AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG

LPG

ಎಲ್​ಪಿಜಿ ಎಂದರೆ ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್. ಹೆಸರೇ ಸೂಚಿಸುವಂತೆ ಇದು ಧ್ರವೀಕರಿಸಿದ ಪೆಟ್ರೋಲಿಯಂ ಅನಿಲ. ಪ್ರೊಪೇನ್, ಪ್ರೊಪಿಲೀನ್ ಇತ್ಯಾದಿ ಹೈಡ್ರೋಕಾರ್ಬನ್ ಗ್ಯಾಸ್​ಗಳ ಮಿಶ್ರಣ ಇರುವ ಇಂಧನವಾಗಿದೆ. ಪೆಟ್ರೋಲಿಯಂನ ಉಪ ಉತ್ಪನ್ನಗಳಲ್ಲಿ ಇದೂ ಒಂದು. ಎಲ್​ಪಿಜಿ ಬಹೂಪಯೋಗಿ ಆಗಿರುವ ಇಂಧನವಾಗಿದೆ. ಅಡುಗೆಯ ಇಂಧನವಾಗಿ ಇದನ್ನು ಬಳಸಬಹುದು. ವಾಹನಗಳಿಗೆ ಇಂಧನವಾಗಿ ಬಳಸಬಹುದು. ರಾಸಾಯನಿಕ ಕಾರ್ಖಾನೆಗಳಲ್ಲಿ ಇದರ ಉಪಯೋಗ ಇದೆ. ಇದು ಮಾಲಿನ್ಯಕಾರಕ ಹೊಗೆಯನ್ನು ಹೊರಸೂಸುವುದಿಲ್ಲ. ಹೀಗಾಗಿ, ಅಡುಗೆ ಅನಿಲವಾಗಿ ಎಲ್ಲೆಡೆ ವ್ಯಾಪಕವಾಗಿ ಬಳಕೆಯಲ್ಲಿ ಇದೆ. ಸೌದೆ ಒಲೆ, ಕೆರೋಸಿನ್​ಗೆ ಹೋಲಿಸಿದರೆ ಎಲ್​ಪಿಜಿ ಉತ್ತಮ ಆಯ್ಕೆ. ಭಾರತದಲ್ಲಿ ಎಲ್​ಪಿಜಿಗಳನ್ನು ಸಿಲಿಂಡರ್​​ಗಳಲ್ಲಿ ತುಂಬಸಿ ಸರಬರಾಜು ಮಾಡಲಾಗುತ್ತದೆ. ಗೃಹ ಬಳಕೆಗೆ ಪ್ರತ್ಯೇಕ ಸಿಲಿಂಡರ್​ಗಳಿವೆ. ಹೋಟೆಲ್ ಇತ್ಯಾದಿ ವಾಣಿಜ್ಯ ಬಳಕೆಗೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್​ಗಳಿವೆ. ಅಡುಗೆಗೆ ಬಳಸುವ ಎಲ್​ಪಿಜಿಗೆ ಸರ್ಕಾರ ಸಬ್ಸಿಡಿ ನೀಡುತ್ತದೆ. ಕಮರ್ಷಿಯಲ್ ಎಲ್​ಪಿಜಿಗೆ ಸಬ್ಸಿಡಿ ಇರುವುದಿಲ್ಲ.

ಇನ್ನೂ ಹೆಚ್ಚು ಓದಿ

ರಾಯಗಢ ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!

ಪನ್ವೇಲ್ ತಾಲೂಕಿನ ಎಂಐಡಿಸಿ ಚಾವಣೆಯಲ್ಲಿರುವ ಹೆಚ್‌ಪಿಸಿಎಲ್ ಪಾತಳಗಂಗಾ ಎಲ್‌ಪಿಜಿ ಬಾಟ್ಲಿಂಗ್ ಪ್ಲಾಂಟ್‌ಗೆ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ಪ್ರವಾಹದ ನೀರು ನುಗ್ಗಿದೆ. ಪ್ರವಾಹದ ರಭಸಕ್ಕೆ ಪ್ಲಾಂಟ್‌ನ ರಕ್ಷಣಾ ಗೋಡೆ ಕುಸಿದು ಬಿದ್ದಿದ್ದರಿಂದ, ಅಲ್ಲಿ ಸಂಗ್ರಹಿಸಿಡಲಾಗಿದ್ದ ಸುಮಾರು 3,000 ಸಿಲಿಂಡರ್‌ಗಳು ಕೊಚ್ಚಿಹೋಗಿವೆ. ಸೇತುವೆಯ ಮೇಲಿಂದ ನೂರಾರು ಸಿಲಿಂಡರ್‌ಗಳು ನದಿಯಲ್ಲಿ ತೇಲುತ್ತಾ ಹೋಗುತ್ತಿದ್ದ ದೃಶ್ಯವನ್ನು ಸ್ಥಳೀಯರು ಆಶ್ಚರ್ಯದಿಂದ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ಹಲವರು ನೀರಿನಲ್ಲಿ ಬಗ್ಗಿ ಆ ಸಿಲಿಂಡರ್​​ಗಳನ್ನು ಎತ್ತಿಕೊಂಡು ಹೋಗಿದ್ದಾರೆ.

ನಯಾರದಲ್ಲಿ ಪೆಟ್ರೋಲ್, ಡೀಸಲ್ ಬೆಲೆ ಭರ್ಜರಿ ಇಳಿಕೆ; ವಿಮಾನ ಇಂಧನವೂ ಅಗ್ಗ

Nayara slashes petrol price by Rs 5 per litre: ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ವಿವಿಧ ಇಂಧನ ಬೆಲೆಗಳನ್ನು ಕಡಿಮೆ ಮಾಡಲಾಗಿದೆ. ಖಾಸಗಿ ನಯಾರ ಎನರ್ಜಿ ಕಂಪನಿ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಇಳಿಸಿದೆ. ಎಲ್ಲಾ ತೈಲ ಮಾರುಕಟ್ಟೆ ಕಂಪನಿಗಳು ಎಟಿಎಫ್ ಇಂಧನದ ಬೆಲೆ ತಗ್ಗಿಸಿವೆ. ಕಮರ್ಷಿಯಲ್ ಎಲ್​ಪಿಜಿ ಬೆಲೆಗಳೂ ಇಳಿದಿವೆ.

LPG Cylinder Price: ವಾಣಿಜ್ಯ ಸಿಲಿಂಡರ್ ದರದಲ್ಲಿ 183.50 ರೂ ಇಳಿಕೆ! ಹೋಟೆಲ್ ಮಾಲೀಕರಿಗೆ ಬಿಗ್ ರಿಲೀಫ್

LPG Commercial Cylinder Price in Bangalore: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 183.50 ರೂ. ಕಡಿತವಾಗಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, 19 ಕೆಜಿ ಸಿಲಿಂಡರ್ ಬೆಲೆ 2,930 ರೂ.ಗೆ ಇಳಿಕೆಯಾಗಿದೆ. ಜುಲೈ 1 ರಿಂದಲೇ ಹೊಸ ದರ ಜಾರಿಗೆ ಬಂದಿದ್ದು, ನಿಮ್ಮ ನಗರದ ಇಂದಿನ ಪರಿಷ್ಕೃತ ದರಗಳು ಹಾಗೂ ಗೃಹಬಳಕೆ ಸಿಲಿಂಡರ್ ಬೆಲೆಯ ಸಂಪೂರ್ಣ ವಿವರ ಇಲ್ಲಿದೆ.

ಜೂನ್ 30 ಡೈಡ್​ಲೈನ್: ಎಲ್​ಪಿಜಿ ಇಕೆವೈಸಿ, ಐಟಿಆರ್ ಪರಿಶೀಲನೆ ಇತ್ಯಾದಿ ಹಣಕಾಸು ಕಾರ್ಯಗಳಿಗೆ ನಾಳೆಯ ಗಡುವು

Financial tasks to be done by June 30th: ಕೆಲ ಪ್ರಮುಖ ಹಣಕಾಸು ಕಾರ್ಯಗಳಿಗೆ ಜೂನ್ 30ರವರೆಗೆ ಕಾಲಾವಕಾಶ ಇದೆ. ಎಲ್​ಪಿಜಿ ಗ್ಯಾಸ್ ಸೌಲಭ್ಯ ಪಡೆಯುತ್ತಿರುವವರು ಇ-ಕೆವೈಸಿ ಮಾಡಿಸಬೇಕಾಗುತ್ತದೆ, ಗಮನಿಸಬೇಕು. ಇನ್ಕಮ್ ಟ್ಯಾಕ್ಸ್ ರಿಟರ್ನ್ ಸಲ್ಲಿಸಿರುವವರು, ತಪ್ಪು ಅಥವಾ ಮಾರ್ಪಾಡುಗಳಿದ್ದರೆ ತಿದ್ದಲು ಜೂನ್ 30ರವರೆಗೆ ಕಾಲಾವಕಾಶ ಇದೆ.

ಕೈಗಾರಿಕೆ, ಹೋಟೆಲ್‌ಗಳಿಗೆ ಬಿಗ್ ರಿಲೀಫ್; ಕಮರ್ಷಿಯಲ್ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಸರ್ಕಾರ

ಮಧ್ಯಪ್ರಾಚ್ಯದ ಬಿಕ್ಕಟ್ಟು ಸುಧಾರಿಸುತ್ತಿರುವ ಹಿನ್ನೆಲೆಯಲ್ಲಿ ಮತ್ತು ಅಮೆರಿಕ-ಇರಾನ್ ನಡುವೆ ಐತಿಹಾಸಿಕ ಒಪ್ಪಂದ ಹತ್ತಿರವಾಗುತ್ತಿರುವ ಕಾರಣದಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ಮೇಲಿದ್ದ ಎಲ್ಲಾ ನಿಯಂತ್ರಣಗಳನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಇದರೊಂದಿಗೆ ಗ್ಯಾಸ್ ಪೂರೈಕೆಯನ್ನು ಬಿಕ್ಕಟ್ಟಿಗೂ ಮುಂಚಿನ ಯಥಾಸ್ಥಿತಿಗೆ ಮರಳಿ ತರಲಾಗಿದೆ. ಈ ನಿರ್ಬಂಧಗಳ ಸಡಿಲಿಕೆಯಿಂದಾಗಿ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಉತ್ಪಾದನಾ ಘಟಕಗಳು ಮತ್ತು ತಮ್ಮ ದೈನಂದಿನ ಕಾರ್ಯಾಚರಣೆಗಳಿಗಾಗಿ ಎಲ್‌ಪಿಜಿಯನ್ನು ಹೆಚ್ಚಾಗಿ ಅವಲಂಬಿಸಿರುವ ಇತರ ಕೈಗಾರಿಕಾ ಗ್ರಾಹಕರು ಸೇರಿದಂತೆ ವ್ಯಾಪಕ ಶ್ರೇಣಿಯ ವಾಣಿಜ್ಯ ಸಂಸ್ಥೆಗಳಿಗೆ ಭಾರಿ ಅನುಕೂಲವಾಗಲಿದೆ.

ಒಮಾನ್-ಭಾರತ ಗ್ಯಾಸ್ ಪೈಪ್​ಲೈನ್ ಪ್ರಾಜೆಕ್ಟ್​ಗೆ ಮರುಜೀವ; ಸಾಧ್ಯತಾ ವರದಿಗೆ ಸರ್ಕಾರ ಆದೇಶ; ಈ ಯೋಜನೆಯಿಂದ ಭಾರತಕ್ಕಿದೆಯಾ ಲಾಭ?

Oman-Gujarat deep-sea gas pipeline project, feasibility study ordered: ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ, ಭಾರತವು ₹40,000 ಕೋಟಿ ವೆಚ್ಚದ 'ಒಮಾನ್-ಗುಜರಾತ್ ಆಳಸಮುದ್ರ ನೈಸರ್ಗಿಕ ಅನಿಲ ಪೈಪ್‌ಲೈನ್' ಯೋಜನೆಗೆ ಮರುಜೀವ ನೀಡಿದೆ. ಇದು ಭಾರತದ ಇಂಧನ ಭದ್ರತೆಯನ್ನು ಹೆಚ್ಚಿಸಿ, ಹಾರ್ಮುಜ್ ಜಲಸಂಧಿ ಮತ್ತು ಪಾಕಿಸ್ತಾನದ ಹಸ್ತಕ್ಷೇಪವನ್ನು ತಪ್ಪಿಸುತ್ತದೆ. ಗೇಲ್, IOCL, EIL ಸಂಸ್ಥೆಗಳಿಗೆ ಸಾಧ್ಯತಾ ವರದಿ ಸಿದ್ಧಪಡಿಸಲು ನಿರ್ದೇಶಿಸಲಾಗಿದ್ದು, ಭಾರತದ 2030ರ ಇಂಧನ ಗುರಿ ತಲುಪಲು ಇದು ನಿರ್ಣಾಯಕವಾಗಿದೆ.

ಉಜ್ವಲ ಗ್ಯಾಸ್ ಯೋಜನೆಯಲ್ಲಿ ಸಬ್ಸಿಡಿಯುಕ್ತ ಸಿಲಿಂಡರ್ ಸಂಖ್ಯೆ ಕಡಿಮೆ ಮಾಡಲು ನಿಜವಾದ ಕಾರಣ ಇದಾ?

Reasons for PMUY Subsidy Reduction: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಅಡಿಯಲ್ಲಿ ಎಲ್‌ಪಿಜಿ ಸಬ್ಸಿಡಿ ಸಿಲಿಂಡರ್‌ಗಳ ಸಂಖ್ಯೆಯನ್ನು 9ರಿಂದ 4ಕ್ಕೆ ಕಡಿತಗೊಳಿಸಲಾಗಿದೆ. ಈ ನಿರ್ಧಾರಕ್ಕೆ ಪ್ರಮುಖ ಕಾರಣ ಯೋಜನೆಯ ದುರ್ಬಳಕೆ. ಕೆಲವು ವಂಚಕರು ಸಬ್ಸಿಡಿ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಅಕ್ರಮವಾಗಿ ಬೇರೆಡೆಗೆ ಸಾಗಿಸುತ್ತಿರುವುದು ಕಂಡುಬಂದಿದೆ. ಸೋರಿಕೆ ತಡೆದು, ನಿಜವಾದ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ತಲುಪಿಸುವ ಗುರಿಯೊಂದಿಗೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಸರಾಸರಿ ಬಳಕೆಯ ಆಧಾರದ ಮೇಲೆ ಈ ಮಿತಿ ನಿಗದಿಪಡಿಸಲಾಗಿದೆ.

Ujjwala Yojana: ಉಜ್ವಲ ಫಲಾನುಭವಿಗಳಿಗೆ ಶಾಕ್, 9 ಅಲ್ಲ, ಇನ್ಮುಂದೆ ಸಿಗಲಿದೆ ನಾಲ್ಕೇ ನಾಲ್ಕು ಸಿಲಿಂಡರ್​ಗಳು

ಉಜ್ವಲ ಯೋಜನೆ ಫಲಾನುಭವಿಗಳಿಗೆ ಶಾಕ್: ಕೇಂದ್ರ ಸರ್ಕಾರವು LPG ಸಬ್ಸಿಡಿ ಸಿಲಿಂಡರ್ ಮರುಪೂರಣವನ್ನು ವರ್ಷಕ್ಕೆ 9 ರಿಂದ 4ಕ್ಕೆ ಕಡಿತಗೊಳಿಸಿದೆ. ಈಗ ವರ್ಷಕ್ಕೆ 4 ಸಿಲಿಂಡರ್‌ಗಳಿಗೆ ಮಾತ್ರ ₹300 ಸಬ್ಸಿಡಿ ಸಿಗಲಿದೆ. ಸರಾಸರಿ ಬಳಕೆಯನ್ನು ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಾಗತಿಕ ಬೆಲೆ ಏರಿಕೆಯ ನಡುವೆಯೂ ದೇಶ ಇಂಧನ ಭದ್ರತೆ ಖಚಿತಪಡಿಸಿದೆ, ದೇಶೀಯ ಉತ್ಪಾದನೆ 60% ಹೆಚ್ಚಾಗಿದೆ.

Domestic LPG Cylinder Price Hike: ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಶಾಕ್! ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29 ರೂ. ಹೆಚ್ಚಳ

ಗೃಹಬಳಕೆ ಸಿಲಿಂಡರ್ ದರ ಏರಿಕೆ: ದೇಶದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಮತ್ತೆ 29 ರೂ. ಹೆಚ್ಚಳವಾಗಿದೆ. ಜಾಗತಿಕ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಹೊಸ ದರಗಳು ಜೂನ್ 7 ರಿಂದಲೇ ಜಾರಿಗೆ ಬಂದಿವೆ. ದೆಹಲಿಯಲ್ಲಿ ಸಿಲಿಂಡರ್ ದರ 942 ರೂ.ಗೆ ತಲುಪಿದೆ. ಇಷ್ಟಾದರೂ ತೈಲ ಕಂಪನಿಗಳಿಗೆ ಪ್ರತಿ ಸಿಲಿಂಡರ್ ಮೇಲೆ ಇನ್ನು 700 ರೂ. ನಷ್ಟವಾಗುತ್ತಿದೆ ಎಂದು ಪೆಟ್ರೋಲಿಯಂ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ತಿಳಿಸಿದ್ದಾರೆ.

ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ: ಊಟ-ತಿಂಡಿ, ಕಾಫಿ-ಚಹಾ ದರ ಹೆಚ್ಚಳಕ್ಕೆ ಹೋಟೆಲ್ ಮಾಲೀಕರ ಸಿದ್ಧತೆ

ಮಧ್ಯಪ್ರಾಚ್ಯ ಸಂಘರ್ಷದ ಹಿನ್ನೆಲೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರ ನಿರಂತರವಾಗಿ ಏರಿಕೆಯಾಗುತ್ತಿದೆ. ಇದರ ಪರಿಣಾಮವಾಗಿ ಬೆಂಗಳೂರಿನ ಹೋಟೆಲ್‌ಗಳಲ್ಲಿ ಊಟ, ತಿಂಡಿ ಮತ್ತು ಕಾಫಿ-ಟೀ ದರಗಳನ್ನು 5 ರೂ.ನಿಂದ 20 ರೂ. ವರೆಗೆ ಹೆಚ್ಚಿಸಲಾಗುತ್ತಿದೆ. ಇನ್ನು ಕೆಲವೆಡೆ ಇನ್ನಷ್ಟು ದರ ಹೆಚ್ಚಳಕ್ಕೆ ಹೋಟೆಲ್ ಮಾಲೀಕರು ಮುಂದಾಗಿರುವುದು ಗ್ರಾಹಕರ ಜೇಬಿಗೆ ಬರೆಯಾಗುತ್ತಿದೆ.

ಅಡುಗೆ ಮಾಡುವಾಗ ಎಲ್​ಪಿಜಿ ಉಳಿಸಬೇಕಾ? ಹೀಗೆ ಮಾಡಿದರೆ 15 ದಿನ ಹೆಚ್ಚು ಗ್ಯಾಸ್ ಬಳಸಬಹುದು!

ಇತ್ತೀಚೆಗೆ ಎಲ್​ಪಿಜಿ ಸಿಲಿಂಡರ್ ಬಿಕ್ಕಟ್ಟು ಶುರುವಾಗಿರುವುದರಿಂದ ಅಡುಗೆ ಮಾಡುವಾಗ ಅಳೆದೂಸುರಿದು ಅಡುಗೆ ಮಾಡಬೇಕಾದ ಅನಿವಾರ್ಯತೆ ಮಹಿಳೆಯರದ್ದು (ಕೆಲವೊಮ್ಮೆ ಪುರುಷರದ್ದೂ ಕೂಡ). ದಿನದಿಂದ ದಿನಕ್ಕೆ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಾಗುತ್ತಿರುವುದರಿಂದ, ಹಾಗೂ ಸಿಲಿಂಡರ್​​ಗೆ ಬೇಡಿಕೆಯೂ ಹೆಚ್ಚಾಗಿರುವುದರಿಂದ ಅದನ್ನು ಜಾಣ್ಮೆಯಿಂದ ಬಳಸಿ ಉಳಿತಾಯ ಮಾಡುವುದು ಅತ್ಯಗತ್ಯ. ನಿಮ್ಮ ಅಡುಗೆಮನೆಯಲ್ಲಿ ಗ್ಯಾಸ್ ಉಳಿಸಲು ಇಲ್ಲಿವೆ ಕೆಲವು ಸರಳ ಮತ್ತು ಉಪಯುಕ್ತ ಟಿಪ್ಸ್.

ಗ್ರಾಹಕರಿಗೆ ಗುಡ್ ನ್ಯೂಸ್: ಬೆಂಗಳೂರಿನ ಹೋಟೆಲ್‌ಗಳಲ್ಲಿ ಸದ್ಯಕ್ಕೆ ತಿಂಡಿ, ಊಟದ ಬೆಲೆ ಹೆಚ್ಚಳವಿಲ್ಲ!

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿದ್ದರೂ ಸಿಲಿಕಾನ್ ಸಿಟಿಯ ಗ್ರಾಹಕರಿಗೆ ಸದ್ಯಕ್ಕೆ ಯಾವುದೇ ಬೆಲೆ ಏರಿಕೆಯ ಬಿಸಿ ತಟ್ಟುವುದಿಲ್ಲ. ಗ್ರಾಹಕರ ಹಿತದೃಷ್ಟಿಯಿಂದ ಹೋಟೆಲ್‌ಗಳ ತಿಂಡಿ ಹಾಗೂ ಊಟದ ಮೆನು ದರವನ್ನು ಸದ್ಯಕ್ಕೆ ಪರಿಷ್ಕರಿಸದಿರಲು ಬೆಂಗಳೂರು ಹೋಟೆಲ್ ಮಾಲೀಕರ ಸಂಘ ನಿರ್ಧರಿಸಿದೆ. ಆದರೆ ಭವಿಷ್ಯದಲ್ಲಿ ದಿನಸಿ ಪದಾರ್ಥಗಳ ಬೆಲೆ ಹೆಚ್ಚಾದರೆ ದರ ಏರಿಕೆ ಅನಿವಾರ್ಯ ಎಂದಿದ್ದಾರೆ.

ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!