AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG

LPG

ಎಲ್​ಪಿಜಿ ಎಂದರೆ ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್. ಹೆಸರೇ ಸೂಚಿಸುವಂತೆ ಇದು ಧ್ರವೀಕರಿಸಿದ ಪೆಟ್ರೋಲಿಯಂ ಅನಿಲ. ಪ್ರೊಪೇನ್, ಪ್ರೊಪಿಲೀನ್ ಇತ್ಯಾದಿ ಹೈಡ್ರೋಕಾರ್ಬನ್ ಗ್ಯಾಸ್​ಗಳ ಮಿಶ್ರಣ ಇರುವ ಇಂಧನವಾಗಿದೆ. ಪೆಟ್ರೋಲಿಯಂನ ಉಪ ಉತ್ಪನ್ನಗಳಲ್ಲಿ ಇದೂ ಒಂದು. ಎಲ್​ಪಿಜಿ ಬಹೂಪಯೋಗಿ ಆಗಿರುವ ಇಂಧನವಾಗಿದೆ. ಅಡುಗೆಯ ಇಂಧನವಾಗಿ ಇದನ್ನು ಬಳಸಬಹುದು. ವಾಹನಗಳಿಗೆ ಇಂಧನವಾಗಿ ಬಳಸಬಹುದು. ರಾಸಾಯನಿಕ ಕಾರ್ಖಾನೆಗಳಲ್ಲಿ ಇದರ ಉಪಯೋಗ ಇದೆ. ಇದು ಮಾಲಿನ್ಯಕಾರಕ ಹೊಗೆಯನ್ನು ಹೊರಸೂಸುವುದಿಲ್ಲ. ಹೀಗಾಗಿ, ಅಡುಗೆ ಅನಿಲವಾಗಿ ಎಲ್ಲೆಡೆ ವ್ಯಾಪಕವಾಗಿ ಬಳಕೆಯಲ್ಲಿ ಇದೆ. ಸೌದೆ ಒಲೆ, ಕೆರೋಸಿನ್​ಗೆ ಹೋಲಿಸಿದರೆ ಎಲ್​ಪಿಜಿ ಉತ್ತಮ ಆಯ್ಕೆ. ಭಾರತದಲ್ಲಿ ಎಲ್​ಪಿಜಿಗಳನ್ನು ಸಿಲಿಂಡರ್​​ಗಳಲ್ಲಿ ತುಂಬಸಿ ಸರಬರಾಜು ಮಾಡಲಾಗುತ್ತದೆ. ಗೃಹ ಬಳಕೆಗೆ ಪ್ರತ್ಯೇಕ ಸಿಲಿಂಡರ್​ಗಳಿವೆ. ಹೋಟೆಲ್ ಇತ್ಯಾದಿ ವಾಣಿಜ್ಯ ಬಳಕೆಗೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್​ಗಳಿವೆ. ಅಡುಗೆಗೆ ಬಳಸುವ ಎಲ್​ಪಿಜಿಗೆ ಸರ್ಕಾರ ಸಬ್ಸಿಡಿ ನೀಡುತ್ತದೆ. ಕಮರ್ಷಿಯಲ್ ಎಲ್​ಪಿಜಿಗೆ ಸಬ್ಸಿಡಿ ಇರುವುದಿಲ್ಲ.

ಇನ್ನೂ ಹೆಚ್ಚು ಓದಿ

ಒಮಾನ್-ಭಾರತ ಗ್ಯಾಸ್ ಪೈಪ್​ಲೈನ್ ಪ್ರಾಜೆಕ್ಟ್​ಗೆ ಮರುಜೀವ; ಸಾಧ್ಯತಾ ವರದಿಗೆ ಸರ್ಕಾರ ಆದೇಶ; ಈ ಯೋಜನೆಯಿಂದ ಭಾರತಕ್ಕಿದೆಯಾ ಲಾಭ?

Oman-Gujarat deep-sea gas pipeline project, feasibility study ordered: ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ, ಭಾರತವು ₹40,000 ಕೋಟಿ ವೆಚ್ಚದ 'ಒಮಾನ್-ಗುಜರಾತ್ ಆಳಸಮುದ್ರ ನೈಸರ್ಗಿಕ ಅನಿಲ ಪೈಪ್‌ಲೈನ್' ಯೋಜನೆಗೆ ಮರುಜೀವ ನೀಡಿದೆ. ಇದು ಭಾರತದ ಇಂಧನ ಭದ್ರತೆಯನ್ನು ಹೆಚ್ಚಿಸಿ, ಹಾರ್ಮುಜ್ ಜಲಸಂಧಿ ಮತ್ತು ಪಾಕಿಸ್ತಾನದ ಹಸ್ತಕ್ಷೇಪವನ್ನು ತಪ್ಪಿಸುತ್ತದೆ. ಗೇಲ್, IOCL, EIL ಸಂಸ್ಥೆಗಳಿಗೆ ಸಾಧ್ಯತಾ ವರದಿ ಸಿದ್ಧಪಡಿಸಲು ನಿರ್ದೇಶಿಸಲಾಗಿದ್ದು, ಭಾರತದ 2030ರ ಇಂಧನ ಗುರಿ ತಲುಪಲು ಇದು ನಿರ್ಣಾಯಕವಾಗಿದೆ.

ಉಜ್ವಲ ಗ್ಯಾಸ್ ಯೋಜನೆಯಲ್ಲಿ ಸಬ್ಸಿಡಿಯುಕ್ತ ಸಿಲಿಂಡರ್ ಸಂಖ್ಯೆ ಕಡಿಮೆ ಮಾಡಲು ನಿಜವಾದ ಕಾರಣ ಇದಾ?

Reasons for PMUY Subsidy Reduction: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಅಡಿಯಲ್ಲಿ ಎಲ್‌ಪಿಜಿ ಸಬ್ಸಿಡಿ ಸಿಲಿಂಡರ್‌ಗಳ ಸಂಖ್ಯೆಯನ್ನು 9ರಿಂದ 4ಕ್ಕೆ ಕಡಿತಗೊಳಿಸಲಾಗಿದೆ. ಈ ನಿರ್ಧಾರಕ್ಕೆ ಪ್ರಮುಖ ಕಾರಣ ಯೋಜನೆಯ ದುರ್ಬಳಕೆ. ಕೆಲವು ವಂಚಕರು ಸಬ್ಸಿಡಿ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಅಕ್ರಮವಾಗಿ ಬೇರೆಡೆಗೆ ಸಾಗಿಸುತ್ತಿರುವುದು ಕಂಡುಬಂದಿದೆ. ಸೋರಿಕೆ ತಡೆದು, ನಿಜವಾದ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ತಲುಪಿಸುವ ಗುರಿಯೊಂದಿಗೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಸರಾಸರಿ ಬಳಕೆಯ ಆಧಾರದ ಮೇಲೆ ಈ ಮಿತಿ ನಿಗದಿಪಡಿಸಲಾಗಿದೆ.

Ujjwala Yojana: ಉಜ್ವಲ ಫಲಾನುಭವಿಗಳಿಗೆ ಶಾಕ್, 9 ಅಲ್ಲ, ಇನ್ಮುಂದೆ ಸಿಗಲಿದೆ ನಾಲ್ಕೇ ನಾಲ್ಕು ಸಿಲಿಂಡರ್​ಗಳು

ಉಜ್ವಲ ಯೋಜನೆ ಫಲಾನುಭವಿಗಳಿಗೆ ಶಾಕ್: ಕೇಂದ್ರ ಸರ್ಕಾರವು LPG ಸಬ್ಸಿಡಿ ಸಿಲಿಂಡರ್ ಮರುಪೂರಣವನ್ನು ವರ್ಷಕ್ಕೆ 9 ರಿಂದ 4ಕ್ಕೆ ಕಡಿತಗೊಳಿಸಿದೆ. ಈಗ ವರ್ಷಕ್ಕೆ 4 ಸಿಲಿಂಡರ್‌ಗಳಿಗೆ ಮಾತ್ರ ₹300 ಸಬ್ಸಿಡಿ ಸಿಗಲಿದೆ. ಸರಾಸರಿ ಬಳಕೆಯನ್ನು ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಾಗತಿಕ ಬೆಲೆ ಏರಿಕೆಯ ನಡುವೆಯೂ ದೇಶ ಇಂಧನ ಭದ್ರತೆ ಖಚಿತಪಡಿಸಿದೆ, ದೇಶೀಯ ಉತ್ಪಾದನೆ 60% ಹೆಚ್ಚಾಗಿದೆ.

Domestic LPG Cylinder Price Hike: ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಶಾಕ್! ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29 ರೂ. ಹೆಚ್ಚಳ

ಗೃಹಬಳಕೆ ಸಿಲಿಂಡರ್ ದರ ಏರಿಕೆ: ದೇಶದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಮತ್ತೆ 29 ರೂ. ಹೆಚ್ಚಳವಾಗಿದೆ. ಜಾಗತಿಕ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಹೊಸ ದರಗಳು ಜೂನ್ 7 ರಿಂದಲೇ ಜಾರಿಗೆ ಬಂದಿವೆ. ದೆಹಲಿಯಲ್ಲಿ ಸಿಲಿಂಡರ್ ದರ 942 ರೂ.ಗೆ ತಲುಪಿದೆ. ಇಷ್ಟಾದರೂ ತೈಲ ಕಂಪನಿಗಳಿಗೆ ಪ್ರತಿ ಸಿಲಿಂಡರ್ ಮೇಲೆ ಇನ್ನು 700 ರೂ. ನಷ್ಟವಾಗುತ್ತಿದೆ ಎಂದು ಪೆಟ್ರೋಲಿಯಂ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ತಿಳಿಸಿದ್ದಾರೆ.

ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ: ಊಟ-ತಿಂಡಿ, ಕಾಫಿ-ಚಹಾ ದರ ಹೆಚ್ಚಳಕ್ಕೆ ಹೋಟೆಲ್ ಮಾಲೀಕರ ಸಿದ್ಧತೆ

ಮಧ್ಯಪ್ರಾಚ್ಯ ಸಂಘರ್ಷದ ಹಿನ್ನೆಲೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರ ನಿರಂತರವಾಗಿ ಏರಿಕೆಯಾಗುತ್ತಿದೆ. ಇದರ ಪರಿಣಾಮವಾಗಿ ಬೆಂಗಳೂರಿನ ಹೋಟೆಲ್‌ಗಳಲ್ಲಿ ಊಟ, ತಿಂಡಿ ಮತ್ತು ಕಾಫಿ-ಟೀ ದರಗಳನ್ನು 5 ರೂ.ನಿಂದ 20 ರೂ. ವರೆಗೆ ಹೆಚ್ಚಿಸಲಾಗುತ್ತಿದೆ. ಇನ್ನು ಕೆಲವೆಡೆ ಇನ್ನಷ್ಟು ದರ ಹೆಚ್ಚಳಕ್ಕೆ ಹೋಟೆಲ್ ಮಾಲೀಕರು ಮುಂದಾಗಿರುವುದು ಗ್ರಾಹಕರ ಜೇಬಿಗೆ ಬರೆಯಾಗುತ್ತಿದೆ.

ಅಡುಗೆ ಮಾಡುವಾಗ ಎಲ್​ಪಿಜಿ ಉಳಿಸಬೇಕಾ? ಹೀಗೆ ಮಾಡಿದರೆ 15 ದಿನ ಹೆಚ್ಚು ಗ್ಯಾಸ್ ಬಳಸಬಹುದು!

ಇತ್ತೀಚೆಗೆ ಎಲ್​ಪಿಜಿ ಸಿಲಿಂಡರ್ ಬಿಕ್ಕಟ್ಟು ಶುರುವಾಗಿರುವುದರಿಂದ ಅಡುಗೆ ಮಾಡುವಾಗ ಅಳೆದೂಸುರಿದು ಅಡುಗೆ ಮಾಡಬೇಕಾದ ಅನಿವಾರ್ಯತೆ ಮಹಿಳೆಯರದ್ದು (ಕೆಲವೊಮ್ಮೆ ಪುರುಷರದ್ದೂ ಕೂಡ). ದಿನದಿಂದ ದಿನಕ್ಕೆ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಾಗುತ್ತಿರುವುದರಿಂದ, ಹಾಗೂ ಸಿಲಿಂಡರ್​​ಗೆ ಬೇಡಿಕೆಯೂ ಹೆಚ್ಚಾಗಿರುವುದರಿಂದ ಅದನ್ನು ಜಾಣ್ಮೆಯಿಂದ ಬಳಸಿ ಉಳಿತಾಯ ಮಾಡುವುದು ಅತ್ಯಗತ್ಯ. ನಿಮ್ಮ ಅಡುಗೆಮನೆಯಲ್ಲಿ ಗ್ಯಾಸ್ ಉಳಿಸಲು ಇಲ್ಲಿವೆ ಕೆಲವು ಸರಳ ಮತ್ತು ಉಪಯುಕ್ತ ಟಿಪ್ಸ್.

ಗ್ರಾಹಕರಿಗೆ ಗುಡ್ ನ್ಯೂಸ್: ಬೆಂಗಳೂರಿನ ಹೋಟೆಲ್‌ಗಳಲ್ಲಿ ಸದ್ಯಕ್ಕೆ ತಿಂಡಿ, ಊಟದ ಬೆಲೆ ಹೆಚ್ಚಳವಿಲ್ಲ!

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿದ್ದರೂ ಸಿಲಿಕಾನ್ ಸಿಟಿಯ ಗ್ರಾಹಕರಿಗೆ ಸದ್ಯಕ್ಕೆ ಯಾವುದೇ ಬೆಲೆ ಏರಿಕೆಯ ಬಿಸಿ ತಟ್ಟುವುದಿಲ್ಲ. ಗ್ರಾಹಕರ ಹಿತದೃಷ್ಟಿಯಿಂದ ಹೋಟೆಲ್‌ಗಳ ತಿಂಡಿ ಹಾಗೂ ಊಟದ ಮೆನು ದರವನ್ನು ಸದ್ಯಕ್ಕೆ ಪರಿಷ್ಕರಿಸದಿರಲು ಬೆಂಗಳೂರು ಹೋಟೆಲ್ ಮಾಲೀಕರ ಸಂಘ ನಿರ್ಧರಿಸಿದೆ. ಆದರೆ ಭವಿಷ್ಯದಲ್ಲಿ ದಿನಸಿ ಪದಾರ್ಥಗಳ ಬೆಲೆ ಹೆಚ್ಚಾದರೆ ದರ ಏರಿಕೆ ಅನಿವಾರ್ಯ ಎಂದಿದ್ದಾರೆ.

ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆ ಏರಿಕೆ ಪರಿಣಾಮ ಊಟ-ತಿಂಡಿ ದರವೂ ಹೆಚ್ಚಾಗುತ್ತಾ? ಹೋಟೆಲ್ ಮಾಲೀಕರು ಏನಂತಾರೆ ನೋಡಿ

ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆ ಮತ್ತಷ್ಟು ಏರಿಕೆಯಾಗಿ 4,000 ರೂ. ತಲುಪುವ ಆತಂಕ ಎದುರಾಗಿದ್ದು, ಹೋಟೆಲ್ ತಿಂಡಿ-ಊಟದ ದರ ಹೆಚ್ಚಳವಾಗುವ ಭೀತಿ ಎದುರಾಗಿದೆ. ಗ್ರಾಹಕರ ಮೇಲಿನ ಹೊರೆ ತಗ್ಗಿಸಲು ಬೆಂಗಳೂರಿನ ಹೋಟೆಲ್‌ಗಳು ಈಗ ಎಲೆಕ್ಟ್ರಿಕ್ ಸ್ಟೌವ್‌ಗಳ ಬಳಕೆ ಹಾಗೂ ಇತರ ಪರ್ಯಾಯ ಮಾರ್ಗಗಳ ಮೊರೆ ಹೋಗುತ್ತಿವೆ.

Commercial LPG cylinder Price Hike: ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ

ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ಮತ್ತೆ ಹೆಚ್ಚಳ: ಜೂನ್ 1 ರಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 42 ರೂ. ಹೆಚ್ಚಿಸಲಾಗಿದೆ. ಇದರೊಂದಿಗೆ ಹೋಟೆಲ್ ಮಾಲೀಕರಿಗೆ ಮತ್ತೆ ಶಾಕ್ ನೀಡಿದಂತಾಗಿದೆ. ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಕಮರ್ಷಿಯಲ್ ಸಿಲಿಂಡರ್ ದರ ಎಷ್ಟಾಯ್ತು ಎಂಬ ಮಾಹಿತಿ ಇಲ್ಲಿದೆ.

ಕರ್ನಾಟಕದಲ್ಲಿ ಪೆಟ್ರೋಲ್-ಡೀಸೆಲ್, ಗ್ಯಾಸ್ ಬಗ್ಗೆ ಎದ್ದಿರುವ ಅಂತೆ ಕಂತೆಗಳಿಗೆ ತೆರೆ

ಇಸ್ರೆಲ್-ಇರಾನ್ ಯುದ್ಧದ ಪರಿಣಾಮ ಭಾತರದಲ್ಲಿ ಪೆಟ್ರೋಲ್, ಡಿಸೇಲ್ ಅಭಾವ ವದಂತಿ ಹಬ್ಬಿದೆ. ಈ ಹಿನ್ನೆಲೆಯಲ್ಲಿ ಇಂಧನ ಸಿಗುತ್ತೋ ಇಲ್ವೋ ಎಂದು ಕೆಲವೆಡೆ ಜನ ಬಂಕ್ ಗಳಿಗೆ ಮುಗಿಬಿದ್ದಿದ್ದು, ಹೆಚ್ಚೆಚ್ಚು ಇಂಧನ ಖರೀದಿಸಿ ಶೇಖರಣೆ ಮಾಡಿಕೊಳ್ಳುತ್ತಿದ್ದಾರೆ. ಈ ಸಂಬಂಧ ಕರ್ನಾಟಕದ ತೈಲ ಉದ್ಯಮದ ರಾಜ್ಯ ಮಟ್ಟದ ಸಂಯೋಜಕ ಪ್ರತಿಕ್ರಿಯಿಸಿದ್ದು, ಎಲ್ಲಾ ಅಂತೆ ಕಂತೆಗಳಿಗೆ ತೆರೆ ಎಳೆದಿದ್ದಾರೆ.

ಕಲ್ಲಿದ್ದಲು ಅನಿಲೀಕರಣ ಯೋಜನೆಗೆ ಸಂಪುಟದಿಂದ 37,500 ರೂ ಅನುಮೋದನೆ; ಏನಿದರ ಉಪಯೋಗ?

India's Energy Boost: ಕೇಂದ್ರ ಸಚಿವ ಸಂಪುಟವು ಮೇಲ್ಮೈ ಕಲ್ಲಿದ್ದಲು ಅನಿಲೀಕರಣ ಯೋಜನೆಗಳಿಗೆ 37,500 ಕೋಟಿ ರೂ. ಅನುದಾನ ಘೋಷಿಸಿದೆ. ಇದು 2030ರ ವೇಳೆಗೆ 100 ಮಿಲಿಯನ್ ಟನ್ ಕಲ್ಲಿದ್ದಲು ಅನಿಲೀಕರಣ ಗುರಿ ತಲುಪಲು, ಭಾರತದ ಇಂಧನ ಭದ್ರತೆಯನ್ನು ಬಲಪಡಿಸಲು ಮತ್ತು ಆಮದು ಅವಲಂಬನೆಯನ್ನು ಕಡಿಮೆ ಮಾಡಲು ನೆರವಾಗುತ್ತದೆ. ಈ ಯೋಜನೆಯಿಂದ 50,000ಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿದ್ದು, ದೇಶೀಯ ಉತ್ಪಾದನೆಗೆ ಒತ್ತು ನೀಡುವ ಮೂಲಕ 'ಆತ್ಮನಿರ್ಭರ ಭಾರತ'ಕ್ಕೆ ಬಲ ತುಂಬಲಿದೆ.

ಬೆಂಗಳೂರು ಆಟೋ ಪ್ರಯಾಣಿಕರಿಗೆ ದರ ಏರಿಕೆ ಬಿಸಿ? ಎಲ್.ಪಿ.ಜಿ ದರ ಹೆಚ್ಚಳಕ್ಕೆ ಚಾಲಕರ ಆಕ್ರೋಶ!

ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ದರ ಪ್ರತಿ ಲೀಟರ್‌ಗೆ 5.73 ರೂ. ಏರಿಕೆಯಾಗಿದ್ದು, ಆಟೋ ಪ್ರಯಾಣದ ಕನಿಷ್ಠ ದರವನ್ನು 50 ರೂ.ಗೆ ಹೆಚ್ಚಿಸಲು ಚಾಲಕರು ಒತ್ತಾಯಿಸುತ್ತಿದ್ದಾರೆ. ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್ ಹಾಗೂ ಗ್ಯಾಸ್ ಕೊರತೆಯಿಂದ ಕಂಗಾಲಾಗಿರುವ ಚಾಲಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಾರಿಗೆ ಸಚಿವರ ಮಧ್ಯಸ್ಥಿಕೆಗೆ ಆಗ್ರಹಿಸಿದ್ದಾರೆ. ಸಾಮಾನ್ಯ ಜನರಿಗೂ ಆಟೋ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ.

ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ