಲ್ಲದೇ ಡಿಕೆ ಸುರೇಶ್​ ಅವರ ಸೋಲಿಗೆ ಕಾರಣವೇನು ಎನ್ನುವುದರ ಬಗ್ಗೆ ಇನ್ನೂ ಪಕ್ಷದಲ್ಲಿ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯ ವಿಪಕ್ಷ ನಾಯಕ ಅಶೋಕ್​ ಅವರು ಡಿಕೆ ಸುರೇಶ್​ ಸೋಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್​ನಲ್ಲಿ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.

Parliament Session: ಲೋಕಸಭೆ, ರಾಜ್ಯಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಗುರುವಾರ) ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ರಾಜ್ಯಸಭೆಯ 264ನೇ ಅಧಿವೇಶನ ಇಂದು (ಜೂನ್ 27) ಆರಂಭವಾಗಲಿದೆ. ನೂತನ ಸರ್ಕಾರ ರಚನೆಯಾದ ನಂತರ ಮೊದಲ ಬಾರಿಗೆ ರಾಷ್ಟ್ರಪತಿ ಮುರ್ಮು ಇಂದು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

Lok Sabha Speaker Election: ಇಂದು ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಚುನಾವಣೆ; ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ ಸಂಸತ್

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ಇದುವರೆಗೂ ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದ ಉದಾಹರಣೆಗಳೇ ಇಲ್ಲ. ಇದೇ ಮೊದಲ ಬಾರಿಗೆ ಇಂದು (ಬುಧವಾರ) ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಮಂಗಳವಾರವೇ ಬಿಜೆಪಿ, ಕಾಂಗ್ರೆಸ್, ಟಿಡಿಪಿ ತನ್ನ ಸಂಸದರಿಗೆ ಇಂದು ಕಡ್ಡಾಯವಾಗಿ ಹಾಜರಿರುವಂತೆ ವಿಪ್ ಜಾರಿ ಮಾಡಿವೆ.

ಸ್ಪೀಕರ್ ಹುದ್ದೆಗೆ ಇಂಡಿಯಾ ಬ್ಲಾಕ್ ನಾಮನಿರ್ದೇಶನದ ಬಗ್ಗೆ ನಮ್ಮೊಂದಿಗೆ ಚರ್ಚಿಸಿಲ್ಲ; ಟಿಎಂಸಿ

ಲೋಕಸಭಾ ಸ್ಪೀಕರ್ ಹುದ್ದೆಯ ಬಗ್ಗೆ ಎನ್​ಡಿಎ ಮತ್ತು ಇಂಡಿಯಾ ಬ್ಲಾಕ್ ನಡುವೆ ವಾಗ್ವಾದಗಳು ನಡೆದಿದ್ದು, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಬುಧವಾರ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದ್ದು, ಇಂಡಿಯಾ ಬ್ಲಾಕ್​ನ ಅಭ್ಯರ್ಥಿಯಾಗಿ ಕೆ. ಸುರೇಶ್ ಅವರನ್ನು ಆಯ್ಕೆ ಮಾಡುವ ಮುನ್ನ ತಮ್ಮ ಬಳಿ ಸಮಾಲೋಚನೆಯನ್ನೇ ನಡೆಸಿಲ್ಲ ಎಂದು ಟಿಎಂಸಿ ಆರೋಪಿಸಿದೆ.

Rahul Gandhi: ಲೋಕಸಭೆ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್​ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆಯೂ ಹಲವು ಬಾರಿ ರಾಹುಲ್ ಗಾಂಧಿ ಅವರೇ ವಿಪಕ್ಷ ನಾಯಕನಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಇಂಡಿಯಾ ಬ್ಲಾಕ್ ಸಭೆಯಲ್ಲಿ ಇತರೆ ಪಕ್ಷಗಳು ಕೂಡ ಇದಕ್ಕೆ ಬೆಂಬಲ ನೀಡಿದ್ದವು. ಆದರೆ, ಇಂದು ಈ ಕುರಿತು ಕಾಂಗ್ರೆಸ್ ಅಧಿಕೃತವಾಗಿ ಮಾಹಿತಿ ನೀಡಿದೆ.

ಲೋಕಸಭೆ ಸ್ಪೀಕರ್ ಚುನಾವಣೆ; ನಾಳೆ ಸದನಕ್ಕೆ ಹಾಜರಾಗುವಂತೆ ಬಿಜೆಪಿ, ಕಾಂಗ್ರೆಸ್ ಸಂಸದರಿಗೆ ವಿಪ್ ಜಾರಿ

Lok Sabha Speaker Election: ಭಾರತಕ್ಕೆ ಸ್ವಾತಂತ್ರ್ಯ ಸಿಗುವುದಕ್ಕೂ ಮೊದಲು ಸ್ಪೀಕರ್ ಹುದ್ದೆಗೆ ಚುನಾವಣೆಗಳು ಸಾಮಾನ್ಯವಾಗಿದ್ದರೂ, ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ಸ್ವತಂತ್ರ ಭಾರತದಲ್ಲಿ ಕೇವಲ 3 ಬಾರಿ ಸಚುನಾವಣೆ ಏರ್ಪಡಿಸಲಾಗಿತ್ತು. ಇದುವರೆಗೂ 1952, 1967 ಮತ್ತು 1976 ರಲ್ಲಿ ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಸ್ಪರ್ಧೆ ನಡೆದಿದೆ. ಇದೀಗ ಬುಧವಾರ ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ