AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG

LPG

ಎಲ್​ಪಿಜಿ ಎಂದರೆ ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್. ಹೆಸರೇ ಸೂಚಿಸುವಂತೆ ಇದು ಧ್ರವೀಕರಿಸಿದ ಪೆಟ್ರೋಲಿಯಂ ಅನಿಲ. ಪ್ರೊಪೇನ್, ಪ್ರೊಪಿಲೀನ್ ಇತ್ಯಾದಿ ಹೈಡ್ರೋಕಾರ್ಬನ್ ಗ್ಯಾಸ್​ಗಳ ಮಿಶ್ರಣ ಇರುವ ಇಂಧನವಾಗಿದೆ. ಪೆಟ್ರೋಲಿಯಂನ ಉಪ ಉತ್ಪನ್ನಗಳಲ್ಲಿ ಇದೂ ಒಂದು. ಎಲ್​ಪಿಜಿ ಬಹೂಪಯೋಗಿ ಆಗಿರುವ ಇಂಧನವಾಗಿದೆ. ಅಡುಗೆಯ ಇಂಧನವಾಗಿ ಇದನ್ನು ಬಳಸಬಹುದು. ವಾಹನಗಳಿಗೆ ಇಂಧನವಾಗಿ ಬಳಸಬಹುದು. ರಾಸಾಯನಿಕ ಕಾರ್ಖಾನೆಗಳಲ್ಲಿ ಇದರ ಉಪಯೋಗ ಇದೆ. ಇದು ಮಾಲಿನ್ಯಕಾರಕ ಹೊಗೆಯನ್ನು ಹೊರಸೂಸುವುದಿಲ್ಲ. ಹೀಗಾಗಿ, ಅಡುಗೆ ಅನಿಲವಾಗಿ ಎಲ್ಲೆಡೆ ವ್ಯಾಪಕವಾಗಿ ಬಳಕೆಯಲ್ಲಿ ಇದೆ. ಸೌದೆ ಒಲೆ, ಕೆರೋಸಿನ್​ಗೆ ಹೋಲಿಸಿದರೆ ಎಲ್​ಪಿಜಿ ಉತ್ತಮ ಆಯ್ಕೆ. ಭಾರತದಲ್ಲಿ ಎಲ್​ಪಿಜಿಗಳನ್ನು ಸಿಲಿಂಡರ್​​ಗಳಲ್ಲಿ ತುಂಬಸಿ ಸರಬರಾಜು ಮಾಡಲಾಗುತ್ತದೆ. ಗೃಹ ಬಳಕೆಗೆ ಪ್ರತ್ಯೇಕ ಸಿಲಿಂಡರ್​ಗಳಿವೆ. ಹೋಟೆಲ್ ಇತ್ಯಾದಿ ವಾಣಿಜ್ಯ ಬಳಕೆಗೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್​ಗಳಿವೆ. ಅಡುಗೆಗೆ ಬಳಸುವ ಎಲ್​ಪಿಜಿಗೆ ಸರ್ಕಾರ ಸಬ್ಸಿಡಿ ನೀಡುತ್ತದೆ. ಕಮರ್ಷಿಯಲ್ ಎಲ್​ಪಿಜಿಗೆ ಸಬ್ಸಿಡಿ ಇರುವುದಿಲ್ಲ.

ಇನ್ನೂ ಹೆಚ್ಚು ಓದಿ

ಹೋಟೆಲ್‌ ಗ್ರಾಹಕರಿಗೆ ಮತ್ತೊಂದು ಶಾಕ್: ಇನ್ಮುಂದೆ ಊಟ-ತಿಂಡಿಗೆ ಹೆಚ್ಚು ಹೊತ್ತು ಕಾದು ಕುಳಿತುಕೊಳ್ಳುವುದು ಅನಿವಾರ್ಯ!

ಯುದ್ಧದ ಹಿನ್ನೆಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಅಭಾವ ಉಂಟಾಗಿದ್ದು, ಬೆಂಗಳೂರು ಸೇರಿ ಕರ್ನಾಟಕದ ಹೋಟೆಲ್‌ಗಳಲ್ಲಿ ಅಡುಗೆ ತಯಾರಿಕೆಗೆ ಸೌದೆ ಒಲೆ ಬಳಸಲಾಗುತ್ತಿದೆ. ಇದರಿಂದಾಗಿ ಸರ್ವೀಸ್ ಸಮಯದಲ್ಲಿ ವಿಳಂಬವಾಗುತ್ತಿದ್ದು, ಗ್ರಾಹಕರು ಊಟ-ತಿಂಡಿಗಾಗಿ ಕನಿಷ್ಠ 15 ರಿಂದ 20 ನಿಮಿಷ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಇದರೊಂದಿಗೆ, ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾದಂತಾಗಿದೆ.

ಬೆಂಗಳೂರಲ್ಲಿ ಎಲ್‌ಪಿಜಿ ಹಾಹಾಕಾರ: ಆಟೋ ಚಾಲಕರ ಬೆನ್ನಲ್ಲೇ ಇನ್ಶೂರೆನ್ಸ್ ಏಜೆಂಟರೂ ಕಂಗಾಲು! ಯಾಕೆ ಗೊತ್ತಾ?

ಬೆಂಗಳೂರಿನಲ್ಲಿ ಎಲ್‌ಪಿಜಿ ಅಭಾವದಿಂದಾಗಿ ಆಟೋ ಚಾಲಕರು ಕಂಗಾಲಾಗಿದ್ದು, ದುಡಿಮೆ ಇಲ್ಲದೆ ಕಂಗಾಲಾಗಿದ್​ದರೆ ಜತೆಗೆ ಇದೀಗ ವಿಮೆ ಕಟ್ಟಲೂ ಹಣವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಇನ್ಶೂರೆನ್ಸ್ ಏಜೆಂಟ್‌ಗಳ ಮೇಲೂ ಪರಿಣಾಮ ಬೀರಿದ್ದು, ಸಾವಿರಾರು ಆಟೋಗಳ ವಿಮೆ ನವೀಕರಣವಾಗದೆ ಬಾಕಿ ಉಳಿದಿವೆ. ಇದು ವಿಮೆ ಏಜೆಂಟ್​​ಗಳನ್ನೂ ಸಂಕಷ್ಟಕ್ಕೆ ದೂಡಿದೆ.

ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್

ದಿನಸಿ ಕಿಟ್ ವಿತರಣೆ ಮಾಡುವ ಮೂಲಕ ವಿನೋದ್ ರಾಜ್ ಅವರು ಮಾನವೀಯತೆ ಮೆರೆದಿದ್ದಾರೆ. ‘ತಾಯಿ ಇದ್ದಿದ್ದರೆ ಇದಕ್ಕಿಂತಲೂ ದೊಡ್ಡ ಸಹಾಯ ಮಾಡುತ್ತಿದ್ದರು. ನನ್ನ ಕೈಯಲ್ಲಿ ಆಗಿದ್ದನ್ನು ಮಾಡಿದ್ದೇನೆ’ ಎಂದು ಅವರು ಈ ವೇಳೆ ಹೇಳಿದರು. ತಮ್ಮ ನೆರವಿಗೆ ಬಂದ ವಿನೋದ್ ರಾಜ್ ಅವರಿಗೆ ಆಟೋ ಚಾಲಕರು ಧನ್ಯವಾದ ತಿಳಿಸಿದರು.

ಐದು ಕಿಲೋ ಎಲ್​ಪಿಜಿ ಸಿಲಿಂಡರ್ ಹಂಚಿಕೆ ಎರಡು ಪಟ್ಟು ಹೆಚ್ಚಳ; ವಲಸೆ ಕಾರ್ಮಿಕರಿಗೆ ನಿರಾಳ

Allocation of 5 KG LPG cylinders doubled: ಗ್ಯಾಸ್ ಲಭ್ಯತೆ ಇಲ್ಲದ ಕಾರಣಕ್ಕೆ ದೇಶದ ವಿವಿಧೆಡೆಯಿಂದ ವಲಸೆ ಕಾರ್ಮಿಕರು ತಂತಮ್ಮ ಊರುಗಳಿಗೆ ಮರಳುತ್ತಿರುವುದು ವರದಿಯಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ಮತ್ತು ಕಾರ್ಮಿಕರಿಗೆ ಗ್ಯಾಸ್ ಲಭ್ಯತೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರವು ಫ್ರೀ ಟ್ರೇಡ್ ಎಲ್​ಪಿಜಿ ಸಿಲಿಂಡರ್​ಗಳ ಪೂರೈಕೆ ಹೆಚ್ಚಿಸಿದೆ. ನಿತ್ಯದ ಈ ಗ್ಯಾಸ್ ಹಂಚಿಕೆಯನ್ನು 2 ಪಟ್ಟು ಏರಿಸಲಾಗಿದೆ.

ಆಟೋ ಗ್ಯಾಸ್ ಎಮರ್ಜೆನ್ಸಿ: ಎಲ್‌ಪಿಜಿ ಬಂಕ್‌ಗಳ ಎದುರು ಮುಂದುವರಿದ ಸರದಿ ಸಾಲು, ಕರ್ನಾಟಕ ಬಂದ್ ಎಚ್ಚರಿಕೆ

Auto LPG Crisis: ಕರ್ನಾಟಕದಲ್ಲಿ ಆಟೋ ಗ್ಯಾಸ್ ಅಭಾವ ತೀವ್ರಗೊಂಡಿದ್ದು, ಚಾಲಕರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸಚಿವ ಕೆ.ಹೆಚ್. ಮುನಿಯಪ್ಪ ಕೇಂದ್ರಕ್ಕೆ ಪತ್ರ ಬರೆದಿದ್ದರೆ, ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದತ್ತ ಬೆರಳು ತೋರಿಸಿದ್ದಾರೆ. ಏಪ್ರಿಲ್ 9ರಂದು ಕರಾಳ ದಿನ ಆಚರಿಸಲು ನಿರ್ಧರಿಸಿರುವ ಆಟೋ ಸಂಘಟನೆಗಳು, ಸಮಸ್ಯೆ ಬಗೆಹರಿಯದಿದ್ದರೆ ಕರ್ನಾಟಕ ಬಂದ್ ಮಾಡುವ ಎಚ್ಚರಿಕೆ ನೀಡಿವೆ.

ರಾಜ್ಯದಲ್ಲಿ ಆಟೋ ಎಲ್​ಪಿಜಿ ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯ್ಲ್! ಡ್ಯುಯಲ್ ಫ್ಯೂಯಲ್ ಬಳಕೆಗೆ ಸಲಹೆ

ಕರ್ನಾಟಕದಲ್ಲಿ ತೀವ್ರ ಆಟೋ ಎಲ್​ಪಿಜಿ ಕೊರತೆಯಿಂದ ಚಾಲಕರು ಸಂಕಷ್ಟದಲ್ಲಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್​ಪಿಜಿ ಕೊರತೆ, ಖಾಸಗಿ ಪಂಪ್‌ಗಳ ಸ್ಥಗಿತದಿಂದ ಇಂಧನಕ್ಕಾಗಿ ಪರದಾಡುತ್ತಿದ್ದಾರೆ. ಈ ಹಿನ್ನೆಲೆ ಇಂಡಿಯನ್ ಆಯ್ಲ್ ಆಟೋ ಎಲ್​ಪಿಜಿ ಪೂರೈಕೆ ಹೆಚ್ಚಿಸುವುದಾಗಿ ಹೇಳಿದೆ. ಅಲ್ಲದೆ ಡ್ಯುಯಲ್ ಫ್ಯೂಯಲ್ ವ್ಯವಸ್ಥೆ ಹೊಂದಿರುವವರು ತಾತ್ಕಾಲಿಕವಾಗಿ ಪೆಟ್ರೋಲ್ ಬಳಸುವಂತೆ ಸಲಹೆ ನೀಡಿದೆ.

ಬೆಂಗಳೂರಿನಲ್ಲಿ ಆಟೋ ಗ್ಯಾಸ್ ಹಾಹಾಕಾರ: ಕಿಲೋಮೀಟರ್‌ಗಟ್ಟಲೆ ರಿಕ್ಷಾ ಸಾಲು! ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ ಎಚ್ಚರಿಕೆ

ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ಗ್ಯಾಸ್ ಅಭಾವ ತೀವ್ರಗೊಂಡಿದ್ದು, ಚಾಲಕರು ಮಧ್ಯರಾತ್ರಿಯಿಂದಲೇ ಬಂಕ್‌ಗಳ ಮುಂದೆ ಕಿಲೋಮೀಟರ್‌ಗಟ್ಟಲೆ ಕ್ಯೂ ನಿಲ್ಲುತ್ತಿದ್ದಾರೆ. ಚಾಲಕರು ಪ್ರತಿದಿನ 700-800 ರೂ. ನಷ್ಟ ಅನುಭವಿಸುತ್ತಿದ್ದಾರೆ ಎನ್ನಲಾಗಿದೆ. ಸಮಸ್ಯೆ ಬಗೆಹರಿಸದಿದ್ದರೆ ಸಚಿವ ಕೆಎಚ್ ಮುನಿಯಪ್ಪ ಅವರ ಮನೆಗೆ ಮುತ್ತಿಗೆ ಹಾಕುವುದಾಗಿ ಪೀಸ್ ಆಟೋ ಸಂಘಟನೆ ಎಚ್ಚರಿಕೆ ನೀಡಿದೆ.

ಗ್ಯಾಸ್ ಇಲ್ಲಾ ಅಂತ ಇಂಡಕ್ಷನ್​ನಲ್ಲಿ ಅಡುಗೆ ಮಾಡುತ್ತಿದ್ದೀರಾ? ಈ ಅಂಶಗಳು ನಿಮಗೆ ಗೊತ್ತಿರಲೇ ಬೇಕು!

ಇರಾನ್- ಇಸ್ರೇಲ್ ಯುದ್ಧದ ಪರಿಣಾಮ ದೇಶದೆಲ್ಲೆಡೆ ಎಲ್​ಪಿಜಿ ಗ್ಯಾಸ್ ಸಿಲಿಂಡರ್​ನ ಕೊರತೆಯಾಗಿದೆ. ವಾಣಿಜ್ಯ ಸಿಲಿಂಡರ್​ಗಳ ಕೊರತೆಯಿಂದ ಹೊಟೇಲ್​ಗಳ ಮಾಲೀಕರು ಪರದಾಡುತ್ತಿದ್ದು, ಗ್ರಹಬಳಕೆ ಗ್ಯಾಸ್​ ಸಹ ಕೈಗೆಟಕದಂತಾಗಿದೆ. ಈ ಹಿನ್ನೆಲೆ ಸಾರ್ವಜನಿಕರು ಇಂಡಕ್ಷನ್ ಸ್ಟೌವ್‌ಗಳ ಬಳಕೆಯನ್ನು ಹೆಚ್ಚಿಸಿದ್ದು, ಜನರು ಯಾವೆಲ್ಲಾ ಅಂಶಗಳನ್ನು ಗಮನದಲ್ಲಿಡಬೇಕು ಎಂದು ಬೆಸ್ಕಾಂ ಮಾಹಿತಿ ಹಂಚಿಕೊಂಡಿದೆ.

ಕರ್ನಾಟಕದಾದ್ಯಂತ ಆಟೋ ಗ್ಯಾಸ್ ಹಾಹಾಕಾರ: ಬಂಕ್‌ಗಳ ಮುಂದೆ ಕಿಲೋಮೀಟರ್‌ಗಟ್ಟಲೆ ಕ್ಯೂ, ಚಾಲಕರ ಬದುಕು ದುಸ್ತರ

ಕರ್ನಾಟಕದಾದ್ಯಂತ ಎಲ್‌ಪಿಜಿ ಗ್ಯಾಸ್ ಅಭಾವದಿಂದಾಗಿ ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನಲ್ಲಿ ಗ್ಯಾಸ್​ಗಾಗಿ ಕಿಲೋಮೀಟರ್‌ಗಟ್ಟಲೆ ಕ್ಯೂ ನಿಂತಿರುವ ಚಾಲಕರು, ದುಡಿಮೆ ಇಲ್ಲದೆ ಕಣ್ಣೀರಿಡುತ್ತಿದ್ದಾರೆ. ಬಳ್ಳಾರಿಯಲ್ಲಿ ಬಾಣಂತಿ ಮಗು ಆಸ್ಪತ್ರೆಗೆ ತೆರಳಲು ಆಟೋ ಇಲ್ಲದೆ ಪರದಾಡುವಂತಾಗಿದೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ಆಟೋ ಚಾಲಕರು ಆಗ್ರಹಿಸಿದ್ದಾರೆ.

ಸ್ಮಶಾನದಲ್ಲಿ ಸಿಲಿಂಡರ್ ದಂಧೆ

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನೆಪವೊಡ್ಡಿ ಗ್ಯಾಸ್ ಕೊರತೆ ಸುಳ್ಳು ಭಯ ಹುಟ್ಟಿಸಿ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ದಂಧೆಯನ್ನು ತೆಲಂಗಾಣ ಪೊಲೀಸರು ಭೇದಿಸಿದ್ದಾರೆ. ಪಂಜಗುಟ್ಟ ಸ್ಮಶಾನದಲ್ಲಿ ಸಿಲಿಂಡರ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿ, ₹2,100 ಮೌಲ್ಯದ ವಾಣಿಜ್ಯ ಸಿಲಿಂಡರ್‌ಗಳನ್ನು 6,000 ರೂ.ಗೆ ಮಾರಾಟ ಮಾಡಲಾಗುತ್ತಿತ್ತು. ದಾಳಿಯಲ್ಲಿ 414 ಸಿಲಿಂಡರ್‌ಗಳು ವಶ, 10 ಮಂದಿ ಬಂಧಿತರಾಗಿದ್ದಾರೆ.

ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಮಧ್ಯೆ ಆಘಾತ! ಸಿಲಿಂಡರ್​ ಸಾಗಿಸ್ತಿದ್ದ ಲಾರಿ ಪಲ್ಟಿ

ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಶೇಖರಯ್ಯ ಅಜ್ಜನ ಮಠದ ಸಮೀಪ ರಸ್ತೆ ಪಕ್ಕದ ಜಮೀನಿಗೆ ಉರುಳಿದ ಲಾರಿಯಿಂದ ಗ್ಯಾಸ್ ಸಿಲಿಂಡರ್‌ಗಳು ಚೆಲ್ಲಾಪಿಲ್ಲಿಯಾಗಿದ್ದು, ಕೆಲಕಾಲ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ರೋಣ ಠಾಣೆಯಲ್ಲಿ ದಾಖಲಾಗಿದೆ.

ಭಾರತದಲ್ಲಿ ಪೆಟ್ರೋಲ್, ಎಲ್​ಪಿಜಿ, ನ್ಯಾಚುರಲ್ ಗ್ಯಾಸ್ ಪೂರೈಕೆ ಹೇಗಿದೆ? ಸರ್ಕಾರದಿಂದ ಮಾಹಿತಿ

Adequate stocks of petrol and diesel available at all Petrol Pumps in country: ಇರಾನ್ ಯುದ್ಧ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಭಾರತದಲ್ಲೂ ತೈಲ ಮತ್ತು ಅನಿಲ ಪೂರೈಕೆ ಬಗ್ಗೆ ಜನರಿಗೆ ಆತಂಕ ಮುಂದುವರಿದಿದೆ. ಆದರೆ, ಸರ್ಕಾರವು ಪೆಟ್ರೋಲ್, ಡೀಸಲ್, ಎಲ್​ಪಿಜಿ, ಎಲ್​ಎನ್​ಜಿ ದಾಸ್ತಾನು ಸಾಕಷ್ಟಿದೆ ಎಂದು ಮತ್ತೊಮ್ಮೆ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದೆ.

ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಜಬ್ಬಾರ್, ನಸೀರ್ ರಾಜೀನಾಮೆಗೆ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್!
ಜಬ್ಬಾರ್, ನಸೀರ್ ರಾಜೀನಾಮೆಗೆ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್!
ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ
ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ